Homeಮುಖಪುಟಪುಣೆ : ಅತ್ಯಾಚಾರಕ್ಕೆ ವಿಫಲಯತ್ನ, ಅಪ್ರಾಪ್ತ ಸಹೋದರಿಯರ ಹತ್ಯೆ

ಪುಣೆ : ಅತ್ಯಾಚಾರಕ್ಕೆ ವಿಫಲಯತ್ನ, ಅಪ್ರಾಪ್ತ ಸಹೋದರಿಯರ ಹತ್ಯೆ

- Advertisement -
- Advertisement -

ಅತ್ಯಾಚಾರಕ್ಕೆ ವಿಫಲಯತ್ನ ನಡೆಸಿ, ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯ ರಾಜ್‌ಗುರು ನಗರದಲ್ಲಿ ನಡೆದಿದೆ.

8 ಮತ್ತು 9 ವರ್ಷದ ಇಬ್ಬರು ಸಹೋದರಿಯರು ಬುಧವಾರ (ಡಿ.25) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ಪೋಷಕರು ಹುಡುಕಾಡಿದಾಗ, ಅವರು ವಾಸವಿದ್ದ ಕಟ್ಟಡದ ಮೊದಲನೇ ಮಹಡಿಯಲ್ಲಿ ತಂಗಿದ್ದ ಅಡುಗೆಯವನ ಮನೆಯ ಡ್ರಮ್‌ನಲ್ಲಿ ಶವಗಳು ಪತ್ತೆಯಾಗಿವೆ.

ಘಟನೆ ನಡೆದ ರಾಜ್‌ಗುರು ನಗರದಿಂದ ಸುಮಾರು 45 ಕಿ.ಮೀ ದೂರದ ಲಾಡ್ಜ್‌ವೊಂದರಲ್ಲಿ ಗುರುವಾರ (ಡಿ.26) ಬೆಳಿಗ್ಗೆ 54 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯರ ಹತ್ಯೆ ಬಳಿಕ ಆರೋಪಿ ತನ್ನ ಊರು ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಲು ಮುಂದಾಗಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ (ಪುಣೆ ಗ್ರಾಮಾಂತರ) ರಮೇಶ್ ಚೋಪಾಡೆ ತಿಳಿಸಿದ್ದಾರೆ.

ಬಾಲಕಿಯರನ್ನು ಡ್ರಮ್‌ ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿರುವುದನ್ನು ಮತ್ತು ಅದಕ್ಕೂ ಮುನ್ನ ಒಬ್ಬಳು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ವಿಫಲ ಯತ್ನ ನಡೆಸಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ರಮೇಶ್ ಚೋಪಾಡೆ ಹೇಳಿದ್ದಾರೆ.

ಬಂಧಿತನ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 103 (ಕೊಲೆ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಮತ್ತು ಸೆಕ್ಷನ್ 4, 6, 8, 10 ಮತ್ತು 12 (ಲೈಂಗಿಕ ದೌರ್ಜನ್ಯ ಮತ್ತು ಲೈಂಗಿಕ ಕಿರುಕುಳ ಪ್ರಕರಣದ ಸೆಕ್ಷನ್‌ಗಳು) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೊಲೆಯಾದ ಬಾಲಕಿಯರ ತಂದೆ ಕನ್ಸರ್ವೆನ್ಸಿ ಸಿಬ್ಬಂದಿ ಮತ್ತು ತಾಯಿ ದಿನಗೂಲಿ ನೌಕರರಾಗಿದ್ದು, ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅವರ ಮನೆಯಿದ್ದ ಕಟ್ಟಡದ ಮೊದಲ ಮಹಡಿಯಲ್ಲಿ ಆರೋಪಿ ಮತ್ತು ಆತನ ಸಹೋದ್ಯೋಗಿಗಳು ಇದ್ದರು. ರಜೆ ಪಡೆದು ಎಲ್ಲರೂ ಊರು ಪಶ್ಚಿಮ ಬಂಗಾಳಕ್ಕೆ ತೆರಳಿದ್ದ ಕಾರಣ, ಕೃತ್ಯ ನಡೆಯುವಾಗ ಆರೋಪಿ ಮನೆಯಲ್ಲಿ ಒಬ್ಬನೇ ಇದ್ದ. ಬಾಲಕಿಯರ ತಂದೆ-ತಾಯಿ ಕೂಡ ಕೆಲಸಕ್ಕೆ ಹೋಗಿದ್ದರು ಎಂದು ವರದಿಗಳು ಹೇಳಿವೆ.

ಆರೋಪಿ ಹಲವು ವರ್ಷಗಳಿಂದ ಕಟ್ಟಡದಲ್ಲಿ ವಾಸವಿದ್ದ ಕಾರಣ ಬಾಲಕಿಯರ ಕುಟುಂಬಕ್ಕೆ ಚೆನ್ನಾಗಿ ಪರಿಚಯವಿದ್ದ. ಬಾಲಕಿಯರಿಗೂ ಕೂಡ ಪರಿಚಿತನಾಗಿದ್ದ. ಪೋಷಕರು ಇಲ್ಲದ ಸಮಯದಲ್ಲಿ ಬಾಲಕಿಯರು ಮೊದಲನೆಯ ಮಹಡಿಯ ಆರೋಪಿಯ ಮನೆ ಬಳಿ ಆಟವಾಡುತ್ತಿದ್ದರು.

ಬುಧವಾರ ಯಾರೂ ಇಲ್ಲದಾಗ ಲಡ್ಡು ಕೊಡುವುದಾಗಿ ಹೇಳಿ ಬಾಲಕಿಯರನ್ನು ಆರೋಪಿ ತನ್ನ ಮನೆಗೆ ಕರೆಸಿಕೊಂಡಿದ್ದ. ಇಬ್ಬರು ಒಳ ಹೋದಾಗ, ಒಬ್ಬಾಕೆಯನ್ನು ಕರೆದುಕೊಂಡು ಸ್ನಾನ ಗೃಹದೊಳಗೆ ಹೋಗಿ ಬಾಗಿಲು ಹಾಕಿದ್ದಾನೆ. ಅದನ್ನು ನೋಡಿದ ಆಕೆಯ ಸಹೋದರಿ ಕಿರುಚಾಡಿದ್ದಾಳೆ. ಆಗ ಹೊರಗಡೆ ಬಂದ ಆರೋಪಿ ಪಕ್ಕದಲ್ಲೇ ಇದ್ದ ಪೈಪ್‌ನಿಂದ ಆಕೆಯ ತಲೆಗೆ ಹೊಡೆದಿದ್ದಾನೆ. ಬಳಿಕ ನೀರಿನ ಡ್ರಮ್‌ಗೆ ಮುಳುಗಿಸಿದ್ದಾನೆ. ಆಕೆಯ ಜೀವ ಹೋದ ಬಳಿಕ, ಮತ್ತೊಬ್ಬಳನ್ನು ಸ್ನಾನಗೃಹದಿಂದ ಹೊರಗಡೆ ಕರೆ ತಂದಿದ್ದಾನೆ. ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಆಕೆಯೂ ಕೂಗಿಕೊಂಡಿದ್ದಾಳೆ. ಇದರಿಂದ ಹೆದರಿದ ಆರೋಪಿ ಸಹೋದರಿಯನ್ನು ಮುಳುಗಿಸಿದ್ದ ಅದೇ ಡ್ರಮ್‌ಗೆ ಈಕೆಯನ್ನೂ ಮುಳಗಿಸಿ ಕೊಲೆ ಮಾಡಿದ್ದಾನೆ. ಬಳಿಕ ಮನೆಯಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಚೋಪಾಡೆ ವಿವರಿಸಿದ್ದಾರೆ.

ಬಾಲಕಿಯರ ಪೋಷಕರು ಮನೆಗೆ ಬಂದಾಗ, ಇಬ್ಬರೂ ನಾಪತ್ತೆಯಾಗಿದ್ದರು. ಸುತ್ತಮುತ್ತ ಹುಡುಕಿದರೂ ಕಾಣದಿದ್ದಾಗ, ಪೋಷಕರು ಸ್ಥಳೀಯ ಖೇಡ್ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆರಂಭದಲ್ಲಿ ಅಪಹರಣ ಪ್ರಕರಣ ದಾಖಲಿಸಿಕೊಂಡು ಬಾಲಕಿಯರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಶೋಧ ಕಾರ್ಯಾಚರಣೆಯ ಭಾಗವಾಗಿ ಪೊಲೀಸ್ ತಂಡವು ಮೊದಲ ಮಹಡಿಯಲ್ಲಿರುವ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಿದೆ. ಈ ವೇಳೆ ಆರೋಪಿಯ ಮನೆಯಲ್ಲಿ ಬಾಲಕಿಯರ ಶವಗಳು ಪತ್ತೆಯಾಗಿವೆ. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ ಎಂದು ರಮೇಶ್ ಚೋಪಾಡೆ ತಿಳಿಸಿದ್ದಾರೆ.

ಇದನ್ನೂ ಓದಿ : ಸಾರ್ವಜನಿಕವಾಗಿ ಚಾಟಿಯಿಂದ ದಂಡಿಸಿಕೊಂಡ ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ: ಕಾರಣ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...