Homeಮುಖಪುಟದೇವಾಲಯಗಳನ್ನು ರಾಜ್ಯ ಸರ್ಕಾರಗಳ ನಿಯಂತ್ರಣದಿಂದ ಮುಕ್ತಗೊಳಿಸುವಂತೆ ವಿಎಚ್‌ಪಿ ಅಭಿಯಾನ

ದೇವಾಲಯಗಳನ್ನು ರಾಜ್ಯ ಸರ್ಕಾರಗಳ ನಿಯಂತ್ರಣದಿಂದ ಮುಕ್ತಗೊಳಿಸುವಂತೆ ವಿಎಚ್‌ಪಿ ಅಭಿಯಾನ

- Advertisement -
- Advertisement -

ಹಿಂದೂ ದೇವಾಲಯಗಳನ್ನು ರಾಜ್ಯ ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ಉದ್ದೇಶದಿಂದ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸುವ ಯೋಜನೆಯನ್ನು, ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಗುರುವಾರ ಪ್ರಕಟಿಸಿದೆ. ಜನವರಿ 5 ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮದೊಂದಿಗೆ ಅಭಿಯಾನ ಪ್ರಾರಂಭವಾಗಲಿದೆ.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವಿಎಚ್‌ಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ, “ಸಮುದಾಯದ ಸದಸ್ಯರಿಂದ ಹಿಂದೂ ದೇವಾಲಯಗಳ ಆಡಳಿತ ಮತ್ತು ನಿರ್ವಹಣೆಗೆ ಕರಡು ಕಾನೂನನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ನಾನು ಕೆಲವು ದಿನಗಳ ಹಿಂದೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪರಿಗಣನೆಗೆ ಕರಡು ಪ್ರತಿಯನ್ನು ನೀಡಿದ್ದೇನೆ” ಎಂದು ಅವರು ಹೇಳಿದರು.

ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು, ಸುಪ್ರೀಂ ಕೋರ್ಟ್ ವಕೀಲರು, ಧಾರ್ಮಿಕ ಮುಖಂಡರು ಮತ್ತು ವಿಎಚ್‌ಪಿ ಕಾರ್ಯಕರ್ತರನ್ನು ಒಳಗೊಂಡಿರುವ ಚಿಂತಕರ ಚಾವಡಿಯಿಂದ ರಚಿಸಲಾದ ಕರಡು ಕಾನೂನು, ದೇವಸ್ಥಾನದ ಆಡಳಿತವನ್ನು ಹಿಂದೂ ಸಮಾಜವು ನಿರ್ವಹಿಸುವ ಚೌಕಟ್ಟನ್ನು ವಿವರಿಸುತ್ತದೆ. “ನಾವು ಕಳೆದ 2-3 ವರ್ಷಗಳಿಂದ ಅದರ ಮೇಲೆ ಕೆಲಸ ಮಾಡುತ್ತಿದ್ದೇವೆ” ಎಂದು ಪರಾಂಡೆ ಹೇಳಿಕೊಂಡಿದ್ದಾರೆ.

“ಸ್ವಾತಂತ್ರ್ಯದ ನಂತರವೂ ಈ ದೇವಾಲಯಗಳು ಸರ್ಕಾರದ ನಿಯಂತ್ರಣದಲ್ಲಿ ಮುಂದುವರೆಯುವುದು ದುರದೃಷ್ಟಕರ” ಎಂದು ಅವರು ಹೇಳಿದರು.

ವಿಜಯವಾಡದಲ್ಲಿ ನಡೆಯುವ ಅಭಿಯಾನದ ಮೊದಲ ಕಾರ್ಯಕ್ರಮವು ಸಮುದಾಯಕ್ಕೆ ಮಾರ್ಗದರ್ಶನ ನೀಡುವ ಧಾರ್ಮಿಕ ದಾರ್ಶನಿಕರು ಸೇರಿದಂತೆ ಎರಡು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ. ಈ ಆಂದೋಲನವು ರಾಜಕೀಯ ಪ್ರೇರಿತವಲ್ಲ ಎಂದು ಪರಾಂಡೆ ಒತ್ತಿ ಹೇಳಿದರು.

ಕರ್ನಾಟಕವು ದೇವಾಲಯದ ಸ್ವಾತಂತ್ರ್ಯವನ್ನು ಪ್ರಸ್ತಾಪಿಸಿದ ಉದಾಹರಣೆಯಾಗಿದೆ. ಆದರೆ, ಬಿಜೆಪಿಯ ಚುನಾವಣೆಯ ಸೋಲಿನಿಂದಾಗಿ ಬಗೆಹರಿಯದೆ ಉಳಿದಿದೆ.

ಕರಡು ಕಾನೂನು ಪ್ರತಿ ರಾಜ್ಯದಲ್ಲಿ ಗೌರವಾನ್ವಿತ ಧಾರ್ಮಿಕ ಮುಖಂಡರು, ನಿವೃತ್ತ ನ್ಯಾಯಾಧೀಶರು ಮತ್ತು ಹಿಂದೂ ಧರ್ಮಗ್ರಂಥಗಳು ಮತ್ತು ಆಚರಣೆಗಳಲ್ಲಿ ತಜ್ಞರನ್ನು ಒಳಗೊಂಡಿರುವ ಧಾರ್ವಿುಕ ಮಂಡಳಿಗಳನ್ನು ಸ್ಥಾಪಿಸಲು ಪ್ರಸ್ತಾಪಿಸುತ್ತದೆ. ಈ ಮಂಡಳಿಗಳು ಜಿಲ್ಲಾ ಮಟ್ಟದ ಕೌನ್ಸಿಲ್‌ಗಳ ಚುನಾವಣೆಯನ್ನು ಮೇಲ್ವಿಚಾರಣೆ ಮಾಡುತ್ತವೆ, ಇದು ಸ್ಥಳೀಯ ದೇವಾಲಯಗಳನ್ನು ನಿರ್ವಹಿಸಲು ಟ್ರಸ್ಟಿಗಳನ್ನು ನೇಮಿಸುತ್ತದೆ ಎಂದು ವಿಎಚ್‌ಪಿ ಹೇಳಿಕೊಂಡಿದೆ.

ಪರಾಂಡೆ ಅವರ ಪ್ರಕಾರ, ಆಚರಣೆಯಲ್ಲಿರುವ ಹಿಂದೂಗಳು ಮಾತ್ರ ಈ ಆಡಳಿತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಲು ಅರ್ಹರಾಗಿರುತ್ತಾರೆ. ರಾಜಕೀಯ ಪಕ್ಷಗಳೊಂದಿಗೆ ಸಂಬಂಧ ಹೊಂದಿರುವ ರಾಜಕಾರಣಿಗಳು ಅಥವಾ ವ್ಯಕ್ತಿಗಳನ್ನು ಹೊರಗಿಡಲಾಗುತ್ತದೆ. ದೇವಸ್ಥಾನಗಳಿಂದ ಬರುವ ಆದಾಯವನ್ನು ಸರ್ಕಾರಿ ಯೋಜನೆಗಳಿಗೆ ಬದಲಾಗಿ ಹಿಂದೂ ಧರ್ಮದ ಪ್ರಚಾರಕ್ಕಾಗಿ ಮತ್ತು ಸಮುದಾಯ ಸೇವೆಗೆ ಮಾತ್ರ ಬಳಸಲಾಗುವುದು ಎಂದು ಅವರು ಹೇಳಿದರು.

“ಇದು ಹಿಂದೂ ಸಮಾಜವನ್ನು ಅದರ ದೇವಾಲಯಗಳ ಉಸ್ತುವಾರಿ ವಹಿಸಲು, ಅವುಗಳ ಪವಿತ್ರತೆ ಮತ್ತು ಸರಿಯಾದ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ನೀಡುವುದು” ಎಂದು ಪರಾಂಡೆ ಹೇಳಿದರು.

ಇದನ್ನೂ ಓದಿ; ಸಾರ್ವಜನಿಕವಾಗಿ ಚಾಟಿಯಿಂದ ದಂಡಿಸಿಕೊಂಡ ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ: ಕಾರಣ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...