Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ: ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಮದ್ರಾಸ್ ಹೈಕೋರ್ಟ್‌

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ: ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಮದ್ರಾಸ್ ಹೈಕೋರ್ಟ್‌

- Advertisement -
- Advertisement -

ತಮಿಳುನಾಡಿನಲ್ಲಿ ರಾಜಕೀಯ ಬಣ್ಣ ಪಡೆದುಕೊಂಡಿರುವ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದ ವಿದ್ಯಾರ್ಥಿನಿಯ ಅತ್ಯಾಚಾರ ಘಟನೆ ಸಂಬಂಧ ಮದ್ರಾಸ್ ಹೈಕೋರ್ಟ್ ಶುಕ್ರವಾರ (ಡಿ.27) ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದೆ ಎಂದು ವರದಿಯಾಗಿದೆ.

ವಕೀಲೆ ಆರ್.ವರಲಕ್ಷ್ಮಿ ಅವರು ಮಾಡಿದ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಎಸ್.ಎಂ ಸುಬ್ರಮಣ್ಯಂ ಮತ್ತು ವಿ.ಲಕ್ಷ್ಮೀನಾರಾಯಣನ್ ಅವರ ವಿಭಾಗೀಯ ಪೀಠವು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದೆ. ಆದರೆ, ಮುಖ್ಯ ನ್ಯಾಯಮೂರ್ತಿಗಳು ಇನ್ನೂ ಒಪ್ಪಿಗೆ ನೀಡದ ಕಾರಣ ವಿಚಾರಣೆಯನ್ನು ಮುಂದೂಡಿದೆ.

ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ಸ್ವಯಂಪ್ರೇರಿತ ವಿಚಾರಣೆ ಆರಂಭಿಸಬೇಕು ಎಂದು ವಕೀಲೆ ವರಲಕ್ಷ್ಮಿ ಕೋರಿದ್ದರು. ವಕೀಲೆಯ ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡು ಇಂದು (ಶುಕ್ರವಾರ) ಮಧ್ಯಾಹ್ನ 2.15ಕ್ಕೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರ ಗೃಹ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮತ್ತು ಅಣ್ಣಾ ವಿಶ್ವವಿದ್ಯಾಲಯಕ್ಕೆ ಸೂಚಿಸಿತ್ತು.

ಮಧ್ಯಾಹ್ನದ ವಿರಾಮದ ಬಳಿಕ ಪ್ರಕರಣ ವಿಚಾರಣೆ ಪುನರಾರಂಭಿಸಿದ ನ್ಯಾಯಾಧೀಶರು, ಮುಖ್ಯ ನ್ಯಾಯಮೂರ್ತಿಗಳು ಈಗ ನ್ಯಾಯಾಲಯದಲ್ಲಿ ಹಾಜರಿಲ್ಲ. ಅವರಿಂದ ಒಪ್ಪಿಗೆ ಪಡೆದ ಬಳಿಕ ವಿಚಾರಣೆ ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.

ಪ್ರಕರಣದ ವಿಚಾರಣೆ ಆರಂಭಿಸಿದ ವೇಳೆ ನ್ಯಾಯ ಪೀಠದ ಮುಂದೆ ಹಾಜರಾದ ಅಡ್ವೊಕೇಟ್ ಜನರಲ್ (ಎಜಿ) ಪಿ.ಎಸ್.ರಾಮನ್ ಅವರು, ಈ ಪ್ರಕರಣದಲ್ಲಿ ನಮ್ಮ ವಾದ ಆಲಿಸದೆ ಯಾವುದೇ ಮಧ್ಯಂತರ ಆದೇಶ ನೀಡದಂತೆ ಹಾಗೂ ವಿಚಾರಣೆಯನ್ನು ನಾಳೆಗೆ (ಶನಿವಾರ) ಮುಂದೂಡುವಂತೆ ಕೋರಿದ್ದಾರೆ. ರಾಜ್ಯ ಸರ್ಕಾರ ಪ್ರಕರಣದ ಸ್ಥಿತಿಯ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಹಾಜರಿದ್ದ ಎಐಎಡಿಎಂಕೆ ಪಕ್ಷದ ಪರ ವಕೀಲ ಜಯಪ್ರಕಾಶ್ ಸೇರಿದಂತೆ ಕೆಲ ವಕೀಲರು, ಸ್ವಯಂ ಪ್ರೇರಿತ ವಿಚಾರಣೆ ಮುಂದುವರಿಸಲು ಸಾಧ್ಯವಾಗದಿದ್ದರೆ ಅದನ್ನು ವಾಪಸ್ ಪಡೆಯಿರಿ. ನಾವು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದೇವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಕೀಲೆ ವರಲಕ್ಷ್ಮಿ ಅವರು ನ್ಯಾಯಾಲಯಕ್ಕೆ ಬರೆದ ಪತ್ರದಲ್ಲಿ, ಆರೋಪಿ ಜ್ಞಾನಶೇಖರನ್‌ ಅವರನ್ನು ಬಂಧಿಸಿದ್ದರೂ, ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೊಬ್ಬನನ್ನು ಇನ್ನೂ ಬಂಧಿಸಿಲ್ಲ ಎಂದು ಹೇಳಿದ್ದಾರೆ.

ಆದರೆ, ಇದುವರೆಗಿನ ತನಿಖೆಯಲ್ಲಿ ಬೇರೆ ಯಾವುದೇ ವ್ಯಕ್ತಿಯ ಪಾತ್ರದ ಬಗ್ಗೆ ತಿಳಿದು ಬಂದಿಲ್ಲ ಎಂದು ಗ್ರೇಟರ್ ಚೆನ್ನೈ ಪೊಲೀಸ್ ಆಯುಕ್ತರು ಗುರುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಂಧಿತ ಆರೋಪಿಯು ಆಡಳಿತ ಪಕ್ಷದೊಂದಿಗೆ ಸಂಪರ್ಕ ಹೊಂದಿರುವುದರಿಂದ ಮತ್ತು ಪಕ್ಷದ ಹಲವು ಹುದ್ದೆಗಳನ್ನು ಹೊಂದಿರುವುದರಿಂದ, ಈಗ ನಡೆಯುತ್ತಿರುವ ತನಿಖೆಯ ನಿಷ್ಪಕ್ಷಪಾತ ಮತ್ತು ದಕ್ಷತೆಯ ಬಗ್ಗೆ ವಕೀಲೆ ವರಲಕ್ಷ್ಮಿ ತಮ್ಮ ಪತ್ರದಲ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಎಫ್‌ಐಆರ್ ಪ್ರತಿ ಸೋರಿಕೆ ಮಾಡಿ ಸಂತ್ರಸ್ತೆಯ ಗುರುತು ಬಹಿರಂಗ ಮಾಡಲಾಗಿದೆ ಎಂದು ಆರೋಪಿಸಿರುವ ಅವರು, ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕೃಷ್ಣಗಿರಿ ಜಿಲ್ಲೆಯ ನಕಲಿ ಎನ್‌ಸಿಸಿ ಶಿಬಿರಗಳಲ್ಲಿ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಚೆನ್ನೈನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಹಲ್ಲೆ ಘಟನೆಗಳನ್ನೂ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿಗಳು ಹೇಳಿವೆ.

ವಕೀಲೆ ವರಲಕ್ಷ್ಮಿ ಅವರು ತನಿಖೆಯ ಮೇಲ್ವಿಚಾರಣೆಗೆ ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ಸಮಿತಿಯನ್ನು ರಚಿಸುವಂತೆ ಅಥವಾ ಪರ್ಯಾಯವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಹೆಚ್ಚುತ್ತಿರುವ ಆದಿವಾಸಿಗಳ ಆತ್ಮಹತ್ಯೆ: ಕೇರಳ ಸರ್ಕಾರ, ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...