Homeಚಳವಳಿತೀವ್ರಗೊಂಡ ಬಿಹಾರ ನಾಗರಿಕ ಸೇವಾ ಪರೀಕ್ಷೆಯ ವಿರುದ್ಧದ ಪ್ರತಿಭಟನೆ

ತೀವ್ರಗೊಂಡ ಬಿಹಾರ ನಾಗರಿಕ ಸೇವಾ ಪರೀಕ್ಷೆಯ ವಿರುದ್ಧದ ಪ್ರತಿಭಟನೆ

- Advertisement -
- Advertisement -

ಡಿಸೆಂಬರ್ 13 ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಬಿಹಾರ ಲೋಕಸೇವಾ ಆಯೋಗದ (BPSC) ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಈ ನಡುವೆ ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಶುಕ್ರವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಬೆಂಬಲ ನೀಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಬಗ್ಗೆ ವಿದ್ಯಾರ್ಥಿಗಳ ಬೇಡಿಕೆಯನ್ನು ಮನ್ನಿಸಿ ಸಮಸ್ಯೆ ಬಗೆಹರಿಸಲು ಸಮಿತಿ ರಚಿಸುವಂತೆ ಕಿಶೋರ್ ಅವರು ಸಿಎಂ ನಿತೀಶ್ ಕುಮಾರ್ ಅವರಿಗೆ ಒತ್ತಾಯಿಸಿದ್ದಾರೆ. ತೀವ್ರಗೊಂಡ ಬಿಹಾರ

ಖಾನ್ ಸರ್ ಎಂದೆ ಜನಪ್ರಿಯರಾಗಿರುವ ಖ್ಯಾತ ಶಿಕ್ಷಣತಜ್ಞ ಫೈಝಲ್ ಖಾನ್ ಅವರು ಕಳೆದ ಒಂಬತ್ತು ದಿನಗಳಿಂದ ಧರಣಿ ನಡೆಸುತ್ತಾ ಮರು ಪರೀಕ್ಷೆಗೆ ಒತ್ತಾಯಿಸುತ್ತಿರುವ ವಿದ್ಯಾರ್ಥಿಗಳ ಬೇಡಿಕೆಯನ್ನು ಬೆಂಬಲಿಸಿದ್ದಾರೆ. ಗರ್ದಾನಿಬಾಗ್ ಪ್ರದೇಶದಲ್ಲಿ ಪ್ರತಿಭಟನಾನಿರತ ಅಭ್ಯರ್ಥಿಗಳನ್ನು ಭೇಟಿ ಮಾಡಿದ ಖಾನ್ ಸರ್, “ಆಯೋಗವು ಸಾಕ್ಷ್ಯ ಮತ್ತು ಸಿಸಿಟಿವಿ ದೃಶ್ಯಗಳನ್ನು ಏಕೆ ಮರೆಮಾಚುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಪಿಎಸ್‌ಸಿ ನಡೆಸಿದ ಪೂರ್ವಭಾವಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮತ್ತು ರಾಜ್ಯಾದ್ಯಂತ ಮರುಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಹಲವು ಬಿಪಿಎಸ್‌ಸಿ ಅಭ್ಯರ್ಥಿಗಳು ಡಿಸೆಂಬರ್ 13ರಂದು ಪ್ರತಿಭಟನೆ ಆರಂಭಿಸಿದ್ದರು. ಹಲವಾರು ಅಭ್ಯರ್ಥಿಗಳು ಸುಮಾರು ಒಂದು ಗಂಟೆ ತಡವಾಗಿ ಪ್ರಶ್ನೆ ಪತ್ರಿಕೆ ಪಡೆದಿದ್ದಾರೆ ಎಂದು ಆರೋಪಿಸಿದ್ದು, ಇತರ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳು ಹರಿದಿತ್ತು ಎಂದು ಹೇಳಿದ್ದಾರೆ. ಜೊತೆಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿವೆ ಎಂದು ಅನುಮಾನಗಳನ್ನು ಮುಂದಿಟ್ಟಿದ್ದಾರೆ. ತೀವ್ರಗೊಂಡ ಬಿಹಾರ

ಪ್ರತಿಭಟನಾ ಸ್ಥಳದಲ್ಲಿ ಮಾತನಾಡಿದ ಖಾನ್ ಸರ್,”ನಾವು ಆಯೋಗದಿಂದ ಮರು ಪರೀಕ್ಷೆಗೆ ಒತ್ತಾಯಿಸುತ್ತೇವೆ. ಆಯೋಗವು ಸಾಕ್ಷ್ಯ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಏಕೆ ಮರೆಮಾಚುತ್ತಿದೆ? ಈ ಬಗ್ಗೆ ತನಿಖೆ ಮಾಡಬೇಕು… ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ಬಿಹಾರದಲ್ಲಿ ನಡೆಯುತ್ತಿರುವುದನ್ನು ರಾಷ್ಟ್ರಪತಿಯವರಿಗೂ ಹೇಳುತ್ತೇವೆ… ಮೊದಲು ದೇಶದ ಜಿಡಿಪಿ ಕುಸಿಯಿತು, ನಂತರ ಬಿಹಾರದಲ್ಲಿ ಸೇತುವೆ ಕುಸಿದಿದೆ ಮತ್ತು ಈಗ ಬಿಪಿಎಸ್‌ಸಿ ಕುಸಿದಿದೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ಜನಪ್ರಿಯ ಶಿಕ್ಷಕ ಮತ್ತು ಕೋಚಿಂಗ್ ಸೆಂಟರ್ ಮಾಲೀಕ ಗುರು ರೆಹಮಾನ್ ಕೂಡ ಅಭ್ಯರ್ಥಿಗಳನ್ನು ಬೆಂಬಲಿಸಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೋಚಿಂಗ್ ಸೆಂಟರ್‌ಗಳು ತಮ್ಮ ಆಂದೋಲನವನ್ನು ‘ಹೈಜಾಕ್’ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅಭ್ಯರ್ಥಿಗಳು ಆರೋಪಿಸಿದ ನಂತರ ಖಾನ್ ಸರ್ ಮತ್ತು ಗುರು ರೆಹಮಾನ್ ಇಬ್ಬರೂ ಸ್ಥಳವನ್ನು ತೊರೆದಿದ್ದಾರೆ. ಇದಕ್ಕೂ ಮುನ್ನ ಧರಣಿ ಸತ್ಯಾಗ್ರಹದಲ್ಲಿ ಪಕ್ಷೇತರ ಸಂಸದ ಪೂರ್ಣೆ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಭಾಗವಹಿಸಿದ್ದರು.

ಅದಾಗ್ಯೂ, BPSC ಪರೀಕ್ಷಾ ನಿಯಂತ್ರಕ ರಾಜೇಶ್ ಕುಮಾರ್ ಸಿಂಗ್ ಅವರು, 70 ನೇ ಇಂಟಿಗ್ರೇಟೆಡ್ ಕಂಬೈನ್ಡ್ ಸ್ಪರ್ಧಾತ್ಮಕ ಪರೀಕ್ಷೆ (CCE) 2024 ಅನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಅಭ್ಯರ್ಥಿಗಳು ಅಕ್ರಮಗಳು ಎಸಗಿದ್ದಾರೆ ಎಂಬ ಆರೋಪವನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ ಎಂದು ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಅದಾಗ್ಯೂ, BPSC ಬಾಪು ಪರೀಕ್ಷಾ ಪರಿಸರ್‌ ಕೇಂದ್ರದಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳ ಪೂರ್ವಭಾವಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಡಿಸೆಂಬರ್ 13 ರಂದು ನಡೆಸಲಾದ ಪರೀಕ್ಷೆಯ ವೇಳೆ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದರು. ಈ ವೇಳೆ ಉಂಟಾದ ಗೊಂದಲದ ಸಮಯದಲ್ಲಿ ಕೇಂದ್ರದಲ್ಲಿ ಅಭ್ಯರ್ಥಿಗಳಿಂದ “ಅಶಿಸ್ತು” ನಡೆದಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ರೈತ ನಾಯಕ ದಲ್ಲೆವಾಲ್‌ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ – ಪಂಜಾಬ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...