Homeಮುಖಪುಟಟಿಕೆಟ್‌ಗೆ ಹಣವಿಲ್ಲದೆ ರೈಲಿನಡಿ ಕುಳಿತು 250 ಕಿ.ಮೀ ಪ್ರಯಾಣಿಸಿದ ವ್ಯಕ್ತಿ : ರೈಲ್ವೆ ಇಲಾಖೆ ಹೇಳಿದ್ದೇನು?

ಟಿಕೆಟ್‌ಗೆ ಹಣವಿಲ್ಲದೆ ರೈಲಿನಡಿ ಕುಳಿತು 250 ಕಿ.ಮೀ ಪ್ರಯಾಣಿಸಿದ ವ್ಯಕ್ತಿ : ರೈಲ್ವೆ ಇಲಾಖೆ ಹೇಳಿದ್ದೇನು?

- Advertisement -
- Advertisement -

ಟಿಕೆಟ್‌ ಪಡೆಯಲು ಹಣವಿಲ್ಲದ ಕಾರಣ ವ್ಯಕ್ತಿಯೊಬ್ಬರು ರೈಲಿನ ಬೋಗಿಯಡಿ ಅವಿತುಕೊಂಡು ಸುಮಾರು 250 ಕಿಲೋ ಮೀಟರ್ ದೂರ ಪ್ರಯಾಣಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ ಎಂದು ನಿನ್ನೆ (ಡಿ.27) ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಇದನ್ನು ರೈಲ್ವೆ ಇಲಾಖೆ ಅಲ್ಲಗಳೆದಿದೆ.

ಮಧ್ಯಪ್ರದೇಶದ ನರ್ಮಾದಾಪುರ್‌ ಜಿಲ್ಲೆಯ ನಗರವಾದ ಇಟಾರ್ಸಿಯಿಂದ ಜಬಲ್ಪುರ್‌ವರೆಗೆ 250 ಕಿ.ಮೀ ದೂರ ಎಕ್ಸ್‌ಪ್ರೆಸ್ ರೈಲಿನ ಬೋಗಿಯಡಿ ಚಕ್ರಗಳ (ವೀಲ್‌ಗಳ) ನಡುವೆ ವ್ಯಕ್ತಿ ಪ್ರಯಾಣ ಮಾಡಿದ್ದಾರೆ. ಜಬಲ್ಪುರ ನಿಲ್ದಾಣದಲ್ಲಿ ಅವರು ರೈಲಿನಡಿಯಿಂದ ಹೊರ ಬಂದಾಗ ವಿಷಯ ಗೊತ್ತಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿತ್ತು.

ಅದಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿತ್ತು. ಡಿಸೆಂಬರ್ 24ರಂದು ದಾನಪುರ್‌ ಎಕ್ಸ್‌ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿತ್ತು.

ಆದರೆ, ಮಾಧ್ಯಮ ವರದಿಗಳು ಸುಳ್ಳು ಎಂದು ರೈಲ್ವೆ ಇಲಾಖೆ ಹೇಳಿದೆ. ರೈಲಿನ ಆಕ್ಸೆಲ್ ನಿರಂತರ ವೇಗವಾಗಿ ತಿರುಗುತ್ತಿರುತ್ತದೆ. ಹೀಗಿರುವಾಗ ವ್ಯಕ್ತಿಯೊಬ್ಬ ಚಕ್ರಗಳು ಮತ್ತು ಆಕ್ಸೆಲ್ ನಡುವೆ ಕುಳಿತು ಪ್ರಯಾಣಿಸುವುದು ಅಸಾಧ್ಯ. ಚಕ್ರಗಳ ನಡುವೆ ಕುಳಿತು ಪ್ರಯಾಣಿಸಿದ್ದಾರೆ ಎನ್ನಲಾದ ವ್ಯಕ್ತಿ ‘ಮಾನಸಿಕ ಅಸ್ವಸ್ಥ’ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಕೇಂದ್ರ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಪ್ರೆಸ್ ಇನ್ಫರ್ಮೇಶನ್ ಬ್ಯೂರೋ (ಪಿಐಬಿ) ಕೂಡ ಎಕ್ಸ್‌ನಲ್ಲಿ ಫ್ಯಾಕ್ಟ್‌ಚೆಕ್ ಪೋಸ್ಟ್‌ ಮಾಡಿ ‘ಮಾಧ್ಯಮಗಳಲ್ಲಿ ಬಂದಿರುವ ವರದಿ’ ದಾರಿ ತಪ್ಪಿಸುವಂತದ್ದು ಎಂದು ಹೇಳಿದೆ.

ವರದಿಗಳ ಪ್ರಕಾರ, ಜಬಲ್ಪುರ ನಿಲ್ದಾಣದಲ್ಲಿ ರೈಲು ನಿಂತಾಗ ವ್ಯಕ್ತಿಯೊಬ್ಬರು ಬೋಗಿಯ ಅಡಿಯಿಂದ ಹೊರ ಬಂದಿದ್ದಾರೆ. ಜನರು ಅವರನ್ನು ಮಾತನಾಡಿಸಿದಾಗ, ಟಿಕೆಟ್ ಪಡೆಯಲು ದುಡ್ಡಿಲ್ಲದ ಕಾರಣ ತಾನು 250 ಕಿ.ಮೀ ದೂರದ ಇಟಾರ್ಸಿಯಿಂದ ಬೋಗಿಯ ಅಡಿ ಕುಳಿತು ಬಂದಿರುವುದಾಗಿ ಹೇಳಿದ್ದಾರೆ. ತಕ್ಷಣ ಆ ವ್ಯಕ್ತಿಯನ್ನು ರೈಲ್ವೆ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತಿದ್ದು, ಅಜಾಗರೂಕತೆಯಿಂದ ವರ್ತಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಮಧ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ತೀವ್ರಗೊಂಡ ಬಿಹಾರ ನಾಗರಿಕ ಸೇವಾ ಪರೀಕ್ಷೆಯ ವಿರುದ್ಧದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...