Homeಮುಖಪುಟಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

- Advertisement -
- Advertisement -

ಹೊಸದಿಲ್ಲಿ:  ಜಮ್ಮು ಮತ್ತು ಕಾಶ್ಮೀರದ ಸುಮಾರು ಎರಡು ಡಜನ್ ನಷ್ಟು ಬಡ ಶಾಲು ಮಾರಾಟಗಾರರಿಗೆ ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ಸ್ಥಳೀಯ ಹಿಂದುತ್ವ ಗುಂಪುಗಳು ವ್ಯಾಪಾರ ಮಾಡದಂತೆ ಮತ್ತು ಈ ಪ್ರದೇಶವನ್ನು ಬಿಟ್ಟು ಕಾಶ್ಮೀರಕ್ಕೆ ಹಿಂತಿರುಗುವಂತೆ  ಕಿರುಕುಳ ನೀಡುತ್ತಿರುವ ಘಟನೆ ವರದಿಯಾಗಿದೆ.

ಈ ಅಸಹಾಯಕ ಶಾಲು ಮಾರಾಟಗಾರರು ಸಂಭಾವ್ಯ ಗ್ರಾಹಕರನ್ನು ತಲುಪಲು ಹೋದರೆ ತಮ್ಮ ಸರಕುಗಳನ್ನು ಸ್ಥಳೀಯ ಹಿಂದುತ್ವ ಗುಂಪುಗಳಿಂದ ವಶಪಡಿಸಿಕೊಳ್ಳಲಾಗುತ್ತದೆ ಎಂಬ ಭಯದಿಂದ ಒಂದೇ ಸ್ಥಳದಲ್ಲಿ ಕುಳಿತಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಕಾಶ್ಮೀರದ ಶಾಲು ಮಾರಾಟಗಾರರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ.

ಬಿಲಾಸ್‌ಪುರದಲ್ಲಿ ಸ್ಥಳೀಯ ಹಿಂದುತ್ವ ಗುಂಪುಗಳಿಂದ ಕಾಶ್ಮೀರಿ ಮಾರಾಟಗಾರರು ಎದುರಿಸುತ್ತಿರುವ ದೌರ್ಜನ್ಯದ ಬಗ್ಗೆ ಸುಖ್ವಿಂದರ್ ಸಿಂಗ್ ಮತ್ತು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಗಮನವನ್ನು ಸೆಳೆಯಲು ಮುಫ್ತಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಮನವಿ ಮಾಡಿದ್ದಾರೆ. ಈ ವ್ಯಾಪಾರಿಗಳಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸುವಂತೆ ಸುಖ್ವಿಂದರ್ ಸಿಂಗ್ ಅವರನ್ನು ಕೇಳಿದ್ದಾರೆ.

ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯಲ್ಲಿ ಕಾಶ್ಮೀರಿ ಶಾಲು ಮಾರಾಟಗಾರರು ಹಿಂದುತ್ವ ಗುಂಪುಗಳಿಂದ ಕಿರುಕುಳ, ಹಲ್ಲೆ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಈ ವ್ಯಾಪಾರಿಗಳು ಸರಿಯಾದ ದಾಖಲೆಗಳನ್ನು ಹೊಂದಿರುವ ಹೊರತಾಗಿಯೂ, ಅವರನ್ನು ವ್ಯಾಪಾರ ಮಾಡದಂತೆ ನಿರ್ಬಂಧಿಸಲಾಗಿದೆ ಮತ್ತು ಹೊರಹಾಕಲಾಗುತ್ತಿದೆ. ಇದು ಈ ರಾಜ್ಯದಲ್ಲಿ ನಡೆದ ಮೂರನೇ ಘಟನೆಯಾಗಿದ್ದು, ಉದ್ದೇಶಪೂರ್ವಕ ಕಿರುಕುಳವು ಆತಂಕಕಾರಿಯಾಗಿದೆ ಎಂದು ಮುಫ್ತಿ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕಾಶ್ಮೀರಿ ಮಾರಾಟಗಾರರೊಬ್ಬರು, ನಾವು 3-4 ದಿನಗಳ ಕಾಲ ಇಲ್ಲಿ ಒಂದೇ ಕಡೆ ಕುಳಿತಿದ್ದೇವೆ. ನಮಗೆ ಕಿರುಕುಳ ನೀಡಲಾಗುತ್ತಿದೆ. ನಾವು ನಮ್ಮ ಸರಕುಗಳನ್ನು ಮಾರಾಟ ಮಾಡಲು ಬಸ್ ನಿಲ್ದಾಣಕ್ಕೆ ಹೋದಾಗ, ಅವಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ನಮಗೆ ವ್ಯಾಪಾರ ಮಾಡಲು ಬಿಡುತ್ತಿಲ್ಲ. ನಾವು ಆ ಪ್ರದೇಶದಿಂದ ದೂರ ಹೋಗಲು ಮತ್ತು ಕಾಶ್ಮೀರಕ್ಕೆ ಹಿಂತಿರುಗುವಂತೆ ಒತ್ತಾಯಿಸಲಾಗುತ್ತಿದೆ ಎಂದು ಆಳಲು ತೊಡಿಕೊಂಡಿದ್ದಾನೆ.

ನಾವು ಹಿಮಾಚಲ ಪ್ರದೇಶದ  ಸ್ಥಳೀಯ ಜನರಿಗೆ ತಾವೂ ಸಹ ಭಾರತೀಯರು ಮತ್ತು ನಮ್ಮ ಸರಕುಗಳನ್ನು ಇಲ್ಲಿ ಮಾರಾಟ ಮಾಡಬಹುದು ಎಂದು ಹೇಳಿದರೆ ಪ್ರಯೋಜನವಿಲ್ಲವಾಗಿದೆ.  ಸ್ಥಳೀಯ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮತ್ತು ಇತರ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ನಮಗೆ ವ್ಯಾಪಾರಕ್ಕೆ ಅನುಮತಿಸಲು ಸ್ಥಳೀಯರು ಸಿದ್ಧರಿಲ್ಲ ಎಂದು ಕಾಶ್ಮೀರಿ ವ್ಯಾಪಾರಿ ಹೇಳಿದ್ದಾನೆ.

ಅವರು ನಮಗೆ ಬೆದರಿಕೆ ಹಾಕುತ್ತಿದ್ದಾರೆ. ನಾವು ವ್ಯಾಪಾರ ಮಾಡುತ್ತಿರುವ ಸ್ಥಳದ ಮಾಲಿಕರಿಗೆ ಅಲ್ಲಿಂದ ಹೊರಹಾಕುವಂತೆ ಈ ಹಿಂದುತ್ವ ಗುಂಪುಗಳು ಕರೆ ನೀಡುತ್ತಿದ್ದಾರೆ. ನಾವು ಕಳೆದ 25 ,30 ಮತ್ತು 40 ವರ್ಷಗಳಿಂದ ತಮ್ಮ ಸರಕುಗಳನ್ನು ಇಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಕಾಶ್ಮೀರಿ ಮಾರಾಟಗಾರರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಅಂಗಡಿಯವರೊಂದಿಗೆ ನಮಗೆ ಯಾವುದೇ ಸಮಸ್ಯೆ ಇಲ್ಲ. ಕೆಲವರು ಮಾತ್ರ ನಮ್ಮನ್ನು ಹೊರಹಾಕಲು ಒತ್ತಾಯಿಸುತ್ತಿದ್ದಾರೆ ಎಂದು ಮತ್ತೊಬ್ಬ ಕಾಶ್ಮೀರಿ ಮಾರಾಟಗಾರ ಹೇಳುತ್ತಾನೆ.

ಘಟನೆಯು ಹಿಮಾಚಲ ಪ್ರದೇಶದ ಬಿಲಾಸ್ಪುರದ ಘುಮರ್ವಿನ್ ಪಟ್ಟಣದಲ್ಲಿ ಸಂಭವಿಸಿದೆ. ಈ ನತದೃಷ್ಟ ಕಾಶ್ಮೀರಿ ಮಾರಾಟಗಾರರು ಘುಮರ್ವಿನ್‌ನ ಎಸ್‌ಡಿಎಂಗೆ ದೂರು ನೀಡಲು ಹೋಗಿದ್ದರು. ಎಸ್ ಡಿಎಂ ಅವರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ಅವರನ್ನು ಕಳುಹಿಸಿದ್ದರು ಎಂದು ವರದಿಗಳು ಹೇಳಿವೆ.

ಸ್ಥಳೀಯ ವ್ಯಾಪಾರಿಗಳು ಮತ್ತು ಕಾಶ್ಮೀರಿ ಮಾರಾಟಗಾರರ ನಡುವಿನ ಈ ವಿವಾದವಾಗಿದೆ ಮತ್ತು ಈ ಬಗ್ಗೆ ದೂರು ಸ್ವೀಕರಿಸಲಾಗಿದೆ. ಕಳೆದ ವರ್ಷವೂ ಇಂತಹ ಘಟನೆಗಳು ವರದಿಯಾಗಿದ್ದವು. ಕೆಲ ವ್ಯಾಪಾರಿಗಳು ಮಾರಾಟಗಾರರಿಂದ ನಷ್ಟ ಅನುಭವಿಸುತ್ತಿದ್ದಾರೆ. ಇದುವರೆಗೆ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿಲ್ಲ ಎಂದು ಬಿಲಾಸ್ಪುರ್ ಎಸ್ಪಿ ಸಂದೀಪ್ ಧವಾಲ್ ತಿಳಿಸಿದ್ದಾರೆ.

ಎರಡು ಗುಂಪುಗಳ ನಡುವಿನ ಜಗಳಕ್ಕೆ ಮಧ್ಯಸ್ಥಿಕೆ ವಹಿಸುವಂತೆ ಎಸ್ಪಿಯವರು ಡಿಸಿ ಕಚೇರಿಗೆ ಸೂಚಿಸಿದ್ದಾರೆ. ಮುಂದಿನ 2 ಅಥವಾ 3 ದಿನಗಳಲ್ಲಿ ಎರಡೂ ಗುಂಪುಗಳ ನಡುವೆ ಸಭೆ ನಡೆಯುವ ನಿರೀಕ್ಷೆಯಿದೆ. ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿಗಳ ಸಂಘದ ರಾಷ್ಟ್ರೀಯ ಸಂಚಾಲಕ ನಾಸಿರ್ ಖುಹಾಮಿ ಕಾಶ್ಮೀರಿಗಳ ವಿರುದ್ಧ ಇಂತಹ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಅವರಿಗೆ ಕಾಶ್ಮೀರ ಬೇಕು, ಆದರೆ ಕಾಶ್ಮೀರಿಗಳು ಬೇಕಾಗಿಲ್ಲ. ಭಾರತದ ಕಲ್ಪನೆಗೆ ಇಂತಹ ಘಟನೆಗಳಿಂದ ಕಾಶ್ಮೀರದಲ್ಲಿ ಹೆಚ್ಚು ಹಾನಿಯಾಗುವುದಿಲ್ಲ. ಕಾಶ್ಮೀರಿಗಳಿಗೆ ಪ್ರತಿದಿನವೂ ಕಿರುಕುಳ ನೀಡುವುದು ಮತ್ತು ಬೆದರಿಕೆ ಹಾಕುವುದು ಸರಿಯಲ್ಲ. ಎರಡು ರಾಜ್ಯಗಳ ನಡುವೆ ನಿಜವಾದ ಏಕೀಕರಣವು ಗೌರವ, ಘನತೆ ಮತ್ತು ಸಹಾನುಭೂತಿಯಿಂದ ಬರುತ್ತದೆ ಎಂದು ಅವರು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಸ್ಥಳೀಯ ಆರ್ಥಿಕತೆಗೆ ಕಾಶ್ಮೀರವು ಅಪಾರ ಕೊಡುಗೆ ನೀಡಿದೆ ಮತ್ತು ಅಲ್ಲಿನ ಸಾಮಾಜಿಕ ರಚನೆಯ ಭಾಗವಾಗಿರುವ ಈ ಶಾಲು ಮಾರಾಟಗಾರರು ಈಗ ಬೆದರಿಕೆ ಮತ್ತು ಅಭದ್ರತೆಯನ್ನು ಎದುರಿಸುತ್ತಿದ್ದಾರೆ. ಇದು ಕಾಶ್ಮೀರಿ ಶಾಲು ಮಾರಾಟಗಾರರನ್ನು ಪ್ರತಿದಿನವೂ ಗುರಿಯಾಗಿಸುವ ಅಪಾಯಕಾರಿ ಮಾದರಿಯನ್ನು ಪ್ರತಿಬಿಂಬಿಸುತ್ತದೆ. ಏಕೆಂದರೆ ಇದು ಆ ರಾಜ್ಯದಲ್ಲಿ ನಡೆದ ಇಂತಹ ಮೂರನೇ ಘಟನೆಯಾಗಿದೆ. ಕಾಶ್ಮೀರಿಗಳ ವಿರುದ್ಧದ ಉದ್ದೇಶಿತ ಹಿಂಸಾಚಾರ ಕೊನೆಗೊಳ್ಳುವ ಲಕ್ಷಣಗಳಿಲ್ಲ ಕಾಣುತ್ತಿಲ್ಲ ಎಂದು ಖುಹಮಿ ಗಮನಸೆಳೆದಿದ್ದಾರೆ.

ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...