Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25...

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

- Advertisement -
- Advertisement -

ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆಗೆ ಮಹಿಳಾ ಐಪಿಎಸ್‌ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಮದ್ರಾಸ್ ಹೈಕೋರ್ಟ್‌ ಶನಿವಾರ (ಡಿ.28) ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಎಸ್.ಎಂ ಸುಬ್ರಮಣ್ಯಂ ಮತ್ತು ನ್ಯಾಯಮೂರ್ತಿ ವಿ.ಲಕ್ಷ್ಮಿನಾರಾಯಣನ್ ಅವರ ರಜಾಕಾಲದ ಪೀಠವು, ಪ್ರಕರಣದ ಎಫ್‌ಐಆರ್ ಪ್ರತಿ ಸೋರಿಕೆಗೆ ಸಂಬಂಧಪಟ್ಟಂತೆ ಸರ್ಕಾರ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆಗೆ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದೆ.

ಸಂತ್ರಸ್ತೆಗೆ ಉಚಿತ ಶಿಕ್ಷಣ ಮತ್ತು ವಸತಿ ಒದಗಿಸುವಂತೆ ಹಾಗೂ ಆಕೆ ಶಿಕ್ಷಣ ಮುಂದುವರಿಸುವಂತೆ ನೋಡಿಕೊಳ್ಳಲು ಅಣ್ಣಾ ವಿಶ್ವವಿದ್ಯಾಲಯಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

“ಅಗತ್ಯವಿದ್ದಲ್ಲಿ, ತಮಿಳುನಾಡು ಸರ್ಕಾರ ಪತ್ರಿಕಾಗೋಷ್ಠಿ ನಡೆಸಿ ಪ್ರಕರಣದ ವಿವರಗಳನ್ನು ಮಾಧ್ಯಮಗಳಿಗೆ ಬಹಿರಂಗಪಡಿಸಿದ ಚೆನ್ನೈ ಪೊಲೀಸ್ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಬಹುದು” ಎಂದು ಪೀಠ ಹೇಳಿದೆ.

ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರ ತನಿಖೆ ಪಕ್ಷಪಾತದಿಂದ ಕೂಡಿದೆ. ಹಾಗಾಗಿ, ಆ ತನಿಖೆಯ ಮೇಲೆ ನಮಗೆ ನಂಬಿಕೆಯಿಲ್ಲ. ನ್ಯಾಯಾಲಯ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ವಕೀಲೆ ವರಲಕ್ಷೀ ಎಂಬವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆ ಮನವಿ ಪರಿಗಣಿಸಿ ಶುಕ್ರವಾರ (ಡಿ.27) ನ್ಯಾಯಾಲಯ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು. ಅದರ ಭಾಗವಾಗಿ, ಇಂದು ಕೆಲ ಆದೇಶಗಳನ್ನು ಹೊರಡಿಸಿದೆ.

ನ್ಯಾಯಾಲಯ ರಚಿಸಿದ ಎಸ್‌ಐಟಿಯಲ್ಲಿ ಐಪಿಎಸ್‌ ಅಧಿಕಾರಿಗಳಾದ ಸ್ನೇಹಾ ಪ್ರಿಯಾ, ಅಯ್ಮನ್ ಜಮಾಲ್ ಮತ್ತು ಬೃಂದಾ ಅವರು ಇದ್ದಾರೆ.

ಎನ್‌ಐಸಿ ನಿರ್ವಹಿಸುತ್ತಿರುವ ಪೋರ್ಟಾಲ್‌ಗೆ ಅಪ್ಲೋಡ್ ಮಾಡುವಾಗ ಉಂಟಾದ ದೋಷದಿಂದ ಎಫ್‌ಐರ್ ಪ್ರತಿ ಸೋರಿಕೆಯಾಗಿದೆ. ಈ ವಿಚಾರ ಗಮನಕ್ಕೆ ಬಂದ ತಕ್ಷಣ ಅದನ್ನು ತಡೆ ಹಿಡಿಯಲಾಗಿದೆ. ಈ ನಡುವೆ 14 ಮಂದಿ ಅದನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಅವರನ್ನು ಐಪಿ ಅಡ್ರೆಸ್ ಮೂಲಕ ಪತ್ತೆ ಮಾಡಲಾಗುವುದು ಎಂದು ಸರ್ಕಾರ ಪರ ಅಡ್ವೋಕೇಟ್ ಜನರಲ್ ಪಿ.ಎಸ್‌ ರಾಮನ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಖಾರವಾಗಿ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ನೀವು ನಿಜವಾಗ್ಲೂ ಎಫ್‌ಐಆರ್‌ನಲ್ಲಿರುವ ಅಂಶಗಳನ್ನು ಓದಿದ್ದೀರಾ? ಅದರಲ್ಲಿ ಸಂತ್ರಸ್ತೆಯನ್ನೇ ತಪ್ಪಿತಸ್ಥಳು ಎಂದು ಬಿಂಬಿಸಲಾಗಿದೆ. ಅತ್ಯಾಚಾರಕ್ಕೆ ಆಕೆಯ ಉಡುಗೆ ಕಾರಣ ಎನ್ನುವಂತಿದೆ. ಅದಲ್ಲದೆ, ಚೆನ್ನೈ ಪೊಲೀಸ್ ಆಯುಕ್ತರು ತರಾತುರಿಯಲ್ಲಿ ಪತ್ರಿಕಾಗೋಷ್ಠಿ ಕರೆದು ಪ್ರಕರಣದಲ್ಲಿ ಒಬ್ಬ ಆರೋಪಿ ಮಾತ್ರ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ. ಪ್ರಕರಣದ ತನಿಖೆ ಇನ್ನೂ ಪ್ರಾರಂಭ ಹಂತದಲ್ಲಿರುವಾಗ ಪೊಲೀಸ್ ಆಯುಕ್ತರು ಅಷ್ಟು ಬೇಗ ತೀರ್ಮಾನಕ್ಕೆ ಏಕೆ ಬಂದರು? ಎಲ್ಲಾ ವಿಷಯಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಅಗತ್ಯವೇನಿತ್ತು? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಉತ್ತರ ಕೊಟ್ಟ ಅಡ್ವೋಕೇಟ್ ಜನರಲ್ ” ಮಾಧ್ಯಮಗಳು ಪ್ರಕರಣ ಸಂಬಂಧ ಹಲವು ರೀತಿಯ ವರದಿಗಳನ್ನು ಬಿತ್ತರಿಸುತ್ತಿತ್ತು. ಈ ಕಾರಣಕ್ಕೆ ಅವರಿಗೆ ಸ್ಪಷ್ಟನೆ ಕೊಡುವ ಉದ್ದೇಶದಿಂದ ಮಾತ್ರ ಪೊಲೀಸ್ ಆಯುಕ್ತರು ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇದಕ್ಕೆ ಮರುತ್ತರ ಕೊಟ್ಟ ನ್ಯಾಯಾಧೀಶರು, ಹಾಗಾದರೆ, ಎಲ್ಲಾ ಪ್ರಕರಣಗಳಲ್ಲೂ ಪೊಲೀಸ್ ಆಯುಕ್ತರು ಹೀಗೆಯೇ ಮಾಹಿತಿ ನೀಡುತ್ತಾರಾ? ನೀವು ಮಾಧ್ಯಗಳನ್ನು ದೂರ ಇಟ್ಟಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಆಗ, ಎನ್‌ಸಿಆರ್‌ಬಿ ವರದಿಯ ಪ್ರಕಾರ, ಚೆನ್ನೈ ಮತ್ತು ಕೊಯಮತ್ತೂರು ಸುರಕ್ಷಿತ ನಗರ ಎಂದು ಅಡ್ವೋಕೇಟ್ ಜನರಲ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ನಗರಗಳು ಸುರಕ್ಷಿತವಾಗಿರುವುದು ಅಲ್ಲಿನ ಒಳ್ಳೆಯ ಜನರಿಂದ, ಸರ್ಕಾರ ಅದರ ಶ್ರೇಯಸ್ಸು ಪಡೆಯುವುದು ಬೇಡ” ಎಂದು ತಿರುಗೇಟು ಕೊಟ್ಟಿದ್ದಾರೆ.

ಮಾಧ್ಯಮಗಳು ಪ್ರಕರಣದ ಕುರಿತು ತಪ್ಪು ಮಾಹಿತಿಗಳನ್ನು ಹರಡುತ್ತಿವೆ, ಗೊಂದಲಗಳನ್ನು ಸೃಷ್ಟಿಸುತ್ತಿವೆ ಎಂಬ ಅಡ್ವೋಕೇಟ್ ಜನರಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು “ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಅವರು ಕಾನೂನು ಉಲ್ಲಂಘಿಸಿದರೆ ಸೂಕ್ತ ಕ್ರಮ ಕೈಗೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....