Homeಕರ್ನಾಟಕಕಲಬುರಗಿ | ಆರೆಸ್ಸೆಸ್‌ ನಾಯಕನ ಕಾರ್ಯಕ್ರಮದ ವಿರುದ್ಧ ಪ್ರಗತಿಪರ ಸಂಘಟನೆಗಳ ಕಾರ್ಯಕ್ರಮ

ಕಲಬುರಗಿ | ಆರೆಸ್ಸೆಸ್‌ ನಾಯಕನ ಕಾರ್ಯಕ್ರಮದ ವಿರುದ್ಧ ಪ್ರಗತಿಪರ ಸಂಘಟನೆಗಳ ಕಾರ್ಯಕ್ರಮ

- Advertisement -
- Advertisement -

ಆರೆಸ್ಸೆಸ್ ಹಾಗೂ ಬಿಜೆಪಿ ಮಾಜಿ ನಾಯಕ ಕೆ.ಎನ್. ಗೋವಿಂದಾಚಾರ್ಯ ಮತ್ತು ಭಾರತ ವಿಕಾಸ ಸಂಗಮದ ಮುಖ್ಯಸ್ಥ, ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ನೇತೃತ್ವದಲ್ಲಿ ಕಲಬುರಗಿಯ ಸೇಡಂನಲ್ಲಿ ಬಲಪಂಥೀಯ ಗುಂಪುಗಳು ನಡೆಸುತ್ತಿರುವ ‘7ನೇ ಭಾರತೀಯ ಸಂಸ್ಕೃತಿ ಉತ್ಸವ’ ಕಾರ್ಯಕ್ರಮಕ್ಕೆ ವಿರುದ್ಧವಾಗಿ ಪ್ರಗತಿಪರ ಗುಂಪುಗಳು ‘ಸೌಹಾರ್ದ ಭಾರತ ಉತ್ಸವ’ ನಡೆಸುವುದಾಗಿ ತೀರ್ಮಾನ ಕೈಗೊಂಡಿವೆ. ಕಲಬುರಗಿ

ಆರೆಸ್ಸೆಸ್‌ ಹಾಗೂ ಬಿಜೆಪಿ ಪರ ಬಲಪಂಥೀಯ ಸಂಘಟನೆಯು ಜನವರಿ 29 ಮತ್ತು ಫೆಬ್ರವರಿ 6 ರ ನಡುವೆ ‘ಭಾರತೀಯ ಸಂಸ್ಕೃತಿ ಉತ್ಸವ’ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ವಿರುದ್ಧವಾಗಿ ಜನವರಿ 17ರಂದು ಪ್ರಗತಿಪರ ಸಂಘಟನೆಗಳು ತಮ್ಮ ಆದ ಕಾರ್ಯಕ್ರಮವನ್ನು ಪ್ರಾರಂಭಿಸಲು ಪ್ರತಿಜ್ಞೆ ಮಾಡಿದೆ.

ಆರೆಸ್ಸೆಸ್ ನಾಯಕ ಕೆ.ಎನ್. ಗೋವಿಂದಾಚಾರ್ಯ ಅವರು 2016ರಲ್ಲಿ ನೀಡಿದ್ದ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ‘ಭಾರತೀಯತೆಯನ್ನು ಪ್ರತಿಬಿಂಬಿಸಲು ನಾವು ಸಂವಿಧಾನವನ್ನು ಪುನಃ ಬರೆಯುತ್ತೇವೆ’ ಎಂದು ಸಂವಿಧಾನ ಬದಲಾಯಿಸುವ ಬಗ್ಗೆ ಮಾತನಾಡಿದ್ದರು. ಅವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಆರೆಸ್ಸೆಸ್‌ ನಾಯಕ ದತ್ತಾತ್ರೆಯ ಹೊಸಬಾಳೆ, ವೀರೇಂದ್ರ ಹೆಗಡೆ, ಯಡಿಯೂರಪ್ಪ, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಶ್ವೇಶ್ವರ ಕಾಗೇರಿ, ಯತ್ನಾಲ್, ಸುಧಾ ಮೂರ್ತಿ, ವಿಜಯೇಂದ್ರ, ಬಾಬಾ ರಾಮದೇವ್ ಸೇರಿದಂತೆ ಹಲವಾರು ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ. ಕಲಬುರಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಷ್ಟೆ ಅಲ್ಲದೆ, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ, ಸಚಿವರು, ಸಂಸದರು, ಶಾಸಕರು ಹಾಗೂ ಹಲವು ಕಾಂಗ್ರೆಸ್ ನಾಯಕ ಹೆಸರುಗಳು ಕಾಣಿಸಿಕೊಂಡಿದೆ. ಅದಾಗ್ಯೂ, ಈ ಕಾರ್ಯಕ್ರಮಕ್ಕೆ ತಾವು ತೆರಳುವುದಿಲ್ಲ ಮತ್ತು ತಮಗೆ ತಿಳಿಯದಂತೆ ನಮ್ಮ ಹೆಸರು ಸೇರಿಸಲಾಗಿದೆ ಎಂದು ಅವರು ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದರು. ಉಳಿದ ಕಾಂಗ್ರೆಸ್ ನಾಯಕರು ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಿದ್ದು ವರದಿಯಾಗಿಲ್ಲ.

ಪ್ರಗತಿಪರ ಸಂಘಟನೆಗಳು ನಡೆಸುತ್ತಿರುವ ಕಾರ್ಯಕ್ರಮದ ಬಗ್ಗೆ ಮಾತನಾಡಿದ ವಿದ್ವಾಂಸರಾದ ಪ್ರೊ. ಮೀನಾಕ್ಷಿ ಬಾಳಿ ಅವರು, ”ಇದು ಸಾಮಾನ್ಯ ಪ್ರತಿಭಟನೆಯಲ್ಲ. ನಾವು ಅವರನ್ನು ತಡೆಯಲು ಬಯಸುವುದಿಲ್ಲ, ಆದರೆ ಯಾವುದೇ ಸಂಭವನೀಯ ಕೋಮುವಾದಿ ಕಾರ್ಯಚಟುವಟಿಕೆ ಇದ್ದರೆ, ಬಲಪಂಥೀಯರ ರ್ಯಾಲಿಯು ಫಲಪ್ರದವಾಗದಂತೆ ಮತ್ತು ಅದರ ಉದ್ದೇಶವನ್ನು ಈಡೇರದಂತೆ ಕೆಲಸ ಮಾಡುತ್ತೇವೆ ಎಂದು ನಾವು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ” ಎಂದು ಹೇಳಿದ್ದಾರೆ.

ಡಿಸೆಂಬರ್ 19 ರಂದು ಬೆಂಗಳೂರಿನಲ್ಲಿ ನಿರ್ಣಾಯಕ ಪೂರ್ವಸಿದ್ಧತಾ ಸಭೆಗಳು ನಡೆದಿದ್ದು, ನಂತರದ ಕಾರ್ಯತಂತ್ರದ ಸಭೆಗಳನ್ನು ದಾವಣಗೆರೆ, ವಿಜಯಪುರ ಮತ್ತು ಇತರ ಪಟ್ಟಣಗಳಲ್ಲಿ ನಡೆಸಲಾಗಿದೆ ಎಂದು ಬಾಳಿ ಅವರು ಹೇಳಿದ್ದಾರೆ.

ಅದಾಗ್ಯೂ, ಪ್ರಗತಿಪರ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಈ ಆಂದೋಲನಕ್ಕೆ ಹಣದ ಕೊರತೆಯಿದೆ, ಆದರೆ, ಬಲಪಂಥೀಯರು ತಮ್ಮ ಕಾರ್ಯಕ್ರಮಕ್ಕೆ ಅಪಾರ ಪ್ರಮಾಣದ ಹಣವನ್ನು ಸುರಿಯುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಪ್ರಗತಿಪರ ನಾಯಕರು ತಮ್ಮ ಕಾರ್ಯಕ್ರಮವನ್ನು ನಡೆಸಲು ಹರಸಾಹಸ ಪಡುತ್ತಿದ್ದು, “ನಾವು ನಮ್ಮಲ್ಲಿರುವ ಸ್ವಲ್ಪ ಸ್ವಲ್ಪ ಹಣವನ್ನು ಒಟ್ಟುಗೂಡಿಸಿ ಕಾರ್ಯಕ್ರಮ ನಡೆಸಲಿದ್ದೇವೆ” ಎಂದು ಬಾಳಿ ಹೇಳಿದ್ದಾರೆ.

ಪ್ರಗತಿಪರರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬೆಂಬಲವಿದೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಮೀನಾಕ್ಷಿ ಬಾಳಿ, “ಈ ಬಗ್ಗೆ ಕಾಂಗ್ರೆಸ್‌ಗೆ ಯಾವುದೇ ತಂತ್ರವಿಲ್ಲ. ಈ ಕಾರ್ಯಕ್ರಮದಿಂದ ಏನು ಅಪಾಯವಿದೆ ಎಂದು ಅವರಿಗೆ ಅರ್ಥವಾಗುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಈ ಮಧ್ಯೆ ಜನವರಿ 29 ರ ಆರೆಸ್ಸೆಸ್ ಕಾರ್ಯಕ್ರಮದ ಪ್ರಮುಖ ವ್ಯಕ್ತಿ ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಪ್ರತಿಕ್ರಿಯಿಸಿ, ಪ್ರಗತಿಪರರ ಕಾರ್ಯಕ್ರಮವನ್ನು ‘ಕೇವಲ ಸೈಡ್‌ಶೋ’ ಎಂದು ಹೇಳಿದ್ದಾರೆ. “ಇದು ಭಾರತ ವಿಕಾಸ ಸಂಗಮ್ ಮೂಲಕ ಗೋವಿಂದಾಚಾರ್ಯರು ಯೋಜಿಸಿರುವ ಪ್ರಮುಖ ಕಾರ್ಯಕ್ರಮವಾಗಿದೆ. ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಕೂಟಗಳ ಸರಣಿಯಲ್ಲಿ ಇದು ಏಳನೆಯದು. ಈ ಹಿಂದಿನ ಕಾರ್ಯಕ್ರಮಗಳಲ್ಲಿ ಭಾರಿ ಜನ ಸೇರಿದ್ದರು. ಕಲಬುರಗಿಯ ಕಾರ್ಯಕ್ರಮದಲ್ಲಿ ಸುಮಾರು 25 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಲ್ಲಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...