Homeಕರ್ನಾಟಕಕಲಬುರಗಿ | ಆರೆಸ್ಸೆಸ್‌ ನಾಯಕನ ಕಾರ್ಯಕ್ರಮದ ವಿರುದ್ಧ ಪ್ರಗತಿಪರ ಸಂಘಟನೆಗಳ ಕಾರ್ಯಕ್ರಮ

ಕಲಬುರಗಿ | ಆರೆಸ್ಸೆಸ್‌ ನಾಯಕನ ಕಾರ್ಯಕ್ರಮದ ವಿರುದ್ಧ ಪ್ರಗತಿಪರ ಸಂಘಟನೆಗಳ ಕಾರ್ಯಕ್ರಮ

- Advertisement -
- Advertisement -

ಆರೆಸ್ಸೆಸ್ ಹಾಗೂ ಬಿಜೆಪಿ ಮಾಜಿ ನಾಯಕ ಕೆ.ಎನ್. ಗೋವಿಂದಾಚಾರ್ಯ ಮತ್ತು ಭಾರತ ವಿಕಾಸ ಸಂಗಮದ ಮುಖ್ಯಸ್ಥ, ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ನೇತೃತ್ವದಲ್ಲಿ ಕಲಬುರಗಿಯ ಸೇಡಂನಲ್ಲಿ ಬಲಪಂಥೀಯ ಗುಂಪುಗಳು ನಡೆಸುತ್ತಿರುವ ‘7ನೇ ಭಾರತೀಯ ಸಂಸ್ಕೃತಿ ಉತ್ಸವ’ ಕಾರ್ಯಕ್ರಮಕ್ಕೆ ವಿರುದ್ಧವಾಗಿ ಪ್ರಗತಿಪರ ಗುಂಪುಗಳು ‘ಸೌಹಾರ್ದ ಭಾರತ ಉತ್ಸವ’ ನಡೆಸುವುದಾಗಿ ತೀರ್ಮಾನ ಕೈಗೊಂಡಿವೆ. ಕಲಬುರಗಿ

ಆರೆಸ್ಸೆಸ್‌ ಹಾಗೂ ಬಿಜೆಪಿ ಪರ ಬಲಪಂಥೀಯ ಸಂಘಟನೆಯು ಜನವರಿ 29 ಮತ್ತು ಫೆಬ್ರವರಿ 6 ರ ನಡುವೆ ‘ಭಾರತೀಯ ಸಂಸ್ಕೃತಿ ಉತ್ಸವ’ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ವಿರುದ್ಧವಾಗಿ ಜನವರಿ 17ರಂದು ಪ್ರಗತಿಪರ ಸಂಘಟನೆಗಳು ತಮ್ಮ ಆದ ಕಾರ್ಯಕ್ರಮವನ್ನು ಪ್ರಾರಂಭಿಸಲು ಪ್ರತಿಜ್ಞೆ ಮಾಡಿದೆ.

ಆರೆಸ್ಸೆಸ್ ನಾಯಕ ಕೆ.ಎನ್. ಗೋವಿಂದಾಚಾರ್ಯ ಅವರು 2016ರಲ್ಲಿ ನೀಡಿದ್ದ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ‘ಭಾರತೀಯತೆಯನ್ನು ಪ್ರತಿಬಿಂಬಿಸಲು ನಾವು ಸಂವಿಧಾನವನ್ನು ಪುನಃ ಬರೆಯುತ್ತೇವೆ’ ಎಂದು ಸಂವಿಧಾನ ಬದಲಾಯಿಸುವ ಬಗ್ಗೆ ಮಾತನಾಡಿದ್ದರು. ಅವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಆರೆಸ್ಸೆಸ್‌ ನಾಯಕ ದತ್ತಾತ್ರೆಯ ಹೊಸಬಾಳೆ, ವೀರೇಂದ್ರ ಹೆಗಡೆ, ಯಡಿಯೂರಪ್ಪ, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಶ್ವೇಶ್ವರ ಕಾಗೇರಿ, ಯತ್ನಾಲ್, ಸುಧಾ ಮೂರ್ತಿ, ವಿಜಯೇಂದ್ರ, ಬಾಬಾ ರಾಮದೇವ್ ಸೇರಿದಂತೆ ಹಲವಾರು ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ. ಕಲಬುರಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಷ್ಟೆ ಅಲ್ಲದೆ, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ, ಸಚಿವರು, ಸಂಸದರು, ಶಾಸಕರು ಹಾಗೂ ಹಲವು ಕಾಂಗ್ರೆಸ್ ನಾಯಕ ಹೆಸರುಗಳು ಕಾಣಿಸಿಕೊಂಡಿದೆ. ಅದಾಗ್ಯೂ, ಈ ಕಾರ್ಯಕ್ರಮಕ್ಕೆ ತಾವು ತೆರಳುವುದಿಲ್ಲ ಮತ್ತು ತಮಗೆ ತಿಳಿಯದಂತೆ ನಮ್ಮ ಹೆಸರು ಸೇರಿಸಲಾಗಿದೆ ಎಂದು ಅವರು ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದರು. ಉಳಿದ ಕಾಂಗ್ರೆಸ್ ನಾಯಕರು ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಿದ್ದು ವರದಿಯಾಗಿಲ್ಲ.

ಪ್ರಗತಿಪರ ಸಂಘಟನೆಗಳು ನಡೆಸುತ್ತಿರುವ ಕಾರ್ಯಕ್ರಮದ ಬಗ್ಗೆ ಮಾತನಾಡಿದ ವಿದ್ವಾಂಸರಾದ ಪ್ರೊ. ಮೀನಾಕ್ಷಿ ಬಾಳಿ ಅವರು, ”ಇದು ಸಾಮಾನ್ಯ ಪ್ರತಿಭಟನೆಯಲ್ಲ. ನಾವು ಅವರನ್ನು ತಡೆಯಲು ಬಯಸುವುದಿಲ್ಲ, ಆದರೆ ಯಾವುದೇ ಸಂಭವನೀಯ ಕೋಮುವಾದಿ ಕಾರ್ಯಚಟುವಟಿಕೆ ಇದ್ದರೆ, ಬಲಪಂಥೀಯರ ರ್ಯಾಲಿಯು ಫಲಪ್ರದವಾಗದಂತೆ ಮತ್ತು ಅದರ ಉದ್ದೇಶವನ್ನು ಈಡೇರದಂತೆ ಕೆಲಸ ಮಾಡುತ್ತೇವೆ ಎಂದು ನಾವು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ” ಎಂದು ಹೇಳಿದ್ದಾರೆ.

ಡಿಸೆಂಬರ್ 19 ರಂದು ಬೆಂಗಳೂರಿನಲ್ಲಿ ನಿರ್ಣಾಯಕ ಪೂರ್ವಸಿದ್ಧತಾ ಸಭೆಗಳು ನಡೆದಿದ್ದು, ನಂತರದ ಕಾರ್ಯತಂತ್ರದ ಸಭೆಗಳನ್ನು ದಾವಣಗೆರೆ, ವಿಜಯಪುರ ಮತ್ತು ಇತರ ಪಟ್ಟಣಗಳಲ್ಲಿ ನಡೆಸಲಾಗಿದೆ ಎಂದು ಬಾಳಿ ಅವರು ಹೇಳಿದ್ದಾರೆ.

ಅದಾಗ್ಯೂ, ಪ್ರಗತಿಪರ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಈ ಆಂದೋಲನಕ್ಕೆ ಹಣದ ಕೊರತೆಯಿದೆ, ಆದರೆ, ಬಲಪಂಥೀಯರು ತಮ್ಮ ಕಾರ್ಯಕ್ರಮಕ್ಕೆ ಅಪಾರ ಪ್ರಮಾಣದ ಹಣವನ್ನು ಸುರಿಯುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಪ್ರಗತಿಪರ ನಾಯಕರು ತಮ್ಮ ಕಾರ್ಯಕ್ರಮವನ್ನು ನಡೆಸಲು ಹರಸಾಹಸ ಪಡುತ್ತಿದ್ದು, “ನಾವು ನಮ್ಮಲ್ಲಿರುವ ಸ್ವಲ್ಪ ಸ್ವಲ್ಪ ಹಣವನ್ನು ಒಟ್ಟುಗೂಡಿಸಿ ಕಾರ್ಯಕ್ರಮ ನಡೆಸಲಿದ್ದೇವೆ” ಎಂದು ಬಾಳಿ ಹೇಳಿದ್ದಾರೆ.

ಪ್ರಗತಿಪರರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬೆಂಬಲವಿದೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಮೀನಾಕ್ಷಿ ಬಾಳಿ, “ಈ ಬಗ್ಗೆ ಕಾಂಗ್ರೆಸ್‌ಗೆ ಯಾವುದೇ ತಂತ್ರವಿಲ್ಲ. ಈ ಕಾರ್ಯಕ್ರಮದಿಂದ ಏನು ಅಪಾಯವಿದೆ ಎಂದು ಅವರಿಗೆ ಅರ್ಥವಾಗುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಈ ಮಧ್ಯೆ ಜನವರಿ 29 ರ ಆರೆಸ್ಸೆಸ್ ಕಾರ್ಯಕ್ರಮದ ಪ್ರಮುಖ ವ್ಯಕ್ತಿ ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಪ್ರತಿಕ್ರಿಯಿಸಿ, ಪ್ರಗತಿಪರರ ಕಾರ್ಯಕ್ರಮವನ್ನು ‘ಕೇವಲ ಸೈಡ್‌ಶೋ’ ಎಂದು ಹೇಳಿದ್ದಾರೆ. “ಇದು ಭಾರತ ವಿಕಾಸ ಸಂಗಮ್ ಮೂಲಕ ಗೋವಿಂದಾಚಾರ್ಯರು ಯೋಜಿಸಿರುವ ಪ್ರಮುಖ ಕಾರ್ಯಕ್ರಮವಾಗಿದೆ. ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಕೂಟಗಳ ಸರಣಿಯಲ್ಲಿ ಇದು ಏಳನೆಯದು. ಈ ಹಿಂದಿನ ಕಾರ್ಯಕ್ರಮಗಳಲ್ಲಿ ಭಾರಿ ಜನ ಸೇರಿದ್ದರು. ಕಲಬುರಗಿಯ ಕಾರ್ಯಕ್ರಮದಲ್ಲಿ ಸುಮಾರು 25 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಲ್ಲಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...