Homeಮುಖಪುಟಉತ್ತರ ಗಾಝಾದ ಕೊನೆಯ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್ : ಕೆಲವರ ಬಂಧನ, ಹಲವರು...

ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್ : ಕೆಲವರ ಬಂಧನ, ಹಲವರು ಸಜೀವ ದಹನ

- Advertisement -
- Advertisement -

ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಎನ್ನಲಾದ ‘ಕಮಲ್ ಅದ್ವಾನ್‌’ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿ ಸುಟ್ಟು ಹಾಕಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಮಲ್ ಅದ್ವಾನ್ ಆಸ್ಪತ್ರೆಯಲ್ಲಿ ಉಗ್ರರು ತಂಗಿದ್ದಾರೆ ಎಂದು ಆರೋಪಿಸಿದ್ದ ಇಸ್ರೇಲ್ ಸೇನೆ ಕೆಲ ದಿನಗಳ ಹಿಂದೆ ಆಸ್ಪತ್ರೆಯನ್ನು ತೊರೆಯುವಂತೆ ಅದರ ಸಿಬ್ಬಂದಿಗೆ ಸೂಚಿಸಿತ್ತು. ಆದರೆ, ಸಮೀಪದಲ್ಲಿ ಬೇರೆ ಆಸ್ಪತ್ರೆಗಳು ಮತ್ತು ಸಾಕಷ್ಟು ಆಂಬ್ಯುಲೆನ್ಸ್‌ಗಳು ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದ್ದರು.

ನೂರಾರು ರೋಗಿಗಳು ಮತ್ತು ಇಸ್ರೇಲ್ ದಾಳಿಯಲ್ಲಿ ಗಾಯಗೊಂಡವರು ಬಾಕಿ ಉಳಿದಿರುವ ಏಕೈಕ ಆಸ್ಪತ್ರೆಯನ್ನು ಆಶ್ರಯಿಸಿದ್ದಾರೆ. ಇಲ್ಲಿ ಸರಿಯಾದ ವೈದ್ಯಕೀಯ ಸಾಮಾಗ್ರಿಗಳು ಲಭ್ಯವಿಲ್ಲ. ಆದರೂ, ವಿಶ್ವಸಂಸ್ಥೆಯ ನೆರವಿನಿಂದ ನಾವು ಜನರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಆಸ್ಪತ್ರೆ ಮುಖ್ಯಸ್ಥರು ತಿಳಿಸಿದ್ದರು.

ಆದರೆ, ಶುಕ್ರವಾರ (ಡಿ.27) ಇಸ್ರೇಲ್ ಸೇನೆ ಆಸ್ಪತ್ರೆಯಲ್ಲಿ ಪರಿಶೀಲನೆ ಆರಂಭಿಸಿತ್ತು. ಆ ಬಳಿಕ ಬೆಂಕಿ ಹಚ್ಚಿದೆ. ಇದರಿಂದ ಕೆಲ ವೈದ್ಯಕೀಯ ಸಿಬ್ಬಂದಿ ಸಜೀವ ದಹನವಾಗಿದ್ದಾರೆ. ಇನ್ನೂ ಕೆಲವರು ಕಿಲೋ ಮೀಟರ್‌ಗಟ್ಟಲೆ ದೂರ ಓಡಿ ಹೋಗಿದ್ದಾರೆ ಎಂದು ಅಲ್‌-ಜಝೀರಾ ಮತ್ತು ದಿ ನ್ಯೂ ಅರಬ್ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಆಸ್ಪತ್ರೆಯ ನಿರ್ದೇಶಕ ಹುಸಾಮ್ ಅಬೂ ಸಫಿಯಾ ಸೇರಿದಂತೆ ಕೆಲ ಸಿಬ್ಬಂದಿಯನ್ನು ಇಸ್ರೇಲ್ ಸೇನೆ ಬಂಧಿಸಿ ಕರೆದುಕೊಂಡು ಹೋಗಿದೆ ಎಂದು ಹಮಾಸ್‌ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ್ದಾಗಿ ವರದಿಯಾಗಿದೆ.

“ಇಸ್ರೇಲ್ ಸೇನೆ ನಮ್ಮನ್ನು ಬಂಧಿಸಿ ಸುಮಾರು 12 ಗಂಟೆಗಳ ಕಾಲ ಚಳಿಯಲ್ಲಿ ವಿವಸ್ತ್ರರಾಗಿ ನಿಲ್ಲಿಸಿತ್ತು. ಗಾಯಗೊಂಡವರನ್ನು, ಅಸ್ವಸ್ತರಾದವರನ್ನು ಥಳಿಸಿದೆ. ಪರಿಶೀಲನೆ ನಡೆಸಲು ಮಹಿಳೆಯರಿಗೆ ಬಟ್ಟೆ ಕಳಚುವಂತೆ ಒತ್ತಾಯಿಸಿದೆ. ವಿರೋಧಿಸಿದಾಗ ಕಪಾಳಮೋಕ್ಷ ಮಾಡಿದ್ದಾರೆ. ಶೌಚಾಲಯಕ್ಕೆ ಹೋಗಲೂ ನಮಗೆ ಅವಕಾಶ ನೀಡಿರಲಿಲ್ಲ. ನಾವು ಅವಮಾನದಲ್ಲಿ ಬದುಕುತ್ತಿದ್ದೇವೆ, ನಾವು ದಣಿದಿದ್ದೇವೆ. ಸಾಕು, ನಮಗೆ ಈ ಜೀವನ ಸಾಕು” ಎಂದು” ವಿಚಾರಣೆಗೆ ಒಳಪಟ್ಟು ಹೊರಬಂದ ಕಮಲ್ ಅದ್ವಾನ್ ಆಸ್ಪತ್ರೆಯ ನರ್ಸ್‌ ಇಸ್ಮಾಯಿಲ್ ಅಲ್-ಕಹ್ಲೌತ್ ಹೇಳಿದ್ದಾಗಿ ಅಲ್‌-ಜಝೀರಾ ವರದಿ ಮಾಡಿದೆ.

“ನಮ್ಮನ್ನು ವಿಚಾರಣೆಗೆ ಒಳಪಡಿಸುವ ಮೊದಲು ಸುಮಾರು ಎರಡು ಗಂಟೆಗಳ ಕಾಲ ಮೈನಡುಗುವ ಚಳಿಯಲ್ಲಿ ನಡೆಸಿದರು. ಇಸ್ರೇಲ್ ಸೇನಾ ಸಿಬ್ಬಂದಿ ನಮ್ಮ ಮೇಲೆ ಉಗುಳಿ ಅವಮಾನ ಮಾಡಿದ್ದಾರೆ. ನಮ್ಮೆಲ್ಲರ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಬಿಡುಗಡೆ ಮಾಡುವ ಮೊದಲು ನಮ್ಮ ಎದೆ ಮತ್ತು ಬೆನ್ನಿನ ಮೇಲೆ ಸಂಖ್ಯೆಗಳನ್ನು ಬರೆದಿದ್ದಾರೆ” ಎಂದು ಆಸ್ಪತ್ರೆಯಲ್ಲಿ ತಂಗಿದ್ದ ಎಝಾತ್ ರಮದಾನ್ ಎಂಬವರು ಹೇಳಿದ್ದಾಗಿ ಅಲ್‌-ಜಝೀರಾ ವರದಿ ಉಲ್ಲೇಖಿಸಿದೆ.

“ಇಸ್ರೇಲಿ ಸೇನಾ ಸಿಬ್ಬಂದಿ ನಮ್ಮ ಕೈಗಳನ್ನು ಬಿಗಿದು, ಕಣ್ಣಿಗೆ ಬಟ್ಟೆ ಕಟ್ಟಿ ಕರೆದುಕೊಂಡು ಹೋದರು. ನಮ್ಮ ಸುತ್ತಮುತ್ತ ಜನರು ಕಿರುಚಾಡುವುದು ಕೇಳುತ್ತಿತ್ತು. ಆದರೆ, ಎಲ್ಲಿ ಏನಾಗ್ತಿದೆ ಗೊತ್ತಾಗುತ್ತಿರಲಿಲ್ಲ. ನಾನು ನನಗೆ ಯಾವಾಗ ಥಳಿಸುತ್ತಾರೆ ಎಂದು ಕಾಯುತ್ತಿದ್ದೆ” ಎಂದು ಆಸ್ಪತ್ರೆಯ ಸಿಬ್ಬಂದಿ ಶೋರೂಕ್ ಅಲ್-ರಾಂಟಿಸಿ ಹೇಳಿದ್ದಾಗಿ ವರದಿ ವಿವರಿಸಿದೆ.

ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಸೇನೆ ಗಾಝಾದಲ್ಲಿ 48 ನಾಗರಿಕರನ್ನು ಹತ್ಯೆ ಮಾಡಿದೆ. ಗಾಝಾ ಪಟ್ಟಿಯಾದ್ಯಂತ 52 ಮಂದಿ ಗಾಯಗೊಂಡಿದ್ದಾರೆ.

2023 ಅಕ್ಟೋಬರ್ 7ರಿಂದ ಇದುವರೆಗೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಸಾವನ್ನಪ್ಪಿದ ಜನರ ಸಂಖ್ಯೆ  45,484ಕ್ಕೆ ತಲುಪಿದೆ. 108,090ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ : ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...