Homeಮುಖಪುಟಉತ್ತರ ಗಾಝಾದ ಕೊನೆಯ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್ : ಕೆಲವರ ಬಂಧನ, ಹಲವರು...

ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್ : ಕೆಲವರ ಬಂಧನ, ಹಲವರು ಸಜೀವ ದಹನ

- Advertisement -
- Advertisement -

ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಎನ್ನಲಾದ ‘ಕಮಲ್ ಅದ್ವಾನ್‌’ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿ ಸುಟ್ಟು ಹಾಕಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಮಲ್ ಅದ್ವಾನ್ ಆಸ್ಪತ್ರೆಯಲ್ಲಿ ಉಗ್ರರು ತಂಗಿದ್ದಾರೆ ಎಂದು ಆರೋಪಿಸಿದ್ದ ಇಸ್ರೇಲ್ ಸೇನೆ ಕೆಲ ದಿನಗಳ ಹಿಂದೆ ಆಸ್ಪತ್ರೆಯನ್ನು ತೊರೆಯುವಂತೆ ಅದರ ಸಿಬ್ಬಂದಿಗೆ ಸೂಚಿಸಿತ್ತು. ಆದರೆ, ಸಮೀಪದಲ್ಲಿ ಬೇರೆ ಆಸ್ಪತ್ರೆಗಳು ಮತ್ತು ಸಾಕಷ್ಟು ಆಂಬ್ಯುಲೆನ್ಸ್‌ಗಳು ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದ್ದರು.

ನೂರಾರು ರೋಗಿಗಳು ಮತ್ತು ಇಸ್ರೇಲ್ ದಾಳಿಯಲ್ಲಿ ಗಾಯಗೊಂಡವರು ಬಾಕಿ ಉಳಿದಿರುವ ಏಕೈಕ ಆಸ್ಪತ್ರೆಯನ್ನು ಆಶ್ರಯಿಸಿದ್ದಾರೆ. ಇಲ್ಲಿ ಸರಿಯಾದ ವೈದ್ಯಕೀಯ ಸಾಮಾಗ್ರಿಗಳು ಲಭ್ಯವಿಲ್ಲ. ಆದರೂ, ವಿಶ್ವಸಂಸ್ಥೆಯ ನೆರವಿನಿಂದ ನಾವು ಜನರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಆಸ್ಪತ್ರೆ ಮುಖ್ಯಸ್ಥರು ತಿಳಿಸಿದ್ದರು.

ಆದರೆ, ಶುಕ್ರವಾರ (ಡಿ.27) ಇಸ್ರೇಲ್ ಸೇನೆ ಆಸ್ಪತ್ರೆಯಲ್ಲಿ ಪರಿಶೀಲನೆ ಆರಂಭಿಸಿತ್ತು. ಆ ಬಳಿಕ ಬೆಂಕಿ ಹಚ್ಚಿದೆ. ಇದರಿಂದ ಕೆಲ ವೈದ್ಯಕೀಯ ಸಿಬ್ಬಂದಿ ಸಜೀವ ದಹನವಾಗಿದ್ದಾರೆ. ಇನ್ನೂ ಕೆಲವರು ಕಿಲೋ ಮೀಟರ್‌ಗಟ್ಟಲೆ ದೂರ ಓಡಿ ಹೋಗಿದ್ದಾರೆ ಎಂದು ಅಲ್‌-ಜಝೀರಾ ಮತ್ತು ದಿ ನ್ಯೂ ಅರಬ್ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಆಸ್ಪತ್ರೆಯ ನಿರ್ದೇಶಕ ಹುಸಾಮ್ ಅಬೂ ಸಫಿಯಾ ಸೇರಿದಂತೆ ಕೆಲ ಸಿಬ್ಬಂದಿಯನ್ನು ಇಸ್ರೇಲ್ ಸೇನೆ ಬಂಧಿಸಿ ಕರೆದುಕೊಂಡು ಹೋಗಿದೆ ಎಂದು ಹಮಾಸ್‌ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ್ದಾಗಿ ವರದಿಯಾಗಿದೆ.

“ಇಸ್ರೇಲ್ ಸೇನೆ ನಮ್ಮನ್ನು ಬಂಧಿಸಿ ಸುಮಾರು 12 ಗಂಟೆಗಳ ಕಾಲ ಚಳಿಯಲ್ಲಿ ವಿವಸ್ತ್ರರಾಗಿ ನಿಲ್ಲಿಸಿತ್ತು. ಗಾಯಗೊಂಡವರನ್ನು, ಅಸ್ವಸ್ತರಾದವರನ್ನು ಥಳಿಸಿದೆ. ಪರಿಶೀಲನೆ ನಡೆಸಲು ಮಹಿಳೆಯರಿಗೆ ಬಟ್ಟೆ ಕಳಚುವಂತೆ ಒತ್ತಾಯಿಸಿದೆ. ವಿರೋಧಿಸಿದಾಗ ಕಪಾಳಮೋಕ್ಷ ಮಾಡಿದ್ದಾರೆ. ಶೌಚಾಲಯಕ್ಕೆ ಹೋಗಲೂ ನಮಗೆ ಅವಕಾಶ ನೀಡಿರಲಿಲ್ಲ. ನಾವು ಅವಮಾನದಲ್ಲಿ ಬದುಕುತ್ತಿದ್ದೇವೆ, ನಾವು ದಣಿದಿದ್ದೇವೆ. ಸಾಕು, ನಮಗೆ ಈ ಜೀವನ ಸಾಕು” ಎಂದು” ವಿಚಾರಣೆಗೆ ಒಳಪಟ್ಟು ಹೊರಬಂದ ಕಮಲ್ ಅದ್ವಾನ್ ಆಸ್ಪತ್ರೆಯ ನರ್ಸ್‌ ಇಸ್ಮಾಯಿಲ್ ಅಲ್-ಕಹ್ಲೌತ್ ಹೇಳಿದ್ದಾಗಿ ಅಲ್‌-ಜಝೀರಾ ವರದಿ ಮಾಡಿದೆ.

“ನಮ್ಮನ್ನು ವಿಚಾರಣೆಗೆ ಒಳಪಡಿಸುವ ಮೊದಲು ಸುಮಾರು ಎರಡು ಗಂಟೆಗಳ ಕಾಲ ಮೈನಡುಗುವ ಚಳಿಯಲ್ಲಿ ನಡೆಸಿದರು. ಇಸ್ರೇಲ್ ಸೇನಾ ಸಿಬ್ಬಂದಿ ನಮ್ಮ ಮೇಲೆ ಉಗುಳಿ ಅವಮಾನ ಮಾಡಿದ್ದಾರೆ. ನಮ್ಮೆಲ್ಲರ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಬಿಡುಗಡೆ ಮಾಡುವ ಮೊದಲು ನಮ್ಮ ಎದೆ ಮತ್ತು ಬೆನ್ನಿನ ಮೇಲೆ ಸಂಖ್ಯೆಗಳನ್ನು ಬರೆದಿದ್ದಾರೆ” ಎಂದು ಆಸ್ಪತ್ರೆಯಲ್ಲಿ ತಂಗಿದ್ದ ಎಝಾತ್ ರಮದಾನ್ ಎಂಬವರು ಹೇಳಿದ್ದಾಗಿ ಅಲ್‌-ಜಝೀರಾ ವರದಿ ಉಲ್ಲೇಖಿಸಿದೆ.

“ಇಸ್ರೇಲಿ ಸೇನಾ ಸಿಬ್ಬಂದಿ ನಮ್ಮ ಕೈಗಳನ್ನು ಬಿಗಿದು, ಕಣ್ಣಿಗೆ ಬಟ್ಟೆ ಕಟ್ಟಿ ಕರೆದುಕೊಂಡು ಹೋದರು. ನಮ್ಮ ಸುತ್ತಮುತ್ತ ಜನರು ಕಿರುಚಾಡುವುದು ಕೇಳುತ್ತಿತ್ತು. ಆದರೆ, ಎಲ್ಲಿ ಏನಾಗ್ತಿದೆ ಗೊತ್ತಾಗುತ್ತಿರಲಿಲ್ಲ. ನಾನು ನನಗೆ ಯಾವಾಗ ಥಳಿಸುತ್ತಾರೆ ಎಂದು ಕಾಯುತ್ತಿದ್ದೆ” ಎಂದು ಆಸ್ಪತ್ರೆಯ ಸಿಬ್ಬಂದಿ ಶೋರೂಕ್ ಅಲ್-ರಾಂಟಿಸಿ ಹೇಳಿದ್ದಾಗಿ ವರದಿ ವಿವರಿಸಿದೆ.

ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಸೇನೆ ಗಾಝಾದಲ್ಲಿ 48 ನಾಗರಿಕರನ್ನು ಹತ್ಯೆ ಮಾಡಿದೆ. ಗಾಝಾ ಪಟ್ಟಿಯಾದ್ಯಂತ 52 ಮಂದಿ ಗಾಯಗೊಂಡಿದ್ದಾರೆ.

2023 ಅಕ್ಟೋಬರ್ 7ರಿಂದ ಇದುವರೆಗೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಸಾವನ್ನಪ್ಪಿದ ಜನರ ಸಂಖ್ಯೆ  45,484ಕ್ಕೆ ತಲುಪಿದೆ. 108,090ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ : ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...