Homeನ್ಯಾಯ ಪಥನೇರಳೆ ಹಣ್ಣಿನ ಮರವೂ, ನರೇಂದ್ರ ಮೋದಿಯವರೂ?...ಡಿ.ಉಮಾಪತಿ

ನೇರಳೆ ಹಣ್ಣಿನ ಮರವೂ, ನರೇಂದ್ರ ಮೋದಿಯವರೂ?…ಡಿ.ಉಮಾಪತಿ

- Advertisement -
- Advertisement -

1960ರಲ್ಲಿ ಪ್ರಸಿದ್ಧ ಕತೆಗಾರ ಕೃಷ್ಣಚಂದರ್ ಅವರು ಬರೆದ ಹಿಂದೀ ಕತೆಯೊಂದರಲ್ಲಿ ಇಂದಿನ ಸರ್ಕಾರದ ಟೀಕೆ ಇದೆ ಎಂದು ಆಕ್ಷೇಪಿಸಿ ಆ ಕತೆಯನ್ನು ಮೊನ್ನೆ ಮೊನ್ನೆ ಹತ್ತನೆಯ ತರಗತಿಯ ಪಠ್ಯಕ್ರಮದಿಂದ ತೆಗೆದು ಹಾಕಲಾಗಿದೆ.

ಪ್ರಸಿದ್ಧ ಹಿಂದೀ ಲೇಖಕ ಕೃಷ್ಣ ಚಂದರ್ ಅವರ ‘ಜಾಮೂನ್ ಕಾ ಪೇಡ್’ (ನೇರಳೆ ಮರ) ಎಂಬ ವಿಡಂಬನಾತ್ಮಕ ಲಘು ಕತೆಯನ್ನು ಕೇಂದ್ರ ಸರ್ಕಾರ ಐಸಿಎಸ್‍ಇ ಹತ್ತನೆಯ ತರಗತಿ ಶಾಲಾ ಪಠ್ಯದಿಂದ ತೆಗೆದುಹಾಕಿದೆ. 2015ರಲ್ಲಿ ಈ ಕತೆ ಪಠ್ಯಕ್ರಮಕ್ಕೆ ಸೇರಿತ್ತು.

ಸರ್ಕಾರೀ ಸಚಿವಾಲಯದ ಮುಂದಿನ ಹಸಿರು ಅವರಣದ ನೇರಳೆ ಮರವೊಂದು ಬಿದ್ದು ಅದರ ಅಡಿಗೆ ಸಿಕ್ಕಿಹಾಕಿಕೊಂಡ ವ್ಯಕ್ತಿಯೊಬ್ಬನ ಕತೆಯಿದು. ಮುಂಜಾನೆ ಮಾಲಿಯ ಗಮನಕ್ಕೆ ಬರುವ ಈ ಸಂಗತಿ ಸರ್ಕಾರಿ ಕರ್ಮಚಾರಿಗಳು ಮತ್ತು ಅಧಿಕಾರಿಗಳಿಗೆ ತಿಳಿಯುತ್ತದೆ. ಆದರೆ ಅವರೆಲ್ಲ ಈ ವ್ಯಕ್ತಿಯನ್ನು ಹಿಡಿದೆತ್ತಿ ಪಾರು ಮಾಡುವುದಿಲ್ಲ. ಬದಲಾಗಿ ಹೊಣೆಯನ್ನು ಮತ್ತೊಬ್ಬರಿಗೆ ಹೊರಿಸಿ ತಾವು ಪಾರಾಗುವ ವ್ಯಂಗ್ಯವಿದು.

1914-1977ರ ಅವಧಿಯಲ್ಲಿ ಜೀವಿಸಿದ್ದ ಕೃಷ್ಣ ಚಂದರ್ ಅವರು ಈ ಕತೆಯನ್ನು ಬರೆದದ್ದು 1960ರಲ್ಲಿ. ಕೆಲ ಸರ್ಕಾರಿ ಅಧಿಕಾರಿಗಳು ಈ ಕತೆಯಲ್ಲಿ ಹಾಲಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆಯನ್ನು ಕಂಡರಂತೆ. ಹೀಗಾಗಿ ಕತೆಗೆ ಅರ್ಧಚಂದ್ರ ಪ್ರಯೋಗ ಆಗಿದೆ. 2020 ಮತ್ತು 2021ರ ಐ.ಸಿ.ಎಸ್.ಇ. ಪರೀಕ್ಷೆಗಳಲ್ಲಿ ಈ ಕತೆಯ ಕುರಿತು ಯಾವುದೇ ಪ್ರಶ್ನೆಗಳನ್ನು ಕೇಳಲಾಗುವುದಿಲ್ಲ ಎಂದು ನೋಟಿಸೊಂದರಲ್ಲಿ ತಿಳಿಯಪಡಿಸಲಾಗಿದೆ.
ಹತ್ತನೆಯ ತರಗತಿಯ ಶಾಲಾ ಮಕ್ಕಳು ಓದುವಂತಹ ಕತೆಯಲ್ಲ ಇದು ಎಂಬ ವಿವರಣೆಯನ್ನು ನೀಡಿರುವ ಐಸಿಎಸ್‍ಇ, ಯಾಕೆ ಏನು ಎಂಬ ಯಾವುದೇ ಸಮಜಾಯಿಷಿ ನೀಡಿಲ್ಲ.

ರಾತ್ರಿ ಬೀಸಿದ ಭಾರೀ ಬಿರುಗಾಳಿಯ ಕಾರಣ ಸಚಿವಾಲಯದ ಹುಲ್ಲುಹಾಸಿನ ನೇರಳೆ ಮರವೊಂದು ನೆಲಕ್ಕುರುಳುತ್ತದೆ. ಪ್ರಸಿದ್ಧ ಕವಿಯೊಬ್ಬನು ಅದರ ಕೆಳಗೆ ಸಿಕ್ಕಿ ಹಾಕಿಕೊಳ್ಳುತ್ತಾನೆ. ಮುಂಜಾನೆ ಈ ಸಂಗತಿಯನ್ನು ಗಮನಿಸುವ ಮಾಲಿ ಧಾವಿಸಿ ಹೋಗಿ ಚಪರಾಸಿಗೆ ತಿಳಿಸುತ್ತಾನೆ. ಚಪರಾಸಿ ಗುಮಾಸ್ತನ ಬಳಿ ತೆರಳುತ್ತಾನೆ. ಗುಮಾಸ್ತ ಸೂಪರಿಂಟಿಂಡೆಂಟ್ ಬಳಿಗೆ ಧಾವಿಸುತ್ತಾನೆ. ತುಸು ಹೊತ್ತಿನ ನಂತರ ಮರದ ಕೆಳಗೆ ಸಿಕ್ಕಿಹಾಕಿಕೊಂಡ ವ್ಯಕ್ತಿಯ ಸುತ್ತಮುತ್ತ ಗುಂಪು ಜಮಾಯಿಸುತ್ತದೆ. ಮರ ಬಿಡುತ್ತಿದ್ದ ರಸಭರಿತ ನೇರಳೆ ಹಣ್ಣಿನ ಚರ್ಚೆ ನಡೆಯುತ್ತದೆ. ಇನ್ನಷ್ಟು ಮಾಲಿಗಳು, ಚಪರಾಸಿಗಳು ಹಾಗೂ ಗುಮಾಸ್ತರೆಲ್ಲ ಕೈ ಹಾಕಿದರೆ ಮರದಡಿಯ ವ್ಯಕ್ತಿಯನ್ನು ಹೊರಗೆಳೆಯಬಹುದು ಎನ್ನುತ್ತಾನೆ ಮಾಲಿ. ಮಾಲಿ ಹೇಳುವುದು ಸರಿಯೆಂದು ಬಹಳಷ್ಟು ಮಂದಿ ಮರವನ್ನು ಸರಿಸಲು ಮುಂದಾಗುತ್ತಾರೆ. ನಿಲ್ಲಿ, ನಾನು ಅಂಡರ್ ಸೆಕ್ರೆಟರಿ ಅವರನ್ನು ಕೇಳಬೇಕು ಎನ್ನುತ್ತಾನೆ ಸೂಪರಿಂಟಿಂಡೆಂಟ್. ಅಂಡರ್ ಸೆಕ್ರೆಟರಿಯು ಡೆಪ್ಯೂಟಿ ಸೆಕ್ರೆಟರಿ ಬಳಿ ಹೋಗುತ್ತಾನೆ. ಡೆಪ್ಯೂಟಿ ಸೆಕ್ರೆಟರಿ ಜಾಯಿಂಟ್ ಸೆಕ್ರೆಟರಿ ಮುಂದೆ ಹಾಜರಾಗುತ್ತಾನೆ. ಜಾಯಿಂಟ್ ಸೆಕ್ರೆಟರಿಯು ಚೀಫ್ ಸೆಕ್ರೆಟರಿ ಬಳಿಗೆ ತೆರಳುತ್ತಾನೆ. ಚೀಫ್ ಸೆಕ್ರೆಟರಿಯು ಜಾಯಿಂಟ್ ಸೆಕ್ರೆಟರಿಗೆ ಏನೋ ಹೇಳುತ್ತಾನೆ. ಜಾಯಿಂಟ್ ಸೆಕ್ರೆಟರಿ ಡೆಪ್ಯೂಟಿ ಸೆಕ್ರೆಟರಿಗೆ, ಡೆಪ್ಯೂಟಿಯು ಅಂಡರ್ ಸೆಕ್ರೆಟರಿಗೆ ಅದನ್ನು ಹೇಳುತ್ತಾನೆ. ಕಡತ ಕಾಲ್ಚೆಂಡಾಗುತ್ತದೆ. ಅರ್ಧ ದಿನ ಕಳೆದೇ ಹೋಗಿರುತ್ತದೆ. ಊಟದ ವಿರಾಮ. ಮರದ ಬಳಿ ಸೇರಿದ ಗುಂಪು ಪುನಃ ವ್ಯಕ್ತಿಯನ್ನು ಪಾರು ಮಾಡಲು ತಾನೇ ಮುಂದಾಗುತ್ತದೆ. ಅಷ್ಟರಲ್ಲಿ ಸೂಪರಿಂಟಿಂಡೆಂಟ್ ಕಡತ ಹಿಡಿದು ಓಡಿಬರುತ್ತಾನೆ. ಈ ಮರವನ್ನು ನಾವಾಗಿಯೇ ಸರಿಸುವಂತಿಲ್ಲ. ನಾವು ವಾಣಿಜ್ಯ ಇಲಾಖೆಯವರು. ಮರ ಕೃಷಿ ಇಲಾಖೆಯಡಿ ಬರುತ್ತದೆ. ಕಡತದ ಮೇಲೆ ತುರ್ತು ಎಂದು ಬರೆದು ಕೃಷಿ ಇಲಾಖೆಗೆ ಕಳಿಸುತ್ತೇನೆ. ಅಲ್ಲಿಂದ ಜವಾಬು ಬರುತ್ತಲೇ ಮರವನ್ನು ಸರಿಸೋಣ ಎಂದು ಜನರನ್ನು ತಡೆಯುತ್ತಾನೆ. ಮರವನ್ನು ಸರಿಸುವ ಜವಾಬ್ದಾರಿ ನಿಮ್ಮದೇ ಎಂದು ವಾಣಿಜ್ಯ ಮತ್ತು ಕೃಷಿ ಇಲಾಖೆ ಪರಸ್ಪರ ದೂಷಿಸುತ್ತವೆ.

ಮರುದಿನವೂ ಕಡತ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ, ಒಬ್ಬ ಅಧಿಕಾರಿಯಿಂದ ಮತ್ತೊಬ್ಬ ಅಧಿಕಾರಿಗೆ ಸುತ್ತಾಡುತ್ತಲೇ ಇರುತ್ತದೆ. ಹಣ್ಣು ಬಿಡುವ ಮರವಾದ ಕಾರಣ ತೋಟಗಾರಿಕೆ ಇಲಾಖೆಗೆ ಹೊತ್ತು ಹಾಕುವ ಹೊತ್ತಿಗೆ ಸಂಜೆಯಾಗಿರುತ್ತದೆ. ಜನ ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಮರವನ್ನು ಕತ್ತರಿಸುವ ಪರಿಸ್ಥಿತಿಯನ್ನು ತಡೆಯಲು ಸುತ್ತ ಪೆÇಲೀಸ್ ಕಾವಲು ಹಾಕಲಾಗಿರುತ್ತದೆ. ಮರದಡಿ ಸಿಕ್ಕಿ ಹಾಕಿಕೊಂಡ ವ್ಯಕ್ತಿಯ ಕುರಿತು ದಯೆ ತೋರುವ ಪೆÇಲೀಸ್ ಪೇದೆಯೊಬ್ಬ, ಆತನಿಗೆ ಉಣ್ಣಿಸಲು ಮಾಲಿಗೆ ಅನುಮತಿ ನೀಡುತ್ತಾನೆ. ನಿಮ್ಮ ಕಡತ ಸಂಚರಿಸುತ್ತಿದೆ. ನಾಳೆ ತೀರ್ಮಾನ ಆಗುವ ವಿಶ್ವಾಸ ಇದೆ ಎಂದು ಮಾಲಿ ಮರದಡಿಯ ವ್ಯಕ್ತಿಗೆ ತಿಳಿಸುತ್ತಾನೆ. ಮೂರನೆಯ ದಿನ ತೋಟಗಾರಿಕೆ ಇಲಾಖೆಯಿಂದ ಕಡತ ವಾಪಸು ಬರುತ್ತದೆ. ಫಲ ಬಿಡುವ ಮರವನ್ನು ಕಡಿಯಲಾಗದು ಎಂದಿರುತ್ತದೆ.

ಆದರೆ ವ್ಯಕ್ತಿಯನ್ನು ಪಾರು ಮಾಡಲು ಯಾರೂ ಮುಂದಾಗುವುದಿಲ್ಲ. ಅತ್ತ ಇತ್ತ ಜಗ್ಗಾಡುವ ಈ ಸಂಗತಿ ನಾಲ್ಕು ದಿನಗಳ ನಂತರ ಮುಖ್ಯಕಾರ್ಯದರ್ಶಿಯವರ ಮೇಜನ್ನು ತಲುಪುತ್ತದೆ. ಆ ನಂತರವೂ ಜವಾಬ್ದಾರಿಯನ್ನು ಒಂದು ಸರ್ಕಾರಿ ಇಲಾಖೆಯು ಮತ್ತೊಂದು ಸರ್ಕಾರಿ ಇಲಾಖೆಗೆ ದಾಟಿಸಿ ಕೈ ತೊಳೆದುಕೊಳ್ಳುವ ಪ್ರಯತ್ನಗಳು ನಡೆದಿರುತ್ತವೆ. ಕೃಷಿವನ ಇಲಾಖೆಯಿಂದ ಸಂಸ್ಕೃತಿ ಇಲಾಖೆಗೆ ತಲುಪುತ್ತದೆ. ಮರದ ಕೆಳಗೆ ಸಿಕ್ಕಿಹಾಕಿಕೊಂಡಿರುವ ವ್ಯಕ್ತಿ ಒಬ್ಬ ಪ್ರಸಿದ್ಧ ಕವಿಯಾಗಿದ್ದ ಕಾರಣ ವಿಷಯ ಸಂಸ್ಕೃತಿ ಇಲಾಖೆಗೆ ರವಾನೆಯಾಗಿರುತ್ತದೆ.

ಸಂಸ್ಕೃತಿ ಇಲಾಖೆಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡುತ್ತಾನೆ. ಮರದ ಕೆಳಗೆ ಸಿಕ್ಕಿ ಹಾಕಿಕೊಂಡಿರುವ ಪ್ರಸಿದ್ಧ ಕವಿಗೆ ಪ್ರಶಸ್ತಿ ಗಳಿಸಿಕೊಟ್ಟಿದ್ದ ಪುಸ್ತಕವನ್ನು ಹೊಗಳುತ್ತಾನೆ. ಮತ್ತು ಕವಿಯನ್ನು ಪಾರು ಮಾಡುವುದು ತನ್ನ ಕೆಲಸ ಅಲ್ಲವೆಂದು ಖುದ್ದು ಕವಿಗೇ ಹೇಳುತ್ತಾನೆ. ಆ ನಂತರ ಕವಿ ಮರದ ಕೆಳಗೆ ಸಿಕ್ಕಿಹಾಕಿಕೊಂಡಿರುವ ಕಡತ ಆರೋಗ್ಯ ಇಲಾಖೆಯನ್ನು ತಲುಪುತ್ತದೆ. ಈ ಇಲಾಖೆ ಕಡತವನ್ನು ವಿದೇಶ ಮಂತ್ರಾಲಯಕ್ಕೆ ಸಾಗ ಹಾಕುತ್ತದೆ. ಈ ನೇರಳೆ ಮರವನ್ನು ನೆರೆಯ ದೇಶದ ಪ್ರಧಾನಮಂತ್ರಿ ಇಲ್ಲಿಗೆ ಬಂದಾಗ ನೆಟ್ಟಿದ್ದೇ ಅದಕ್ಕೆ ಕಾರಣ.

ಈ ಮರವನ್ನು ಕತ್ತರಿಸಲು ವಿದೇಶೀ ಮಂತ್ರಾಲಯ ಒಪ್ಪುವುದಿಲ್ಲ. ನೆರೆಯ ದೇಶದ ಪ್ರಧಾನಿ ನೆಟ್ಟಿದ್ದ ಈ ಮರವನ್ನು ಕಡಿದರೆ ಉಭಯ ದೇಶಗಳ ನಡುವಣ ಸೌಹಾರ್ದ ಸಂಬಂಧ ಕೆಟ್ಟು ಹೋಗಬಹುದು ಎನ್ನುತ್ತದೆ. ಕಡೆಗೆ ಈ ವಿಷಯ ಪ್ರಧಾನಮಂತ್ರಿಯವರ ಸನ್ನಿಧಾನಕ್ಕೆ ಬರುತ್ತದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮರವನ್ನು ಕತ್ತರಿಸಲು ಒಪ್ಪಿಗೆ ನೀಡುತ್ತಾರೆ. ಈ ಆದೇಶದ ಕಡತವನ್ನು ಖುದ್ದು ಸೂಪರಿಂಟಿಂಡೆಂಟ್ ನೇರಳೆ ಮರದಡಿ ಸಿಕ್ಕಿ ಹಾಕಿಕೊಂಡಿದ್ದ ಕವಿಯ ಬಳಿಗೆ ಬರುತ್ತಾನೆ. ನೋಡಪ್ಪಾ, ಪ್ರಧಾನಿ ಎಲ್ಲ ಅಂತಾರಾಷ್ಟ್ರೀಯ ಜವಾಬ್ದಾರಿಯನ್ನು ತಾವೇ ವಹಿಸಿಕೊಂಡು ಮರ ಕತ್ತರಿಸಲು ಅನುಮತಿ ಕೊಟ್ಟಿದ್ದಾರೆ, ನಾಳೆ ಈ ಮರವನ್ನು ಕತ್ತರಿಸಿ ನಿನ್ನನ್ನು ಬಚಾವು ಮಾಡಲಾಗುವುದು ಎಂದು ಕೂಗಿ ಹೇಳುತ್ತಾನೆ. ಬಳಿ ಬಂದು ಅವನ ಭುಜ ಅಲುಗಿಸಿ ಮತ್ತೆ ಹೇಳುತ್ತಾನೆ. ಆದರೆ ಕವಿಯ ಕೈ ತಣ್ಣಗಾಗಿರುತ್ತದೆ. ಕಣ್ಣು ಗುಡ್ಡೆಗಳ ಬೆಳಕು ಆರಿರುತ್ತದೆ. ಇರುವೆಗಳ ದೊಡ್ಡ ಸಾಲೊಂದು ಆತನ ಬಾಯಿಯೊಳಕ್ಕೆ ಹೊಗುತ್ತಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...