Homeಮುಖಪುಟಅಪ್ರಾಪ್ತ ಮುಸ್ಲಿಂ ಬಾಲಕಿಯ ಅಪಹರಣ: ಸಾಕ್ಷ್ಯ ನೀಡಿದರೂ ಆರೋಪಿಯ ಬಂಧಿಸದ ಪೊಲೀಸರು

ಅಪ್ರಾಪ್ತ ಮುಸ್ಲಿಂ ಬಾಲಕಿಯ ಅಪಹರಣ: ಸಾಕ್ಷ್ಯ ನೀಡಿದರೂ ಆರೋಪಿಯ ಬಂಧಿಸದ ಪೊಲೀಸರು

- Advertisement -
- Advertisement -

ಅಸ್ಸಾಂನ ಧುಬ್ರಿ ಜಿಲ್ಲೆಯ ಚಿರಕೋಟಾ ಗ್ರಾಮದ 13 ವರ್ಷದ ಮುಸ್ಲಿಂ ಬಾಲಕಿಯನ್ನು ಉತ್ತರ ಪ್ರದೇಶದ ಯುವಕನೊಬ್ಬ ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ಅಪಹರಿಸಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯು ಸ್ಥಳೀಯ ಮುಸ್ಲಿಂ ಸಮುದಾಯದಲ್ಲಿ ಹೆಚ್ಚುತ್ತಿರುವ ಕೋಪಕ್ಕೆ ಕಾರಣವಾಗಿದ್ದು, ಈ ಕುರಿತು ಪೊಲೀಸರ ನಿರ್ಲಕ್ಷ್ಯವು ಸ್ಥಳೀಯರ ಆಕ್ರೋಶಕ್ಕೆ ತುತ್ತಾಗಿದೆ.

ಧುಬ್ರಿಯ ಬಾಲಾಜಿ ಇಟ್ಟಿಗೆ ಉದ್ಯಮದಲ್ಲಿ ಕೆಲಸ ಮಾಡುತ್ತುದ್ದ ಪ್ರೇಮಚಂದ್ ಅಲಿಯಾಸ್ ಲಕ್ಕಿ ಎಂದು ಗುರುತಿಸಲಾದ ಆರೋಪಿಯು ತನ್ನ ಮಗಳೊಂದಿಗೆ ಸ್ನೇಹ ಬೆಳೆಸಿ ಅಂತಿಮವಾಗಿ ಅವಳನ್ನು ಕರೆದೊಯ್ದಿದ್ದಾನೆ ಎಂದು ಹುಡುಗಿಯ ತಂದೆ ಹೇಳಿದ್ದಾರೆ. ತನ್ನ ಮಗಳನ್ನು ವೇಶ್ಯಾವಾಟಿಕೆ ಅಥವಾ ಮಾನವ ಕಳ್ಳಸಾಗಣೆಕೆಗೆ ಮಾರಾಟ ಮಾಡಬಹುದೆಂಬ ಭಯದಿಂದ ತಂದೆ ಒಂದು ವಾರದ ಹಿಂದೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ಪೊಲೀಸರು ಇನ್ನೂ ಯಾವುದೇ ಮಹತ್ವದ ಕ್ರಮ ಕೈಗೊಳ್ಳದಿರುವುದು ಸಮುದಾಯದೊಳಗೆ ಬೇಸರ ಮೂಡಿಸಿದೆ.

ಪ್ರೇಮಚಂದ್ ಕುರಿತು ತಿಳಿದಿರುವ ಇಟ್ಟಿಗೆ ಉದ್ಯಮದ ಹಲವಾರು ಕಾರ್ಮಿಕರು ಮುಂದೆ ಬಂದು, ಅವನು ಹುಡುಗಿಯೊಂದಿಗೆ ಉತ್ತರ ಪ್ರದೇಶಕ್ಕೆ ಹಿಂತಿರುಗಿದ್ದಾನೆ ಎಂದು ಖಚಿತಪಡಿಸಿದ್ದಾರೆ. ಇಷ್ಟೆಲ್ಲಾ ಸಾಕ್ಷ್ಯಗಳಿದ್ದರೂ ಪೊಲೀಸರು ಪ್ರಕರಣದಲ್ಲಿ ಯಾವುದೇ ಪ್ರಗತಿ ಸಾಧಿಸಿಲ್ಲ. ಮುಸ್ಲಿಮ್ ಯುವಕರು ಮತ್ತು ಮುಸ್ಲಿಮೇತರ ಅಪರಾಧಿಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಪೊಲೀಸರು ನಡೆದುಕೊಳ್ಳುವ ರೀತಿಯಲ್ಲಿ ಸಂಪೂರ್ಣ ವ್ಯತಿರಿಕ್ತತೆಯನ್ನು ಇದು ತೋರಿಸುತ್ತದೆ. ಇದು ಬಾಲಕಿಯ ಕುಟುಂಬ ಮತ್ತು ಸ್ಥಳೀಯರಲ್ಲಿ ಹೆಚ್ಚುತ್ತಿರುವ ಅಸಮಾಧಾನವನ್ನು ತೋರ್ಪಡಿಸುತ್ತಿದೆ.

ಪ್ರತಿ ಬಾರಿ ಮುಸ್ಲಿಂ ಹುಡುಗನು ಇದೇ ರೀತಿಯ ಪರಿಸ್ಥಿತಿಯಲ್ಲಿ ತೊಡಗಿಸಿಕೊಂಡಾಗ, ಅವನನ್ನು ತ್ವರಿತವಾಗಿ ಬಂಧಿಸಲಾಗುತ್ತದೆ ಮತ್ತು ಅದನ್ನು ಲವ್ ಜಿಹಾದ್ ನ ಹಣೆಪಟ್ಟಿ ಕಟ್ಟಲಾಗುತ್ತದೆ ಎಂದು ಹುಡುಗಿಯ ತಂದೆ ಹೇಳಿದ್ದಾರೆ. ಆದರೆ ಇಲ್ಲಿ, ಆರೋಪಿ ಮುಸ್ಲಿಮೇತರನಾಗಿದ್ದಕ್ಕಾಗಿ ಪೊಲೀಸರು ಅಸಡ್ಡೆ ತೋರುತ್ತಿದ್ದಾರೆ. ಯಾಕೆ ಈ ಡಬಲ್ ಸ್ಟಾಂಡರ್ಡ್? ಎಂದು ಅವರು ಪ್ರಶ್ನಿಸಿದ್ದಾರೆ.

ಆರೋಪಿ ಮತ್ತು ಬಲಿಪಶುವಿನ ಧಾರ್ಮಿಕ ಗುರುತಿನಿಂದಾಗಿ ಅಧಿಕಾರಿಗಳು ಈ ಪ್ರಕರಣದಲ್ಲಿ ಕಣ್ಣು ಮುಚ್ಚಿದ್ದಾರೆ ಎಂದು ಸಮುದಾಯವು ಆರೋಪಿಸುತ್ತಿದೆ. ಇದು ಸ್ಥಳೀಯರ ಇನ್ನಷ್ಟು ಕೋಪಕ್ಕೆ ಕಾರಣವಾಗಿದೆ.

ರಾಜ್ಯದ ವಕೀಲ ಸಮುದಾಯದ ಪ್ರಮುಖರಾದ ಹಿರಿಯ ವಕೀಲ ಇಲ್ಯಾಸ್ ಅಹಮದ್ ಅವರು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ. “ಇವಳು ಹಿಂದೂ ಹುಡುಗಿಯಾಗಿದ್ದರೆ, ಈ ವಿಷಯವನ್ನು ಲವ್ ಜಿಹಾದ್ ಎಂದು ಹಣೆಪಟ್ಟಿ ಕಟ್ಟಲಾಗುತ್ತಿತ್ತು ಮತ್ತು ಪೊಲೀಸರು ಶೀಘ್ರವಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಅಹ್ಮದ್ ಹೇಳಿದ್ದಾರೆ. “ಆದರೆ ಇದು ಮುಸ್ಲಿಂ ಬಾಲಕಿಯ ವಿಷಯವಾಗಿರುವುದರಿಂದ ಇದಕ್ಕೆ ಪೊಲೀಸರ ಪ್ರತಿಕ್ರಿಯೆಯು ಆಲಸ್ಯದಿಂದ ಕೂಡಿದೆ. ಇದು ಗಂಭೀರ ಅನ್ಯಾಯವಾಗಿದೆ” ಎಂದಿದ್ದಾರೆ.

ಅಸ್ಸಾಂ ಸರ್ಕಾರ ಮತ್ತು ಪೊಲೀಸರು ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ವಕೀಲ ಅಹ್ಮದ್ ಕರೆ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಇಂತಹ ಪ್ರಕರಣದಲ್ಲಿ ಪೊಲೀಸರು ಕಾರ್ಯನಿರ್ವಹಿಸದಿರುವುದು ವಿಭಜಕ ಮನಸ್ಥಿತಿಯನ್ನು ಇನ್ನಷ್ಟು ಆಳವಾಗಿಸಲು ಮತ್ತು ಕಾನೂನು ಜಾರಿಯ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆಗಳನ್ನು ಎತ್ತುವಂತೆ ಮಾಡುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಹೆಚ್ಚುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಮತ್ತು ಸ್ಥಳೀಯ ಮುಸ್ಲಿಂ ಸಮುದಾಯದ ಸದಸ್ಯರು  ತಮ್ಮ ಕಳವಳವನ್ನು ಅಧಿಕಾರಿಗಳು ಪರಿಹರಿಸಬೇಕು ಮತ್ತು ಪೊಲೀಸರು ತೋರುತ್ತಿರುವ ಪಕ್ಷಪಾತವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. “ಸಂತ್ರಸ್ತರು ಅಥವಾ ಆರೋಪಿಯು ಯಾವುದೇ ಸಮುದಾಯಕ್ಕೆ ಸೇರಿದವರಾಗಿದ್ದರೂ ಕಾನೂನನ್ನು ಸಮಾನವಾಗಿ ಅನ್ವಯಿಸಬೇಕು” ಎಂದು ನಿವಾಸಿಯೊಬ್ಬರು ಹೇಳಿದ್ದಾರೆ.

ಕುಟುಂಬವು ನ್ಯಾಯಕ್ಕಾಗಿ ಕಾಯುತ್ತಿರುವಾಗ, ಈ ಪ್ರಕರಣದಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಎತ್ತಿ ತೋರಿಸುತ್ತದೆ ಮತ್ತು ಅವರ ಧಾರ್ಮಿಕ ಹಿನ್ನೆಲೆಯನ್ನು ಲೆಕ್ಕಿಸದೆ ಎಲ್ಲಾ ನಾಗರಿಕರಿಗೆ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆಯ ಅಗತ್ಯವನ್ನು ತೋರಿಸುತ್ತದೆ.

ಅಲ್ಲಾ ಕುರಿತು ಸಾಲು: ‘ರಘುಪತಿ ರಾಘವ ರಾಜ ರಾಮ್’ ಹಾಡದಂತೆ ತಡೆದ ಬಿಜೆಪಿ ನಾಯಕರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...