Homeಕರ್ನಾಟಕಮಾದರಿ ಪಿಡಿಓ ಡಾ. ಶೋಭಾರಾಣಿ : ಅರುಣ್ ಜೋಳದ ಕೂಡ್ಲಿಗಿ

ಮಾದರಿ ಪಿಡಿಓ ಡಾ. ಶೋಭಾರಾಣಿ : ಅರುಣ್ ಜೋಳದ ಕೂಡ್ಲಿಗಿ

- Advertisement -
- Advertisement -

ಪಿರಿಯಾಪಟ್ಟಣ ತಾಲೂಕಿನ ಮಾಲಂಗಿಗೆ ಹೋದಾಗ, ಮೊದಲು ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದೆ. ಆ ಸುಸಜ್ಜಿತ ಕಚೇರಿ ಕಂಡು ಅಚ್ಚರಿಯಾಯಿತು. ಗ್ರಾಮ ಪಂಚಾಯ್ತಿಯ ಪ್ರತಿಯೊಂದು ದಾಖಲೆ, ಪ್ರತಿ ಪೈಸೆಯ ಲೆಕ್ಕವನ್ನು ಯಾರು ಯಾವಾಗ ಬೇಕಾದರೂ ಪರಿಶೀಲಿಸುವಷ್ಟು ಕ್ರಮಬದ್ಧವಾಗಿತ್ತು. ಕಚೇರಿ ವೀಕ್ಷಿಸುತ್ತಿದ್ದಾಗ, ಶೋಭಾರಾಣಿ ಪಂಚಾಯ್ತಿಯ ಚಟುವಟಿಕೆಗಳ ಬಗ್ಗೆ ವಿವರಿಸುತ್ತಿದ್ದರು. ಗ್ರಾಮಸಭೆ, ಜನರ ಸಮ್ಮುಖದಲ್ಲೇ ಫಲಾನುಭವಿಗಳ ಆಯ್ಕೆ, ಯೋಜನೆಯ ಹಂಚಿಕೆ, ಪ್ರತಿ ಹಂತದಲ್ಲೂ ಸಮುದಾಯದ ಸಹಭಾಗಿತ್ವದಲ್ಲೇ ಗ್ರಾಮದ ಅಭಿವೃದ್ಧಿ ಕಾರ್ಯಕೈಗೊಂಡಿರುವುದನ್ನು ಅವರು ಉದಾಹರಣೆ ಸಹಿತ ಮಾಹಿತಿ ನೀಡುತ್ತಿದ್ದರು. ಅವರ ಮಾತುಗಳನ್ನು ಕೇಳುತ್ತಿದ್ದಾಗ, ಅಧಿಕಾರ ವಿಕೇಂದ್ರೀಕರಣದ ಫಲ ನಿಜಾರ್ಥದಲ್ಲಿ ಜನಸಾಮಾನ್ಯರ ಮಧ್ಯೆ ಹಂಚಿಕೆಯಾದ ಅನುಭವವಾಯಿತು.

ತಾನು ಸಂಗ್ರಹಿಸಿದ ತೆರಿಗೆ ಹಣದಲ್ಲಿ ಪಂಚಾಯ್ತಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ. ಮಾಲಂಗಿ ಗ್ರಾಮಪಂಚಾಯ್ತಿಯ ಶಕ್ತಿ ಅಡಗಿರುವುದು ಇಲ್ಲಿಯೇ. ಈ ಪಂಚಾಯ್ತಿ, ಮೊದಲು ಒತ್ತುವರಿಯಾಗಿದ್ದ 22 ಎಕರೆ ಸರಕಾರಿ ಜಾಗವನ್ನು ಜೇನುಕುರುಬ ಸಮುದಾಯದ ಹೋರಾಟಗಾರ್ತಿ ಜಾನಕಮ್ಮನ ನೆರವಿನೊಂದಿಗೆ ತೆರವುಗೊಳಿಸಲಾಯಿತು. ಈ ಜಾಗದಲ್ಲಿ ಇದೀಗ ಕಿತ್ತೂರು ರಾಣಿ ಮತ್ತು ಇಂದಿರಾಗಾಂಧಿ ವಸತಿಶಾಲೆಗಳಿವೆ. ಉಳಿದ ಜಾಗವನ್ನು ಸ್ಮಶಾನಕ್ಕೆ ಮೀಸಲಿಡಲಾಗಿದೆ. ರೂ 1.25 ಲಕ್ಷದಷ್ಟಿದ್ದ ಪಂಚಾಯ್ತಿಯ ವಾರ್ಷಿಕ ಆದಾಯವನ್ನು ರೂ 15 ಲಕ್ಷಕ್ಕೆ ಏರಿಸಿದೆ. ಈ ಹಣವನ್ನು ಪಂಚಾಯ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗಿದೆ.

ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯಬೇಕೆಂದರೆ, ಹಣ ಬೇಕೇಬೇಕು. ಆದರೆ, ಈ ಪಂಚಾಯ್ತಿ ಹಣವಿಲ್ಲದೇ ಅಭಿವೃದ್ಧಿ ಕಾರ್ಯಗಳನ್ನು ಹೇಗೆ ಮಾಡಬಹುದು ಎಂಬುದಕ್ಕೆ ಮಾದರಿಯನ್ನೇ ರೂಪಿಸಿದೆ. ಮೊದಲ ಹಂತದಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮನೆಗಳ ಸರ್ವೆ ಮಾಡಿಸಿ, ಸರ್ಕಾರದಿಂದ ಏನೇನು ಸೌಲಭ್ಯಗಳಿವೆ ಎಂಬುದನ್ನು ಅರಿವು ಮೂಡಿಸುವ ಕೆಲಸವಾಯಿತು. ನಂತರದಲ್ಲಿ ಆ ಊರಿಗೆ ಏನೇನು ಕಾರ್ಯಗಳು ನಡೆಯಬೇಕೆಂಬ ಪಟ್ಟಿಯೂ ಸಿದ್ಧವಾಯಿತು.

ಈ ಮಧ್ಯೆ ಸ್ವಯಂಸೇವಾಸಂಸ್ಥೆಗಳ ಸಹಕಾರದಲ್ಲಿ ಆರೋಗ್ಯ ಶಿಬಿರ ನಡೆಸಿ, ಶೇ 100ರಷ್ಟು ಲಸಿಕೆ ಹಾಕಿಸುವ ಕಾರ್ಯವೂ ಪೂರ್ಣಗೊಂಡಿತು. ಕಾನೂನು ಅರಿವು ಶಿಬಿರಗಳು ನಡೆದವು. ದಾನಿಗಳನ್ನು ಹುಡುಕಿ, ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಬೇಕಾಗುವ ಮೂಲಸೌಲಭ್ಯಗಳನ್ನು ಕೊಡಿಸಲಾಯಿತು.

ಬೋರನಕಟ್ಟೆ ಹಾಡಿಯಲ್ಲಿ ಕಾಡಾನೆ ಹಾವಳಿ ತಡೆಗೆ ಸ್ವಯಂಸೇವಾಸಂಸ್ಥೆಯಿಂದ ಸೋಲಾರ್ ಬೀದಿದೀಪಗಳನ್ನು ಅಳವಡಿಸಲಾಗಿದೆ. ಈ ಭಾಗದ ತಂಬಾಕು ಬೆಳೆಗಳನ್ನು ಕೊಳ್ಳುವ ಐಟಿಸಿ ಕಂಪನಿಯಿಂದ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಕೆರೆಗಳ ಹೂಳೆತ್ತಿಸಲಾಗಿದೆ. ಮೆಂಡಾ ಫೌಂಡೇಷನ್ ಎಂಬ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಜತೆಗೆ, ಗ್ರಾಮ ಪಂಚಾಯ್ತಿಯಿಂದ ರೂ 30 ಸಾವಿರ ನೀಡಿ, 5 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಕೊಡಿಸಲಾಗಿದೆ. ಇದೀಗ ಮಾಲಂಗಿ ಸಂಪೂರ್ಣ ಸೋಲಾರ್ ಗ್ರಾಮ.
‘ಶಿಕ್ಷಣಕ್ಕಾಗಿ ಬೆಳಕು’ ಯೋಜನೆಯಡಿ ಹಾಡಿಯ ಗುಡಿಸಲುಗಳಿಗೆ ಸೆಲ್ಕೊ ಸೋಲಾರ್ ಕಂಪನಿಯ ಸಹಯೋಗದೊಂದಿಗೆ ರೂ 1 ಲಕ್ಷ ವೆಚ್ಚದಲ್ಲಿ ಸೋಲಾರ್ ಲೈಟ್‍ಗಳನ್ನು ವಿತರಿಸಲಾಗಿದೆ. ಈ ಮೂಲಕ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಪಂಚಾಯ್ತಿ ಶ್ರಮಿಸಿದೆ. ಒಂಬತ್ತು ಶಾಲೆಗಳಿಗೆ ಅಗತ್ಯ ಕ್ರೀಡಾ ಸಾಮಗ್ರಿಗಳು, ಊಟದ ತಟ್ಟೆಗಳನ್ನು ವಿತರಿಸಲಾಗಿದೆ.

ಪಂಚಾಯ್ತಿಯಿಂದಲೇ ವಿಧವಾ, ವೃದ್ಧಾಪ್ಯ ವೇತನಗಳಂತಹ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸಿಕೊಡಲಾಗಿದೆ.

ರೂ 19 ಲಕ್ಷ ವೆಚ್ಚದಲ್ಲಿ ಗ್ರಾಮ ಪಂಚಾಯಿತಿಗೆ ನೂತನ ಕಟ್ಟಡ, `ರಾಜೀವ ಗಾಂಧಿ ಸೇವಾಕೇಂದ್ರ’ ನಿರ್ಮಾಣ. ಜಿಲ್ಲಾ ಪಂಚಾಯ್ತಿಯ ಅನುದಾನದಿಂದ ಅಂಗನವಾಡಿ ಮಕ್ಕಳಿಗೆ ಕಲಿಕೆಗೆ ಅನುವಾಗುವ ಆಟದ ಪರಿಕರಗಳು, ಪೀಠೋಪಕರಣಗಳ ಪೂರೈಕೆ. ಗ್ರಾಮೀಣ ಕ್ರೀಡೆಗಳ ಆಯೋಜನೆ.. ಇವೆಲ್ಲ ಅಭಿವೃದ್ಧಿ ಚಟುವಟಿಕೆಗಳ ಭಾಗವಾಗಿವೆ ಎನ್ನುತ್ತಾರೆ ಶೋಭಾರಾಣಿ.

ಇತ್ತೀಚೆಗೆ ಕಾನನ ಕೃಷಿಕ ಸಂಘದ ಮಹಿಳೆಯರು ‘ಕಾನನ ಸಮುದಾಯ ಬೀಜ ಬ್ಯಾಂಕ್’ ಆರಂಭಿಸಿದ್ದಾರೆ. ಮಾಲಂಗಿ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಈ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮೆಚ್ಚುಗೆ ಸೂಚಿಸಿವೆ. ಮಾತ್ರವಲ್ಲ, ರಾಜ್ಯ ಸರ್ಕಾರದಿಂದ ಎರಡು ಬಾರಿ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆಯಾಗಿದೆ. ಅಲ್ಲದೆ ಬಯಲು ಶೌಚಮುಕ್ತ ಗ್ರಾಮಪಂಚಾಯ್ತಿ ಪುರಸ್ಕಾರವನ್ನೂ ಪಡೆದಿದೆ.
ಭಾರತ ಸರಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯದಿಂದ ಕೊಡಮಾಡುವ `ನಮ್ಮ ಗ್ರಾಮ ನಮ್ಮ ಯೋಜನೆ ಪುರಸ್ಕಾರ -2018’ ರ ಪ್ರಶಸ್ತಿಗೆ ಆಯ್ಕೆಯಾದ ರಾಜ್ಯದ ಏಕೈಕ ಪಂಚಾಯ್ತಿ ಮಾಲಂಗಿ. ಕಳೆದ ವರ್ಷ ಏಪ್ರಿಲ್ 24 ರಂದು ಮಧ್ಯಪ್ರದೇಶದ ಜಬಲ್‍ಪುರ್‍ನಲ್ಲಿ ಆಯೋಜಿಸಿದ `ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್’ ಆಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಶೋಭಾರಾಣಿ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಇಡೀ ಮಾಲಂಗಿ ಗ್ರಾಮಪಂಚಾಯ್ತಿಯಲ್ಲಿ ಇಂಥದ್ದೊಂದು ಬದಲಾವಣೆ ತರಲು ಕಾರಣರಾಗಿದ್ದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಅವರ ಪರಿಶ್ರಮ ಎಂದು ಗ್ರಾಮಸ್ಥರು ಮತ್ತು ಪಂಚಾಯ್ತಿಯ ಪದಾಧಿಕಾರಿಗಳು ಅಭಿಪ್ರಾಯಪಡುತ್ತಾರೆ. ಶೋಭಾ ಅವರು ಎಂಎಸ್ಸಿ ಪದವೀಧರೆ, 2010 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಜೀವವಿಜ್ಞಾನ ವಿಭಾಗದಿಂದ ಪಿಎಚ್‍ಡಿ ಪಡೆದಿದ್ದಾರೆ. ಜಾರ್ಖಂಡ್ ವಿಶ್ವವಿದ್ಯಾಲಯದ ರಾಧೇಶ್ಯಾಮ್ ಪ್ರತಿಷ್ಠಾನದಿಂದ ಯುವ ವಿಜ್ಞಾನಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂಥ ಹಿನ್ನೆಲೆ ಮತ್ತು ತನ್ನ ಜ್ಞಾನ ಸಂಶೋಧನಾ ತಿಳಿವಳಿಕೆಯನ್ನು ಗ್ರಾಮಮಟ್ಟದಲ್ಲಿ ವಿಸ್ತರಿಸುವುದಕ್ಕಾಗಿ ಅವರು ಪಂಚಾಯ್ತಿ ಹುದ್ದೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಅವರ ಉನ್ನತ ಶಿಕ್ಷಣದ ಅರಿವು ಗ್ರಾಮಮಟ್ಟದಲ್ಲಿ ಸಮರ್ಥವಾಗಿ ಬಳಕೆಯಾಗಿದೆ. ಮಾಲಂಗಿಯನ್ನು ಮಾದರಿ ಗ್ರಾಮವನ್ನಾಗಿ ರೂಪಿಸಿದ ಶೋಭಾರಾಣಿ ಅವರು ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮ ಪಂಚಾಯ್ತಿಗೆ ವರ್ಗವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆ ಹೊಸ ಗ್ರಾಮಪಂಚಾಯ್ತಿಯಲ್ಲೂ ಇಂಥದ್ದೇ ಹೊಸ ಮಾದರಿಗಳು ರೂಪುಗೊಳ್ಳಲಿ. ಅವರು ಈಗ ರೂಪಿಸಿರುವ ಮಾದರಿಯನ್ನು ಅರಿಯುವ ಪ್ರಯತ್ನವಾಗಲಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...