Homeಮುಖಪುಟರಾಜಸ್ಥಾನ | ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ 12 ಜಿಲ್ಲೆಗಳನ್ನು ರದ್ದು ಮಾಡಿದ ಬಿಜೆಪಿ!

ರಾಜಸ್ಥಾನ | ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ 12 ಜಿಲ್ಲೆಗಳನ್ನು ರದ್ದು ಮಾಡಿದ ಬಿಜೆಪಿ!

- Advertisement -
- Advertisement -

ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 12 ಹೊಸ ಜಿಲ್ಲೆಗಳನ್ನು ಮತ್ತು ಮೂರು ಹೊಸ ವಿಭಾಗಗಳನ್ನು ರಾಜಸ್ಥಾನದ ಬಿಜೆಪಿ ಸರ್ಕಾರ ಶನಿವಾರ ರದ್ದುಗೊಳಿಸಿದೆ. ಅದಾಗ್ಯೂ, ಕಳೆದ ವರ್ಷ ಕಾಂಗ್ರೆಸ್‌ ಅವಧಿಯಲ್ಲಿ ರಚನೆಯಾಗಿದ್ದ ಎಂಟು ಜಿಲ್ಲೆಗಳನ್ನು ಸರ್ಕಾರ ಹಾಗೆ ಉಳಿಸಿಕೊಂಡಿದೆ. ಬಿಜೆಪಿ ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ವಿರೋಧಿಸಿದ್ದು, ರಾಜಕೀಯವಾಗಿ ಸೇಡಿನ ನಿರ್ಧಾರ ಎಂದು ಬಣ್ಣಿಸಿದೆ. ರಾಜಸ್ಥಾನ

ಮಾರ್ಚ್ 2023 ರಲ್ಲಿ, ಕಾಂಗ್ರೆಸ್‌ನ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜ್ಯ ಸರ್ಕಾರವು 19 ಹೊಸ ಜಿಲ್ಲೆಗಳು ಮತ್ತು ಮೂರು ವಿಭಾಗೀಯ ಕೇಂದ್ರಗಳ ರಚನೆಯನ್ನು ಘೋಷಿಸಿತ್ತು. ಈ ವೇಳೆ ಜೈಪುರ ಮತ್ತು ಜೋಧಪುರ ಜಿಲ್ಲೆಗಳನ್ನು ತಲಾ ಎರಡು ಚಿಕ್ಕ ಜಿಲ್ಲೆಗಳಾಗಿ ವಿಂಗಡಿಸಲಾಗಿತ್ತು. ಹಾಗಾಗಿ ರಾಜಸ್ಥಾನದ ಒಟ್ಟು ಜಿಲ್ಲೆಗಳ ಸಂಖ್ಯೆಯು 33 ರಿಂದ 50 ಕ್ಕೆ ಏರಿಕೆಯಾಗಿತ್ತು. ಕಾಂಗ್ರೆಸ್ ಸರ್ಕಾರವು ಪಾಲಿ, ಸಿಕಾರ್ ಮತ್ತು ಬನ್ಸ್ವಾರಾ ಎಂಬ ಮೂರು ಹೊಸ ವಿಭಾಗಗಳನ್ನು ಘೋಷಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳೆದ ವರ್ಷ ಅಕ್ಟೋಬರ್ 6 ರಂದು, ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಒಂದು ದಿನದ ಮೊದಲು, ಕಾಂಗ್ರೆಸ್ ಸರ್ಕಾರವು ಮತ್ತೆ ಮೂರು ಜಿಲ್ಲೆಗಳಾದ ಮಾಲ್‌ಪುರ, ಸುಜನ್‌ಗಢ ಮತ್ತು ಕುಚಮನ್‌ಗಳನ್ನು ರಚಿಸಿತ್ತು, ಹಾಗಾಗಿ ರಾಜ್ಯದ ಒಟ್ಟು ಜಿಲ್ಲೆಗಳ ಸಂಖ್ಯೆ 53 ಕ್ಕೆ ತಲುಪಿಸಿತ್ತು.

ಶನಿವಾರ, ರಾಜ್ಯದ ಬಿಜೆಪಿ ಸರ್ಕಾರವು ಅನುಪಗಢ, ದುಡು, ಗಂಗಾಪುರ ನಗರ, ಜೈಪುರ ಗ್ರಾಮಾಂತರ, ಜೋಧ್‌ಪುರ ಗ್ರಾಮಾಂತರ, ಕೇಕ್ರಿ, ನೀಮ್ ಕಾ ಥಾನಾ, ಸಂಚೋರ್ ಮತ್ತು ಶಹಪುರ ಜಿಲ್ಲೆಗಳನ್ನು ರದ್ದುಗೊಳಿಸಿದೆ. ಆದಾಗ್ಯೂ, ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಘೋಷಣೆಯಾದ ಬಲೋತ್ರಾ, ಬೇವಾರ್, ದೀಗ್, ದಿದ್ವಾನಾ-ಕುಚಮನ್, ಕೊಟ್‌ಪುಟ್ಲಿ-ಬೆಹ್ರೋರ್, ಖೈರ್ತಾಲ್-ತಿಜಾರಾ, ಫಲೋಡಿ ಮತ್ತು ಸಲುಂಭರ್ ಅನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.

ಶನಿವಾರ ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಜೋಗರಾಮ್ ಪಟೇಲ್ ಅವರು ಮಾತನಾಡಿ, ಅಕ್ಟೋಬರ್‌ನಲ್ಲಿ ಘೋಷಿಸಲಾದ ಮಾಲ್‌ಪುರ, ಸುಜನ್‌ಗಢ್ ಮತ್ತು ಕೂಚಮನ್ ರಚನೆಯ ಕುರಿತು ಹಿಂದಿನ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿಲ್ಲ ಎಂದು ಆರೋಪಿಸಿದ್ದಾರೆ. ಇದರೊಂದಿಗೆ, ರಾಜಸ್ಥಾನವು ಈಗ 41 ಜಿಲ್ಲೆಗಳು ಮತ್ತು ಏಳು ವಿಭಾಗಗಳನ್ನು ಹೊಂದಿದೆ. ರಾಜಸ್ಥಾನ

ಕಾಂಗ್ರೆಸ್ ಸರ್ಕಾರವು ರಾಜಕೀಯ ಲಾಭಕ್ಕಾಗಿ ಹೊಸ ಜಿಲ್ಲೆಗಳು ಮತ್ತು ವಿಭಾಗಗಳನ್ನು ರಚಿಸಿದೆ ಎಂದು ಪಟೇಲ್ ಆರೋಪಿಸಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರವು ಆರ್ಥಿಕ ಸಂಪನ್ಮೂಲಗಳ ಲಭ್ಯತೆ, ಆಡಳಿತಾತ್ಮಕ ಅವಶ್ಯಕತೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾಂಸ್ಕೃತಿಕ ಸಾಮರಸ್ಯದಂತಹ ಅಂಶಗಳನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಹೊಸ ಜಿಲ್ಲೆಗಳು ಮತ್ತು ವಿಭಾಗಗಳನ್ನು ರಚಿಸುವ ಅಗತ್ಯವಿದೆಯೇ ಎಂದು ಪರಿಶೀಲಿಸಲು ರಾಜ್ಯ ಸರ್ಕಾರವು ನಿವೃತ್ತ ಭಾರತೀಯ ಆಡಳಿತ ಸೇವಾ ಅಧಿಕಾರಿ ಲಲಿತ್ ಕೆ ಪನ್ವಾರ್ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ ಮತ್ತು ತಜ್ಞರ ಸಮಿತಿಯನ್ನು ರಚಿಸಿತ್ತು.

ತಮ್ಮ ಆಡಳಿತದ ನಿರ್ಧಾರವನ್ನು ಬಿಜೆಪಿ ಸರ್ಕಾರ ಹಿಂತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್, ಆಡಳಿತಾತ್ಮಕ ದಕ್ಷತೆಯ ದೃಷ್ಟಿಯಿಂದ ಸಣ್ಣ ಜಿಲ್ಲೆಗಳು ಉತ್ತಮವಾಗಿವೆ ಎಂದು ಹೇಳಿದ್ದಾರೆ. “ಬಿಜೆಪಿ ಸರ್ಕಾರದ ರಾಜಕೀಯವಾಗಿ ಸೇಡಿನ ನಿರ್ಧಾರವನ್ನು ನಾವು ಖಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ನಿವೃತ್ತ ಅಧಿಕಾರಿ ರಾಮ್ ಲುಭಾಯಾ ನೇತೃತ್ವದ ಸಮಿತಿಯ ಸಂಶೋಧನೆಗಳ ಆಧಾರದ ಮೇಲೆ ಹೊಸ ಜಿಲ್ಲೆಗಳನ್ನು ರಚಿಸಲು ತಮ್ಮ ಸರ್ಕಾರ ನಿರ್ಧರಿಸಿತ್ತು ಎಂದು ಗೆಹ್ಲೋಟ್ ಹೇಳಿದ್ದು, “ಹೊಸ ಜಿಲ್ಲೆಗಳು ರಚನೆಯಾಗುವ ಮೊದಲು ರಾಜಸ್ಥಾನದ ಪ್ರತಿ ಜಿಲ್ಲೆಯ ಸರಾಸರಿ ಜನಸಂಖ್ಯೆ 35.42 ಲಕ್ಷ ಇತ್ತು. ಹೊಸ ಜಿಲ್ಲೆಗಳ ರಚನೆಯ ನಂತರ ಈ ಸಂಖ್ಯೆ 15.35 ಲಕ್ಷಕ್ಕೆ ಇಳಿದಿದೆ. ಮಧ್ಯಪ್ರದೇಶವು ರಾಜಸ್ಥಾನಕ್ಕಿಂತ ಚಿಕ್ಕದಾದರೂ 53 ಜಿಲ್ಲೆಗಳನ್ನು ಹೊಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...