Homeಅಂತರಾಷ್ಟ್ರೀಯಟ್ರಾವೆಲ್ ಏಜೆನ್ಸಿ ವಂಚನೆ - ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

- Advertisement -
- Advertisement -

‘ಉಮ್ರಾ ಯಾತ್ರೆ’ಗೆಂದು ಜನರನ್ನು ಕರೆದೊಯ್ದ ಮಂಗಳೂರು ಮೂಲದ ಟ್ರಾವೆಲ್ಸ್‌ ಏಜೆನ್ಸಿಯೊಂದು, ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಡದೆ ಅರ್ಧ ದಾರಿಯಲ್ಲೆ ಕೈಬಿಟ್ಟ ಪರಿಣಾಮ ಸುಮಾರು 160ಕ್ಕೂ ಹೆಚ್ಚು ಜನರು ಸೌದಿ ಅರೇಬಿಯಾದ ಮದೀನದಲ್ಲೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ. ಟ್ರಾವೆಲ್ ಏಜೆನ್ಸಿಯ ಮುಖ್ಯಸ್ಥ ತಮ್ಮೊಂದಿಗೆ ತೆರಳಿದ್ದ ಜನರನ್ನು ಅಲ್ಲಿಯೆ ಬಿಟ್ಟು ಪರಾರಿಯಾಗಿದ್ದು, ಸಂತ್ರಸ್ತ ಜನರು ಭಾರತಕ್ಕೆ ಹಿಂತಿರುಗಲು ಪರದಾಡುವಂತಾಗಿದೆ. ಟ್ರಾವೆಲ್ ಏಜೆನ್ಸಿ ವಂಚನೆ

‘ಉಮ್ರಾ ಯಾತ್ರೆ’ ಎನ್ನುವುದು ‘ಹಜ್‌ ಯಾತ್ರೆ’ ಮಾದರಿಯ ಪವಿತ್ರ ಯಾತ್ರೆಯಾಗಿದ್ದು, ಈ ಯಾತ್ರೆಯಲ್ಲಿ ಮುಸ್ಲಿಮರು ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾ ನಗರಕ್ಕೆ ಭೇಟಿ ನೀಡಿ ವಿವಿಧ ಆರಾಧನಾ ಕರ್ಮಗಳನ್ನು ನಿರ್ವಹಿಸುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಬಕದಲ್ಲಿ ಇರುವ ಮೊಹಮ್ಮದೀಯ ಹಜ್ ಆಂಡ್ ಉಮ್ರಾ ಟ್ರಾವೆಲ್ಸ್‌ ಅಡಿಯಲ್ಲಿ ಡಿಸೆಂಬರ್ 13 ಮತ್ತು 15 ನಡುವೆ ಸುಮಾರು 160 ಜನರನ್ನು ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಈ ವೇಳೆ ಯಾತ್ರಾರ್ಥಿಗಳು ಕೇರಳದ ಕಣ್ಣೂರು, ಕ್ಯಾಲಿಕಟ್‌ ವಿಮಾನ ನಿಲ್ದಾಣಗಳ ಮೂಲಕ ಸೌದಿ ಅರೇಬಿಯಾಕ್ಕೆ ಪ್ರಯಾಣ ಮಾಡಿದ್ದರು. ಯಾತ್ರಾರ್ಥಿಗಳಲ್ಲಿ ಮಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವಾರು ಜಿಲ್ಲೆಗಳ ಜನರು ಇದ್ದರು ಎಂದು ತಿಳಿದು ಬಂದಿದೆ. ಟ್ರಾವೆಲ್ ಏಜೆನ್ಸಿ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಯಾತ್ರಾರ್ಥಿಗಳು ಮಕ್ಕಾ ಮತ್ತು ಮದೀನಾದಲ್ಲಿ ‘ಉಮ್ರಾ’ ಆರಾಧನೆಯನ್ನು ಮುಗಿಸಿ ಡಿಸೆಂಬರ್ 28ರ ನಂತರ ಭಾರತಕ್ಕೆ ವಾಪಾಸಾಗಬೇಕಾಗಿತ್ತು. ಆದರೆ ಈ ನಡುವೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗಿರುವ ಟ್ರಾವೆಲ್ಸ್‌ ಏಜೆನ್ಸಿಯ ಮುಖ್ಯಸ್ಥ ಅಶ್ರಫ್ ಸಖಾಫಿ ಪರ್ಪುಂಜ ನಾಪತ್ತೆಯಾಗಿದ್ದಾರೆ ಎಂದು ನಾನುಗೌರಿ.ಕಾಮ್‌ಗೆ ಸಂತ್ರಸ್ತ ಯಾತ್ರಾರ್ಥಿಯೊಬ್ಬರು ದೂರಿದರು. ಟ್ರಾವೆಲ್ ಏಜೆನ್ಸಿಯು ಪ್ರತಿ ಯಾತ್ರಾರ್ಥಿಯಿಂದ 65 ಸಾವಿರದಿಂದ 70 ಸಾವಿರದ ವರೆಗೆ ಪೂರ್ಣ ಹಣವನ್ನು ಪಡೆದಿದೆ ಎಂದು ಯಾತ್ರಾರ್ಥಿಗಳು ತಿಳಿಸಿದರು.

ಡಿಸೆಂಬರ್ 28ರಂದು ಟ್ರಾವೆಲ್ಸ್ ಏಜನ್ಸಿಯ ಮುಖ್ಯಸ್ಥ ನಾಪತ್ತೆಯಾದ ನಂತರ, ಅವರ ಅವರ ಇಬ್ಬರು ಸಹಾಯಕರು, ವಿಮಾನದ ಟಿಕೆಟ್ ಬೆಲೆ ಏರಿಕೆಯಾಗಿದೆ ಎಂದು ಸಬೂಬು ನೀಡಿ ಭಾರತಕ್ಕೆ ಹಿಂತಿರುಗುವ ದಿನವನ್ನು ಮುಂದೂಡುತ್ತಲೆ ಬಂದಿದ್ದರು. ಕೊನೆಗೆ ಅವರು ಯಾತ್ರಾರ್ಥಿಗಳಿಗೆ ವಿಷಯವನ್ನು ತಿಳಿಸಿದ್ದು, ತಮ್ಮ ಕೈಯ್ಯಿಂದಲೆ ಹಣವನ್ನು ಹಾಕಿ ಟಿಕೆಟ್ ಖರೀದಿಸುವಂತೆ ಕೇಳಿಕೊಂಡಿದ್ದಾರೆ ಎಂದು ನಾನುಗೌರಿ.ಕಾಮ್‌ಗೆ ಯಾತ್ರಾರ್ಥಿಯೊಬ್ಬರು ತಿಳಿಸಿದರು.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಯಾತ್ರಾರ್ಥಿ ಖಾದರ್ ರಂತಡ್ಕ ಅವರು, “ನಮ್ಮ ತಂಡದಲ್ಲಿ ಸುಮಾರು 160 ಜನರು ಇದ್ದಾರೆ. ನಮ್ಮ ತಂಡದಲ್ಲಿ ವೃದ್ಧರೇ ಹೆಚ್ಚಾಗಿದ್ದು, ಅವರಿಗೆ ಬಿಪಿ, ಡಯಬಿಟೀಸ್, ಹೃದ್ರೋಗ ಇರುವವರು ಇದ್ದಾರೆ. ಭಾನುವಾರ ರಾತ್ರಿಯಿಂದ ಯಾರೂ ಕೂಡಾ ಊಟ ಮಾಡಿಲ್ಲ. ಸೋಮವಾರ ಬೆಳಿಗ್ಗೆ ಚಹಾ ಮತ್ತು ಉಪ್ಪಿಟ್ಟುಕೊಟ್ಟಿದ್ದಾರೆ. ಮಧ್ಯಾಹ್ನದ ಊಟ ಇನ್ನೂ ಸಿಕ್ಕಿಲ್ಲ. ಇಂದು ಮಧ್ಯಾಹ್ನದ ವರೆಗೆ ನಾವು ಇರುವ ವಸತಿಯಲ್ಲಿ ಇರಬಹುದು. ನಂತರ ಅದನ್ನು ಕೂಡಾ ತೆರವು ಮಾಡಬೇಕಾಗುತ್ತದೆ. ಎಲ್ಲರೂ ದುಃಖದಲ್ಲಿದ್ದು, ಮುಂದಕ್ಕೇನು ಮಾಡಬೇಕು ಎಂದು ತಿಳಿಯುತ್ತಿಲ್ಲ” ಎಂದು ಹೇಳಿದರು.

”ಪವಿತ್ರ ಯಾತ್ರೆಗೆಂದು ಹೊರಟು ಬಂದಿರುವ ನಾವು ಯಾತ್ರೆ ಮುಗಿಸಿ ಸಂತೋಷದಿಂದ ಭಾರತಕ್ಕೆ ಹಿಂತಿರುಗಬೇಕಿತ್ತು. ನಾವೇನೂ ತುಂಬಾ ಶ್ರೀಮಂತರಲ್ಲ, ಪವಿತ್ರ ಯಾತ್ರೆಗಾಗಿ ಅಲ್ಪ ಸ್ವಲ್ಪ ಕೂಡಿಟ್ಟ ಹಣವನ್ನು ಟ್ರಾವೆಲ್ಸ್ ಏಜೆನ್ಸಿಗೆ ಕೊಟ್ಟು ನಾವು ಯಾತ್ರೆಗೆ ಬಂದಿದ್ದೇವೆ. ಇರುವ ಹಣ ಎಲ್ಲವೂ ಖಾಲಿಯಾಗಿದೆ. ಟ್ರಾವೆಲ್ಸ್ ಏಜೆನ್ಸಿ ಅವರು, ನಾವೇ ಟಿಕೆಟ್ ಮಾಡಿ ಭಾರತಕ್ಕೆ ಹಿಂತಿರುಗುವಂತೆ ಹೇಳುತ್ತಿದ್ದಾರೆ. ಅಷ್ಟೊಂದು ಹಣವನ್ನು ನಾವು ಈಗ ಎಲ್ಲಿಂದ ತರಲಿ” ಎಂದು ಮತ್ತೊಬ್ಬ ಯಾತ್ರಾರ್ಥಿ ನಾನುಗೌರಿ.ಕಾಮ್‌ಗೆ ಹೇಳಿದರು.

ಈ ನಡುವೆ ಟ್ರಾವೆಲ್ಸ್ ಏಜೆನ್ಸಿಯ ಪುತ್ತೂರಿನ ಕಬಕದಲ್ಲಿ ಮತ್ತು ಉಳ್ಳಾಲದ ಮುಡಿಪುವಿನ ಕಚೇರಿಗಳಲ್ಲಿ ಯಾತ್ರಾರ್ಥಿಗಳ ಸಂಬಂಧಿಕರು ತೆರಳಿ ಗಲಾಟೆ ಮಾಡಿದ್ದಾರೆ ಎಂದು ವರದಿಯಾಗಿವೆ. ಅದಾಗ್ಯೂ, ಟ್ರಾವೆಲ್ಸ್ ಏಜೆನ್ಸಿಯ ಮುಖ್ಯಸ್ಥ ಅಶ್ರಫ್ ಸಖಾಫಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅವರು ಮೂರು ದಿನಗಳ ಹಿಂದೆಯೆ ಭಾರತಕ್ಕೆ ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ. ಪರಾರಿಯಾಗಿರುವ ಏಜೆನ್ಸಿ ಮುಖ್ಯಸ್ಥ ಈ ಹಿಂದೆ ಕೂಡಾ ಇದೇ ರೀತಿ ಜನರಿಗೆ ವಂಚನೆ ಮಾಡಿದ್ದರು ಎಂದು ಮೂಲವೊಂದು ನಾನುಗೌರಿ.ಕಾಮ್‌ಗೆ ಹೇಳಿದೆ.

ಈ ನಡುವೆ ಸೌದಿ ಅರೇಬಿಯಾದಲ್ಲಿ ಇರುವ ಅನಿವಾಸಿ ಭಾರತೀಯರ ಸಂಘಟನೆಯಾದ ಕೆಸಿಎಫ್‌ ಸಂತ್ರಸ್ತ ಯಾತ್ರಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಿದೆ ಎಂದು ಅದರ ಪದಾದಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಕೆಸಿಎಫ್‌ ಪದಾಧಿಕಾರಿಯೊಬ್ಬರು ಅವರು,”ನಮಗೆ ವಿಷಯ ತಿಳಿದ ನಂತರ 160 ಜನರಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಮಾಡಿದ್ದೇವೆ. ಈ ನಡುವೆ ಸೌದಿ ಸರ್ಕಾರಕ್ಕೆ ಯಾತ್ರಾರ್ಥಿಗಳು ದೂರು ನೀಡಿದ್ದಾರೆ. ಅವರಿಗೆ ವಂಚನೆ ಮಾಡಿರುವ ಟ್ರಾವೆಲ್ ಏಜೆನ್ಸಿ ಮುಖ್ಯಸ್ಥ ಅಶ್ರಫ್ ಸಖಾಫಿ ವಿರುದ್ಧ ಇಲ್ಲಿನ ಸರ್ಕಾರ ಕ್ರಮಕೈಗೊಳ್ಳುತ್ತದೆ. ಒಂದು ವೇಳೆ ಅವರು ಸೌದಿಯಲ್ಲಿ ಇರದೆ ಇದ್ದರೆ, ಅವರ ಸಂಸ್ಥೆಯ ಮೇಲೆ ಸರ್ಕಾರ ಕ್ರಮಕೈಗೊಳ್ಳಲಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಈಶ್ವರ ಅಲ್ಲಾ ತೇರೋ ನಾಮ್ ವಿವಾದ: ಈ ಭಜನೆ ಹಾಡುವುದನ್ನು ಮುಂದುವರಿಸುತ್ತೇನೆ; ಜನಪದ ಗಾಯಕಿ ದೇವಿ

ಈಶ್ವರ ಅಲ್ಲಾ ತೇರೋ ನಾಮ್ ವಿವಾದ: ಈ ಭಜನೆ ಹಾಡುವುದನ್ನು ಮುಂದುವರಿಸುತ್ತೇನೆ; ಜನಪದ ಗಾಯಕಿ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...