Homeಅಂತರಾಷ್ಟ್ರೀಯಟ್ರಾವೆಲ್ ಏಜೆನ್ಸಿ ವಂಚನೆ - ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

- Advertisement -
- Advertisement -

‘ಉಮ್ರಾ ಯಾತ್ರೆ’ಗೆಂದು ಜನರನ್ನು ಕರೆದೊಯ್ದ ಮಂಗಳೂರು ಮೂಲದ ಟ್ರಾವೆಲ್ಸ್‌ ಏಜೆನ್ಸಿಯೊಂದು, ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಡದೆ ಅರ್ಧ ದಾರಿಯಲ್ಲೆ ಕೈಬಿಟ್ಟ ಪರಿಣಾಮ ಸುಮಾರು 160ಕ್ಕೂ ಹೆಚ್ಚು ಜನರು ಸೌದಿ ಅರೇಬಿಯಾದ ಮದೀನದಲ್ಲೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ. ಟ್ರಾವೆಲ್ ಏಜೆನ್ಸಿಯ ಮುಖ್ಯಸ್ಥ ತಮ್ಮೊಂದಿಗೆ ತೆರಳಿದ್ದ ಜನರನ್ನು ಅಲ್ಲಿಯೆ ಬಿಟ್ಟು ಪರಾರಿಯಾಗಿದ್ದು, ಸಂತ್ರಸ್ತ ಜನರು ಭಾರತಕ್ಕೆ ಹಿಂತಿರುಗಲು ಪರದಾಡುವಂತಾಗಿದೆ. ಟ್ರಾವೆಲ್ ಏಜೆನ್ಸಿ ವಂಚನೆ

‘ಉಮ್ರಾ ಯಾತ್ರೆ’ ಎನ್ನುವುದು ‘ಹಜ್‌ ಯಾತ್ರೆ’ ಮಾದರಿಯ ಪವಿತ್ರ ಯಾತ್ರೆಯಾಗಿದ್ದು, ಈ ಯಾತ್ರೆಯಲ್ಲಿ ಮುಸ್ಲಿಮರು ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾ ನಗರಕ್ಕೆ ಭೇಟಿ ನೀಡಿ ವಿವಿಧ ಆರಾಧನಾ ಕರ್ಮಗಳನ್ನು ನಿರ್ವಹಿಸುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಬಕದಲ್ಲಿ ಇರುವ ಮೊಹಮ್ಮದೀಯ ಹಜ್ ಆಂಡ್ ಉಮ್ರಾ ಟ್ರಾವೆಲ್ಸ್‌ ಅಡಿಯಲ್ಲಿ ಡಿಸೆಂಬರ್ 13 ಮತ್ತು 15 ನಡುವೆ ಸುಮಾರು 160 ಜನರನ್ನು ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಈ ವೇಳೆ ಯಾತ್ರಾರ್ಥಿಗಳು ಕೇರಳದ ಕಣ್ಣೂರು, ಕ್ಯಾಲಿಕಟ್‌ ವಿಮಾನ ನಿಲ್ದಾಣಗಳ ಮೂಲಕ ಸೌದಿ ಅರೇಬಿಯಾಕ್ಕೆ ಪ್ರಯಾಣ ಮಾಡಿದ್ದರು. ಯಾತ್ರಾರ್ಥಿಗಳಲ್ಲಿ ಮಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವಾರು ಜಿಲ್ಲೆಗಳ ಜನರು ಇದ್ದರು ಎಂದು ತಿಳಿದು ಬಂದಿದೆ. ಟ್ರಾವೆಲ್ ಏಜೆನ್ಸಿ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಯಾತ್ರಾರ್ಥಿಗಳು ಮಕ್ಕಾ ಮತ್ತು ಮದೀನಾದಲ್ಲಿ ‘ಉಮ್ರಾ’ ಆರಾಧನೆಯನ್ನು ಮುಗಿಸಿ ಡಿಸೆಂಬರ್ 28ರ ನಂತರ ಭಾರತಕ್ಕೆ ವಾಪಾಸಾಗಬೇಕಾಗಿತ್ತು. ಆದರೆ ಈ ನಡುವೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗಿರುವ ಟ್ರಾವೆಲ್ಸ್‌ ಏಜೆನ್ಸಿಯ ಮುಖ್ಯಸ್ಥ ಅಶ್ರಫ್ ಸಖಾಫಿ ಪರ್ಪುಂಜ ನಾಪತ್ತೆಯಾಗಿದ್ದಾರೆ ಎಂದು ನಾನುಗೌರಿ.ಕಾಮ್‌ಗೆ ಸಂತ್ರಸ್ತ ಯಾತ್ರಾರ್ಥಿಯೊಬ್ಬರು ದೂರಿದರು. ಟ್ರಾವೆಲ್ ಏಜೆನ್ಸಿಯು ಪ್ರತಿ ಯಾತ್ರಾರ್ಥಿಯಿಂದ 65 ಸಾವಿರದಿಂದ 70 ಸಾವಿರದ ವರೆಗೆ ಪೂರ್ಣ ಹಣವನ್ನು ಪಡೆದಿದೆ ಎಂದು ಯಾತ್ರಾರ್ಥಿಗಳು ತಿಳಿಸಿದರು.

ಡಿಸೆಂಬರ್ 28ರಂದು ಟ್ರಾವೆಲ್ಸ್ ಏಜನ್ಸಿಯ ಮುಖ್ಯಸ್ಥ ನಾಪತ್ತೆಯಾದ ನಂತರ, ಅವರ ಅವರ ಇಬ್ಬರು ಸಹಾಯಕರು, ವಿಮಾನದ ಟಿಕೆಟ್ ಬೆಲೆ ಏರಿಕೆಯಾಗಿದೆ ಎಂದು ಸಬೂಬು ನೀಡಿ ಭಾರತಕ್ಕೆ ಹಿಂತಿರುಗುವ ದಿನವನ್ನು ಮುಂದೂಡುತ್ತಲೆ ಬಂದಿದ್ದರು. ಕೊನೆಗೆ ಅವರು ಯಾತ್ರಾರ್ಥಿಗಳಿಗೆ ವಿಷಯವನ್ನು ತಿಳಿಸಿದ್ದು, ತಮ್ಮ ಕೈಯ್ಯಿಂದಲೆ ಹಣವನ್ನು ಹಾಕಿ ಟಿಕೆಟ್ ಖರೀದಿಸುವಂತೆ ಕೇಳಿಕೊಂಡಿದ್ದಾರೆ ಎಂದು ನಾನುಗೌರಿ.ಕಾಮ್‌ಗೆ ಯಾತ್ರಾರ್ಥಿಯೊಬ್ಬರು ತಿಳಿಸಿದರು.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಯಾತ್ರಾರ್ಥಿ ಖಾದರ್ ರಂತಡ್ಕ ಅವರು, “ನಮ್ಮ ತಂಡದಲ್ಲಿ ಸುಮಾರು 160 ಜನರು ಇದ್ದಾರೆ. ನಮ್ಮ ತಂಡದಲ್ಲಿ ವೃದ್ಧರೇ ಹೆಚ್ಚಾಗಿದ್ದು, ಅವರಿಗೆ ಬಿಪಿ, ಡಯಬಿಟೀಸ್, ಹೃದ್ರೋಗ ಇರುವವರು ಇದ್ದಾರೆ. ಭಾನುವಾರ ರಾತ್ರಿಯಿಂದ ಯಾರೂ ಕೂಡಾ ಊಟ ಮಾಡಿಲ್ಲ. ಸೋಮವಾರ ಬೆಳಿಗ್ಗೆ ಚಹಾ ಮತ್ತು ಉಪ್ಪಿಟ್ಟುಕೊಟ್ಟಿದ್ದಾರೆ. ಮಧ್ಯಾಹ್ನದ ಊಟ ಇನ್ನೂ ಸಿಕ್ಕಿಲ್ಲ. ಇಂದು ಮಧ್ಯಾಹ್ನದ ವರೆಗೆ ನಾವು ಇರುವ ವಸತಿಯಲ್ಲಿ ಇರಬಹುದು. ನಂತರ ಅದನ್ನು ಕೂಡಾ ತೆರವು ಮಾಡಬೇಕಾಗುತ್ತದೆ. ಎಲ್ಲರೂ ದುಃಖದಲ್ಲಿದ್ದು, ಮುಂದಕ್ಕೇನು ಮಾಡಬೇಕು ಎಂದು ತಿಳಿಯುತ್ತಿಲ್ಲ” ಎಂದು ಹೇಳಿದರು.

”ಪವಿತ್ರ ಯಾತ್ರೆಗೆಂದು ಹೊರಟು ಬಂದಿರುವ ನಾವು ಯಾತ್ರೆ ಮುಗಿಸಿ ಸಂತೋಷದಿಂದ ಭಾರತಕ್ಕೆ ಹಿಂತಿರುಗಬೇಕಿತ್ತು. ನಾವೇನೂ ತುಂಬಾ ಶ್ರೀಮಂತರಲ್ಲ, ಪವಿತ್ರ ಯಾತ್ರೆಗಾಗಿ ಅಲ್ಪ ಸ್ವಲ್ಪ ಕೂಡಿಟ್ಟ ಹಣವನ್ನು ಟ್ರಾವೆಲ್ಸ್ ಏಜೆನ್ಸಿಗೆ ಕೊಟ್ಟು ನಾವು ಯಾತ್ರೆಗೆ ಬಂದಿದ್ದೇವೆ. ಇರುವ ಹಣ ಎಲ್ಲವೂ ಖಾಲಿಯಾಗಿದೆ. ಟ್ರಾವೆಲ್ಸ್ ಏಜೆನ್ಸಿ ಅವರು, ನಾವೇ ಟಿಕೆಟ್ ಮಾಡಿ ಭಾರತಕ್ಕೆ ಹಿಂತಿರುಗುವಂತೆ ಹೇಳುತ್ತಿದ್ದಾರೆ. ಅಷ್ಟೊಂದು ಹಣವನ್ನು ನಾವು ಈಗ ಎಲ್ಲಿಂದ ತರಲಿ” ಎಂದು ಮತ್ತೊಬ್ಬ ಯಾತ್ರಾರ್ಥಿ ನಾನುಗೌರಿ.ಕಾಮ್‌ಗೆ ಹೇಳಿದರು.

ಈ ನಡುವೆ ಟ್ರಾವೆಲ್ಸ್ ಏಜೆನ್ಸಿಯ ಪುತ್ತೂರಿನ ಕಬಕದಲ್ಲಿ ಮತ್ತು ಉಳ್ಳಾಲದ ಮುಡಿಪುವಿನ ಕಚೇರಿಗಳಲ್ಲಿ ಯಾತ್ರಾರ್ಥಿಗಳ ಸಂಬಂಧಿಕರು ತೆರಳಿ ಗಲಾಟೆ ಮಾಡಿದ್ದಾರೆ ಎಂದು ವರದಿಯಾಗಿವೆ. ಅದಾಗ್ಯೂ, ಟ್ರಾವೆಲ್ಸ್ ಏಜೆನ್ಸಿಯ ಮುಖ್ಯಸ್ಥ ಅಶ್ರಫ್ ಸಖಾಫಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅವರು ಮೂರು ದಿನಗಳ ಹಿಂದೆಯೆ ಭಾರತಕ್ಕೆ ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ. ಪರಾರಿಯಾಗಿರುವ ಏಜೆನ್ಸಿ ಮುಖ್ಯಸ್ಥ ಈ ಹಿಂದೆ ಕೂಡಾ ಇದೇ ರೀತಿ ಜನರಿಗೆ ವಂಚನೆ ಮಾಡಿದ್ದರು ಎಂದು ಮೂಲವೊಂದು ನಾನುಗೌರಿ.ಕಾಮ್‌ಗೆ ಹೇಳಿದೆ.

ಈ ನಡುವೆ ಸೌದಿ ಅರೇಬಿಯಾದಲ್ಲಿ ಇರುವ ಅನಿವಾಸಿ ಭಾರತೀಯರ ಸಂಘಟನೆಯಾದ ಕೆಸಿಎಫ್‌ ಸಂತ್ರಸ್ತ ಯಾತ್ರಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಿದೆ ಎಂದು ಅದರ ಪದಾದಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಕೆಸಿಎಫ್‌ ಪದಾಧಿಕಾರಿಯೊಬ್ಬರು ಅವರು,”ನಮಗೆ ವಿಷಯ ತಿಳಿದ ನಂತರ 160 ಜನರಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಮಾಡಿದ್ದೇವೆ. ಈ ನಡುವೆ ಸೌದಿ ಸರ್ಕಾರಕ್ಕೆ ಯಾತ್ರಾರ್ಥಿಗಳು ದೂರು ನೀಡಿದ್ದಾರೆ. ಅವರಿಗೆ ವಂಚನೆ ಮಾಡಿರುವ ಟ್ರಾವೆಲ್ ಏಜೆನ್ಸಿ ಮುಖ್ಯಸ್ಥ ಅಶ್ರಫ್ ಸಖಾಫಿ ವಿರುದ್ಧ ಇಲ್ಲಿನ ಸರ್ಕಾರ ಕ್ರಮಕೈಗೊಳ್ಳುತ್ತದೆ. ಒಂದು ವೇಳೆ ಅವರು ಸೌದಿಯಲ್ಲಿ ಇರದೆ ಇದ್ದರೆ, ಅವರ ಸಂಸ್ಥೆಯ ಮೇಲೆ ಸರ್ಕಾರ ಕ್ರಮಕೈಗೊಳ್ಳಲಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಈಶ್ವರ ಅಲ್ಲಾ ತೇರೋ ನಾಮ್ ವಿವಾದ: ಈ ಭಜನೆ ಹಾಡುವುದನ್ನು ಮುಂದುವರಿಸುತ್ತೇನೆ; ಜನಪದ ಗಾಯಕಿ ದೇವಿ

ಈಶ್ವರ ಅಲ್ಲಾ ತೇರೋ ನಾಮ್ ವಿವಾದ: ಈ ಭಜನೆ ಹಾಡುವುದನ್ನು ಮುಂದುವರಿಸುತ್ತೇನೆ; ಜನಪದ ಗಾಯಕಿ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...