Homeಅಂತರಾಷ್ಟ್ರೀಯಟ್ರಾವೆಲ್ ಏಜೆನ್ಸಿ ವಂಚನೆ - ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

- Advertisement -
- Advertisement -

‘ಉಮ್ರಾ ಯಾತ್ರೆ’ಗೆಂದು ಜನರನ್ನು ಕರೆದೊಯ್ದ ಮಂಗಳೂರು ಮೂಲದ ಟ್ರಾವೆಲ್ಸ್‌ ಏಜೆನ್ಸಿಯೊಂದು, ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಡದೆ ಅರ್ಧ ದಾರಿಯಲ್ಲೆ ಕೈಬಿಟ್ಟ ಪರಿಣಾಮ ಸುಮಾರು 160ಕ್ಕೂ ಹೆಚ್ಚು ಜನರು ಸೌದಿ ಅರೇಬಿಯಾದ ಮದೀನದಲ್ಲೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ. ಟ್ರಾವೆಲ್ ಏಜೆನ್ಸಿಯ ಮುಖ್ಯಸ್ಥ ತಮ್ಮೊಂದಿಗೆ ತೆರಳಿದ್ದ ಜನರನ್ನು ಅಲ್ಲಿಯೆ ಬಿಟ್ಟು ಪರಾರಿಯಾಗಿದ್ದು, ಸಂತ್ರಸ್ತ ಜನರು ಭಾರತಕ್ಕೆ ಹಿಂತಿರುಗಲು ಪರದಾಡುವಂತಾಗಿದೆ. ಟ್ರಾವೆಲ್ ಏಜೆನ್ಸಿ ವಂಚನೆ

‘ಉಮ್ರಾ ಯಾತ್ರೆ’ ಎನ್ನುವುದು ‘ಹಜ್‌ ಯಾತ್ರೆ’ ಮಾದರಿಯ ಪವಿತ್ರ ಯಾತ್ರೆಯಾಗಿದ್ದು, ಈ ಯಾತ್ರೆಯಲ್ಲಿ ಮುಸ್ಲಿಮರು ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾ ನಗರಕ್ಕೆ ಭೇಟಿ ನೀಡಿ ವಿವಿಧ ಆರಾಧನಾ ಕರ್ಮಗಳನ್ನು ನಿರ್ವಹಿಸುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಬಕದಲ್ಲಿ ಇರುವ ಮೊಹಮ್ಮದೀಯ ಹಜ್ ಆಂಡ್ ಉಮ್ರಾ ಟ್ರಾವೆಲ್ಸ್‌ ಅಡಿಯಲ್ಲಿ ಡಿಸೆಂಬರ್ 13 ಮತ್ತು 15 ನಡುವೆ ಸುಮಾರು 160 ಜನರನ್ನು ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಈ ವೇಳೆ ಯಾತ್ರಾರ್ಥಿಗಳು ಕೇರಳದ ಕಣ್ಣೂರು, ಕ್ಯಾಲಿಕಟ್‌ ವಿಮಾನ ನಿಲ್ದಾಣಗಳ ಮೂಲಕ ಸೌದಿ ಅರೇಬಿಯಾಕ್ಕೆ ಪ್ರಯಾಣ ಮಾಡಿದ್ದರು. ಯಾತ್ರಾರ್ಥಿಗಳಲ್ಲಿ ಮಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವಾರು ಜಿಲ್ಲೆಗಳ ಜನರು ಇದ್ದರು ಎಂದು ತಿಳಿದು ಬಂದಿದೆ. ಟ್ರಾವೆಲ್ ಏಜೆನ್ಸಿ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಯಾತ್ರಾರ್ಥಿಗಳು ಮಕ್ಕಾ ಮತ್ತು ಮದೀನಾದಲ್ಲಿ ‘ಉಮ್ರಾ’ ಆರಾಧನೆಯನ್ನು ಮುಗಿಸಿ ಡಿಸೆಂಬರ್ 28ರ ನಂತರ ಭಾರತಕ್ಕೆ ವಾಪಾಸಾಗಬೇಕಾಗಿತ್ತು. ಆದರೆ ಈ ನಡುವೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗಿರುವ ಟ್ರಾವೆಲ್ಸ್‌ ಏಜೆನ್ಸಿಯ ಮುಖ್ಯಸ್ಥ ಅಶ್ರಫ್ ಸಖಾಫಿ ಪರ್ಪುಂಜ ನಾಪತ್ತೆಯಾಗಿದ್ದಾರೆ ಎಂದು ನಾನುಗೌರಿ.ಕಾಮ್‌ಗೆ ಸಂತ್ರಸ್ತ ಯಾತ್ರಾರ್ಥಿಯೊಬ್ಬರು ದೂರಿದರು. ಟ್ರಾವೆಲ್ ಏಜೆನ್ಸಿಯು ಪ್ರತಿ ಯಾತ್ರಾರ್ಥಿಯಿಂದ 65 ಸಾವಿರದಿಂದ 70 ಸಾವಿರದ ವರೆಗೆ ಪೂರ್ಣ ಹಣವನ್ನು ಪಡೆದಿದೆ ಎಂದು ಯಾತ್ರಾರ್ಥಿಗಳು ತಿಳಿಸಿದರು.

ಡಿಸೆಂಬರ್ 28ರಂದು ಟ್ರಾವೆಲ್ಸ್ ಏಜನ್ಸಿಯ ಮುಖ್ಯಸ್ಥ ನಾಪತ್ತೆಯಾದ ನಂತರ, ಅವರ ಅವರ ಇಬ್ಬರು ಸಹಾಯಕರು, ವಿಮಾನದ ಟಿಕೆಟ್ ಬೆಲೆ ಏರಿಕೆಯಾಗಿದೆ ಎಂದು ಸಬೂಬು ನೀಡಿ ಭಾರತಕ್ಕೆ ಹಿಂತಿರುಗುವ ದಿನವನ್ನು ಮುಂದೂಡುತ್ತಲೆ ಬಂದಿದ್ದರು. ಕೊನೆಗೆ ಅವರು ಯಾತ್ರಾರ್ಥಿಗಳಿಗೆ ವಿಷಯವನ್ನು ತಿಳಿಸಿದ್ದು, ತಮ್ಮ ಕೈಯ್ಯಿಂದಲೆ ಹಣವನ್ನು ಹಾಕಿ ಟಿಕೆಟ್ ಖರೀದಿಸುವಂತೆ ಕೇಳಿಕೊಂಡಿದ್ದಾರೆ ಎಂದು ನಾನುಗೌರಿ.ಕಾಮ್‌ಗೆ ಯಾತ್ರಾರ್ಥಿಯೊಬ್ಬರು ತಿಳಿಸಿದರು.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಯಾತ್ರಾರ್ಥಿ ಖಾದರ್ ರಂತಡ್ಕ ಅವರು, “ನಮ್ಮ ತಂಡದಲ್ಲಿ ಸುಮಾರು 160 ಜನರು ಇದ್ದಾರೆ. ನಮ್ಮ ತಂಡದಲ್ಲಿ ವೃದ್ಧರೇ ಹೆಚ್ಚಾಗಿದ್ದು, ಅವರಿಗೆ ಬಿಪಿ, ಡಯಬಿಟೀಸ್, ಹೃದ್ರೋಗ ಇರುವವರು ಇದ್ದಾರೆ. ಭಾನುವಾರ ರಾತ್ರಿಯಿಂದ ಯಾರೂ ಕೂಡಾ ಊಟ ಮಾಡಿಲ್ಲ. ಸೋಮವಾರ ಬೆಳಿಗ್ಗೆ ಚಹಾ ಮತ್ತು ಉಪ್ಪಿಟ್ಟುಕೊಟ್ಟಿದ್ದಾರೆ. ಮಧ್ಯಾಹ್ನದ ಊಟ ಇನ್ನೂ ಸಿಕ್ಕಿಲ್ಲ. ಇಂದು ಮಧ್ಯಾಹ್ನದ ವರೆಗೆ ನಾವು ಇರುವ ವಸತಿಯಲ್ಲಿ ಇರಬಹುದು. ನಂತರ ಅದನ್ನು ಕೂಡಾ ತೆರವು ಮಾಡಬೇಕಾಗುತ್ತದೆ. ಎಲ್ಲರೂ ದುಃಖದಲ್ಲಿದ್ದು, ಮುಂದಕ್ಕೇನು ಮಾಡಬೇಕು ಎಂದು ತಿಳಿಯುತ್ತಿಲ್ಲ” ಎಂದು ಹೇಳಿದರು.

”ಪವಿತ್ರ ಯಾತ್ರೆಗೆಂದು ಹೊರಟು ಬಂದಿರುವ ನಾವು ಯಾತ್ರೆ ಮುಗಿಸಿ ಸಂತೋಷದಿಂದ ಭಾರತಕ್ಕೆ ಹಿಂತಿರುಗಬೇಕಿತ್ತು. ನಾವೇನೂ ತುಂಬಾ ಶ್ರೀಮಂತರಲ್ಲ, ಪವಿತ್ರ ಯಾತ್ರೆಗಾಗಿ ಅಲ್ಪ ಸ್ವಲ್ಪ ಕೂಡಿಟ್ಟ ಹಣವನ್ನು ಟ್ರಾವೆಲ್ಸ್ ಏಜೆನ್ಸಿಗೆ ಕೊಟ್ಟು ನಾವು ಯಾತ್ರೆಗೆ ಬಂದಿದ್ದೇವೆ. ಇರುವ ಹಣ ಎಲ್ಲವೂ ಖಾಲಿಯಾಗಿದೆ. ಟ್ರಾವೆಲ್ಸ್ ಏಜೆನ್ಸಿ ಅವರು, ನಾವೇ ಟಿಕೆಟ್ ಮಾಡಿ ಭಾರತಕ್ಕೆ ಹಿಂತಿರುಗುವಂತೆ ಹೇಳುತ್ತಿದ್ದಾರೆ. ಅಷ್ಟೊಂದು ಹಣವನ್ನು ನಾವು ಈಗ ಎಲ್ಲಿಂದ ತರಲಿ” ಎಂದು ಮತ್ತೊಬ್ಬ ಯಾತ್ರಾರ್ಥಿ ನಾನುಗೌರಿ.ಕಾಮ್‌ಗೆ ಹೇಳಿದರು.

ಈ ನಡುವೆ ಟ್ರಾವೆಲ್ಸ್ ಏಜೆನ್ಸಿಯ ಪುತ್ತೂರಿನ ಕಬಕದಲ್ಲಿ ಮತ್ತು ಉಳ್ಳಾಲದ ಮುಡಿಪುವಿನ ಕಚೇರಿಗಳಲ್ಲಿ ಯಾತ್ರಾರ್ಥಿಗಳ ಸಂಬಂಧಿಕರು ತೆರಳಿ ಗಲಾಟೆ ಮಾಡಿದ್ದಾರೆ ಎಂದು ವರದಿಯಾಗಿವೆ. ಅದಾಗ್ಯೂ, ಟ್ರಾವೆಲ್ಸ್ ಏಜೆನ್ಸಿಯ ಮುಖ್ಯಸ್ಥ ಅಶ್ರಫ್ ಸಖಾಫಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅವರು ಮೂರು ದಿನಗಳ ಹಿಂದೆಯೆ ಭಾರತಕ್ಕೆ ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ. ಪರಾರಿಯಾಗಿರುವ ಏಜೆನ್ಸಿ ಮುಖ್ಯಸ್ಥ ಈ ಹಿಂದೆ ಕೂಡಾ ಇದೇ ರೀತಿ ಜನರಿಗೆ ವಂಚನೆ ಮಾಡಿದ್ದರು ಎಂದು ಮೂಲವೊಂದು ನಾನುಗೌರಿ.ಕಾಮ್‌ಗೆ ಹೇಳಿದೆ.

ಈ ನಡುವೆ ಸೌದಿ ಅರೇಬಿಯಾದಲ್ಲಿ ಇರುವ ಅನಿವಾಸಿ ಭಾರತೀಯರ ಸಂಘಟನೆಯಾದ ಕೆಸಿಎಫ್‌ ಸಂತ್ರಸ್ತ ಯಾತ್ರಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಿದೆ ಎಂದು ಅದರ ಪದಾದಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಕೆಸಿಎಫ್‌ ಪದಾಧಿಕಾರಿಯೊಬ್ಬರು ಅವರು,”ನಮಗೆ ವಿಷಯ ತಿಳಿದ ನಂತರ 160 ಜನರಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಮಾಡಿದ್ದೇವೆ. ಈ ನಡುವೆ ಸೌದಿ ಸರ್ಕಾರಕ್ಕೆ ಯಾತ್ರಾರ್ಥಿಗಳು ದೂರು ನೀಡಿದ್ದಾರೆ. ಅವರಿಗೆ ವಂಚನೆ ಮಾಡಿರುವ ಟ್ರಾವೆಲ್ ಏಜೆನ್ಸಿ ಮುಖ್ಯಸ್ಥ ಅಶ್ರಫ್ ಸಖಾಫಿ ವಿರುದ್ಧ ಇಲ್ಲಿನ ಸರ್ಕಾರ ಕ್ರಮಕೈಗೊಳ್ಳುತ್ತದೆ. ಒಂದು ವೇಳೆ ಅವರು ಸೌದಿಯಲ್ಲಿ ಇರದೆ ಇದ್ದರೆ, ಅವರ ಸಂಸ್ಥೆಯ ಮೇಲೆ ಸರ್ಕಾರ ಕ್ರಮಕೈಗೊಳ್ಳಲಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಈಶ್ವರ ಅಲ್ಲಾ ತೇರೋ ನಾಮ್ ವಿವಾದ: ಈ ಭಜನೆ ಹಾಡುವುದನ್ನು ಮುಂದುವರಿಸುತ್ತೇನೆ; ಜನಪದ ಗಾಯಕಿ ದೇವಿ

ಈಶ್ವರ ಅಲ್ಲಾ ತೇರೋ ನಾಮ್ ವಿವಾದ: ಈ ಭಜನೆ ಹಾಡುವುದನ್ನು ಮುಂದುವರಿಸುತ್ತೇನೆ; ಜನಪದ ಗಾಯಕಿ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು| ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...