ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಲಕ್ನೋದ ಅಧಿಕೃತ ನಿವಾಸದ ಅಡಿಯಲ್ಲಿ ಶಿವಲಿಂಗವಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಹೇಳಿದ್ದು, ”ಅಲ್ಲಿಯೂ ಅಗೆಯಿರಿ” ಎಂದು ತಿಳಿಸಿದ್ದಾರೆ. ಸಿಎಂ ಆದಿತ್ಯನಾಥ್
ಸಂಭಾಲ್ ಸೇರಿದಂತೆ ಹಲವೆಡೆ ನಡೆಸಲಾಗಿರುವ ಸಮೀಕ್ಷೆಯ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ಬಿಜೆಪಿ ಸರ್ಕಾರವು ತನ್ನ ವೈಫಲ್ಯವನ್ನು ಮರೆಮಾಚಲು ಮತ್ತು ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ನಿಟ್ಟಿನಲ್ಲಿ ವಿವಿಧ ಸ್ಥಳಗಳಲ್ಲಿ ಭೂಮಿಯನ್ನು ಅಗೆಯುತ್ತಿದೆ” ಎಂದು ಆರೋಪಿಸಿದ್ದಾರೆ. ಸಿಎಂ ಆದಿತ್ಯನಾಥ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಮುಖ್ಯಮಂತ್ರಿಯವರ ನಿವಾಸದ ಕೆಳಗೆ ಶಿವಲಿಂಗವಿದೆ ಎಂದು ನಾವು ನಂಬುತ್ತೇವೆ. ಅಲ್ಲಿಯ ಭೂಮಿಯನ್ನು ಅಗೆಯಿರಿ” ಎಂದು ಎಂದು ಅಖಿಲೇಶ್ ಯಾದವ್ ಹೇಳಿದ್ದು, “ಬುಲ್ಡೋಜರ್ಗಳಿಂದ ಅಮಾಯಕರ ಮನೆಗಳನ್ನು ಅಕ್ರಮವಾಗಿ ಕೆಡವಲಾಗುತ್ತಿದೆ. ಹಾಗೆಯೇ, ಇದು ವಿನಾಶವಾಗಿದ್ದು, ಅಭಿವೃದ್ಧಿಯಲ್ಲ. ಮುಖ್ಯಮಂತ್ರಿಯ ಕೈಯಲ್ಲಿ ಅಭಿವೃದ್ಧಿಯ ರೇಖೆಯಿಲ್ಲ, ವಿನಾಶದ ರೇಖೆ ಇದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಖಿಲೇಶ್ ಯಾದವ್ ಅವರ ಹೇಳಿಕೆಯಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ , “ಸಂಭಾಲ್ನಲ್ಲಿ ಭೂಶೋಧನೆ ಮಾಡುವುದಿಂದ ಅವರಿಗೆ ಏನು ಸಮಸ್ಯೆ ಇದೆ” ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಮಾತನಾಡಿ, ಅಖಿಲೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಓಟ್ಬ್ಯಾಂಕ್ಗಾಗಿ ಶಿವಲಿಂಗದ ಅಪಹಾಸ್ಯ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.
ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು
ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು


