Homeಅಂತರಾಷ್ಟ್ರೀಯಅಫ್ಘಾನಿಸ್ತಾನ | ಮಹಿಳೆಯನ್ನು ನೇಮಿಸಿಕೊಳ್ಳುವ ಎನ್‌ಜಿಒಗಳ ಸ್ಥಗಿತ - ತಾಲಿಬಾನ್

ಅಫ್ಘಾನಿಸ್ತಾನ | ಮಹಿಳೆಯನ್ನು ನೇಮಿಸಿಕೊಳ್ಳುವ ಎನ್‌ಜಿಒಗಳ ಸ್ಥಗಿತ – ತಾಲಿಬಾನ್

- Advertisement -
- Advertisement -

ಮಹಿಳೆಯರನ್ನು ನೇಮಿಸಿಕೊಳ್ಳುವ ರಾಷ್ಟ್ರೀಯ ಮತ್ತು ವಿದೇಶಿ ಸರ್ಕಾರೇತರ ಸಂಸ್ಥೆ(ಎನ್‌ಜಿಒ)ಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ಭಾನುವಾರ ಘೋಷಿಸಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಡಿಸೆಂಬರ್ 2022ರಲ್ಲಿ ತಾಲಿಬಾನ್ ಆಡಳಿತವು, ಮಹಿಳೆಯರು ಸರಿಯಾಗಿ ಹಿಜಾಬ್ ಧರಿಸುವುದಿಲ್ಲ ಎಂದು ಆರೋಪಿಸಿ ಅಫ್ಘಾನ್ ಮಹಿಳೆಯರನ್ನು ಉದ್ಯೋಗದಿಂದ ತೆಗೆದುಹಾಕಬೇಕು ಎಂದು ಇಂತಹ ಸಂಸ್ಥೆಗಳಿಗೆ ಆದೇಶಿಸಿತ್ತು. ಇದಾಗಿ ಎರಡು ವರ್ಷಗಳ ನಂತರ ಅಂತಹ ಸಂಸ್ಥೆಗಳನ್ನು ನಿಲ್ಲಿಸುವುದಾಗಿ ಸರ್ಕಾರವು ಆದೇಶಿಸಿದೆ. ಅಫ್ಘಾನಿಸ್ತಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭಾನುವಾರ ಎಕ್ಸ್‌ನಲ್ಲಿ ನೀಡಲಾಗಿರುವ ನೋಟೀಸ್‌ನಲ್ಲಿ, ಸರ್ಕಾರೇತರ ಸಂಸ್ಥೆಗಳು ನಡೆಸುವ ಎಲ್ಲಾ ಚಟುವಟಿಕೆಗಳನ್ನು ನಿಯಂತ್ರಿಸುವ ಜವಾಬ್ದಾರಿಯ ಬಗ್ಗೆ ದೇಶದ ಆರ್ಥಿಕ ಸಚಿವಾಲಯ ತಿಳಿಸಿದೆ. ತಾಲಿಬಾನ್ ಸರ್ಕಾರವು ತನ್ನ ನಿಯಂತ್ರಣದಲ್ಲಿಲ್ಲದ ಸಂಸ್ಥೆಗಳಲ್ಲಿ ಮಹಿಳಾ ಕಾರ್ಮಿಕರ ಮೇಲೆ ನಿಷೇಧ ಹೇರಲು ಮತ್ತೊಮ್ಮೆ ಆದೇಶಿಸುತ್ತಿದೆ ಎಂದು ಅದು ಹೇಳಿದೆ.

“ಸಹಕಾರದ ಕೊರತೆಯ ಕಾರಣದಿಂದ ಅಂತಹ ಸಂಸ್ಥೆಯ ಎಲ್ಲಾ ಚಟುವಟಿಕೆಗಳನ್ನು ರದ್ದುಗೊಳಿಸಲಾಗುತ್ತದೆ ಮತ್ತು ಸಚಿವಾಲಯದಿಂದ ನೀಡಲಾದ ಸಂಸ್ಥೆಯ ಚಟುವಟಿಕೆ ಪರವಾನಗಿಯನ್ನು ಸಹ ರದ್ದುಗೊಳಿಸಲಾಗುತ್ತದೆ” ಎಂದು ಅದು ಹೇಳಿದೆ. ಅಫ್ಘಾನಿಸ್ತಾನ

ಸೆಪ್ಟೆಂಬರ್ 2021 ರಲ್ಲಿ, ಇಸ್ಲಾಮಿಕ್ ಕಾನೂನನ್ನು ಅನುಸರಿಸಲಾಗುತ್ತಿಲ್ಲ ಎಂದು ಆರೋಪಿಸಿ ಆರನೇ ತರಗತಿಗಿಂತ ಮೇಲೆ ಹುಡುಗಿಯರಿಗೆ ಶಿಕ್ಷಣವನ್ನು ನಿಷೇಧಿಸಿತ್ತು. ತಾಲಿಬಾನ್ ಸಂಘಟನೆಯು ದೇಶವನ್ನು ವಶಕ್ಕೆ ಪಡೆದುಕೊಂಡ ಒಂದು ತಿಂಗಳ ನಂತರ ಈ ಆದೇಶ ಮಾಡಿತ್ತು. ಅಷ್ಟೆ ಅಲ್ಲದೆ, ಇತರ ಹಲವಾರು ಉದ್ಯೋಗಗಳು ಮತ್ತು ಸಾರ್ವಜನಿಕ ಸ್ಥಳಗಳಿಂದ ಮಹಿಳೆಯರನ್ನು ತಾಲಿಬಾನ್ ನಿರ್ಬಂಧಿಸಿದೆ.

ಮಹಿಳೆ ಕುಳಿತುಕೊಳ್ಳುವ ಅಥವಾ ನಿಲ್ಲುವ ಸ್ಥಳಗಳಲ್ಲಿ ಹೊರಗೆ ಕಾಣುವ ಕಟ್ಟಡಗಳಿಗೆ ಕಿಟಕಿಗಳನ್ನು ಹೊಂದಿರಬಾರದು ಎಂದು ತಾಲಿಬಾನ್ ನಾಯಕ ಹಿಬತುಲ್ಲಾ ಅಖುಂದ್ಜಾದಾ ಶನಿವಾರ ಘೋಷಿಸಿದ್ದರು. ಹೊಸ ಹೊಸ ಕಟ್ಟಡಗಳು ಮತ್ತು ಅಸ್ತಿತ್ವದಲ್ಲಿರುವ ಕಟ್ಟಡಗಳಿಗೆ ಆದೇಶವು ಅನ್ವಯಿಸುತ್ತದೆ ಎಂದು ಅವರು ಹೇಳಿದ್ದಾರೆ.

ತಾಲಿಬಾನ್ ಸರ್ಕಾರದ ಜೊತೆಗೆ ಜಾಗತಿಕವಾಗಿ ಹಲವಾರು ಸರ್ಕಾರಗಳು ತೊಡಗಿಸಿಕೊಂಡಿದ್ದರೂ ಸಹ, ಯಾವುದೇ ದೇಶವು ಅದನ್ನು ಇನ್ನೂ ಗುರುತಿಸಲಾಗಿಲ್ಲ.

ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

https://naanugauri.com/travel-agency-fraud-medina-paradadu-coast-umrah-pilgrim/

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....