Homeಚಳವಳಿಬಿಹಾರ | ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಂದ ಮುಖ್ಯ ಕಾರ್ಯದರ್ಶಿಯ ಭೇಟಿ - ಸಭೆ ವಿಫಲ

ಬಿಹಾರ | ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಂದ ಮುಖ್ಯ ಕಾರ್ಯದರ್ಶಿಯ ಭೇಟಿ – ಸಭೆ ವಿಫಲ

- Advertisement -
- Advertisement -

ಬಿಹಾರದ ಎಲ್ಲಾ 912 ಕೇಂದ್ರಗಳಲ್ಲಿ ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ನಡೆಸಿದ ಪ್ರಾಥಮಿಕ ಪರೀಕ್ಷೆಯನ್ನು ಮರುಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಬಿಪಿಎಸ್‌ಸಿ ಅಭ್ಯರ್ಥಿಗಳ ನಿಯೋಗವು ಸೋಮವಾರ ಬಿಹಾರದ ಮುಖ್ಯ ಕಾರ್ಯದರ್ಶಿ ಅಮೃತ್ ಲಾಲ್ ಮೀನಾ ಅವರನ್ನು ಭೇಟಿ ಮಾಡಿದೆ. ಆದರೆ ಸಭೆಯು ಫಲಪ್ರದವಾಗಿಲ್ಲ ಎಂದು ವರದಿಯಾಗಿದೆ.

ಡಿಸೆಂಬರ್ 18 ರಿಂದ ನೂರಾರು ಅಭ್ಯರ್ಥಿಗಳು ತಮ್ಮ ಬೇಡಿಕೆಯನ್ನು ಮುಂದಿಟ್ಟು ಆಂದೋಲನ ನಡೆಸುತ್ತಿದ್ದಾರೆ. ಮುಖ್ಯ ಕಾರ್ಯದರ್ಶಿ ಮೀನಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ವಿದ್ಯಾರ್ಥಿಗಳು, ತಮ್ಮ ಬೇಡಿಕೆಗಳನ್ನು ಪರಿಹರಿಸಲು ಸರ್ಕಾರ ಯಾವುದೇ ದೃಢವಾದ ಭರವಸೆ ಅಥವಾ ಕಾಲವಕಾಶವನ್ನು ನೀಡಿಲ್ಲ ಎಂದು ಹೇಳಿದ್ದಾರೆ. ಬಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರತಿಭಟನಾ ನಿರತ ವಿದ್ಯಾರ್ಥಿಗಳು, ಮರು ಪರೀಕ್ಷೆ ನಡೆಸುವಂತೆ, ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ಆದೇಶಿಸುವಂತೆ ಮತ್ತು ಹನ್ನೆರಡು ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುವಂತೆ ಆಗ್ರಹಿಸುತ್ತಿದ್ದಾರೆ.

ಈ ನಡುವೆ, ಜನ್ ಸ್ವಾರಾಜ್ ಪಾರ್ಟಿ (ಜೆಎಸ್‌ಪಿ) ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರಕ್ಕೆ 48 ಗಂಟೆಗಳ ಸಮಯಾವಕಾಶ ನೀಡಿದ್ದು, ಇಲ್ಲದಿದ್ದರೆ ವಿದ್ಯಾರ್ಥಿಗಳು ಹೆಚ್ಚಿನ ತೀವ್ರತೆಯೊಂದಿಗೆ ಪ್ರತಿಭಟನೆಯನ್ನು ಪುನರಾರಂಭಿಸುತ್ತಾರೆ ಎಂದು ಹೇಳಿದ್ದಾರೆ.

ಖಾಲಿ ಇರುವ ಹುದ್ದೆಗಳಿಗೆ ಬಿಪಿಎಸ್‌ಸಿ ನಡೆಸುವ ಪರೀಕ್ಷೆಯ ಮೂಲಕ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿರುವುದು ಗೊತ್ತಾಗಿದೆ ಎಂದು ಕಿಶೋರ್‌ ಬೆಳಗ್ಗೆ ಆರೋಪಿಸಿದ್ದಾರೆ. ಜಲಫಿರಂಗಿಗಳು, ಪೊಲೀಸರು ಮತ್ತು ಲಾಠಿ ಪ್ರಹಾರವನ್ನು ಎದುರಿಸಿ ವಿದ್ಯಾರ್ಥಿಗಳು ಕೊರೆಯುವ ಚಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇನ್ನೂ ಮೌನ ವಹಿಸಿರುವ ಬಗ್ಗೆ ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಅಮೃತ್ ಲಾಲ್ ಮೀನಾ ಅವರನ್ನು ಭೇಟಿ ಮಾಡಿದ ನಿಯೋಗದ ಭಾಗವಾಗಿದ್ದ ವಿದ್ಯಾರ್ಥಿ ಮುಖಂಡರೊಬ್ಬರು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯ ಕಾರ್ಯದರ್ಶಿ ತಮ್ಮ ಬೇಡಿಕೆಗಳನ್ನು ಆಲಿಸಿದರು ಆದರೆ ಯಾವುದೇ ಖಚಿತ ಭರವಸೆ ನೀಡಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

https://naanugauri.com/travel-agency-fraud-medina-paradadu-coast-umrah-pilgrim/

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...