Homeಮುಖಪುಟಸಂಭಾಲ್ ಹಿಂಸಾಚಾರ ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ಎಸ್ಪಿ ನಿಯೋಗ: 5 ಲಕ್ಷ ರೂ. ಪರಿಹಾರ...

ಸಂಭಾಲ್ ಹಿಂಸಾಚಾರ ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ಎಸ್ಪಿ ನಿಯೋಗ: 5 ಲಕ್ಷ ರೂ. ಪರಿಹಾರ ಘೋಷಣೆ

- Advertisement -
- Advertisement -

ಸಂಭಾಲ್: ಇತ್ತೀಚಿಗೆ ಶಾಹಿ ಜಾಮಾ ಮಸೀದಿ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳನ್ನು  ಸಮಾಜವಾದಿ ಪಕ್ಷದ (ಎಸ್‌ಪಿ) ಹನ್ನೊಂದು ಸದಸ್ಯರ ನಿಯೋಗವು ಸೋಮವಾರ ಸಂಭಾಲ್‌ಗೆ ಭೇಟಿ ನೀಡಿತು. ನಿಯೋಗವು ನೊಂದ ಕುಟುಂಬಗಳಿಗೆ ಸಂತಾಪ ಸೂಚಿಸಿ, ಚೆಕ್ ರೂಪದಲ್ಲಿ 5 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಿತು.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ಅವರು, ಈ ಸರಕಾರವು ಮುಸ್ಲಿಂ ಸಮುದಾಯದ ಬಗ್ಗೆ ಸಂವೇದನಾಶೀಲತೆ ಹೊಂದಿಲ್ಲ. ಅದು ಮುಸ್ಲಿಮರ ಬಗ್ಗೆ ಅದಕ್ಕೆ ಸಹಾನುಭೂತಿ ಇಲ್ಲ. ರಾಜಕೀಯ ಲಾಭಕ್ಕಾಗಿ ಹಿಂದೂ-ಮುಸ್ಲಿಂರ ನಡುವೆ ದ್ವೇಷವನ್ನು ಬೆಳೆಸುವುದು, ಕೋಮುವಾದದಲ್ಲಿ ಜನರನ್ನು ವಿಭಜಿಸುವುದು ಅದರ ಅಜೆಂಡಾವಾಗಿದೆ ಎಂದು  ಉತ್ತರಪ್ರದೇಶ ಸರ್ಕಾರದ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದರು

ಸಂಭಾಲ್ ಶಾಹಿ ಜಾಮಾ ಮಸೀದಿ ಬಳಿ ಪೊಲೀಸ್ ಪೋಸ್ಟ್ ನಿರ್ಮಾಣಕ್ಕೂ ಪಾಂಡೆ ಆಕ್ಷೇಪ ವ್ಯಕ್ತಪಡಿಸಿದರು. ಸೂಕ್ತ ತನಿಖೆಯಾಗಲಿ, ಸೂಕ್ತ ಪರಿಹಾರ ನೀಡದೇ ಖಾಸಗಿ ಜಮೀನು ಒತ್ತುವರಿ ಮಾಡಿಕೊಂಡಿರುವ ಆಡಳಿತದ ಕಾನೂನುಬದ್ಧತೆ ಏನು ಎಂದು ಪ್ರಶ್ನಿಸಿದರು.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಅಡಿಯಲ್ಲಿ ಮಸೀದಿಯ ಪಾರಂಪರಿಕ ಸ್ಥಾನಮಾನವನ್ನು ಸರ್ವೆಯ ಮೂಲಕ ಸಮೀಕ್ಷೆ ನಡೆಸುವ ಕಾನೂನುಬದ್ಧತೆಯನ್ನು ಅವರು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಚುನಾವಣಾ ದುರುಪಯೋಗದ ಬಗ್ಗೆ ಆರೋಪಿಸಿರುವ ಪಾಂಡೆ ಅವರು, ನವೆಂಬರ್ 20 ರಂದು ನಡೆದ ಉಪಚುನಾವಣೆಯಲ್ಲಿ ಮತದಾರರನ್ನು ಬೆದರಿಸುವ ಪುರಾವೆಗಳಿವೆ ಎಂದು ಹೇಳಿದ್ದಾರೆ.

ಪೊಲೀಸ್ ಅಧಿಕಾರಿಗಳನ್ನು ಮತದಾರರಿಗೆ ಬೆದರಿಕೆ ಹಾಕಲು ಮತ್ತು ಮತದಾನ ಮಾಡದಂತೆ ಅವರನ್ನು ನಿರುತ್ಸಾಹಗೊಳಿಸಲು ಬಳಸಲಾಗುತ್ತಿತ್ತು. ಈ ಹೇಳಿಕೆಯನ್ನು ಸಾಬೀತುಪಡಿಸಲು ನನ್ನ ಬಳಿ ಮತದಾನದ ದಿನದ ದಾಖಲೆಗಳಿವೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿಯವರ ತವರು ಗೋರಖ್‌ಪುರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದವರಾಗಿದ್ದರೂ, ನಗರವು ದೈನಂದಿನ ಗುಂಡಿನ ಸಪ್ಪಳದ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ನಿರುದ್ಯೋಗ ಮತ್ತು ಹಣದುಬ್ಬರ ಅನಿಯಂತ್ರಿತವಾಗಿ ಏರುತ್ತಿದೆ. ಈ ಒತ್ತುವರಿ ಸಮಸ್ಯೆಗಳನ್ನು ಪರಿಹರಿಸುವ ಬದಲು ಸರ್ಕಾರವು ಸುಳ್ಳು ಪ್ರಚಾರದ ಮೂಲಕ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯುವಲ್ಲಿ ನಿರತವಾಗಿದೆ ಎಂದು ಪಾಂಡೆ ತಿಳಿಸಿದ್ದಾರೆ.

ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ಮಾತನಾಡಿ,  ಪೊಲೀಸರು ಆಧಾರರಹಿತ ಊಹೆಗಳ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಪೊಲೀಸರು ಜನರ ಬಳಿ ಬಂದೂಕುಗಳಿವೆ ಎಂದು ಯಾವ ಪುರಾವೆಗಳ ಆಧಾರದ ಮೇಲೆ ಕಂಡುಕೊಂಡಿದ್ದಾರೆ? ಹಿಂಸಾಚಾರವನ್ನು ಪ್ರಚೋದಿಸುವುದು ನಮ್ಮ ಉದ್ದೇಶವಾಗಿದ್ದರೆ, ಸಮೀಕ್ಷೆಯ ಮೊದಲ ದಿನ ಏಕೆ ಗಲಭೆಗಳು ಸಂಭವಿಸಲಿಲ್ಲ? ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ನಮಗ ವಿಶ್ವಾಸವಿದೆ. ನ್ಯಾಯವು ಮೇಲುಗೈ ಸಾಧಿಸುತ್ತದೆ ಎಂದು ಅವರು ಹೇಳಿದರು.

ತನ್ನ ಧ್ವನಿಯನ್ನು ಹತ್ತಿಕ್ಕಲು ತನ್ನ ವಿರುದ್ಧ ವಿದ್ಯುತ್ ಕಳ್ಳತನದ ಸುಳ್ಳು ಪ್ರಕರಣವನ್ನು ದಾಖಲಿಸಿ, ತನ್ನನ್ನು ವೈಯಕ್ತಿಕವಾಗಿ ಗುರಿ ಮಾಡಲಾಗುತ್ತಿದೆ ಎಂದು ಬಾರ್ಕ್ ಆರೋಪಿಸಿದ್ದಾರೆ.

ನಿಯೋಗದಲ್ಲಿದ್ದ ಮತ್ತೊಬ್ಬ ಎಸ್‌ಪಿ ನಾಯಕ ಲಾಲ್ ಬಿಹಾರಿ ಯಾದವ್ ಮಾತನಾಡಿದರು. ಅವರು ಹಿಂಸಾಚಾರವನ್ನು ಪೊಲೀಸರು ನಿಭಾಯಿಸುತ್ತಿರುವುದನ್ನು ಪ್ರಶ್ನಿಸಿದ್ದಾರೆ. “ಪೊಲೀಸರು ತಮಗೆ ಇಷ್ಟ ಬಂದಂತೆ ಜನರಿಗೆ ಕಿರುಕುಳ ನೀಡಿದ್ದಾರೆ. ಸಂಭಾಲ್ ಹಿಂಸಾಚಾರದ ಐದು ಬಲಿಪಶುಗಳ ಹತ್ಯೆಗೆ ಸಂಬಂಧಿಸಿ ಪೊಲೀಸರು ಏಕೆ ಪ್ರಕರಣವನ್ನು ದಾಖಲಿಸಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಯಾದವ್ ಅವರು ಸ್ಥಳೀಯ ಮುಸ್ಲಿಂ ಸಮುದಾಯದ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದು, “ಜನರು ಎಸೆದ ಇಟ್ಟಿಗೆಗಳು ಮತ್ತು ಕಲ್ಲುಗಳು ಆತ್ಮರಕ್ಷಣೆಯ ಕೃತ್ಯಗಳಾಗಿವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಭಾಲ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಎಸ್‌ಪಿ ನಿಯೋಗವು ಈ ಭೇಟಿ ನೀಡಿದೆ. ಸಂಭಾಲ್‌ನಲ್ಲಿ ನವೆಂಬರ್ 24ರಂದು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ತಂಡವು ಮೊಘಲರ ಕಾಲದ ಮಸೀದಿಯನ್ನು ಸಮೀಕ್ಷೆ ನಡೆಸಲು ಬಂದಾಗ ಹಿಂಸಾಚಾರ ಸ್ಫೋಟಗೊಂಡಿತು. ಈ ಹಿಂಸಾಚಾರದಲ್ಲಿ ಪೊಲೀಸರ ಗುಂಡಿಗೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟು 50 ಮಂದಿಯನ್ನು ಬಂಧಿಸಲಾಗಿದೆ.

ಜುಬೇರ್ ವಿರುದ್ಧ ಯತಿ ನರಸಿಂಹಾನಂದ ದೂರು: ಹೇಳಿಕೆ ದಾಖಲಿಸಿದ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಸ್‌ಬುಕ್‌ನಲ್ಲಿ ಅಂಬೇಡ್ಕರ್‌ ಅವಹೇಳನ: ಕಠಿಣ ಕ್ರಮಕ್ಕೆ ದಲಿತ ಸೇನೆ ಮಹಿಳಾ ಘಟಕ ಆಗ್ರಹ: ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಕೆ 

ಬೆಂಗಳೂರು: ಫೇಸ್‌ಬುಕ್‌ನಲ್ಲಿ 15ಕ್ಕೂ ಹೆಚ್ಚು ನಕಲಿ ಖಾತೆಗಳನ್ನು ಸೃಷ್ಟಿಸಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಬರಹಗಳನ್ನು ಪೋಸ್ಟ್ ಮಾಡುತ್ತಾ, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಸಮಾಜದಲ್ಲಿ ದ್ವೇಷ ಮತ್ತು ಗಲಭೆ ಹುಟ್ಟುಹಾಕುವ ಪ್ರಯತ್ನ...

ರಾಜ್ಯಪಾಲರ ನಡೆ ಸಂಪೂರ್ಣ ಅಸಂವಿಧಾನಿಕ; ಕರ್ನಾಟಕಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ: ಬಿ.ಕೆ. ಹರಿಪ್ರಸಾದ್

'ಜಂಟಿ ಸದನಳನ್ನು ಉದ್ದೇಶಿಸಿ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆ ಸಂಪೂರ್ಣ ಅಸಂವಿಧಾನಿಕ; ಅವರು ಕರ್ನಾಟಕದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ' ಎಂದು ವಿಧಾನಪರಿಷತ್ ಸದಸ್ಯ...

ವಿಶೇಷ ಅಧಿವೇಶನ : ಎರಡೇ ಸಾಲುಗಳ ಭಾಷಣ ಮಾಡಿ ಹೊರ ನಡೆದ ರಾಜ್ಯಪಾಲ; ಕಾಂಗ್ರೆಸ್ ಶಾಸಕರಿಂದ ಪ್ರತಿಭಟನೆ

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಗುರುವಾರ (ಜ.22) ಭಾರೀ ಹೈಡ್ರಾಮ ನಡೆಯಿತು. ರಾಜ್ಯಪಾಲರು ಸರ್ಕಾರ ಬರೆದುಕೊಟ್ಟ ಭಾಷಣ ಓದದೆ, ತಮ್ಮದೇ ಆದ ಕೇವಲ ಎರಡೇ ಸಾಲಿನ ಭಾಷಣ ಓದಿ ಹೊರ ನಡೆದರು. ಇದಕ್ಕೆ ಆಡಳಿತ...

‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

"ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು" ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ : ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಎಡ ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ. ಬುಧವಾರ (ಜ.21) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಎಐಎಸ್ಎಫ್,...

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿರಾಕರಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಜನವರಿ 22 ರಿಂದ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬುಧವಾರ ನಿರಾಕರಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಗೆಹ್ಲೋಟ್ ಅವರೊಂದಿಗೆ...

ಒಡಿಶಾ| ಪಾದ್ರಿ ಮೇಲೆ ಗುಂಪು ಹಲ್ಲೆ ನಡೆಸಿ ಅವಮಾನ; ಎರಡು ವಾರವಾದರೂ ಆರೋಪಿಗಳನ್ನು ಬಂಧಿಸದ ಪೊಲೀಸರು

ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಬಜರಂಗದಳ ಸದಸ್ಯರಿಂದ ಕ್ರೂರವಾಗಿ ಹಲ್ಲೆಗೊಳಗಾಗಿ ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾದ ಕ್ರಿಶ್ಚಿಯನ್ ಪಾದ್ರಿಯೊಬ್ಬರು, ತನ್ನ ಮೇಲೆ ದಾಳಿ ಮಾಡಿದವರನ್ನು ಕ್ಷಮಿಸಲು ನಿರ್ಧರಿಸಿದ್ದಾರೆ. ಘಟನೆ ನಡೆದು ಎರಡು ವಾರಗಳಿಗಿಂತ ಹೆಚ್ಚು ಕಾಲ...

ಕೆನಡಾ: ಸುಲಿಗೆ ಪ್ರಕರಣಗಳಲ್ಲಿ 111 ವಿದೇಶಿ ಪ್ರಜೆಗಳ ಪಾತ್ರದ ಬಗ್ಗೆ ತನಿಖೆ: ಹೆಚ್ಚಿನವರು ಪಂಜಾಬ್ ನಿಂದ ಬಂದ ಭಾರತೀಯರೆಂದು ವರದಿ  

ಚಂಡಿಗ್ರಾ: ಬ್ರಿಟಿಷ್ ಕೊಲಂಬಿಯಾ ಸುಲಿಗೆ ಕಾರ್ಯಪಡೆಯು ಕೆಳ ಮೇನ್‌ಲ್ಯಾಂಡ್‌ನಲ್ಲಿನ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಂಕಿಸಲಾಗಿರುವ 111 ವಿದೇಶಿ ಪ್ರಜೆಗಳ ತನಿಖೆ ನಡೆಸುತ್ತಿದೆ. ಇದರಲ್ಲಿ ಹೆಚ್ಚಿನವರು ಪಂಜಾಬ್‌ನಿಂದ ಬಂದಿರುವ ಭಾರತೀಯ...

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಕೇರಳದ ಕೋಝಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ. 42 ವರ್ಷದ ಸೇಲ್ಸ್...

ಪ್ರಿಯಕರನೊಂದಿಗೆ ವಾಸಿಸಲು ‘ಸುಳ್ಳು ಗೋಹತ್ಯೆ ಪ್ರಕರಣ’ದಲ್ಲಿ ಗಂಡನನ್ನು ಸಿಲುಕಿಸಿದ ಪತ್ನಿ

ತನ್ನ ಪ್ರಿಯಕರನೊಂದಿಗೆ ವಾಸಿಸಲು ವಿವಾಹಿತ ಮಹಿಳೆಯೊಬ್ಬಳು ಮಾಡಿದ ದುಷ್ಕೃತ್ಯವೊಂದರಲ್ಲಿ ಆಕೆಯ ಪತಿ ಸುಳ್ಳು ಗೋಹತ್ಯೆ ಪ್ರಕರಣಗಳಲ್ಲಿ ಎರಡು ಬಾರಿ ಪೊಲೀಸರಿಂದ ಬಂಧನಕ್ಕೆ ಒಳಗಾಗಬೇಕಾದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಇದೇ ಪ್ರಕರಣದ...