Homeಮುಖಪುಟಸಂಭಾಲ್ ಹಿಂಸಾಚಾರ ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ಎಸ್ಪಿ ನಿಯೋಗ: 5 ಲಕ್ಷ ರೂ. ಪರಿಹಾರ...

ಸಂಭಾಲ್ ಹಿಂಸಾಚಾರ ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ಎಸ್ಪಿ ನಿಯೋಗ: 5 ಲಕ್ಷ ರೂ. ಪರಿಹಾರ ಘೋಷಣೆ

- Advertisement -
- Advertisement -

ಸಂಭಾಲ್: ಇತ್ತೀಚಿಗೆ ಶಾಹಿ ಜಾಮಾ ಮಸೀದಿ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳನ್ನು  ಸಮಾಜವಾದಿ ಪಕ್ಷದ (ಎಸ್‌ಪಿ) ಹನ್ನೊಂದು ಸದಸ್ಯರ ನಿಯೋಗವು ಸೋಮವಾರ ಸಂಭಾಲ್‌ಗೆ ಭೇಟಿ ನೀಡಿತು. ನಿಯೋಗವು ನೊಂದ ಕುಟುಂಬಗಳಿಗೆ ಸಂತಾಪ ಸೂಚಿಸಿ, ಚೆಕ್ ರೂಪದಲ್ಲಿ 5 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಿತು.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ಅವರು, ಈ ಸರಕಾರವು ಮುಸ್ಲಿಂ ಸಮುದಾಯದ ಬಗ್ಗೆ ಸಂವೇದನಾಶೀಲತೆ ಹೊಂದಿಲ್ಲ. ಅದು ಮುಸ್ಲಿಮರ ಬಗ್ಗೆ ಅದಕ್ಕೆ ಸಹಾನುಭೂತಿ ಇಲ್ಲ. ರಾಜಕೀಯ ಲಾಭಕ್ಕಾಗಿ ಹಿಂದೂ-ಮುಸ್ಲಿಂರ ನಡುವೆ ದ್ವೇಷವನ್ನು ಬೆಳೆಸುವುದು, ಕೋಮುವಾದದಲ್ಲಿ ಜನರನ್ನು ವಿಭಜಿಸುವುದು ಅದರ ಅಜೆಂಡಾವಾಗಿದೆ ಎಂದು  ಉತ್ತರಪ್ರದೇಶ ಸರ್ಕಾರದ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದರು

ಸಂಭಾಲ್ ಶಾಹಿ ಜಾಮಾ ಮಸೀದಿ ಬಳಿ ಪೊಲೀಸ್ ಪೋಸ್ಟ್ ನಿರ್ಮಾಣಕ್ಕೂ ಪಾಂಡೆ ಆಕ್ಷೇಪ ವ್ಯಕ್ತಪಡಿಸಿದರು. ಸೂಕ್ತ ತನಿಖೆಯಾಗಲಿ, ಸೂಕ್ತ ಪರಿಹಾರ ನೀಡದೇ ಖಾಸಗಿ ಜಮೀನು ಒತ್ತುವರಿ ಮಾಡಿಕೊಂಡಿರುವ ಆಡಳಿತದ ಕಾನೂನುಬದ್ಧತೆ ಏನು ಎಂದು ಪ್ರಶ್ನಿಸಿದರು.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಅಡಿಯಲ್ಲಿ ಮಸೀದಿಯ ಪಾರಂಪರಿಕ ಸ್ಥಾನಮಾನವನ್ನು ಸರ್ವೆಯ ಮೂಲಕ ಸಮೀಕ್ಷೆ ನಡೆಸುವ ಕಾನೂನುಬದ್ಧತೆಯನ್ನು ಅವರು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಚುನಾವಣಾ ದುರುಪಯೋಗದ ಬಗ್ಗೆ ಆರೋಪಿಸಿರುವ ಪಾಂಡೆ ಅವರು, ನವೆಂಬರ್ 20 ರಂದು ನಡೆದ ಉಪಚುನಾವಣೆಯಲ್ಲಿ ಮತದಾರರನ್ನು ಬೆದರಿಸುವ ಪುರಾವೆಗಳಿವೆ ಎಂದು ಹೇಳಿದ್ದಾರೆ.

ಪೊಲೀಸ್ ಅಧಿಕಾರಿಗಳನ್ನು ಮತದಾರರಿಗೆ ಬೆದರಿಕೆ ಹಾಕಲು ಮತ್ತು ಮತದಾನ ಮಾಡದಂತೆ ಅವರನ್ನು ನಿರುತ್ಸಾಹಗೊಳಿಸಲು ಬಳಸಲಾಗುತ್ತಿತ್ತು. ಈ ಹೇಳಿಕೆಯನ್ನು ಸಾಬೀತುಪಡಿಸಲು ನನ್ನ ಬಳಿ ಮತದಾನದ ದಿನದ ದಾಖಲೆಗಳಿವೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿಯವರ ತವರು ಗೋರಖ್‌ಪುರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದವರಾಗಿದ್ದರೂ, ನಗರವು ದೈನಂದಿನ ಗುಂಡಿನ ಸಪ್ಪಳದ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ನಿರುದ್ಯೋಗ ಮತ್ತು ಹಣದುಬ್ಬರ ಅನಿಯಂತ್ರಿತವಾಗಿ ಏರುತ್ತಿದೆ. ಈ ಒತ್ತುವರಿ ಸಮಸ್ಯೆಗಳನ್ನು ಪರಿಹರಿಸುವ ಬದಲು ಸರ್ಕಾರವು ಸುಳ್ಳು ಪ್ರಚಾರದ ಮೂಲಕ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯುವಲ್ಲಿ ನಿರತವಾಗಿದೆ ಎಂದು ಪಾಂಡೆ ತಿಳಿಸಿದ್ದಾರೆ.

ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ಮಾತನಾಡಿ,  ಪೊಲೀಸರು ಆಧಾರರಹಿತ ಊಹೆಗಳ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಪೊಲೀಸರು ಜನರ ಬಳಿ ಬಂದೂಕುಗಳಿವೆ ಎಂದು ಯಾವ ಪುರಾವೆಗಳ ಆಧಾರದ ಮೇಲೆ ಕಂಡುಕೊಂಡಿದ್ದಾರೆ? ಹಿಂಸಾಚಾರವನ್ನು ಪ್ರಚೋದಿಸುವುದು ನಮ್ಮ ಉದ್ದೇಶವಾಗಿದ್ದರೆ, ಸಮೀಕ್ಷೆಯ ಮೊದಲ ದಿನ ಏಕೆ ಗಲಭೆಗಳು ಸಂಭವಿಸಲಿಲ್ಲ? ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ನಮಗ ವಿಶ್ವಾಸವಿದೆ. ನ್ಯಾಯವು ಮೇಲುಗೈ ಸಾಧಿಸುತ್ತದೆ ಎಂದು ಅವರು ಹೇಳಿದರು.

ತನ್ನ ಧ್ವನಿಯನ್ನು ಹತ್ತಿಕ್ಕಲು ತನ್ನ ವಿರುದ್ಧ ವಿದ್ಯುತ್ ಕಳ್ಳತನದ ಸುಳ್ಳು ಪ್ರಕರಣವನ್ನು ದಾಖಲಿಸಿ, ತನ್ನನ್ನು ವೈಯಕ್ತಿಕವಾಗಿ ಗುರಿ ಮಾಡಲಾಗುತ್ತಿದೆ ಎಂದು ಬಾರ್ಕ್ ಆರೋಪಿಸಿದ್ದಾರೆ.

ನಿಯೋಗದಲ್ಲಿದ್ದ ಮತ್ತೊಬ್ಬ ಎಸ್‌ಪಿ ನಾಯಕ ಲಾಲ್ ಬಿಹಾರಿ ಯಾದವ್ ಮಾತನಾಡಿದರು. ಅವರು ಹಿಂಸಾಚಾರವನ್ನು ಪೊಲೀಸರು ನಿಭಾಯಿಸುತ್ತಿರುವುದನ್ನು ಪ್ರಶ್ನಿಸಿದ್ದಾರೆ. “ಪೊಲೀಸರು ತಮಗೆ ಇಷ್ಟ ಬಂದಂತೆ ಜನರಿಗೆ ಕಿರುಕುಳ ನೀಡಿದ್ದಾರೆ. ಸಂಭಾಲ್ ಹಿಂಸಾಚಾರದ ಐದು ಬಲಿಪಶುಗಳ ಹತ್ಯೆಗೆ ಸಂಬಂಧಿಸಿ ಪೊಲೀಸರು ಏಕೆ ಪ್ರಕರಣವನ್ನು ದಾಖಲಿಸಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಯಾದವ್ ಅವರು ಸ್ಥಳೀಯ ಮುಸ್ಲಿಂ ಸಮುದಾಯದ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದು, “ಜನರು ಎಸೆದ ಇಟ್ಟಿಗೆಗಳು ಮತ್ತು ಕಲ್ಲುಗಳು ಆತ್ಮರಕ್ಷಣೆಯ ಕೃತ್ಯಗಳಾಗಿವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಭಾಲ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಎಸ್‌ಪಿ ನಿಯೋಗವು ಈ ಭೇಟಿ ನೀಡಿದೆ. ಸಂಭಾಲ್‌ನಲ್ಲಿ ನವೆಂಬರ್ 24ರಂದು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ತಂಡವು ಮೊಘಲರ ಕಾಲದ ಮಸೀದಿಯನ್ನು ಸಮೀಕ್ಷೆ ನಡೆಸಲು ಬಂದಾಗ ಹಿಂಸಾಚಾರ ಸ್ಫೋಟಗೊಂಡಿತು. ಈ ಹಿಂಸಾಚಾರದಲ್ಲಿ ಪೊಲೀಸರ ಗುಂಡಿಗೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟು 50 ಮಂದಿಯನ್ನು ಬಂಧಿಸಲಾಗಿದೆ.

ಜುಬೇರ್ ವಿರುದ್ಧ ಯತಿ ನರಸಿಂಹಾನಂದ ದೂರು: ಹೇಳಿಕೆ ದಾಖಲಿಸಿದ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...