Homeದಲಿತ್ ಫೈಲ್ಸ್ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ಮಾಡಿದ ಬಜರಂಗದಳದ ಕಾರ್ಯಕರ್ತರು

ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ಮಾಡಿದ ಬಜರಂಗದಳದ ಕಾರ್ಯಕರ್ತರು

- Advertisement -
- Advertisement -

ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಜನರ ಮನವೊಲಿಸಲು ಪ್ರಯತ್ನಿಸಿದರು ಎಂಬ ಆರೋಪದ ಮೇಲೆ 47 ವರ್ಷದ ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ನಡೆಸಿದ ಆರೋಪ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಬೆಹ್ಲೋಪುರ್ ಅಲೈ ಗ್ರಾಮದಲ್ಲಿ ಶುಕ್ರವಾರ (ಡಿ.27) ನಡೆದಿದೆ.

“ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಿದ ಆರೋಪ ಮಾಡಿ, ನನಗೆ ಸರಿಯಾದ ಪಾಠ ಕಲಿಸುವುದಾಗಿ ಹೇಳಿ ಪ್ರಬಲವರ್ಗದ (ಮೇಲ್ಜಾತಿ) ಜನರ ಗುಂಪು ನನಗೆ ಮತ್ತು ನನ್ನ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದೆ” ಎಂದು ಸಂತ್ರಸ್ತ ಶಿವಬದನ್ ಅವರು ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ಮತಾಂತರ ತಡೆ ಕಾಯ್ದೆಯಡಿ ಎರಡು ವರ್ಷಗಳ ಹಿಂದೆ ಬಂಧನಕ್ಕೊಳಗಾಗಿದ್ದ ಶಿವಬದನ್ ಅವರು ಜಾಮೀನು ಪಡೆದು ಹೊರ ಬಂದಿದ್ದರು. ಈ ವೇಳೆ ನಡುವೆ ಅವರಿಗೆ ಥಳಿಸಲಾಗಿದೆ. ಘಟನೆ ಸಂಬಂಧ ಶಿವಬದನ್ ನೀಡಿದ ದೂರು ಆಧರಿಸಿ ಫತೇಪುರ್ ಪೊಲೀಸರು ರೋಹಿತ್ ದೀಕ್ಷಿತ್, ಲವಲೇಶ್ ಸಿಂಗ್, ಸೋಮಕರನ್ ಮತ್ತು ಕೆಲ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಈ ಮೂವರೂ ಹಿಂದುತ್ವ ಸಂಘಟನೆ ಬಜರಂಗದಳದೊಂದಿಗೆ ಸಂಬಂಧ ಹೊಂದಿರುವವರು ಎಂದು ಹೇಳಲಾಗಿದೆ.

“ಪ್ರಕರಣದ ತನಿಖೆ ನಡೆಯುತ್ತಿದೆ. ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಯಾರನ್ನೂ ಬಂಧಿಸಿಲ್ಲ” ಎಂದು ಫತೇಪುರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿ.ಎಸ್.ಮಿಶ್ರಾ ಮಾಹಿತಿ ನೀಡಿದ್ದಾರೆ.

“ಡಿಸೆಂಬರ್ 26ರಂದು ರೈಲ್ವೆ ನಿಲ್ದಾಣಕ್ಕೆ ತೆರಳುವ ಸಲುವಾಗಿ ಟ್ಯಾಕ್ಸಿ ಹಿಡಿಯಲು ನಾನು ಹಳ್ಳಿಯ ಕ್ರಾಸಿಂಗ್‌ನಲ್ಲಿ ನಿಂತಿದ್ದೆ. ಈ ವೇಳೆ ಅಲ್ಲಿಗೆ ಬಂದ ಆರೋಪಿಗಳು ನನಗೆ ತಕ್ಕ ಪಾಠ ಕಲಿಸುವುದಾಗಿ ಹೇಳಿ ನಿಂದಿಸಿದರು. ಮರುದಿನ ಬೆಳಿಗ್ಗೆ ಮನೆಗೆ ಹಿಂದಿರುಗಿದಾಗ ಆರೋಪಿಗಳಾದ ರೋಹಿತ್ ದೀಕ್ಷಿತ್, ಲವಲೇಶ್ ಸಿಂಗ್ ಮತ್ತು ಸೋಮಕರನ್ ನೇತೃತ್ವದ ಜನರ ಗುಂಪು ನನ್ನ ಮೇಲೆ ಹಲ್ಲೆ ನಡೆಸಿತು. ಅವರು ಹೆಂಡತಿ ಮಕ್ಕಳು ಸೇರಿದಂತೆ ನನ್ನ ಕುಟುಂಬವನ್ನೂ ಗುರಿಯಾಗಿಸಿದ್ದಾರೆ” ಎಂದು ಶಿವಬದನ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಮುಂದುವರಿದು, “ಆರೋಪಿಗಳು ನನ್ನನ್ನು ಸಮೀಪದ ದೇವಸ್ಥಾನಕ್ಕೆ ಎಳೆದೊಯ್ದು ತಲೆ ಬೋಳಿಸಿದರು. ನಂತರ ಗ್ರಾಮದಾದ್ಯಂತ ಮೆರವಣಿಗೆ ಮಾಡಿ ಮತ್ತೊಂದು ದೇವಸ್ಥಾನಕ್ಕೆ ಕರೆದೊಯ್ದು ಅಲ್ಲಿ ಹನುಮಾನ್ ಚಾಲೀಸಾ ಪಠಿಸುವಂತೆ ಒತ್ತಾಯಿಸಿ ಪದೇ ಪದೇ ಥಳಿಸಿದ್ದಾರೆ” ಎಂದು ವಿವರಿಸಿದ್ದಾರೆ.

“ನಾನು ಕ್ರೈಸ್ತ ಧರ್ಮ ಅನುಸರಿಸದಿದ್ದರೂ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದು ಶಿವಬದನ್ ಹೇಳಿದ್ದಾರೆ.

ಮತ್ತೊಂದೆಡೆ ಆರೋಪಿ ರೋಹಿತ್ ದೀಕ್ಷಿತ್ ಕೂಡ ದೂರು ದಾಖಲಿಸಿದ್ದು, ಅದರಲ್ಲಿ ” ಡಿಸೆಂಬರ್ 26ರಂದು ನಾನು ಗ್ರಾಮದ ಅಂಗಡಿಯಲ್ಲಿ ಕುಳಿತಿದ್ದಾಗ ರಾಮ್ ಬಹದ್ದೂರ್, ಸಂತೋಷ್ ಮತ್ತು ಶಿವಪಾಲ್ ಪಾಸ್ವಾನ್ ಎಂಬ ಮೂವರು ಸಹಚರರು ಮತ್ತು ಇತರ ನಾಲ್ವರು ಅಪರಿಚಿತರ ಜೊತೆ ಕಾರಿನಲ್ಲಿ ಆಗಮಿಸಿದ ಶಿವಬದನ್ ಅವರು, ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಿ ನಿಮಗೆ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುತ್ತೇನೆ. ಪ್ರಾರ್ಥನೆಗೆ ಬಂದವರಿಂದ ಹಣ ಸಂಗ್ರಹಿಸಿ ನೀಡುತ್ತೇನೆ ಎಂದು ಹೇಳಿದರು. ನಾನು ಮತಾಂತರಗೊಳ್ಳಲು ವಿರೋಧಿಸಿದಾಗ ಶಿವಬದನ್ ನನಗೆ ಕಿರುಕುಳ ನೀಡಿ, ಸುಳ್ಳು ಮೊಕದ್ದಮೆ ಹೂಡುವ ಬೆದರಿಕೆ ಹಾಕಿದ್ದಾರೆ”ಎಂದು ಆರೋಪಿಸಿದ್ದಾರೆ.

ರೋಹಿತ್ ದೀಕ್ಷಿತ್ ದೂರು ಆಧರಿಸಿ ಶಿವಬದನ್ ಆತನ ಸಹಚರರಾದ ರಾಮ್ ಬಹದ್ದೂರ್, ಸಂತೋಷ್ ಮತ್ತು ಶಿವಪಾಲ್ ಪಾಸ್ವಾನ್ ಹಾಗೂ ನಾಲ್ವರು ಅಪರಿಚಿತರ ವಿರುದ್ದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...