Homeಕರ್ನಾಟಕಚಂದ್ರಬಾಬು ನಾಯ್ಡು ಭಾರತದ ಅತ್ಯಂತ ಶ್ರೀಮಂತ ಸಿಎಂ : ಸಿದ್ದರಾಮಯ್ಯ ಅವರಿಗೆ ಎಷ್ಟನೇ ಸ್ಥಾನ?

ಚಂದ್ರಬಾಬು ನಾಯ್ಡು ಭಾರತದ ಅತ್ಯಂತ ಶ್ರೀಮಂತ ಸಿಎಂ : ಸಿದ್ದರಾಮಯ್ಯ ಅವರಿಗೆ ಎಷ್ಟನೇ ಸ್ಥಾನ?

- Advertisement -
- Advertisement -

ಆಂಧ್ರ ಪ್ರದೇಶದ ಎನ್. ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ. ತೆಲಂಗಾಣದ ಎ.ರೇವಂತ್ ರೆಡ್ಡಿ ಅವರು ಅತಿ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಮುಖ್ಯಮಂತ್ರಿ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ (ಎನ್‌ಇಡಬ್ಲ್ಯು) ವರದಿಗಳು ಹೇಳಿವೆ.

ಸೋಮವಾರ (ಡಿ.30) ಬಿಡುಗಡೆಯಾದ ವರದಿಯಲ್ಲಿ ಭಾರತದ 31 ರಾಜ್ಯಗಳ ಹಾಲಿ ಮುಖ್ಯಮಂತ್ರಿಗಳು ಚುನಾವಣೆಗೆ ಸ್ಪರ್ಧಿಸುವ ವೇಳೆ ಅಫಿಡವಿಟ್‌ನಲ್ಲಿ ಸ್ವಯಂ ಘೋಷಿಸಿಕೊಂಡಿರುವ ಆಸ್ತಿ ವಿವರಗಳನ್ನು ವಿಶ್ಲೇಷಿಸಲಾಗಿದೆ. ಇದರಲ್ಲಿ ಮುಖ್ಯಮಂತ್ರಿಗಳ ಸಂಗಾತಿ ಮತ್ತು ಅವಲಂಬಿತರ ಹೆಸರಿನಲ್ಲಿ ಘೋಷಿಸಿರುವ ಆಸ್ತಿಗಳೂ ಸೇರಿವೆ.

ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂ. ಘೋಷಿತ ಆಸ್ತಿಯ ಮೂಲಕ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎನಿಸಿಕೊಂಡರೆ, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರು ಕೇವಲ 15 ಲಕ್ಷ ರೂ. ಘೋಷಿತ ಆಸ್ತಿಯೊಂದಿಗೆ ಅತಿ ಕಡಿಮೆ ಆಸ್ತಿ ಹೊಂದಿರುವ ಸಿಎಂ ಆಗಿ ಗುರುತಿಸಿಕೊಂಡಿದ್ದಾರೆ.

ಚಂದ್ರಬಾಬು ನಾಯ್ಡು ಅವರು ಘೋಷಿಸಿಕೊಂಡಿರುವ 931 ಕೋಟಿ ರೂ. ಮೌಲ್ಯದ ಆಸ್ತಿಯಲ್ಲಿ 895 ಕೋಟಿ ರೂ. ಮೌಲ್ಯದ ಆಸ್ತಿ ನಾಯ್ಡು ಅವರ ಪತ್ನಿ, ಹೆರಿಟೇಜ್ ಫುಡ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕಿಯೂ ಆಗಿರುವ ನಾರಾ ಭುವನೇಶ್ವರಿ ಅವರ ಹೆಸರಿನಲ್ಲಿದೆ. ಹೆರಿಟೇಜ್ ಫುಡ್ಸ್ ಲಿಮಿಟೆಡ್‌ನಲ್ಲಿ ಭುವನೇಶ್ವರಿ ಅವರದ್ದು 764 ಕೋಟಿ ರೂ. ಮೌಲ್ಯದ ಷೇರುಗಳಿವೆ. ಇನ್ನುಳಿದಂತೆ ಸೆರಿಲಿಂಗಂಪಲ್ಲಿಯಲ್ಲಿ ಅವರು 55 ಕೋಟಿ ರೂ. ಮೌಲ್ಯದ ಕೃಷಿ ಭೂಮಿಯನ್ನು ಹೊಂದಿದ್ದಾರೆ.

ಅರುಣಾಚಲ ಪ್ರದೇಶದ ಸಿಎಂ ಹಾಗೂ ಬಿಜೆಪಿ ನಾಯಕ ಪೆಮಾ ಖಂಡು ಅವರು 332 ಕೋಟಿ ರೂ. ಮೌಲ್ಯದ ಘೋಷಿತ ಆಸ್ತಿಯೊಂದಿಗೆ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು ಮತ್ತು ಪೆಮಾ ಖಂಡು ಮಾತ್ರ ಈ ಪಟ್ಟಿಯಲ್ಲಿರುವ ಬಿಲಿಯನೇರ್ ಸಿಎಂಗಳಾಗಿದ್ದಾರೆ.

ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು 51 ಕೋಟಿ ರೂ. ಮೌಲ್ಯದ ಘೋಷಿತ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ 30 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಏಳನೇ ಶ್ರೀಮಂತರಾಗಿದ್ದಾರೆ. ಕೇವಲ 8 ಕೋಟಿ ರೂ. ಘೋಷಿತ ಆಸ್ತಿಯೊಂದಿಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ 14ನೇ ಸ್ಥಾನ ಪಡೆದಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್‌ ಸುಮಾರು 1 ಕೋಟಿ ರೂ. ಮೌಲ್ಯದ ಘೋಷಿತ ಆಸ್ತಿಯೊಂದಿಗೆ ಪಟ್ಟಿಯಲ್ಲಿ ಕೆಳಗಡೆಯಿಂದ ಮೂರನೇ ಸ್ಥಾನದಲ್ಲಿದ್ದಾರೆ.

31 ಮುಖ್ಯಮಂತ್ರಿಗಳ ಒಟ್ಟು ಘೋಷಿತ ಆಸ್ತಿ ಮೌಲ್ಯ 1,630 ಕೋಟಿ ರೂ. ಇದ್ದು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಸರಾಸರಿ ಆಸ್ತಿ ಮೌಲ್ಯ 52.59 ಕೋಟಿ ರೂ. ಇದೆ.

2023-2024ರಲ್ಲಿ ಭಾರತದ ತಲಾ ನಿವ್ವಳ ರಾಷ್ಟ್ರೀಯ ಆದಾಯ ಅಥವಾ ಎನ್‌ಎನ್‌ಐ ಸರಿ ಸುಮಾರು ರೂ 1,85,854 ಆಗಿದ್ದರೆ, ಮುಖ್ಯಮಂತ್ರಿಗಳ ಸರಾಸರಿ ಸ್ವಯಂ ಆದಾಯವು ರೂ. 13,64,310 ಆಗಿದೆ. ಇದು ಭಾರತದ ಸರಾಸರಿ ತಲಾ ಆದಾಯದ 7.3 ಪಟ್ಟು ಹೆಚ್ಚು ಎಂದು ವರದಿ ಹೇಳಿದೆ.

ಅರುಣಾಚಲ ಸಿಎಂ ಪೆಮಾ ಖಂಡು ಅವರು ಅತಿ ಹೆಚ್ಚು ಸಾಲ ಹೊಂದಿರುವ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ. ಅವರ ಸಾಲದ ಮೊತ್ತ 180 ಕೋಟಿ ರೂ. ಇದೆ. ಖಂಡು ಬಳಿಕ 23 ಕೋಟಿ ರೂ. ಸಾಲದೊಂದಿಗೆ ಸಿದ್ದರಾಮಯ್ಯ ಎರಡನೇ ಸ್ಥಾನದಲ್ಲಿದ್ದು, ಚಂದ್ರಬಾಬು ನಾಯ್ಡು ಅವರು 10 ಕೋಟಿ ರೂ. ಸಾಲದಲ್ಲಿದ್ದಾರೆ.

ರೂ. 55 ಲಕ್ಷ ಮೌಲ್ಯದ ಘೋಷಿತ ಆಸ್ತಿ ಹೊಂದಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ ಕೊನೆಯಿಂದ ಎರಡನೇ ಸ್ಥಾನದಲ್ಲಿದ್ದಾರೆ.

ವರದಿಯ ಪ್ರಕಾರ, 31 ಮುಖ್ಯಮಂತ್ರಿಗಳ ಪೈಕಿ 13 ಮಂದಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ. ಈ ಪೈಕಿ 10 ಸಿಎಂಗಳು ಕೊಲೆಯತ್ನ, ಅಪಹರಣ, ಲಂಚ, ಕ್ರಿಮಿನಲ್ ಬೆದರಿಕೆ ಇತ್ಯಾದಿ ಸೇರಿದಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ.

ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ವಿರುದ್ಧ ಬರೋಬ್ಬರಿ 89 ಪ್ರಕರಣಗಳಿವೆ. ವರದಿಯ ಪ್ರಕಾರ, ಈ ಪೈಕಿ 72 ಪ್ರಕರಣಗಳು ಗಂಭೀರ ಸ್ವರೂಪದ್ದಾಗಿವೆ.

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರು 11 ಗಂಭೀರ ಐಪಿಸಿ ಪ್ರಕರಣಗಳು ಸೇರಿದಂತೆ 47 ಪ್ರಕರಣಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು ಅವರ ವಿರುದ್ಧ 19 ಕ್ರಿಮಿನಲ್ ಪ್ರಕರಣಗಳಿವೆ.

31 ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಮತ್ತು ದೆಹಲಿಯ ಅತಿಶಿ ಇವರಿಬ್ಬರು ಮಾತ್ರ ಮಹಿಳೆಯರು.

ವಯೋಮಾನದ ಆಧಾರದಲ್ಲಿ ಮಾಡಿದ ವಿಶ್ಲೇಷಣೆ ಪ್ರಕಾರ, 12 ಮುಖ್ಯಮಂತ್ರಿಗಳು 51-60 ವಯಸ್ಸಿನವರಿದ್ದಾರೆ. ಏಳು ಮಂದಿ 41 ರಿಂದ 50 ವರ್ಷದೊಳಗಿನವರು. ಆರು ಮಂದಿ 71-80ರ ವಯೋಮಾನದವರು ಮತ್ತು ಐವರು 61-70ರ ವಯೋಮಾನದವರು. ಒಬ್ಬರು ಮಾತ್ರ 31-40 ವಯೋಮಾನದವರಿದ್ದಾರೆ.

ಶಿಕ್ಷಣದ ಆಧಾರದಲ್ಲಿ ಮಾಡಿದ ವಿಶ್ಲೇಷಣೆ ಪ್ರಕಾರ, 10 ಮುಖ್ಯಮಂತ್ರಿಗಳು ಪದವೀಧರರು ಮತ್ತು ಒಂಬತ್ತು ಮಂದಿ ಸ್ನಾತಕೋತ್ತರ ಪದವೀಧರಿದ್ದಾರೆ. ಒಬ್ಬರು ಸಿಎಂ 10ನೇ ತರಗತಿ ಪಾಸಾಗಿದ್ದರೆ, ಮೂವರು 12ನೇ ತರಗತಿ ಪಾಸ್ ಆದವರಿದ್ದಾರೆ.

ಇದನ್ನೂ ಓದಿ : ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಸಾವು – ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...