Homeಅಂತರಾಷ್ಟ್ರೀಯಸಿಂಗಾಪುರ ಕೆಫೆಯಲ್ಲಿ ಕ್ಯಾಷಿಯರ್‌ ಕುರಿತು ಜನಾಂಗೀಯ ಟೀಕೆ; ಭಾರತೀಯ ಮೂಲದ ವ್ಯಕ್ತಿಗೆ ಜೈಲು ಶಿಕ್ಷೆ

ಸಿಂಗಾಪುರ ಕೆಫೆಯಲ್ಲಿ ಕ್ಯಾಷಿಯರ್‌ ಕುರಿತು ಜನಾಂಗೀಯ ಟೀಕೆ; ಭಾರತೀಯ ಮೂಲದ ವ್ಯಕ್ತಿಗೆ ಜೈಲು ಶಿಕ್ಷೆ

- Advertisement -
- Advertisement -

ಕೆಫೆಯಲ್ಲಿನ ಕ್ಯಾಷಿಯರ್‌ ಕುರಿತು ಜನಾಂಗೀಯ ನಿಂದನೆ ಮತ್ತು ಟಿಪ್ ಬಾಕ್ಸ್ ಅನ್ನು ಎಸೆದಿದ್ದಕ್ಕಾಗಿ ಭಾರತೀಯ ಮೂಲದ ವ್ಯಕ್ತಿಗೆ ನಾಲ್ಕು ವಾರಗಳ ಜೈಲು ಶಿಕ್ಷೆ ಮತ್ತು 4,000 ಸಿಂಗಾಪುರ ರೂಪಾಯಿ ದಂಡ ವಿಧಿಸಲಾಗಿದೆ.

27 ವರ್ಷದ ರಿಷಿ ಡೇವಿಡ್ ರಮೇಶ್ ನಂದ್ವಾನಿ ಅವರು ಸೋಮವಾರ ಹಾಲೆಂಡ್ ವಿಲೇಜ್‌ನ ದುಬಾರಿ ಶಾಪಿಂಗ್ ಕಾನ್‌ಕ್ಲೇವ್‌ನಲ್ಲಿ ಕೆಫೆಯಲ್ಲಿ ಕ್ಯಾಶಿಯರ್‌ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಅವಮಾನಕರ ಪದಗಳನ್ನು ಬಳಸಿದ್ದಾರೆ ಎನ್ನಲಾಗಿದೆ. ದುಡುಕಿನ ಕೃತ್ಯ ಮಾಡಿದ್ದೇನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾರೆ.

ಶಿಕ್ಷೆಯಲ್ಲಿ ಎರಡು ರೀತಿಯ ಆರೋಪಗಳನ್ನು ಪರಿಗಣಿಸಲಾಗಿದೆ. ರಿಷಿ ತನ್ನ ಬಂಧನದ ಸ್ಥಳದಿಂದ ವೀಡಿಯೊ ಲಿಂಕ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಅಕ್ಟೋಬರ್ 31 ರಂದು ಈ ಘಟನೆ ಸಂಭವಿಸಿದ್ದು, ಕೆಫೆ ಕಿಕ್ಕಿರಿದು ತುಂಬಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿದ್ದರು ಎಂದು ತಿಳಿದುಬಂದಿದೆ.

ಮಧ್ಯಾಹ್ನ 12.20 ರ ಸುಮಾರಿಗೆ ರಿಷಿ ಅವರು ಆರ್ಡರ್‌ ಮಾಡಲು ಸರತಿ ಸಾಲಿನಲ್ಲಿ ಸೇರುತ್ತಿದ್ದಾರೆ ಎಂಬ ತಪ್ಪು ತಿಳುವಳಿಕೆಯಿಂದ ಕೌಂಟರ್ ಮುಂದೆ ನಿಂತಿದ್ದರು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಾಸ್ತವವಾಗಿ ಅವರು ತಪ್ಪಾದ ಸರದಿಯಲ್ಲಿದ್ದರು. ಆತ ಕ್ಯಾಷಿಯರ್‌ನ ಮುಂದೆ ಬಂದಾಗ, ಸರದಿಯ ಹಿಂಭಾಗಕ್ಕೆ ಹೋಗಿ ಸರದಿಗಾಗಿ ಕಾಯುವಂತೆ ಕ್ಯಾಶಿಯರ್ ಹೇಳಿದ್ದಾರೆ. ಕ್ಯಾಷಿಯರ್ ತನಗೆ ಸೇವೆ ಸಲ್ಲಿಸಲು ನಿರಾಕರಿಸಿದ್ದಕ್ಕೆ ರಿಷಿ ಅಸಮಾಧಾನಗೊಂಡರು. ಅವರು ಚೀನೀ ಜನರ ವಿರುದ್ಧ ಜನಾಂಗೀಯ ನಿಂದನೆಗಳನ್ನು ಒಳಗೊಂಡಿರುವ ಆಕೆಯ ವಿರುದ್ಧ ಎರಡು ನಿಮಿಷಗಳ ಕಾಲ ಟೀಕೆ ಮಾಡಿದ್ದಾರೆ.

ಅಶ್ಲೀಲ ಮಾತುಗಳನ್ನೂ ಆಡಿದ್ದು, ಅವರು ಸರದಿಯನ್ನು ಹಿಡಿದಿಟ್ಟುಕೊಳ್ಳುವುದನ್ನು ಮುಂದುವರೆಸಿ, ಸಾಲಿನ ಹಿಂಭಾಗಕ್ಕೆ ಹೋಗಲು ನಿರಾಕರಿಸಿದರು ಎನ್ನಲಾಗಿದೆ.

ಆತನ ಅವಮಾನಕರ ಹೇಳಿಕೆಗಳು ಸಂತ್ರಸ್ತೆಯನ್ನು ಸಂಕಟಪಡಿಸಿದವು. ಆಕೆ ದೂರ ಸರಿಯುವ ಮೂಲಕ ನಿರ್ಲಿಪ್ತಳಾಗಿ, ತನ್ನ ಮೇಲಿನವರೊಂದಿಗೆ ಮಾತನಾಡುವಂತೆ ತಿಳಿಸಿದ್ದಾರೆ. ಆದರೂ, ರಿಷಿ ಸಂತ್ರಸ್ತೆಯನ್ನು ನಿಂದಿಸುವುದನ್ನು ಮುಂದುವರೆಸಿದ್ದಾನೆ. ನಂತರ ಅವನು ಕೌಂಟರ್‌ನಲ್ಲಿರುವ ಟಿಪ್ ಬಾಕ್ಸ್ ಅನ್ನು ಎತ್ತಿಕೊಂಡು ಅವಳ ಮೇಲೆ ಎಸೆದು, ಆಕೆಯ ಕೆಳ ಬೆನ್ನಿಗೆ ಹೊಡೆದಿದ್ದಾನೆ.

ಅಂತಿಮವಾಗಿ ಕೆಫೆಯಿಂದ ಹೊರಡುವ ಮೊದಲು ಅವನು ಕ್ಯಾಶಿಯರ್ ಮೇಲೆ ಅಸಭ್ಯ ಮತ್ತು ನಿಂದೆಗಳನ್ನು ಮಾಡುವುದನ್ನು ಮುಂದುವರೆಸಿದನು. ಸಂತ್ರಸ್ತೆ ಪೊಲೀಸರಿಗೆ ಕರೆ ಮಾಡಿ ವರದಿ ಮಾಡಿದ ಬಳಿಕ ಒಂದು ಗಂಟೆಯ ನಂತರ ರಿಷಿಯನ್ನು ಬಂಧಿಸಲಾಯಿತು.

ಆತನ ದಬ್ಬಾಳಿಕೆ ಮತ್ತು ಅವನು ಟಿಪ್ ಬಾಕ್ಸ್ ಎಸೆಯುವ ವೀಡಿಯೊಗಳನ್ನು ನ್ಯಾಯಾಲಯದಲ್ಲಿ ಪ್ಲೇ ಮಾಡಲಾಯಿತು. ಆತ ಕೂಗುತ್ತಿದ್ದಂತೆಯೇ ಅನೇಕ ಗ್ರಾಹಕರು ಸರತಿ ಸಾಲಿನಲ್ಲಿ ನಿಂತು ಮೌನವಾಗಿ ನೋಡುತ್ತಿರುವುದನ್ನು ತೋರಿಸಿದರು.

ತೀರ್ಪು ನೀಡುವಾಗ, ಜಿಲ್ಲಾ ನ್ಯಾಯಾಧೀಶ ಜಾನೆಟ್ ವಾಂಗ್ ಅವರು ರಿಷಿಯ ಅಪರಾಧಗಳು ಸಾರ್ವಜನಿಕ ಗೊಂದಲವನ್ನು ಉಂಟುಮಾಡಿದವು ಮತ್ತು ಸೇವಾ ಸಿಬ್ಬಂದಿಯನ್ನು ನಿಂದನೆಯಿಂದ ರಕ್ಷಿಸುವ ಅಗತ್ಯವನ್ನು ಕಾನೂನು ಗುರುತಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ; ಅಫ್ಘಾನಿಸ್ತಾನ | ಮಹಿಳೆಯನ್ನು ನೇಮಿಸಿಕೊಳ್ಳುವ ಎನ್‌ಜಿಒಗಳ ಸ್ಥಗಿತ – ತಾಲಿಬಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...