Homeಕರ್ನಾಟಕದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

ದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

- Advertisement -
- Advertisement -

ರಾಜ್ಯದ ದಲಿತ ಚಳವಳಿಯ ಹಿರಿಯ ನಾಯಕ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಅವರು ಕಳೆದ ಎರಡು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಕೆಲ ದಿನಗಳಿಂದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು ಎನ್ನಲಾಗಿದೆ.

2022ರ ಡಿಸೆಂಬರ್ 6ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ‘ದಲಿತ ಸಾಂಸ್ಕೃತಿಕ ಪ್ರತಿರೋಧ’ದಲ್ಲಿ ಸಾರ್ವಜನಿಕವಾಗಿ ಭಾಗಿಯಾಗಿದ್ದೇ ಕೊನೆ. ಆ ನಂತರದಲ್ಲಿ ಹೋರಾಟದಿಂದ ದೂರ ಉಳಿದಿದ್ದ ಅವರು, ತಮ್ಮ ಆನಾರೋಗ್ಯದ ನಡುವೆಯೂ ‘ದಲಿತ ಚಳವಳಿಗಳ ಐಕ್ಯ ಹೋರಾಟ ಸಮಿತಿ’ ಹೋರಾಟಗಳಿಗೆ ತಮ್ಮ ಕಾರ್ಯಕರ್ತರನ್ನು ತೊಡಗಿಸಿಕೊಳ್ಳುವ ಹಾಗೆ ನೋಡಿಕೊಂಡಿದ್ದರು.

ದಲಿತ ಚಳವಳಿಗೆ ಅರಗಿಸಿಕೊಳ್ಳಲಾಗದ ವಿಷಯ: ಮಾವಳ್ಳಿ ಶಂಕರ್

ವಿದ್ಯಾರ್ಥಿ ದಿನಗಳಿಂದಲೂ ಲಕ್ಷ್ಮಿನಾರಾಯಣ ನಾಗಾವರ ಅವರ ಆಪ್ತರಾಗಿರುವ ದಸಂಸ ಹಿರಿಯ ನಾಯಕ ಮಾವಳ್ಳಿ ಶಂಕರ್ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿ, ‘ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ, ನಾಗವಾರ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ’ ಎಂದು ಬೇಸರ ವ್ಯಕ್ತಪಡಿಸಿದರು.

“ಮೂರು ದಶಕಗಳಿಗೂ ಹೆಚ್ಚು ಕಾಲ ಚಳವಳಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಸಾಕಷ್ಟು ಬದ್ಧತೆಯಿಂದ ದಲಿತ ಚಳವಳಿ ಸೇರಿದಂತೆ ಜನಪರ ಸಂಘಟನೆಗಳ ಜೊತೆಗೆ ಇರುತ್ತಿದ್ದ ಅವರು, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು ಎಂಬ ದೂರದೃಷ್ಠಿ ಇಟ್ಟುಕೊಂಡಿದ್ದ ನಾಯಕರಾಗಿದ್ದರು. ವಿಶೇಷವಾಗಿ, ತಳ ಸಮುದಾಯಗಳ ಬಗ್ಗೆ ಅವರಿಗೆ ವಿಶೇಷ ಕಳಕಳಿ ಇತ್ತು; ಅವರ ಬದಲಾವಣೆ ಬಗ್ಗೆ ಅಪಾರವಾದ ನಂಬಿಕೆ ಇಟ್ಟುಕೊಂಡಿದ್ದರು. ಸೈದ್ಧಾಂತಿಕವಾಗಿಯೂ ಕೂಡ ಗಟ್ಟಿತನ ಇತ್ತು” ಎಂದರು.

“ಅವರ ಅಗಲಿಕೆಯಿಂದ ದಲಿತ ಚಳವಳಿಗೆ ಶೂನ್ಯ ಆವರಿಸಿದಂತೆ ಆಗಿದೆ. ಇವತ್ತಿನ ಕಾಲಘಟ್ಟದಲ್ಲಿ ನಾಗವಾರ ಅವರ ನಾಯಕತ್ವ ಅನಿವಾರ್ಯವಾಗಿದೆ. ಇಡೀ ರಾಜ್ಯದಲ್ಲಿ ಅವರು ಬಹಳಷ್ಟು ಸಕ್ರಿಯವಾಗಿ ಸಂಘಟನೆ ಕೆಲಸ ಮಾಡುತ್ತಿದ್ದರು. ನಮ್ಮ ಪಾಲಿಗೆ ಇದು ಕೆಟ್ಟ ಪರಿಸ್ಥಿತಿ, ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ” ಎಂದು ಹೇಳಿದರು.

ಹೆಬ್ಬಾಳ ನಿವಾಸದಲ್ಲಿ ದರ್ಶನ

ಲಕ್ಷ್ಮಿನಾರಾಯಣ ಅವರ ಮೃತದೇಹವನ್ನು ಬೆಂಗಳೂರಿನ ಹೆಬ್ಬಾಳದ ಕನಕನಗರದಲ್ಲಿನ ಅವರ ನಿವಾಸದಲ್ಲಿ ಇರಿಸಲಾಗಿದೆ.

ಅವರು ಬೆಂಗಳೂರು ಉತ್ತರ ತಾಲೂಕಿನ ನಾಗವಾರ ಗ್ರಾಮದವರು. ತಮ್ಮ ವಿದ್ಯಾರ್ಥಿ ದಿನಗಳಲ್ಲೇ ದಲಿತ ಹಕ್ಕುಗಳ ಬಗ್ಗೆ ಧ್ವನಿಯನ್ನು ಎತ್ತುತ್ತಾ ಬಂದವರು. ಸಾಹಿತ್ಯ ಮಾತ್ರವಲ್ಲದೆ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಅತ್ಯಂತ ಉತ್ಸುಕರಾಗಿ ಭಾಗವಹಿಸುತ್ತಿದ್ದರು. ಕಾಲೇಜು ಜೀವನದಲ್ಲೇ ಸಮಾಜ ವಿಜ್ಞಾನ, ಅರ್ಥಶಾಸ್ತ್ರ ವಿಷಯಗಳ ಅಧ್ಯಾಪಕರಿಗೆ ಪ್ರೀತಿಯ ವಿದ್ಯಾರ್ಥಿಯಾಗಿ ‘ದಲಿತ ವಿದ್ಯಾರ್ಥಿ ಒಕ್ಕೂಟ’ದ ಮುಖಂಡರಾಗಿದ್ದರು.

ದಲಿತ ಹಿರಿಯ ನೇತಾರ ಬಿ. ಬಸವಲಿಂಗ ಅವರು ನಡೆಸಿದ ಬೂಸಾ ಚಳವಳಿಗೆ ಇಪ್ಪತ್ತೈದು ವರ್ಷಗಳಾದ ಸಂದರ್ಭದಲ್ಲಿ ‘ಬಿ. ಬಸವಲಿಂಗಪ್ಪ ಮತ್ತು ಬೂಸಾ ಚಳವಳಿ: ಕಾಲು ಶತಮಾನ’ ಪುಸ್ತಕವನ್ನು ಸಂಪಾದಿಸಿ ದಲಿತ ಚಳವಳಿಯ ಕುರಿತು ಹಲವು ಒಳನೋಟಗಳನ್ನು ಓದುಗರಿಗೆ ಒದಗಿಸಿದ್ದರು.

ಇದನ್ನೂ ಓದಿ; ತೆಲಂಗಾಣ| ದಲಿತ ಮುಖ್ಯೋಪಾಧ್ಯಾಯರ ಮೇಲೆ ಅಯ್ಯಪ್ಪ ಭಕ್ತರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...