Homeಕರ್ನಾಟಕದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

ದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

- Advertisement -
- Advertisement -

ರಾಜ್ಯದ ದಲಿತ ಚಳವಳಿಯ ಹಿರಿಯ ನಾಯಕ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಅವರು ಕಳೆದ ಎರಡು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಕೆಲ ದಿನಗಳಿಂದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು ಎನ್ನಲಾಗಿದೆ.

2022ರ ಡಿಸೆಂಬರ್ 6ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ‘ದಲಿತ ಸಾಂಸ್ಕೃತಿಕ ಪ್ರತಿರೋಧ’ದಲ್ಲಿ ಸಾರ್ವಜನಿಕವಾಗಿ ಭಾಗಿಯಾಗಿದ್ದೇ ಕೊನೆ. ಆ ನಂತರದಲ್ಲಿ ಹೋರಾಟದಿಂದ ದೂರ ಉಳಿದಿದ್ದ ಅವರು, ತಮ್ಮ ಆನಾರೋಗ್ಯದ ನಡುವೆಯೂ ‘ದಲಿತ ಚಳವಳಿಗಳ ಐಕ್ಯ ಹೋರಾಟ ಸಮಿತಿ’ ಹೋರಾಟಗಳಿಗೆ ತಮ್ಮ ಕಾರ್ಯಕರ್ತರನ್ನು ತೊಡಗಿಸಿಕೊಳ್ಳುವ ಹಾಗೆ ನೋಡಿಕೊಂಡಿದ್ದರು.

ದಲಿತ ಚಳವಳಿಗೆ ಅರಗಿಸಿಕೊಳ್ಳಲಾಗದ ವಿಷಯ: ಮಾವಳ್ಳಿ ಶಂಕರ್

ವಿದ್ಯಾರ್ಥಿ ದಿನಗಳಿಂದಲೂ ಲಕ್ಷ್ಮಿನಾರಾಯಣ ನಾಗಾವರ ಅವರ ಆಪ್ತರಾಗಿರುವ ದಸಂಸ ಹಿರಿಯ ನಾಯಕ ಮಾವಳ್ಳಿ ಶಂಕರ್ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿ, ‘ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ, ನಾಗವಾರ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ’ ಎಂದು ಬೇಸರ ವ್ಯಕ್ತಪಡಿಸಿದರು.

“ಮೂರು ದಶಕಗಳಿಗೂ ಹೆಚ್ಚು ಕಾಲ ಚಳವಳಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಸಾಕಷ್ಟು ಬದ್ಧತೆಯಿಂದ ದಲಿತ ಚಳವಳಿ ಸೇರಿದಂತೆ ಜನಪರ ಸಂಘಟನೆಗಳ ಜೊತೆಗೆ ಇರುತ್ತಿದ್ದ ಅವರು, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು ಎಂಬ ದೂರದೃಷ್ಠಿ ಇಟ್ಟುಕೊಂಡಿದ್ದ ನಾಯಕರಾಗಿದ್ದರು. ವಿಶೇಷವಾಗಿ, ತಳ ಸಮುದಾಯಗಳ ಬಗ್ಗೆ ಅವರಿಗೆ ವಿಶೇಷ ಕಳಕಳಿ ಇತ್ತು; ಅವರ ಬದಲಾವಣೆ ಬಗ್ಗೆ ಅಪಾರವಾದ ನಂಬಿಕೆ ಇಟ್ಟುಕೊಂಡಿದ್ದರು. ಸೈದ್ಧಾಂತಿಕವಾಗಿಯೂ ಕೂಡ ಗಟ್ಟಿತನ ಇತ್ತು” ಎಂದರು.

“ಅವರ ಅಗಲಿಕೆಯಿಂದ ದಲಿತ ಚಳವಳಿಗೆ ಶೂನ್ಯ ಆವರಿಸಿದಂತೆ ಆಗಿದೆ. ಇವತ್ತಿನ ಕಾಲಘಟ್ಟದಲ್ಲಿ ನಾಗವಾರ ಅವರ ನಾಯಕತ್ವ ಅನಿವಾರ್ಯವಾಗಿದೆ. ಇಡೀ ರಾಜ್ಯದಲ್ಲಿ ಅವರು ಬಹಳಷ್ಟು ಸಕ್ರಿಯವಾಗಿ ಸಂಘಟನೆ ಕೆಲಸ ಮಾಡುತ್ತಿದ್ದರು. ನಮ್ಮ ಪಾಲಿಗೆ ಇದು ಕೆಟ್ಟ ಪರಿಸ್ಥಿತಿ, ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ” ಎಂದು ಹೇಳಿದರು.

ಹೆಬ್ಬಾಳ ನಿವಾಸದಲ್ಲಿ ದರ್ಶನ

ಲಕ್ಷ್ಮಿನಾರಾಯಣ ಅವರ ಮೃತದೇಹವನ್ನು ಬೆಂಗಳೂರಿನ ಹೆಬ್ಬಾಳದ ಕನಕನಗರದಲ್ಲಿನ ಅವರ ನಿವಾಸದಲ್ಲಿ ಇರಿಸಲಾಗಿದೆ.

ಅವರು ಬೆಂಗಳೂರು ಉತ್ತರ ತಾಲೂಕಿನ ನಾಗವಾರ ಗ್ರಾಮದವರು. ತಮ್ಮ ವಿದ್ಯಾರ್ಥಿ ದಿನಗಳಲ್ಲೇ ದಲಿತ ಹಕ್ಕುಗಳ ಬಗ್ಗೆ ಧ್ವನಿಯನ್ನು ಎತ್ತುತ್ತಾ ಬಂದವರು. ಸಾಹಿತ್ಯ ಮಾತ್ರವಲ್ಲದೆ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಅತ್ಯಂತ ಉತ್ಸುಕರಾಗಿ ಭಾಗವಹಿಸುತ್ತಿದ್ದರು. ಕಾಲೇಜು ಜೀವನದಲ್ಲೇ ಸಮಾಜ ವಿಜ್ಞಾನ, ಅರ್ಥಶಾಸ್ತ್ರ ವಿಷಯಗಳ ಅಧ್ಯಾಪಕರಿಗೆ ಪ್ರೀತಿಯ ವಿದ್ಯಾರ್ಥಿಯಾಗಿ ‘ದಲಿತ ವಿದ್ಯಾರ್ಥಿ ಒಕ್ಕೂಟ’ದ ಮುಖಂಡರಾಗಿದ್ದರು.

ದಲಿತ ಹಿರಿಯ ನೇತಾರ ಬಿ. ಬಸವಲಿಂಗ ಅವರು ನಡೆಸಿದ ಬೂಸಾ ಚಳವಳಿಗೆ ಇಪ್ಪತ್ತೈದು ವರ್ಷಗಳಾದ ಸಂದರ್ಭದಲ್ಲಿ ‘ಬಿ. ಬಸವಲಿಂಗಪ್ಪ ಮತ್ತು ಬೂಸಾ ಚಳವಳಿ: ಕಾಲು ಶತಮಾನ’ ಪುಸ್ತಕವನ್ನು ಸಂಪಾದಿಸಿ ದಲಿತ ಚಳವಳಿಯ ಕುರಿತು ಹಲವು ಒಳನೋಟಗಳನ್ನು ಓದುಗರಿಗೆ ಒದಗಿಸಿದ್ದರು.

ಇದನ್ನೂ ಓದಿ; ತೆಲಂಗಾಣ| ದಲಿತ ಮುಖ್ಯೋಪಾಧ್ಯಾಯರ ಮೇಲೆ ಅಯ್ಯಪ್ಪ ಭಕ್ತರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...