Homeಕರ್ನಾಟಕದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

ದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

- Advertisement -
- Advertisement -

ರಾಜ್ಯದ ದಲಿತ ಚಳವಳಿಯ ಹಿರಿಯ ನಾಯಕ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಅವರು ಕಳೆದ ಎರಡು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಕೆಲ ದಿನಗಳಿಂದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು ಎನ್ನಲಾಗಿದೆ.

2022ರ ಡಿಸೆಂಬರ್ 6ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ‘ದಲಿತ ಸಾಂಸ್ಕೃತಿಕ ಪ್ರತಿರೋಧ’ದಲ್ಲಿ ಸಾರ್ವಜನಿಕವಾಗಿ ಭಾಗಿಯಾಗಿದ್ದೇ ಕೊನೆ. ಆ ನಂತರದಲ್ಲಿ ಹೋರಾಟದಿಂದ ದೂರ ಉಳಿದಿದ್ದ ಅವರು, ತಮ್ಮ ಆನಾರೋಗ್ಯದ ನಡುವೆಯೂ ‘ದಲಿತ ಚಳವಳಿಗಳ ಐಕ್ಯ ಹೋರಾಟ ಸಮಿತಿ’ ಹೋರಾಟಗಳಿಗೆ ತಮ್ಮ ಕಾರ್ಯಕರ್ತರನ್ನು ತೊಡಗಿಸಿಕೊಳ್ಳುವ ಹಾಗೆ ನೋಡಿಕೊಂಡಿದ್ದರು.

ದಲಿತ ಚಳವಳಿಗೆ ಅರಗಿಸಿಕೊಳ್ಳಲಾಗದ ವಿಷಯ: ಮಾವಳ್ಳಿ ಶಂಕರ್

ವಿದ್ಯಾರ್ಥಿ ದಿನಗಳಿಂದಲೂ ಲಕ್ಷ್ಮಿನಾರಾಯಣ ನಾಗಾವರ ಅವರ ಆಪ್ತರಾಗಿರುವ ದಸಂಸ ಹಿರಿಯ ನಾಯಕ ಮಾವಳ್ಳಿ ಶಂಕರ್ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿ, ‘ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ, ನಾಗವಾರ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ’ ಎಂದು ಬೇಸರ ವ್ಯಕ್ತಪಡಿಸಿದರು.

“ಮೂರು ದಶಕಗಳಿಗೂ ಹೆಚ್ಚು ಕಾಲ ಚಳವಳಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಸಾಕಷ್ಟು ಬದ್ಧತೆಯಿಂದ ದಲಿತ ಚಳವಳಿ ಸೇರಿದಂತೆ ಜನಪರ ಸಂಘಟನೆಗಳ ಜೊತೆಗೆ ಇರುತ್ತಿದ್ದ ಅವರು, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು ಎಂಬ ದೂರದೃಷ್ಠಿ ಇಟ್ಟುಕೊಂಡಿದ್ದ ನಾಯಕರಾಗಿದ್ದರು. ವಿಶೇಷವಾಗಿ, ತಳ ಸಮುದಾಯಗಳ ಬಗ್ಗೆ ಅವರಿಗೆ ವಿಶೇಷ ಕಳಕಳಿ ಇತ್ತು; ಅವರ ಬದಲಾವಣೆ ಬಗ್ಗೆ ಅಪಾರವಾದ ನಂಬಿಕೆ ಇಟ್ಟುಕೊಂಡಿದ್ದರು. ಸೈದ್ಧಾಂತಿಕವಾಗಿಯೂ ಕೂಡ ಗಟ್ಟಿತನ ಇತ್ತು” ಎಂದರು.

“ಅವರ ಅಗಲಿಕೆಯಿಂದ ದಲಿತ ಚಳವಳಿಗೆ ಶೂನ್ಯ ಆವರಿಸಿದಂತೆ ಆಗಿದೆ. ಇವತ್ತಿನ ಕಾಲಘಟ್ಟದಲ್ಲಿ ನಾಗವಾರ ಅವರ ನಾಯಕತ್ವ ಅನಿವಾರ್ಯವಾಗಿದೆ. ಇಡೀ ರಾಜ್ಯದಲ್ಲಿ ಅವರು ಬಹಳಷ್ಟು ಸಕ್ರಿಯವಾಗಿ ಸಂಘಟನೆ ಕೆಲಸ ಮಾಡುತ್ತಿದ್ದರು. ನಮ್ಮ ಪಾಲಿಗೆ ಇದು ಕೆಟ್ಟ ಪರಿಸ್ಥಿತಿ, ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ” ಎಂದು ಹೇಳಿದರು.

ಹೆಬ್ಬಾಳ ನಿವಾಸದಲ್ಲಿ ದರ್ಶನ

ಲಕ್ಷ್ಮಿನಾರಾಯಣ ಅವರ ಮೃತದೇಹವನ್ನು ಬೆಂಗಳೂರಿನ ಹೆಬ್ಬಾಳದ ಕನಕನಗರದಲ್ಲಿನ ಅವರ ನಿವಾಸದಲ್ಲಿ ಇರಿಸಲಾಗಿದೆ.

ಅವರು ಬೆಂಗಳೂರು ಉತ್ತರ ತಾಲೂಕಿನ ನಾಗವಾರ ಗ್ರಾಮದವರು. ತಮ್ಮ ವಿದ್ಯಾರ್ಥಿ ದಿನಗಳಲ್ಲೇ ದಲಿತ ಹಕ್ಕುಗಳ ಬಗ್ಗೆ ಧ್ವನಿಯನ್ನು ಎತ್ತುತ್ತಾ ಬಂದವರು. ಸಾಹಿತ್ಯ ಮಾತ್ರವಲ್ಲದೆ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಅತ್ಯಂತ ಉತ್ಸುಕರಾಗಿ ಭಾಗವಹಿಸುತ್ತಿದ್ದರು. ಕಾಲೇಜು ಜೀವನದಲ್ಲೇ ಸಮಾಜ ವಿಜ್ಞಾನ, ಅರ್ಥಶಾಸ್ತ್ರ ವಿಷಯಗಳ ಅಧ್ಯಾಪಕರಿಗೆ ಪ್ರೀತಿಯ ವಿದ್ಯಾರ್ಥಿಯಾಗಿ ‘ದಲಿತ ವಿದ್ಯಾರ್ಥಿ ಒಕ್ಕೂಟ’ದ ಮುಖಂಡರಾಗಿದ್ದರು.

ದಲಿತ ಹಿರಿಯ ನೇತಾರ ಬಿ. ಬಸವಲಿಂಗ ಅವರು ನಡೆಸಿದ ಬೂಸಾ ಚಳವಳಿಗೆ ಇಪ್ಪತ್ತೈದು ವರ್ಷಗಳಾದ ಸಂದರ್ಭದಲ್ಲಿ ‘ಬಿ. ಬಸವಲಿಂಗಪ್ಪ ಮತ್ತು ಬೂಸಾ ಚಳವಳಿ: ಕಾಲು ಶತಮಾನ’ ಪುಸ್ತಕವನ್ನು ಸಂಪಾದಿಸಿ ದಲಿತ ಚಳವಳಿಯ ಕುರಿತು ಹಲವು ಒಳನೋಟಗಳನ್ನು ಓದುಗರಿಗೆ ಒದಗಿಸಿದ್ದರು.

ಇದನ್ನೂ ಓದಿ; ತೆಲಂಗಾಣ| ದಲಿತ ಮುಖ್ಯೋಪಾಧ್ಯಾಯರ ಮೇಲೆ ಅಯ್ಯಪ್ಪ ಭಕ್ತರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...