Homeಮುಖಪುಟನಾರಾಯಣ ಗುರುಗಳಿಗೂ ಸನಾತನ ಧರ್ಮಕ್ಕೂ ಸಂಬಂಧವಿಲ್ಲ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ನಾರಾಯಣ ಗುರುಗಳಿಗೂ ಸನಾತನ ಧರ್ಮಕ್ಕೂ ಸಂಬಂಧವಿಲ್ಲ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

- Advertisement -
- Advertisement -

ಸಮಾಜ ಸುಧಾರಕ ಹಾಗೂ ಆಧ್ಯಾತ್ಮಿಕ ನಾಯಕ ಶ್ರೀ ನಾರಾಯಣ ಗುರುವನ್ನು ಸನಾತನ ಧರ್ಮದ ಪ್ರತಿಪಾದಕ ಎಂದು ಬಿಂಬಿಸುವ ಪ್ರಯತ್ನಗಳಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರೋಧ ವ್ಯಕ್ತಪಡಿಸಿದ್ದಾರೆ.

ವರ್ಕಳದಲ್ಲಿ ನಡೆದ 92ನೇ ಶಿವಗಿರಿ ತೀರ್ಥೋದ್ಭವ ಸಮಾವೇಶದಲ್ಲಿ ಮಾತನಾಡಿದ ವಿಜಯನ್, ಗುರುಗಳು ಸನಾತನ ಧರ್ಮದ ವಕ್ತಾರರೂ ಅಲ್ಲ, ಸಾಧಕರೂ ಅಲ್ಲ, ಬದಲಿಗೆ ಮಾನವೀಯ ಧರ್ಮದ ಹೊಸ ಯುಗದ ತತ್ವಶಾಸ್ತ್ರವನ್ನು ಸ್ಥಾಪಿಸಲು ಅದರಿಂದ ಹೊರಬಂದರು ಎಂದು ಒತ್ತಿ ಹೇಳಿದರು.

ಗುರುವಿನ ಬೋಧನೆಗಳನ್ನು ಸಾಮಾನ್ಯವಾಗಿ ‘ವರ್ಣಾಶ್ರಮ ಧರ್ಮ’ ಎಂದು ಕರೆಯಲ್ಪಡುವ ಸನಾತನ ಧರ್ಮದ ಜಾತಿ-ಆಧಾರಿತ ಸಾಮಾಜಿಕ ಕ್ರಮದೊಂದಿಗೆ ಸಂಯೋಜಿಸುವ ಪ್ರಯತ್ನಗಳನ್ನು ವಿಜಯನ್ ಟೀಕಿಸಿದರು. “ಇದನ್ನು ಗುರು ದೀರ್ಘಕಾಲ ವಿರೋಧಿಸಿದ್ದರು, ‘ಸನಾತನ ಧರ್ಮವು ಚಾತುರ್ವರ್ಣ್ಯಂ ಅನ್ನು ಆಧರಿಸಿದೆ, ಅದು ಒಬ್ಬರ ಜಾತಿಯ ಆಧಾರದ ಮೇಲೆ ಉದ್ಯೋಗಗಳನ್ನು ಎತ್ತಿಹಿಡಿಯುತ್ತದೆ. ಆದರೆ, ಗುರುಗಳು ಅಂತಹ ಕಲ್ಪನೆಗಳನ್ನು ಧಿಕ್ಕರಿಸಲು ಪ್ರತಿಪಾದಿಸಿದರು, ಧರ್ಮದ ಆಧಾರದ ಮೇಲೆ ಕೆಲಸಗಳನ್ನು ತಿರಸ್ಕರಿಸುವಂತೆ ಜನರನ್ನು ಒತ್ತಾಯಿಸಿದರು. ಗುರುಗಳ ತತ್ವವು ಜಾತಿ ಆಧಾರಿತ ವ್ಯವಸ್ಥೆಗಳನ್ನು ಮೀರಿದೆ” ಎಂದು ಪ್ರತಿಪಾದಿಸಿದರು.

ಅವರು ಭಾರತೀಯ ರಾಜಕೀಯದಲ್ಲಿ ಸನಾತನ ಹಿಂದುತ್ವ ಎಂಬ ಪದದ ರಾಜಕೀಯ ಪ್ರಾಮುಖ್ಯತೆಯ ಬಗ್ಗೆ ಗಮನ ಸೆಳೆದರು. “ಇದು ರಾಜಪ್ರಭುತ್ವ ಮತ್ತು ಜಾತೀಯತೆಯನ್ನು ಸಂಕೇತಿಸಲು ಬಂದಿದೆ. ಸನಾತನ ಹಿಂದುತ್ವದ ಅಡಿಯಲ್ಲಿ ಪ್ರಚಾರ ಮಾಡುತ್ತಿರುವುದು ಬ್ರಾಹ್ಮಣಶಾಹಿ ಆಡಳಿತಕ್ಕೆ ಮರಳುವುದು. ಈ ಶಕ್ತಿಗಳು ಪ್ರಜಾಪ್ರಭುತ್ವವನ್ನು ವಿರೋಧಿಸುತ್ತವೆ ಎಂಬುದಕ್ಕೆ ನಮಗೆ ಇನ್ನೇನು ಸಾಕ್ಷಿ ಬೇಕು” ಎಂದು ಅವರು ಪ್ರಶ್ನಿಸಿದರು.

ಗುರುಗಳ ಬೋಧನೆಗಳನ್ನು ತಪ್ಪಾಗಿ ನಿರೂಪಿಸುವ ಸಂಘಟಿತ ಪ್ರಯತ್ನಗಳು ನಡೆಯುತ್ತಿವೆ ಎಂದ ಅವರು, ಈ ಬೆಳವಣಿಗೆಯನ್ನು ಜಾತಿ ಆಧಾರಿತ ಸಾಮಾಜಿಕ ನಿಯಮಗಳಿಗೆ ಸವಾಲು ಎಂದು ಹೇಳಿದರು. ಅಂತಹ ತಪ್ಪು ವ್ಯಾಖ್ಯಾನಗಳ ವಿರುದ್ಧ ಜಾಗರೂಕರಾಗಿರಬೇಕುಎ ಂದು ಜನರನ್ನು ಒತ್ತಾಯಿಸಿದರು.

ಗುರುಗಳು ಪ್ರಚಾರ ಮಾಡಿದ ಸಮಾನತೆ ಮತ್ತು ಮಾನವತಾವಾದದ ಮೌಲ್ಯಗಳನ್ನು ಎತ್ತಿ ಹಿಡಿದ ಮುಖ್ಯಮಂತ್ರಿಗಳು, ಸಮಾಜ ಸುಧಾರಕನನ್ನು ಸನಾತನ ಧರ್ಮಕ್ಕೆ ಜೋಡಿಸುವ ಪ್ರಯತ್ನಗಳು ಅವರ ಪರಂಪರೆಗೆ ಅವಮಾನ ಮಾಡಿದಂತಾಗುತ್ತದೆ ಎಂದು ಎಚ್ಚರಿಸಿದರು.

ಪುಣ್ಯಭೂಮಿ ಶಿವಗಿರಿ ಹಾಗೂ ಸನಾತನ ಧರ್ಮದ ಅನುಯಾಯಿಗಳಿಗೆ ವಿಜಯನ್ ಅವಮಾನ ಮಾಡಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ವಿ ಮುರಳೀಧರನ್ ಆರೋಪಿಸಿದ್ದಾರೆ. ವಿಜಯನ್ ಹೇಳಿಕೆಯು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ಹೇಳಿಕೆಯ ಮುಂದುವರಿದ ಭಾಗವಾಗಿದೆ ಎಂದು ಮುರಳೀಧರನ್ ಹೇಳಿದ್ದಾರೆ.

ವಿಜಯನ್ ಅವರನ್ನು ಟೀಕಿಸಿದ ಅವರು, ‘ಧರ್ಮ ಎಂದರೇನು ಎಂಬ ಪ್ರಶ್ನೆಗೆ ಉತ್ತರ ನೀಡದ ಪಠ್ಯ ಎಂದು ಕರೆದರು. ಪವಿತ್ರ ಕುರಾನ್ ಬಗ್ಗೆ ಇಂತಹ ಅನುಮಾನಗಳನ್ನು ಹುಟ್ಟುಹಾಕುವ ಧೈರ್ಯವಿದೆಯೇ ಎಂದು ಅವರು ಮುಖ್ಯಮಂತ್ರಿಗೆ ಸವಾಲು ಹಾಕಿದರು.

ಇದನ್ನೂ ಓದಿ; ಬಿಜೆಪಿ ನಾಯಕನ ‘ಕೇರಳ ಮಿನಿ ಪಾಕಿಸ್ತಾನ’ ಹೇಳಿಕೆ ಖಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...