Homeಮುಖಪುಟನಾರಾಯಣ ಗುರುಗಳಿಗೂ ಸನಾತನ ಧರ್ಮಕ್ಕೂ ಸಂಬಂಧವಿಲ್ಲ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ನಾರಾಯಣ ಗುರುಗಳಿಗೂ ಸನಾತನ ಧರ್ಮಕ್ಕೂ ಸಂಬಂಧವಿಲ್ಲ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

- Advertisement -
- Advertisement -

ಸಮಾಜ ಸುಧಾರಕ ಹಾಗೂ ಆಧ್ಯಾತ್ಮಿಕ ನಾಯಕ ಶ್ರೀ ನಾರಾಯಣ ಗುರುವನ್ನು ಸನಾತನ ಧರ್ಮದ ಪ್ರತಿಪಾದಕ ಎಂದು ಬಿಂಬಿಸುವ ಪ್ರಯತ್ನಗಳಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರೋಧ ವ್ಯಕ್ತಪಡಿಸಿದ್ದಾರೆ.

ವರ್ಕಳದಲ್ಲಿ ನಡೆದ 92ನೇ ಶಿವಗಿರಿ ತೀರ್ಥೋದ್ಭವ ಸಮಾವೇಶದಲ್ಲಿ ಮಾತನಾಡಿದ ವಿಜಯನ್, ಗುರುಗಳು ಸನಾತನ ಧರ್ಮದ ವಕ್ತಾರರೂ ಅಲ್ಲ, ಸಾಧಕರೂ ಅಲ್ಲ, ಬದಲಿಗೆ ಮಾನವೀಯ ಧರ್ಮದ ಹೊಸ ಯುಗದ ತತ್ವಶಾಸ್ತ್ರವನ್ನು ಸ್ಥಾಪಿಸಲು ಅದರಿಂದ ಹೊರಬಂದರು ಎಂದು ಒತ್ತಿ ಹೇಳಿದರು.

ಗುರುವಿನ ಬೋಧನೆಗಳನ್ನು ಸಾಮಾನ್ಯವಾಗಿ ‘ವರ್ಣಾಶ್ರಮ ಧರ್ಮ’ ಎಂದು ಕರೆಯಲ್ಪಡುವ ಸನಾತನ ಧರ್ಮದ ಜಾತಿ-ಆಧಾರಿತ ಸಾಮಾಜಿಕ ಕ್ರಮದೊಂದಿಗೆ ಸಂಯೋಜಿಸುವ ಪ್ರಯತ್ನಗಳನ್ನು ವಿಜಯನ್ ಟೀಕಿಸಿದರು. “ಇದನ್ನು ಗುರು ದೀರ್ಘಕಾಲ ವಿರೋಧಿಸಿದ್ದರು, ‘ಸನಾತನ ಧರ್ಮವು ಚಾತುರ್ವರ್ಣ್ಯಂ ಅನ್ನು ಆಧರಿಸಿದೆ, ಅದು ಒಬ್ಬರ ಜಾತಿಯ ಆಧಾರದ ಮೇಲೆ ಉದ್ಯೋಗಗಳನ್ನು ಎತ್ತಿಹಿಡಿಯುತ್ತದೆ. ಆದರೆ, ಗುರುಗಳು ಅಂತಹ ಕಲ್ಪನೆಗಳನ್ನು ಧಿಕ್ಕರಿಸಲು ಪ್ರತಿಪಾದಿಸಿದರು, ಧರ್ಮದ ಆಧಾರದ ಮೇಲೆ ಕೆಲಸಗಳನ್ನು ತಿರಸ್ಕರಿಸುವಂತೆ ಜನರನ್ನು ಒತ್ತಾಯಿಸಿದರು. ಗುರುಗಳ ತತ್ವವು ಜಾತಿ ಆಧಾರಿತ ವ್ಯವಸ್ಥೆಗಳನ್ನು ಮೀರಿದೆ” ಎಂದು ಪ್ರತಿಪಾದಿಸಿದರು.

ಅವರು ಭಾರತೀಯ ರಾಜಕೀಯದಲ್ಲಿ ಸನಾತನ ಹಿಂದುತ್ವ ಎಂಬ ಪದದ ರಾಜಕೀಯ ಪ್ರಾಮುಖ್ಯತೆಯ ಬಗ್ಗೆ ಗಮನ ಸೆಳೆದರು. “ಇದು ರಾಜಪ್ರಭುತ್ವ ಮತ್ತು ಜಾತೀಯತೆಯನ್ನು ಸಂಕೇತಿಸಲು ಬಂದಿದೆ. ಸನಾತನ ಹಿಂದುತ್ವದ ಅಡಿಯಲ್ಲಿ ಪ್ರಚಾರ ಮಾಡುತ್ತಿರುವುದು ಬ್ರಾಹ್ಮಣಶಾಹಿ ಆಡಳಿತಕ್ಕೆ ಮರಳುವುದು. ಈ ಶಕ್ತಿಗಳು ಪ್ರಜಾಪ್ರಭುತ್ವವನ್ನು ವಿರೋಧಿಸುತ್ತವೆ ಎಂಬುದಕ್ಕೆ ನಮಗೆ ಇನ್ನೇನು ಸಾಕ್ಷಿ ಬೇಕು” ಎಂದು ಅವರು ಪ್ರಶ್ನಿಸಿದರು.

ಗುರುಗಳ ಬೋಧನೆಗಳನ್ನು ತಪ್ಪಾಗಿ ನಿರೂಪಿಸುವ ಸಂಘಟಿತ ಪ್ರಯತ್ನಗಳು ನಡೆಯುತ್ತಿವೆ ಎಂದ ಅವರು, ಈ ಬೆಳವಣಿಗೆಯನ್ನು ಜಾತಿ ಆಧಾರಿತ ಸಾಮಾಜಿಕ ನಿಯಮಗಳಿಗೆ ಸವಾಲು ಎಂದು ಹೇಳಿದರು. ಅಂತಹ ತಪ್ಪು ವ್ಯಾಖ್ಯಾನಗಳ ವಿರುದ್ಧ ಜಾಗರೂಕರಾಗಿರಬೇಕುಎ ಂದು ಜನರನ್ನು ಒತ್ತಾಯಿಸಿದರು.

ಗುರುಗಳು ಪ್ರಚಾರ ಮಾಡಿದ ಸಮಾನತೆ ಮತ್ತು ಮಾನವತಾವಾದದ ಮೌಲ್ಯಗಳನ್ನು ಎತ್ತಿ ಹಿಡಿದ ಮುಖ್ಯಮಂತ್ರಿಗಳು, ಸಮಾಜ ಸುಧಾರಕನನ್ನು ಸನಾತನ ಧರ್ಮಕ್ಕೆ ಜೋಡಿಸುವ ಪ್ರಯತ್ನಗಳು ಅವರ ಪರಂಪರೆಗೆ ಅವಮಾನ ಮಾಡಿದಂತಾಗುತ್ತದೆ ಎಂದು ಎಚ್ಚರಿಸಿದರು.

ಪುಣ್ಯಭೂಮಿ ಶಿವಗಿರಿ ಹಾಗೂ ಸನಾತನ ಧರ್ಮದ ಅನುಯಾಯಿಗಳಿಗೆ ವಿಜಯನ್ ಅವಮಾನ ಮಾಡಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ವಿ ಮುರಳೀಧರನ್ ಆರೋಪಿಸಿದ್ದಾರೆ. ವಿಜಯನ್ ಹೇಳಿಕೆಯು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ಹೇಳಿಕೆಯ ಮುಂದುವರಿದ ಭಾಗವಾಗಿದೆ ಎಂದು ಮುರಳೀಧರನ್ ಹೇಳಿದ್ದಾರೆ.

ವಿಜಯನ್ ಅವರನ್ನು ಟೀಕಿಸಿದ ಅವರು, ‘ಧರ್ಮ ಎಂದರೇನು ಎಂಬ ಪ್ರಶ್ನೆಗೆ ಉತ್ತರ ನೀಡದ ಪಠ್ಯ ಎಂದು ಕರೆದರು. ಪವಿತ್ರ ಕುರಾನ್ ಬಗ್ಗೆ ಇಂತಹ ಅನುಮಾನಗಳನ್ನು ಹುಟ್ಟುಹಾಕುವ ಧೈರ್ಯವಿದೆಯೇ ಎಂದು ಅವರು ಮುಖ್ಯಮಂತ್ರಿಗೆ ಸವಾಲು ಹಾಕಿದರು.

ಇದನ್ನೂ ಓದಿ; ಬಿಜೆಪಿ ನಾಯಕನ ‘ಕೇರಳ ಮಿನಿ ಪಾಕಿಸ್ತಾನ’ ಹೇಳಿಕೆ ಖಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...