Homeಮುಖಪುಟಮರಣದಂಡನೆ ರದ್ದುಗೊಳಿಸಿದ ಝಿಂಬಾಬ್ವೆ : ಐತಿಹಾಸಿಕ ನಿರ್ಧಾರ ಸ್ವಾಗತಿಸಿದ ಮಾನವ ಹಕ್ಕು ಸಂಘಟನೆಗಳು

ಮರಣದಂಡನೆ ರದ್ದುಗೊಳಿಸಿದ ಝಿಂಬಾಬ್ವೆ : ಐತಿಹಾಸಿಕ ನಿರ್ಧಾರ ಸ್ವಾಗತಿಸಿದ ಮಾನವ ಹಕ್ಕು ಸಂಘಟನೆಗಳು

- Advertisement -
- Advertisement -

ಮಹತ್ವದ ಬೆಳವಣಿಗೆಯಲ್ಲಿ ಝಿಂಬಾಬ್ವೆ ರಾಷ್ಟ್ರದಲ್ಲಿ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದು ಎರಡು ದಶಕಗಳ ಬಹು ನಿರೀಕ್ಷಿತ ನಿರ್ಧಾರವಾಗಿತ್ತು.

1960ರ ದಶಕದ ಸ್ವಾತಂತ್ರ್ಯ ಸಮರದ ಸಮಯದಲ್ಲಿ ಸ್ವತಃ ಮರಣದಂಡನೆಗೆ ಗುರಿಯಾಗಿ, ಬಳಿಕ ಅದರಿಂದ ಪಾರಾಗಿದ್ದ ಅಧ್ಯಕ್ಷ ಎಮರ್ಸನ್‌ ನಂಗಾಗ್ವ ಅವರು ಸಂಸತ್ತಿನಲ್ಲಿ ಮಂಡಿಸಿದ ಮಸೂದೆ ಅಂಗೀಕಾರಗೊಂಡಿದೆ.  ಈ ಮೂಲಕ ಮರಣದಂಡನೆ ಶಿಕ್ಷೆ ರದ್ದಾಗಿದೆ.

ಪ್ರಸ್ತುತ ಝಿಂಬಾಬ್ವೆಯಲ್ಲಿ ಸುಮಾರು 60 ಕೈದಿಗಳು ಮರಣದಂಡನೆ ಶಿಕ್ಷೆ ಘೋಷಣೆಯಾದವರಿದ್ದಾರೆ. ಹೊಸ ಕಾನೂನಿನ ಪ್ರಕಾರ ಅವರ ಶಿಕ್ಷೆ ಜೀವಾವಧಿಗೆ ಪರಿವರ್ತನೆಯಾಗುವ ಸಾಧ್ಯತೆ ಇದೆ.

ಝಿಂಬಾಬ್ವೆಯಲ್ಲಿ 2005ರಲ್ಲಿ ಕೊನೆಯದಾಗಿ ವ್ಯಕ್ತಿಯೊಬ್ಬರನ್ನು ಗಲ್ಲಿಗೇರಿಸಲಾಗಿತ್ತು. ಆ ಬಳಿಕ ಈ ರೀತಿಯ ಶಿಕ್ಷೆ ಜಾರಿಯಾಗಿಲ್ಲ. ವರದಿಗಳ ಪ್ರಕಾರ, ಮರಣದಂಡನೆ ಶಿಕ್ಷೆ ವಿಧಿಸುವ ಕೆಲಸ ಮಾಡಲು ಆ ದೇಶದಲ್ಲಿ ಯಾರೂ ಮುಂದೆ ಬರುತ್ತಿಲ್ಲವಂತೆ.

ಝಿಂಬಾಬ್ವೆ ದೇಶ ತೆಗೆದುಕೊಂಡಿರುವ ಐತಿಹಾಸಿಕ ನಿರ್ಧಾರವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಸ್ವಾಗತಿಸಿದ್ದು, “ಇದು ಈ ಪ್ರದೇಶದಲ್ಲಿ ನಿರ್ಮೂಲನವಾದಿ ಚಳವಳಿಗೆ ಭರವಸೆಯ ದಾರಿ ದೀಪವಾಗಿದೆ” ಎಂದಿದೆ.

ಇತರ ಆಫ್ರಿಕನ್ ದೇಶಗಳಾದ ಕೀನ್ಯಾ, ಲೈಬೀರಿಯಾ ಮತ್ತು ಘಾನಾ ಕೂಡ ಮರಣದಂಡನೆಯನ್ನು ರದ್ದುಗೊಳಿಸುವತ್ತ ಇತ್ತೀಚೆಗೆ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಂಡಿವೆ. ಆದರೆ, ಮರಣದಂಡನೆ ಇನ್ನೂ ರದ್ದಾಗಿಲ್ಲ ಎಂದು ಮಾನವ ಹಕ್ಕುಗಳ ಸಂಘಟನೆಗಳು ಹೇಳಿವೆ.

2017ರಿಂದ ಝಿಂಬ್ವಾಬೆಯ ಅಧ್ಯಕ್ಷರಾಗಿರುವ ಎಮರ್ಸನ್‌ ನಂಗಾಗ್ವ ಅವರು, 1960ರ ದಶಕದಲ್ಲಿ ಬಿಳಿಯ ಅಲ್ಪಸಂಖ್ಯಾತರ ಆಳ್ವಿಕೆಯಿಂದ ದೇಶವನ್ನು ಸ್ವಾತಂತ್ರ್ಯಗೊಳಿಸಿದ ಹೋರಾಟದ ವೇಳೆ ರೈಲು ಸ್ಪೋಟಿಸಿದ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ಬಳಿಕ ಅದು 10 ವರ್ಷಗಳ ಜೈಲು ಶಿಕ್ಷೆಗೆ ಪರಿವರ್ತನೆಗೊಂಡ ಪರಿಣಾಮ ಎಮರ್ಸನ್‌ ಬದುಕುಳಿದರು. ಆಗಿನಿಂದ ಮರಣದಂಡನೆಯ ವಿರುದ್ದ ಅವರು ಕಠಿಣ ನಿಲುವು ಹೊಂದಿದ್ದಾರೆ. ಅದು ಈಗ ಮರಣದಂಡನೆಯ ಸಂಪೂರ್ಣ ರದ್ದತಿಗೆ ಕಾರಣವಾಗಿದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಪ್ರಕಾರ, ವಿಶ್ವದ ಮುಕ್ಕಾಲು ಭಾಗದಷ್ಟು ದೇಶಗಳು ಮರಣದಂಡನೆಯನ್ನು ಶಿಕ್ಷೆಯಾಗಿ ಬಳಸುತ್ತವೆ. ಜಾಗತಿಕವಾಗಿ 113 ದೇಶಗಳಲ್ಲಿ 24 ಆಫ್ರಿಕನ್ ದೇಶಗಳು ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿವೆ ಎಂದು ಅದು ಹೇಳುತ್ತದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ವರದಿ 2023ರಲ್ಲಿ ಜಾಗತಿಕವಾಗಿ 1,153 ತಿಳಿದಿರುವ ಮರಣದಂಡನೆಗಳನ್ನು ದಾಖಲಿಸಿದೆ. ಇದು ಹಿಂದಿನ ವರ್ಷದ 883ಕ್ಕಿಂತ ಹೆಚ್ಚಾಗಿದೆ. ಆದರೂ ಮರಣದಂಡನೆಗಳನ್ನು ಜಾರಿಗೊಳಿಸಿದ ದೇಶಗಳ ಸಂಖ್ಯೆ 20ರಿಂದ 16ಕ್ಕೆ ಇಳಿದಿವೆ. ಉತ್ತರ ಕೊರಿಯಾ, ವಿಯೆಟ್ನಾಂ ಮತ್ತು ಚೀನಾ ಅತಿ ಹೆಚ್ಚು ಮರಣದಂಡನೆ ವಿಧಿಸುವ ರಾಷ್ಟ್ರಗಳು. ಆದರೆ, ಇವುಗಳು ಗೌಪ್ಯತೆಯ ಕಾರಣಕ್ಕೆ ಅಂಕಿ ಅಂಶಗಳನ್ನು ನೀಡುತ್ತಿಲ್ಲ ಎಂದು ಆಮ್ನೆಸ್ಟಿ ಹೇಳಿದೆ.

2023ರಲ್ಲಿ ಅಮ್ನೆಸ್ಟಿ ದಾಖಲಿಸಿದ ಒಟ್ಟು ಮರಣದಂಡನೆಗಳಲ್ಲಿ ಇರಾನ್ ಮತ್ತು ಸೌದಿ ಅರೇಬಿಯಾದ ಪಾಲು ಸುಮಾರು ಶೇಖಡ 90ರಷ್ಟಿದೆ, ನಂತರದ ಸ್ಥಾನಗಳಲ್ಲಿ ಸೊಮಾಲಿಯಾ ಮತ್ತು ಯುಎಸ್‌ ಇದೆ.

ಇದನ್ನೂ ಓದಿ : ಸಿಂಗಾಪುರ ಕೆಫೆಯಲ್ಲಿ ಕ್ಯಾಷಿಯರ್‌ ಕುರಿತು ಜನಾಂಗೀಯ ಟೀಕೆ; ಭಾರತೀಯ ಮೂಲದ ವ್ಯಕ್ತಿಗೆ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...