Homeಮುಖಪುಟಮರಣದಂಡನೆ ರದ್ದುಗೊಳಿಸಿದ ಝಿಂಬಾಬ್ವೆ : ಐತಿಹಾಸಿಕ ನಿರ್ಧಾರ ಸ್ವಾಗತಿಸಿದ ಮಾನವ ಹಕ್ಕು ಸಂಘಟನೆಗಳು

ಮರಣದಂಡನೆ ರದ್ದುಗೊಳಿಸಿದ ಝಿಂಬಾಬ್ವೆ : ಐತಿಹಾಸಿಕ ನಿರ್ಧಾರ ಸ್ವಾಗತಿಸಿದ ಮಾನವ ಹಕ್ಕು ಸಂಘಟನೆಗಳು

- Advertisement -
- Advertisement -

ಮಹತ್ವದ ಬೆಳವಣಿಗೆಯಲ್ಲಿ ಝಿಂಬಾಬ್ವೆ ರಾಷ್ಟ್ರದಲ್ಲಿ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದು ಎರಡು ದಶಕಗಳ ಬಹು ನಿರೀಕ್ಷಿತ ನಿರ್ಧಾರವಾಗಿತ್ತು.

1960ರ ದಶಕದ ಸ್ವಾತಂತ್ರ್ಯ ಸಮರದ ಸಮಯದಲ್ಲಿ ಸ್ವತಃ ಮರಣದಂಡನೆಗೆ ಗುರಿಯಾಗಿ, ಬಳಿಕ ಅದರಿಂದ ಪಾರಾಗಿದ್ದ ಅಧ್ಯಕ್ಷ ಎಮರ್ಸನ್‌ ನಂಗಾಗ್ವ ಅವರು ಸಂಸತ್ತಿನಲ್ಲಿ ಮಂಡಿಸಿದ ಮಸೂದೆ ಅಂಗೀಕಾರಗೊಂಡಿದೆ.  ಈ ಮೂಲಕ ಮರಣದಂಡನೆ ಶಿಕ್ಷೆ ರದ್ದಾಗಿದೆ.

ಪ್ರಸ್ತುತ ಝಿಂಬಾಬ್ವೆಯಲ್ಲಿ ಸುಮಾರು 60 ಕೈದಿಗಳು ಮರಣದಂಡನೆ ಶಿಕ್ಷೆ ಘೋಷಣೆಯಾದವರಿದ್ದಾರೆ. ಹೊಸ ಕಾನೂನಿನ ಪ್ರಕಾರ ಅವರ ಶಿಕ್ಷೆ ಜೀವಾವಧಿಗೆ ಪರಿವರ್ತನೆಯಾಗುವ ಸಾಧ್ಯತೆ ಇದೆ.

ಝಿಂಬಾಬ್ವೆಯಲ್ಲಿ 2005ರಲ್ಲಿ ಕೊನೆಯದಾಗಿ ವ್ಯಕ್ತಿಯೊಬ್ಬರನ್ನು ಗಲ್ಲಿಗೇರಿಸಲಾಗಿತ್ತು. ಆ ಬಳಿಕ ಈ ರೀತಿಯ ಶಿಕ್ಷೆ ಜಾರಿಯಾಗಿಲ್ಲ. ವರದಿಗಳ ಪ್ರಕಾರ, ಮರಣದಂಡನೆ ಶಿಕ್ಷೆ ವಿಧಿಸುವ ಕೆಲಸ ಮಾಡಲು ಆ ದೇಶದಲ್ಲಿ ಯಾರೂ ಮುಂದೆ ಬರುತ್ತಿಲ್ಲವಂತೆ.

ಝಿಂಬಾಬ್ವೆ ದೇಶ ತೆಗೆದುಕೊಂಡಿರುವ ಐತಿಹಾಸಿಕ ನಿರ್ಧಾರವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಸ್ವಾಗತಿಸಿದ್ದು, “ಇದು ಈ ಪ್ರದೇಶದಲ್ಲಿ ನಿರ್ಮೂಲನವಾದಿ ಚಳವಳಿಗೆ ಭರವಸೆಯ ದಾರಿ ದೀಪವಾಗಿದೆ” ಎಂದಿದೆ.

ಇತರ ಆಫ್ರಿಕನ್ ದೇಶಗಳಾದ ಕೀನ್ಯಾ, ಲೈಬೀರಿಯಾ ಮತ್ತು ಘಾನಾ ಕೂಡ ಮರಣದಂಡನೆಯನ್ನು ರದ್ದುಗೊಳಿಸುವತ್ತ ಇತ್ತೀಚೆಗೆ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಂಡಿವೆ. ಆದರೆ, ಮರಣದಂಡನೆ ಇನ್ನೂ ರದ್ದಾಗಿಲ್ಲ ಎಂದು ಮಾನವ ಹಕ್ಕುಗಳ ಸಂಘಟನೆಗಳು ಹೇಳಿವೆ.

2017ರಿಂದ ಝಿಂಬ್ವಾಬೆಯ ಅಧ್ಯಕ್ಷರಾಗಿರುವ ಎಮರ್ಸನ್‌ ನಂಗಾಗ್ವ ಅವರು, 1960ರ ದಶಕದಲ್ಲಿ ಬಿಳಿಯ ಅಲ್ಪಸಂಖ್ಯಾತರ ಆಳ್ವಿಕೆಯಿಂದ ದೇಶವನ್ನು ಸ್ವಾತಂತ್ರ್ಯಗೊಳಿಸಿದ ಹೋರಾಟದ ವೇಳೆ ರೈಲು ಸ್ಪೋಟಿಸಿದ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ಬಳಿಕ ಅದು 10 ವರ್ಷಗಳ ಜೈಲು ಶಿಕ್ಷೆಗೆ ಪರಿವರ್ತನೆಗೊಂಡ ಪರಿಣಾಮ ಎಮರ್ಸನ್‌ ಬದುಕುಳಿದರು. ಆಗಿನಿಂದ ಮರಣದಂಡನೆಯ ವಿರುದ್ದ ಅವರು ಕಠಿಣ ನಿಲುವು ಹೊಂದಿದ್ದಾರೆ. ಅದು ಈಗ ಮರಣದಂಡನೆಯ ಸಂಪೂರ್ಣ ರದ್ದತಿಗೆ ಕಾರಣವಾಗಿದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಪ್ರಕಾರ, ವಿಶ್ವದ ಮುಕ್ಕಾಲು ಭಾಗದಷ್ಟು ದೇಶಗಳು ಮರಣದಂಡನೆಯನ್ನು ಶಿಕ್ಷೆಯಾಗಿ ಬಳಸುತ್ತವೆ. ಜಾಗತಿಕವಾಗಿ 113 ದೇಶಗಳಲ್ಲಿ 24 ಆಫ್ರಿಕನ್ ದೇಶಗಳು ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿವೆ ಎಂದು ಅದು ಹೇಳುತ್ತದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ವರದಿ 2023ರಲ್ಲಿ ಜಾಗತಿಕವಾಗಿ 1,153 ತಿಳಿದಿರುವ ಮರಣದಂಡನೆಗಳನ್ನು ದಾಖಲಿಸಿದೆ. ಇದು ಹಿಂದಿನ ವರ್ಷದ 883ಕ್ಕಿಂತ ಹೆಚ್ಚಾಗಿದೆ. ಆದರೂ ಮರಣದಂಡನೆಗಳನ್ನು ಜಾರಿಗೊಳಿಸಿದ ದೇಶಗಳ ಸಂಖ್ಯೆ 20ರಿಂದ 16ಕ್ಕೆ ಇಳಿದಿವೆ. ಉತ್ತರ ಕೊರಿಯಾ, ವಿಯೆಟ್ನಾಂ ಮತ್ತು ಚೀನಾ ಅತಿ ಹೆಚ್ಚು ಮರಣದಂಡನೆ ವಿಧಿಸುವ ರಾಷ್ಟ್ರಗಳು. ಆದರೆ, ಇವುಗಳು ಗೌಪ್ಯತೆಯ ಕಾರಣಕ್ಕೆ ಅಂಕಿ ಅಂಶಗಳನ್ನು ನೀಡುತ್ತಿಲ್ಲ ಎಂದು ಆಮ್ನೆಸ್ಟಿ ಹೇಳಿದೆ.

2023ರಲ್ಲಿ ಅಮ್ನೆಸ್ಟಿ ದಾಖಲಿಸಿದ ಒಟ್ಟು ಮರಣದಂಡನೆಗಳಲ್ಲಿ ಇರಾನ್ ಮತ್ತು ಸೌದಿ ಅರೇಬಿಯಾದ ಪಾಲು ಸುಮಾರು ಶೇಖಡ 90ರಷ್ಟಿದೆ, ನಂತರದ ಸ್ಥಾನಗಳಲ್ಲಿ ಸೊಮಾಲಿಯಾ ಮತ್ತು ಯುಎಸ್‌ ಇದೆ.

ಇದನ್ನೂ ಓದಿ : ಸಿಂಗಾಪುರ ಕೆಫೆಯಲ್ಲಿ ಕ್ಯಾಷಿಯರ್‌ ಕುರಿತು ಜನಾಂಗೀಯ ಟೀಕೆ; ಭಾರತೀಯ ಮೂಲದ ವ್ಯಕ್ತಿಗೆ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...