Homeಮುಖಪುಟಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

ಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

- Advertisement -
- Advertisement -

ಗೋಹತ್ಯೆ ಶಂಕೆ ಮೇಲೆ ಸ್ವಘೋಷಿತ ಗೋರಕ್ಷಕರ ಗುಂಪು ವ್ಯಕ್ತಿಯೊಬ್ಬರನ್ನು ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನ ಮಜೋಲಾದಲ್ಲಿ ಸೋಮವಾರ (ಡಿ.30) ಮುಂಜಾನೆ ನಡೆದಿದೆ ಎಂದು ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಶಹದೀನ್ ಖುರೇಷಿ (37) ಎಂದು ಗುರುತಿಸಲಾಗಿದೆ. ಗುಂಪು ಹಲ್ಲೆಗೊಳಗಾದ ಶಹದೀನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಶಹದೀನ್ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಮಂಗಳವಾರ ಆರೋಪಿಗಳೇ ಹರಿಬಿಟ್ಟಿರುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

ವಿಡಿಯೋದಲ್ಲಿ, ಬಲಪಂಥೀಯ ಸಂಘಟನೆಯ ಕೆಲ ಕಾರ್ಯಕರ್ತರು ಶಹದೀನ್ ಅವರಿಗೆ ಒದಿಯುತ್ತಿರುವ, ಗುದ್ದುತ್ತಿರುವ ಮತ್ತು ಹರಿತವಾದ ಆಯುಧಗಳಿಂದ ಹೊಡೆಯುತ್ತಿರುವ ದೃಶ್ಯವಿದೆ. ನೆಲದಲ್ಲಿ ಬಿದ್ದಿರುವ ಶಹದೀನ್ ಮೈತುಂಬಾ ಗಾಯಗಳು ಕಾಣಿಸುತ್ತಿದ್ದು, ಉಸಿರಾಡಲು ಕಷ್ಟಪಡುತ್ತಿರುವ ದೃಶ್ಯ ಮನ ಕಲುಕುವಂತಿದೆ. ಶಹದೀನ್ ಅವರ ಪಕ್ಕದಲ್ಲಿ ಸತ್ತ ಹಸುವಿನ ಕಳೇಬರ ಇದ್ದು, ಹಸುವನ್ನು ಶಹದೀನ್ ಅವರೇ ಹತ್ಯೆ ಮಾಡಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ ಎಂದು ವರದಿ ವಿವರಿಸಿದೆ.

“ಜಾನುವಾರನ್ನು ಹತ್ಯೆ ಮಾಡಲಾಗಿದೆ ಎನ್ನುವುದು ಸ್ಥಳೀಯರಿಗೆ ತಿಳಿದು ಬಂದಿದ್ದು, ಹಸುವನ್ನು ಹತ್ಯೆ ಮಾಡಲಾಗಿದೆ ಎನ್ನಲಾದ ಗುಂಪಿನ ಎಲ್ಲರೂ ತಪ್ಪಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಮಾತ್ರ ಸಾರ್ವಜನಿಕರು ಹಿಡಿದಿದ್ದಾರೆ. ಹಸುವಿನ ಕಳೇಬರವನ್ನು ಕಂಡು ಸಾರ್ವಜನಿಕರು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ್ದಾರೆ. ಚಿಕಿತ್ಸೆ ವೇಳೆ ವ್ಯಕ್ತಿ ಮೃತಪಟ್ಟಿದ್ದಾರೆ. ವ್ಯಕ್ತಿಯ ಸಹೋದರ ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಕೊಲೆ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಶೀಘ್ರ ಪತ್ತೆ ಮಾಡಿ ಬಂಧಿಸಲಾಗುವುದು” ಎಂದು ಮೊರದಾಬಾದ್ ನಗರ ಎಸ್ಪಿ ರಣವಿಜಯ ಸಿಂಗ್ ಹೇಳಿದ್ದಾರೆ.

ಮಾಂಸದ ಅಂಗಡಿ ನಡೆಸುತ್ತಿರುವ ಶಹದೀದ್ ಅವರ ಸಹೋದರ ಶಹಝಾದ್ ಮಾತನಾಡಿದ್ದು “ನನ್ನ ಸಹೋದರ ಬಾಡಿಬಿಲ್ಡರ್ ಆಗಿದ್ದು, ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾಂಸದ ವ್ಯಾಪಾರಕ್ಕೂ ಆತನಿಗೂ ಯಾವುದೇ ಸಂಬಂಧವಿಲ್ಲ. ಈ ಹಿಂದೆ ಆತನ ವಿರುದ್ಧ ಯಾವುದೇ ಎಫ್‌ಐಆರ್ ಕೂಡ ದಾಖಲಾಗಿಲ್ಲ. ಒಂದು ವರ್ಷದ ಹಿಂದೆ, ಅನಾರೋಗ್ಯಕ್ಕೆ ಒಳಗಾಗಿದ್ದ ಶಹದೀನ್ ಶ್ವಾಸಕೋಶಗಳು ದುರ್ಬಲಗೊಂಡಿದ್ದರಿಂದ ಆಸ್ಪತ್ರೆಯಲ್ಲಿ ಸುಮಾರು ಆರು ತಿಂಗಳ ಕಾಲ ಕಳೆದಿದ್ದರು. ಈ ವೇಳೆ ಅವರ ಕೆಲಸ ಹೋಗಿತ್ತು. ನನ್ನ ಸಹೋದರ ಎಂದಿಗೂ ತಪ್ಪು ಕೆಲಸ ಮಾಡುವವನಲ್ಲ. ಇತರರು ಮಾಡಿರುವುದಕ್ಕೆ ಈತ ಬೆಲೆ ತೆತ್ತಿದ್ದಾನೆ” ಎಂದು ಹೇಳಿದ್ದಾಗಿ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಶಹದೀನ್ ಅವರ ಪತ್ನಿ ರಿಝ್ವಾನಾ ಮಾತನಾಡಿ, “ಭಾನುವಾರ ಮಧ್ಯರಾತ್ರಿಯ ಸುಮಾರಿಗೆ ನನ್ನ ಪತಿ ಮನೆಯಲ್ಲಿ ಮಲಗಿದ್ದಾಗ, ಅವರ ಸ್ನೇಹಿತರು ಕರೆದುಕೊಂಡು ಹೋಗಿದ್ದರು. ಕೆಲ ಗಂಟೆಗಳ ನಂತರ, ಗುಂಪೊಂದು ಶಹದೀನ್ ಅವರನ್ನು ಹತ್ಯೆಗೈದಿರುವುದು ನಮಗೆ ತಿಳಿಯಿತು. ಅಪರಾಧಿಗಳು ನಿರ್ದಯವಾಗಿ ಹಲ್ಲೆ ನಡೆಸುತ್ತಿರುವುದನ್ನು ಸ್ಪಷ್ಟವಾಗಿ ತೋರಿಸುವ ವಿಡಿಯೋಗಳಿದ್ದರೂ, ಪೊಲೀಸರು ಅಪರಿಚಿತರ ವಿರುದ್ದ ಎಫ್‌ಐಅರ್ ದಾಖಲಿಸಿದ್ದಾರೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾಗಿ ವರದಿ ಹೇಳಿದೆ.

“ನಮ್ಮ ಗುಂಪಿನ ಸದಸ್ಯರೂ ಆಗಿರುವ ಸ್ಥಳೀಯ ಅಂಗಡಿಯವರಿಂದ ಒಬ್ಬ ವ್ಯಕ್ತಿ ಗೋಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ನಮಗೆ ತಿಳಿಯಿತು. ಅವರನ್ನು ರೆಡ್ ಹ್ಯಾಂಡ್‌ ಆಗಿ ಹಿಡಿದು, ಗೋವಿನ ಕಳೇಬರದೊಂದಿಗೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಹಸುವನ್ನು ಹತ್ಯೆ ಮಾಡಿದವರ ವಿರುದ್ಧ ದೂರು ದಾಖಲಿಸಲಾಗಿದೆ ಮತ್ತು ಪೊಲೀಸರು ನಮಗೆ ಕಠಿಣ ಕ್ರಮದ ಭರವಸೆ ನೀಡಿದ್ದಾರೆ” ಎಂದು ರಾಷ್ಟ್ರೀಯ ಬಜರಂಗ ದಳದ ಕಾರ್ಯಾಧ್ಯಕ್ಷ ರೋಹನ್ ಸಕ್ಸೇನಾ ಹೇಳಿದ್ದಾರೆ.

ಅಸಲತ್‌ಪುರ ಪ್ರದೇಶದಲ್ಲಿ ವಾಸಿಸುತ್ತಿದ್ದ ಶಹದೀನ್ ಖುರೇಷಿ ಅವರು ಪತ್ನಿ ರಿಝ್ವಾನಾ ಮತ್ತು ಮೂವರು ಪುತ್ರರಾದ ಆರಾಮ್ (13), ಆಶಿ (11) ಮತ್ತು ಇಬ್ಝಾನ್ (9) ಅವರನ್ನು ಅಗಲಿದ್ದಾರೆ. ಸೋಮವಾರ ರಾತ್ರಿ ಶಹದೀನ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ, ಮಂಗಳವಾರ ಬೆಳಗ್ಗೆ ಅಂತ್ಯಕ್ರಿಯೆ ನಡೆಸಲಾಗಿದೆ.

ಕೃಪೆ : timesofindia.indiatimes.com

ಇದನ್ನೂ ಓದಿ : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ : ಏಳು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...