Homeಮುಖಪುಟಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

ಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

- Advertisement -
- Advertisement -

ಗೋಹತ್ಯೆ ಶಂಕೆ ಮೇಲೆ ಸ್ವಘೋಷಿತ ಗೋರಕ್ಷಕರ ಗುಂಪು ವ್ಯಕ್ತಿಯೊಬ್ಬರನ್ನು ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನ ಮಜೋಲಾದಲ್ಲಿ ಸೋಮವಾರ (ಡಿ.30) ಮುಂಜಾನೆ ನಡೆದಿದೆ ಎಂದು ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಶಹದೀನ್ ಖುರೇಷಿ (37) ಎಂದು ಗುರುತಿಸಲಾಗಿದೆ. ಗುಂಪು ಹಲ್ಲೆಗೊಳಗಾದ ಶಹದೀನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಶಹದೀನ್ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಮಂಗಳವಾರ ಆರೋಪಿಗಳೇ ಹರಿಬಿಟ್ಟಿರುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

ವಿಡಿಯೋದಲ್ಲಿ, ಬಲಪಂಥೀಯ ಸಂಘಟನೆಯ ಕೆಲ ಕಾರ್ಯಕರ್ತರು ಶಹದೀನ್ ಅವರಿಗೆ ಒದಿಯುತ್ತಿರುವ, ಗುದ್ದುತ್ತಿರುವ ಮತ್ತು ಹರಿತವಾದ ಆಯುಧಗಳಿಂದ ಹೊಡೆಯುತ್ತಿರುವ ದೃಶ್ಯವಿದೆ. ನೆಲದಲ್ಲಿ ಬಿದ್ದಿರುವ ಶಹದೀನ್ ಮೈತುಂಬಾ ಗಾಯಗಳು ಕಾಣಿಸುತ್ತಿದ್ದು, ಉಸಿರಾಡಲು ಕಷ್ಟಪಡುತ್ತಿರುವ ದೃಶ್ಯ ಮನ ಕಲುಕುವಂತಿದೆ. ಶಹದೀನ್ ಅವರ ಪಕ್ಕದಲ್ಲಿ ಸತ್ತ ಹಸುವಿನ ಕಳೇಬರ ಇದ್ದು, ಹಸುವನ್ನು ಶಹದೀನ್ ಅವರೇ ಹತ್ಯೆ ಮಾಡಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ ಎಂದು ವರದಿ ವಿವರಿಸಿದೆ.

“ಜಾನುವಾರನ್ನು ಹತ್ಯೆ ಮಾಡಲಾಗಿದೆ ಎನ್ನುವುದು ಸ್ಥಳೀಯರಿಗೆ ತಿಳಿದು ಬಂದಿದ್ದು, ಹಸುವನ್ನು ಹತ್ಯೆ ಮಾಡಲಾಗಿದೆ ಎನ್ನಲಾದ ಗುಂಪಿನ ಎಲ್ಲರೂ ತಪ್ಪಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಮಾತ್ರ ಸಾರ್ವಜನಿಕರು ಹಿಡಿದಿದ್ದಾರೆ. ಹಸುವಿನ ಕಳೇಬರವನ್ನು ಕಂಡು ಸಾರ್ವಜನಿಕರು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ್ದಾರೆ. ಚಿಕಿತ್ಸೆ ವೇಳೆ ವ್ಯಕ್ತಿ ಮೃತಪಟ್ಟಿದ್ದಾರೆ. ವ್ಯಕ್ತಿಯ ಸಹೋದರ ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಕೊಲೆ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಶೀಘ್ರ ಪತ್ತೆ ಮಾಡಿ ಬಂಧಿಸಲಾಗುವುದು” ಎಂದು ಮೊರದಾಬಾದ್ ನಗರ ಎಸ್ಪಿ ರಣವಿಜಯ ಸಿಂಗ್ ಹೇಳಿದ್ದಾರೆ.

ಮಾಂಸದ ಅಂಗಡಿ ನಡೆಸುತ್ತಿರುವ ಶಹದೀದ್ ಅವರ ಸಹೋದರ ಶಹಝಾದ್ ಮಾತನಾಡಿದ್ದು “ನನ್ನ ಸಹೋದರ ಬಾಡಿಬಿಲ್ಡರ್ ಆಗಿದ್ದು, ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾಂಸದ ವ್ಯಾಪಾರಕ್ಕೂ ಆತನಿಗೂ ಯಾವುದೇ ಸಂಬಂಧವಿಲ್ಲ. ಈ ಹಿಂದೆ ಆತನ ವಿರುದ್ಧ ಯಾವುದೇ ಎಫ್‌ಐಆರ್ ಕೂಡ ದಾಖಲಾಗಿಲ್ಲ. ಒಂದು ವರ್ಷದ ಹಿಂದೆ, ಅನಾರೋಗ್ಯಕ್ಕೆ ಒಳಗಾಗಿದ್ದ ಶಹದೀನ್ ಶ್ವಾಸಕೋಶಗಳು ದುರ್ಬಲಗೊಂಡಿದ್ದರಿಂದ ಆಸ್ಪತ್ರೆಯಲ್ಲಿ ಸುಮಾರು ಆರು ತಿಂಗಳ ಕಾಲ ಕಳೆದಿದ್ದರು. ಈ ವೇಳೆ ಅವರ ಕೆಲಸ ಹೋಗಿತ್ತು. ನನ್ನ ಸಹೋದರ ಎಂದಿಗೂ ತಪ್ಪು ಕೆಲಸ ಮಾಡುವವನಲ್ಲ. ಇತರರು ಮಾಡಿರುವುದಕ್ಕೆ ಈತ ಬೆಲೆ ತೆತ್ತಿದ್ದಾನೆ” ಎಂದು ಹೇಳಿದ್ದಾಗಿ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಶಹದೀನ್ ಅವರ ಪತ್ನಿ ರಿಝ್ವಾನಾ ಮಾತನಾಡಿ, “ಭಾನುವಾರ ಮಧ್ಯರಾತ್ರಿಯ ಸುಮಾರಿಗೆ ನನ್ನ ಪತಿ ಮನೆಯಲ್ಲಿ ಮಲಗಿದ್ದಾಗ, ಅವರ ಸ್ನೇಹಿತರು ಕರೆದುಕೊಂಡು ಹೋಗಿದ್ದರು. ಕೆಲ ಗಂಟೆಗಳ ನಂತರ, ಗುಂಪೊಂದು ಶಹದೀನ್ ಅವರನ್ನು ಹತ್ಯೆಗೈದಿರುವುದು ನಮಗೆ ತಿಳಿಯಿತು. ಅಪರಾಧಿಗಳು ನಿರ್ದಯವಾಗಿ ಹಲ್ಲೆ ನಡೆಸುತ್ತಿರುವುದನ್ನು ಸ್ಪಷ್ಟವಾಗಿ ತೋರಿಸುವ ವಿಡಿಯೋಗಳಿದ್ದರೂ, ಪೊಲೀಸರು ಅಪರಿಚಿತರ ವಿರುದ್ದ ಎಫ್‌ಐಅರ್ ದಾಖಲಿಸಿದ್ದಾರೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾಗಿ ವರದಿ ಹೇಳಿದೆ.

“ನಮ್ಮ ಗುಂಪಿನ ಸದಸ್ಯರೂ ಆಗಿರುವ ಸ್ಥಳೀಯ ಅಂಗಡಿಯವರಿಂದ ಒಬ್ಬ ವ್ಯಕ್ತಿ ಗೋಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ನಮಗೆ ತಿಳಿಯಿತು. ಅವರನ್ನು ರೆಡ್ ಹ್ಯಾಂಡ್‌ ಆಗಿ ಹಿಡಿದು, ಗೋವಿನ ಕಳೇಬರದೊಂದಿಗೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಹಸುವನ್ನು ಹತ್ಯೆ ಮಾಡಿದವರ ವಿರುದ್ಧ ದೂರು ದಾಖಲಿಸಲಾಗಿದೆ ಮತ್ತು ಪೊಲೀಸರು ನಮಗೆ ಕಠಿಣ ಕ್ರಮದ ಭರವಸೆ ನೀಡಿದ್ದಾರೆ” ಎಂದು ರಾಷ್ಟ್ರೀಯ ಬಜರಂಗ ದಳದ ಕಾರ್ಯಾಧ್ಯಕ್ಷ ರೋಹನ್ ಸಕ್ಸೇನಾ ಹೇಳಿದ್ದಾರೆ.

ಅಸಲತ್‌ಪುರ ಪ್ರದೇಶದಲ್ಲಿ ವಾಸಿಸುತ್ತಿದ್ದ ಶಹದೀನ್ ಖುರೇಷಿ ಅವರು ಪತ್ನಿ ರಿಝ್ವಾನಾ ಮತ್ತು ಮೂವರು ಪುತ್ರರಾದ ಆರಾಮ್ (13), ಆಶಿ (11) ಮತ್ತು ಇಬ್ಝಾನ್ (9) ಅವರನ್ನು ಅಗಲಿದ್ದಾರೆ. ಸೋಮವಾರ ರಾತ್ರಿ ಶಹದೀನ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ, ಮಂಗಳವಾರ ಬೆಳಗ್ಗೆ ಅಂತ್ಯಕ್ರಿಯೆ ನಡೆಸಲಾಗಿದೆ.

ಕೃಪೆ : timesofindia.indiatimes.com

ಇದನ್ನೂ ಓದಿ : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ : ಏಳು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...