Homeಮುಖಪುಟಬಿಜೆಪಿ ಆಡಳಿತದ ರಾಜ್ಯಗಳು ದಲಿತ ದೌರ್ಜನ್ಯ ಪ್ರಯೋಗಶಾಲೆಗಳಾಗಿ ಮಾರ್ಪಟ್ಟಿವೆ: ಕುಮಾರಿ ಸೆಲ್ಜಾ

ಬಿಜೆಪಿ ಆಡಳಿತದ ರಾಜ್ಯಗಳು ದಲಿತ ದೌರ್ಜನ್ಯ ಪ್ರಯೋಗಶಾಲೆಗಳಾಗಿ ಮಾರ್ಪಟ್ಟಿವೆ: ಕುಮಾರಿ ಸೆಲ್ಜಾ

- Advertisement -
- Advertisement -

‘ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಲಿತ ದೌರ್ಜನ್ಯ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ. ಪರಿಶಿಷ್ಟರ ಮೇಲಿನ ದೌರ್ಜನ್ಯದ ಪ್ರಯೋಗಾಲಯಗಳಾಗಿ ಬದಲಾಗುತ್ತಿವೆ” ಎಂದು ಸಿರ್ಸಾ ಕಾಂಗ್ರೆಸ್ ಸಂಸದೆ ಕುಮಾರಿ ಸೆಲ್ಜಾ ಆರೋಪಿಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳು ದಲಿತರ ಮೇಲಿನ ದೌರ್ಜನ್ಯಗಳ ಪ್ರಯೋಗಶಾಲೆಗಳಾಗಿ ಮಾರ್ಪಟ್ಟಿವೆ. ಮೀಸಲಾತಿ ಸ್ಥಾನಗಳು ಭರ್ತಿಯಾಗದೆ ಉಳಿದಿವೆ, ದಲಿತರ ಕಲ್ಯಾಣಕ್ಕಾಗಿ ಘೋಷಣೆಗಳನ್ನು ಚುನಾವಣೆ ಸಮಯದಲ್ಲಿ ಮಾತ್ರ ಮಾಡಲಾಗುತ್ತದೆ. ಚುನಾವಣೆ ಮುಗಿದ ಮೇಲೆ ದಲಿತರನ್ನು ಮರೆತು ದಬ್ಬಾಳಿಕೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ಕಾಲೇಜು ಶುಲ್ಕ ಪಾವತಿಸದ ಕಾರಣಕ್ಕಾಗಿ ಪರೀಕ್ಷೆಯನ್ನು ನಿರಾಕರಿಸಿದ ದಲಿತ ಬಾಲಕಿ ದೀಕ್ಷಾ ಅವರ ದುರಂತ ಆತ್ಮಹತ್ಯೆಯ ವಿಷಯವನ್ನು ಪ್ರಸ್ತಾಪಿಸಿದ ಸೆಲ್ಜಾ, “ಅಂಚಿನಲ್ಲಿರುವ ಸಮುದಾಯಗಳನ್ನು ರಕ್ಷಿಸುವಲ್ಲಿ ಬಿಜೆಪಿ ವಿಫಲವಾಗಿದೆ. ದೀಕ್ಷಾ ಅವರ ಏಕೈಕ ದೋಷವೆಂದರೆ, ಬಡ ದಲಿತ ಕುಟುಂಬದಲ್ಲಿ ಜನಿಸಿದ್ದು. ಈ ಘಟನೆಯು ಬಿಜೆಪಿಯ ‘ಬೇಟಿ ಬಚಾವೋ, ಬೇಟಿ ಪಢಾವೋ’ ಘೋಷಣೆಯ ಪೊಳ್ಳು ಸ್ವರೂಪವನ್ನು ಬಹಿರಂಗಪಡಿಸುತ್ತದೆ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಸರ್ಕಾರವು ತಾರತಮ್ಯವನ್ನು ಯಾವಾಗ ಕೊನೆಗೊಳಿಸುತ್ತದೆ ಎಂದು ಅವರು ಪ್ರಶ್ನಿಸಿದರು. “ಬಿಜೆಪಿಯ ಅಭಿವೃದ್ಧಿಯ ಮಾದರಿಯು ಆಯ್ದ ಕೆಲವರಿಗೆ ಸೀಮಿತವಾಗಿದೆಯೇ? ದಲಿತ ಮತ್ತು ದುರ್ಬಲ ವರ್ಗದ ಮಕ್ಕಳ ಕನಸುಗಳಿಗೆ ಬೆಲೆ ಇಲ್ಲವೇ” ಎಂದು ಅವರು ಪ್ರಶ್ನಿಸಿದ್ದಾರೆ.

ಧಾರ್ಮಿಕ ಮತಾಂತರದ ಆರೋಪದ ಮೇಲೆ ಒಡಿಶಾದಲ್ಲಿ ಬುಡಕಟ್ಟು ಮಹಿಳೆಯರನ್ನು ಥಳಿಸಿರುವುದು ಮತ್ತು ಮಧ್ಯಪ್ರದೇಶದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ದಲಿತ ಯುವಕನ ಸಾವು ಸೇರಿದಂತೆ ದಬ್ಬಾಳಿಕೆಯ ಅನೇಕ ಘಟನೆಗಳನ್ನು ಸೆಲ್ಜಾ ಉಲ್ಲೇಖಿಸಿದ್ದಾರೆ. ಎರಡೂ ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ.

‘ಬಿಜೆಪಿ ಆಡಳಿತವಿರುವ ರಾಜ್ಯಗಳು ದಲಿತರ ಮೇಲಿನ ದೌರ್ಜನ್ಯಗಳ ಪ್ರಯೋಗಾಲಯಗಳಾಗಿ ಮಾರ್ಪಟ್ಟಿವೆ. ಮೀಸಲಾತಿ ಸ್ಥಾನಗಳು ಭರ್ತಿಯಾಗದೆ ಉಳಿದಿವೆ ಮತ್ತು ದಲಿತರ ಕಲ್ಯಾಣಕ್ಕಾಗಿ ಘೋಷಣೆಗಳನ್ನು ಚುನಾವಣೆ ಸಮಯದಲ್ಲಿ ಮಾತ್ರ ಮಾಡಲಾಗುತ್ತದೆ. ಚುನಾವಣೆ ಮುಗಿದ ನಂತರ ದಲಿತರನ್ನು ಮರೆತು ದಬ್ಬಾಳಿಕೆ ಮುಂದುವರಿದಿದೆ” ಎಂದು ಆರೋಪಿಸಿದರು.

ಹರಿಯಾಣ ಮತ್ತು ಇತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ದಲಿತ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರಗಳನ್ನು ಅವರು ಟೀಕಿಸಿದರು. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಲಿತರು ಮತ್ತು ಆದಿವಾಸಿಗಳ ಮೇಲಿನ ದೌರ್ಜನ್ಯಗಳು ನಿರಂತರವಾಗಿ ಏಕೆ ಹೆಚ್ಚುತ್ತಿವೆ ಎಂದು ಕೇಳಿದ್ದಾರೆ.

ಹರಿಯಾಣದ 22% ಮತದಾರರನ್ನು ಒಳಗೊಂಡಿರುವ ದಲಿತರು ಸಾಮಾನ್ಯವಾಗಿ ಸಂಪನ್ಮೂಲಗಳು ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳಿಂದ ವಂಚಿತರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ತಿಳಿಸಿದರು. “ದಲಿತರು ಹೆಚ್ಚಾಗಿ ಸಣ್ಣ ಕೆಲಸಗಳಲ್ಲಿ ಅಥವಾ ಭೂಮಾಲೀಕರ ಹೊಲಗಳಲ್ಲಿ ದುಡಿಮೆಯಲ್ಲಿ ಬದುಕುತ್ತಾರೆ. ಅವರಿಗೆ ನೀಡಲಾದ ಸಾಂವಿಧಾನಿಕ ಹಕ್ಕುಗಳು ಹರಿಯಾಣದಲ್ಲಿ ಕಡಿಮೆ ಪ್ರಾಮುಖ್ಯತೆಯನ್ನು ಹೊಂದಿವೆ” ಎಂದು ಅವರು ಹೇಳಿದರು.

29% ಜಾಟ್ ಮತ್ತು ಜಾಟ್ ಸಿಖ್ ಮತದಾರರ ನಂತರ ಹರಿಯಾಣದಲ್ಲಿ ದಲಿತರು ಎರಡನೇ ಅತಿದೊಡ್ಡ ಮತ ಬ್ಯಾಂಕ್ ಆಗಿದ್ದಾರೆ. ಆದರೆ, ಅವರ ಧ್ವನಿಯನ್ನು ಸಾಮಾನ್ಯವಾಗಿ ನಿರ್ಲಕ್ಷಿಸಲಾಗುತ್ತದೆ ಎಂದು ಸೆಲ್ಜಾ ಹೇಳಿದರು. “ಇಲ್ಲಿನ ಸಮುದಾಯಗಳು ಸಾಮರಸ್ಯದಿಂದ ಬದುಕುತ್ತಿರುವಾಗ, ಕೆಲವು ಅಂಶಗಳು ಆಗಾಗ್ಗೆ ಈ ಸಾಮರಸ್ಯವನ್ನು ಹಾಳುಮಾಡುತ್ತವೆ. ಆಳುವ ಶಕ್ತಿಗಳು ಮೌನವಾಗಿದ್ದು, ಅನ್ಯಾಯಗಳು ಮುಂದುವರಿಯಲು ಅವಕಾಶ ಮಾಡಿಕೊಡುತ್ತವೆ” ಎಂದು ಅವರು ಹೇಳಿದರು.

“ಸಬ್ಕಾ ಸಾಥ್, ಸಬ್ಕಾ ವಿಕಾಸ್” (ಎಲ್ಲರಿಗೂ ಅಭಿವೃದ್ಧಿ) ಎಂಬ ತನ್ನ ಘೋಷಣೆಗೆ ಬಿಜೆಪಿಯ ಬದ್ಧತೆಯನ್ನು ಪ್ರಶ್ನಿಸಿದ ಅವರು, “ದುರ್ಬಲ ಮತ್ತು ಹಿಂದುಳಿದ ವರ್ಗಗಳ ದಬ್ಬಾಳಿಕೆ ಈ ಘೋಷಣೆಯ ಹೊಸ ವ್ಯಾಖ್ಯಾನವೇ” ಎಂದರು.

ದಲಿತರು ಅನೇಕ ಹಂತಗಳಲ್ಲಿ ಅವಮಾನಕ್ಕೊಳಗಾಗುತ್ತಾರೆ; ತುಳಿತಕ್ಕೊಳಗಾಗುತ್ತಾರೆ. ಇಂದು, ದಲಿತರು ಘನತೆಯಿಂದ ಬದುಕಲು ಬಯಸುತ್ತಾರೆ. ಆದರೆ, ಇದು ಕೆಲವರಿಗೆ ಸ್ವೀಕಾರಾರ್ಹವಲ್ಲ. ದಲಿತ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸರ್ಕಾರ ದೃಢವಾದ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ; ಗೋಹತ್ಯೆ ಶಂಕೆ : ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...