Homeಕರ್ನಾಟಕಕೊಡಗು| ತೋಟದಲ್ಲಿ ಹಲಸು ಕಿತ್ತಿದ್ದಕ್ಕೆ ಪರಿಶಿಷ್ಟ ಜಾತಿ ಯುವಕನ ಗುಂಡಿಕ್ಕಿ ಕೊಲೆ

ಕೊಡಗು| ತೋಟದಲ್ಲಿ ಹಲಸು ಕಿತ್ತಿದ್ದಕ್ಕೆ ಪರಿಶಿಷ್ಟ ಜಾತಿ ಯುವಕನ ಗುಂಡಿಕ್ಕಿ ಕೊಲೆ

- Advertisement -
- Advertisement -

ಯರವ ಸಮುದಾಯದ (ಪರಿಶಿಷ್ಟ ಪಂಗಡ) 23 ವರ್ಷದ ಯುವಕನನ್ನು ತೋಟದಲ್ಲಿ ಹಲಸು ಕಿತ್ತಿದ್ದಕ್ಕಾಗಿ ಪ್ರಬಲ ಜಾತಿಗೆ (ಕೊಡವ) ಸೇರಿದ ವ್ಯಕ್ತಿ ಗುಂಡಿಕ್ಕಿ ಕೊಂದಿದ್ದಾನೆ.

ಡಿಸೆಂಬರ್ 27 ರಂದು ಕೊಡಗು ಜಿಲ್ಲೆಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮೃತ ಪಣಿಯೆರವರ ಪೊನ್ನಣ್ಣ ಅವರು ಪೊರುಕೊಂಡ ಚಿನ್ನಪ್ಪ ಅವರ ಕುಟುಂಬದ ಒಡೆತನದ ಕಾಫಿ ತೋಟದಲ್ಲಿ ಕಾರ್ಮಿಕರಾಗಿದ್ದರು. ಚಿನ್ನಪ್ಪ ಅವರು ಪೊನ್ನಣ್ಣನ ಮೇಲೆ ಡಬಲ್ ಬ್ಯಾರಲ್ ಶಾಟ್‌ಗನ್‌ನಿಂದ ಗುಂಡು ಹಾರಿಸುವ ಮೊದಲು ಜಾತಿ ನಿಂದನೆ ಮಾಡಿದ್ದಾರೆ.

ಎಫ್‌ಐಆರ್‌ ಪ್ರಕಾರ, ಪೊನ್ನಣ್ಣ ಮತ್ತು ಅವರ ಪತ್ನಿ ಗೀತಾ ತೋಟದಲ್ಲಿ ಪ್ರತಿ ದಿನದ ಕೆಲಸ ಮಾಡುತ್ತಿದ್ದು. ಕೆಲಸದ ಬಳಿಕ ಹಲಸು ಕೀಳುತ್ತಿದ್ದಾಗ ಚಿನ್ನಪ್ಪ ಡಬಲ್ ಬ್ಯಾರೆಲ್ ಶಾಟ್‌ಗನ್‌ನೊಂದಿಗೆ ಅವರ ಬಳಿಗೆ ಬಂದಿದ್ದಾನೆ; ಹಲಸು ಕಿತ್ತಿದ್ದಕ್ಕೆ ಪೊನ್ನಣ್ಣನಿಗೆ ಕೊಲೆ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿ ಗುಂಡು ಹಾರಿಸಿದ್ದಾನೆ. ಗುಂಡೇಟಿನಿಂದ ಪೊನ್ನಣ್ಣ ಹಲಸಿನ ಮರದಿಂದ ಬಿದ್ದಿದ್ದು, ಆತನಿಗೆ ಮಾರಣಾಂತಿಕ ಗಾಯಗಳಾಗಿವೆ.

ಪನ್ನಣ್ಣ ಮರದಿಂದ ಬಿದ್ದರೂ ಚಿಣ್ಣಪ್ಪ ಅವರು ಸಹಾಯ ಮಾಡದೆ ಸ್ಥಳದಿಂದ ಹೊರಟಿದ್ದಾನೆ. ತೋಟದ ಮಾಲೀಕ ಪೋರುಕೊಂಡ ಬನ್ಸಿ ಪೂಣಚ್ಚ ಅವರು ಪೊನ್ನಣ್ಣನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ತಲುಪುವ ಮುನ್ನವೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ವಿರಾಜಪೇಟೆ ಗ್ರಾಮಾಂತರ ಪೊಲೀಸರು ಚಿನ್ನಪ್ಪನನ್ನು ಬಂಧಿಸಿದ್ದು, ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103(1) (ಕೊಲೆ), ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v) (ಎಸ್‌ಸಿ/ಎಸ್‌ಟಿ ವ್ಯಕ್ತಿಯ ವಿರುದ್ಧದ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮತ್ತು ಸೆಕ್ಷನ್ 3 (ಪರವಾನಗಿ ಇಲ್ಲದೆ ಬಂದೂಕು ಒಯ್ಯುವುದು) ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯಿದೆಯ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳಿಗೆ ಸಂಬಂಧಿಸಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ ಲೆನಿನಿಸ್ಟ್) ರಾಜ್ಯ ಸಮಿತಿಯು ಘಟನೆಯನ್ನು ಕ್ರೂರ ದೌರ್ಜನ್ಯ ಮತ್ತು ಪ್ರಜಾಸತ್ತಾತ್ಮಕ ತತ್ವಗಳ ಉಲ್ಲಂಘನೆ ಎಂದು ಖಂಡಿಸಿದೆ. “ಕಾನೂನಿನ ಆಡಳಿತವನ್ನು ಗಾಳಿಗೆ ತೂರಲಾಗಿದೆ. ಆದಿವಾಸಿಗಳಿಗೆ ಸಂವಿಧಾನ ನೀಡಿರುವ ವಿಶೇಷ ಸ್ಥಾನಮಾನವನ್ನು ಅನಗತ್ಯಗೊಳಿಸಲಾಗಿದೆ.

ಇದೇ ವೇಳೆ ಸಿಪಿಐ(ಎಂಎಲ್) ಮುಖಂಡರು ಹಾಗೂ ಆದಿವಾಸಿ ಸಂಘರ್ಷ ಮೋರ್ಚಾದ ಸದಸ್ಯರು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜು, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶೇಖರ್, ಜಿಲ್ಲಾ ಐಟಿಡಿಪಿ ಅಧಿಕಾರಿ ಹೊನ್ನೇಗೌಡ ಅವರನ್ನು ಭೇಟಿ ಮಾಡಿ ಪೊನ್ನಣ್ಣ ಕುಟುಂಬಕ್ಕೆ ಹಾಗೂ ಯರವ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಬೇಡಿಕೆಗಳ ಪಟ್ಟಿಯನ್ನು ಮಂಡಿಸಿದರು. ಚಿನ್ನಪ್ಪನ ಅಪರಾಧ ಸಾಬೀತುಪಡಿಸಲು ತ್ವರಿತ ತನಿಖೆ ಮತ್ತು ವಿಚಾರಣೆ, ಪೊನ್ನಣ್ಣನ ಕುಟುಂಬಕ್ಕೆ ₹20 ಲಕ್ಷ ಪರಿಹಾರ, ಪೊನ್ನಣ್ಣನ ಪತ್ನಿ ಗೀತಾಗೆ ಸರ್ಕಾರಿ ಉದ್ಯೋಗ, ಕುಟುಂಬಕ್ಕೆ ವಸತಿ ಮತ್ತು ಪೊನ್ನಣ್ಣನ ಕಿರಿಯ ಸಹೋದರನಿಗೆ ಶಿಕ್ಷಣದ ಬೆಂಬಲ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ; ಹರಿಯಾಣ| ಕಾಲೇಜು ಶುಲ್ಕ ಪಾವತಿಸದ ಕಾರಣಕ್ಕೆ ಕಿರುಕುಳ; ಮನನೊಂದ ದಲಿತ ವಿದ್ಯಾರ್ಥಿನಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...