Homeಮುಖಪುಟಪುರುಷ ಭಕ್ತರು ಮೇಲಂಗಿ ತೆಗೆಯುವ ಪದ್ಧತಿ ಕೈಬಿಡಲು ದೇವಸ್ವಂ ಬೋರ್ಡ್ ಮುಂದಾಗಿದೆ : ಕೇರಳ ಸಿಎಂ...

ಪುರುಷ ಭಕ್ತರು ಮೇಲಂಗಿ ತೆಗೆಯುವ ಪದ್ಧತಿ ಕೈಬಿಡಲು ದೇವಸ್ವಂ ಬೋರ್ಡ್ ಮುಂದಾಗಿದೆ : ಕೇರಳ ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ದೇವಸ್ಥಾನಗಳಲ್ಲಿ ಪುರುಷ ಭಕ್ತರು ತಮ್ಮ ಮೇಲಂಗಿ ಕಳಚಿ ಒಳಹೋಗುವ ಪದ್ದತಿಯನ್ನು ಕೈಬಿಡಲು ದೇವಸ್ವಂ ಬೋರ್ಡ್ ಮುಂದಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ (ಜ.1) ತಿಳಿಸಿದ್ದಾರೆ.

ಸಮಾಜ ಸುಧಾರಕ ನಾರಾಯಣ ಗುರು ಅವರು ಸ್ಥಾಪಿಸಿರುವ ಪ್ರಸಿದ್ದ ಶಿವಗಿರಿ ಮಠದ ಸಚ್ಚಿದಾನಂದ ಸ್ವಾಮಿ ಮೇಲಂಗಿ ಕಳಚುವ ಪದ್ದತಿಯನ್ನು ವಿರೋಧಿಸಿದ ಬೆನ್ನಲ್ಲೇ ದೇವಸ್ವಂ ಮಂಡಳಿಗೆ ಸಂಬಂಧಿಸಿದಂತೆ ಸಿಎಂ ಹೇಳಿಕೆ ನೀಡಿದ್ದಾರೆ.

ಮಂಗಳವಾರ (ಡಿ.30) ಶಿವಗಿರಿ ತೀರ್ಥೋದ್ಭವ ಸಮಾವೇಶದಲ್ಲಿ ಮಾತನಾಡಿದ್ದ ಸಚ್ಚಿದಾನಂದ ಸ್ವಾಮಿಯವರು ಮೇಲಂಗಿ ಕಳಚುವ ಪದ್ಧತಿಯನ್ನು ಸಾಮಾಜಿಕ ಅನಿಷ್ಟ ಎಂದಿದ್ದರು. ಅದನ್ನು ನಿರ್ಮೂಲನೆ ಮಾಡುವಂತೆ ಕರೆ ನೀಡಿದ್ದರು.

ತೀರ್ಥೋದ್ಭವ ಸಮಾವೇಶವನ್ನು ಉದ್ಘಾಟನೆ ಮಾಡಿದ್ದ ಸಿಎಂ ಪಿಣರಾಯಿ ವಿಜಯನ್ ಅವರು ಸ್ವಾಮಿಯ ಮಾತಿಗೆ ಸಹಮತ ವ್ಯಕ್ತಪಡಿಸಿದ್ದು, ಮೇಲಂಗಿ ಕಳಚುವ ಪದ್ದತಿಯ ನಿರ್ಮೂಲನೆ ಸಾಮಾಜ ಸುಧಾರಣೆಯ ಮಹತ್ವದ ಹೆಜ್ಜೆ ಎಂದಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, “ದೇವಸ್ವಂ ಮಂಡಳಿಯ ಪ್ರತಿನಿಧಿಯೊಬ್ಬರು ನನ್ನನ್ನು ಭೇಟಿಯಾಗಿ ಮೇಲಂಗಿ ಕಳಚುವ ಪದ್ದತಿ ಕೈ ಬಿಡುವ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಇದು ಉತ್ತಮ ಯೋಚನೆ ಎಂದು ನಾನು ಹೇಳಿದ್ದೇನೆ” ಎಂದಿದ್ದಾರೆ. ಆದರೆ, ಯಾವ ದೇವಸ್ವಂ ಬೋರ್ಡ್ ಈ ನಿರ್ಧಾರವನ್ನು ಜಾರಿಗೆ ತರಲಿದೆ ಎಂಬುವುದನ್ನು ಸಿಎಂ ಸ್ಪಷ್ಟಪಡಿಸಿಲ್ಲ.

ಕೇರಳದಲ್ಲಿ ಗುರುವಾಯೂರ್, ತಿರುವಾಂಕೂರ್, ಮಲಬಾರ್, ಕೊಚ್ಚಿನ್ ಮತ್ತು ಕೂಡಲ್ಮಾಣಿಕ್ಯಂ ಎಂಬ ಐದು ಪ್ರಮುಖ ದೇವಸ್ವಂ ಬೋರ್ಡ್‌ಗಳಿವೆ. ಇವುಗಳು ಸುಮಾರು 3,000 ದೇವಾಲಯಗಳ ನಿರ್ವಹಣೆ ಮಾಡುತ್ತಿವೆ.

ಈ ವಿಚಾರದಲ್ಲಿ ಚರ್ಚೆಯಾಗಬೇಕು ಎಂಬ ಬಿಜೆಪಿ ನಾಯಕರ ಆಗ್ರಹದ ಕುರಿತು ಪ್ರತಿಕ್ರಿಯಿಸಿದ ಸಿಎಂ, “ಚರ್ಚೆಯಾಗಲಿ. ಆದರೆ, ನಿರ್ಧಾರ ತೆಗೆದುಕೊಳ್ಳುವುದು ಸರ್ಕಾರವಲ್ಲ, ದೇವಸ್ವಂ ಬೋರ್ಡ್” ಎಂದಿದ್ದಾರೆ.

ನಾರಾಯಣ ಗುರುಗಳಿಗೆ ಸಂಬಂಧಿಸಿದ ದೇವಸ್ಥಾನಗಳು ಮೇಲಂಗಿ ಕಳಚುವ ಪದ್ದತಿಯನ್ನು ಕೈಬಿಡಲಿದೆ ಎಂದು ಸಚ್ಚಿದಾನಂದ ಸ್ವಾಮಿ ತಿಳಿಸಿದ್ದಾರೆ.

ಬ್ರಾಹ್ಮಣರ ಜನಿವಾರ ಇದೆಯೇ ಎಂದು ಖಚಿತಪಡಿಸಿಕೊಳ್ಳಲು ದೇವಸ್ಥಾನಗಳಲ್ಲಿ ಪುರುಷರು ಮೇಲಂಗಿ ಕಳಚುವ ಪದ್ದತಿಯನ್ನು ಹಿಂದೆ ಜಾರಿಗೆ ತರಲಾಗಿದೆ. ಈ ಪದ್ದತಿ ನಾರಾಯಣ ಗುರುಗಳ ಉಪದೇಶಗಳಿಗೆ ವಿರುದ್ದವಾಗಿದೆ. ಆದರೆ, ಗುರುಗಳಿಗೆ ಸಂಬಂಧಿಸಿದ ಕೆಲ ದೇವಸ್ಥಾನಗಳಲ್ಲೇ ಈ ಪದ್ದತಿ ಚಾಲ್ತಿಯಲ್ಲಿದೆ. ಅದನ್ನು ಕೈ ಬಿಡಬೇಕು ಎಂದು ಸಚ್ಚಿದಾನಂದ ಸ್ವಾಮಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ : ದೇವಾಲಯಗಳಿಗೆ ಪ್ರವೇಶಿಸುವ ಮೊದಲು ಶರ್ಟ್‌ ತೆಗೆಯುವ ರೂಢಿ ಕೆಟ್ಟದ್ದು: ಕೇರಳ ಶಿವಗಿರಿ ಮಠದ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...