Homeಮುಖಪುಟಭೀಮಾ-ಕೋರೆಗಾಂವ್ ಶೌರ್ಯ ದಿನ : ಸ್ಮಾರಕ ವಿಸ್ತರಣೆಗೆ ₹200 ಕೋಟಿ ಬೇಡಿಕೆ

ಭೀಮಾ-ಕೋರೆಗಾಂವ್ ಶೌರ್ಯ ದಿನ : ಸ್ಮಾರಕ ವಿಸ್ತರಣೆಗೆ ₹200 ಕೋಟಿ ಬೇಡಿಕೆ

- Advertisement -
- Advertisement -

ದಲಿತರ ಸ್ವಾಭಿಮಾನ ಮತ್ತು ಅಸ್ಮಿತೆಯ 1818ರ ಭೀಮಾ-ಕೋರೆಗಾಂವ್ ಯುದ್ದದ ನೆನಪಿನಲ್ಲಿ ಬುಧವಾರ (ಜ.1) ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕೋರೆಗಾಂವ್‌ ಭೀಮಾ ಗ್ರಾಮದಲ್ಲಿ 207ನೇ ‘ಶೌರ್ಯ ದಿನ’ ಆಚರಣೆ ನಡೆಯಿತು.

ರಾಜಕೀಯ ನಾಯಕರು, ಸಮುದಾಯದ ಮುಖಂಡರು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನರು ಭೀಮಾ-ಕೋರೆಗಾಂವ್ ‘ವಿಜಯಸ್ತಂಭ’ದ ಬಳಿ ಜಮಾಯಿಸಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರು ‘ವಿಜಯಸ್ತಂಭ’ದ ಪ್ರದೇಶದ ಅಭಿವೃದ್ದಿ ಮತ್ತು ವಿಸ್ತರಣೆಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಬೇಡಿಕೆಯಿಟ್ಟರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಠವಳೆ, “ಈ ದಿನ, ನಮ್ಮ ಜನರು ಪೇಶ್ವೆಗಳೊಂದಿಗೆ ಹೋರಾಡಿದರು. ಈ ಕಂಬವು ಅವರ ಶೌರ್ಯವನ್ನು ಪ್ರತಿಬಿಂಬಿಸುತ್ತದೆ. ಪ್ರತಿ ವರ್ಷ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಈ ಸ್ಥಳಕ್ಕೆ ಭೇಟಿ ನೀಡುತ್ತಿದ್ದರು. ಈಗ ದೇಶದ ವಿವಿಧ ಭಾಗಗಳ ಜನರು ಇಲ್ಲಿಗೆ ಭೇಟಿ ನೀಡಲು ಪ್ರಾರಂಭಿಸಿದ್ದಾರೆ. ವಿಜಯಸ್ತಂಭದ ಸುತ್ತ ಬೃಹತ್ ಸ್ಮಾರಕ ನಿರ್ಮಿಸಬೇಕು. ಸರ್ಕಾರ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಆದರೆ, ಕಾಮಗಾರಿ ಪೂರ್ಣಗೊಂಡಿಲ್ಲ. ನಾನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಸ್ಮಾರಕಕ್ಕೆ 200 ಕೋಟಿ ರೂ. ಮಂಜೂರಾತಿ ಪಡೆಯುತ್ತೇನೆ” ಎಂದರು.

ಜನವರಿ 1, 1818 ರಂದು ನಡೆದ ಕೋರೆಗಾಂವ್ ಕದನವನ್ನು ಸ್ಮರಿಸಲು ಕೋರೆಗಾಂವ್ ಭೀಮಾದಲ್ಲಿ ಪ್ರತಿವರ್ಷ ಶೌರ್ಯ ದಿನ ಆಚರಣೆ ಮಾಡಲಾಗುತ್ತದೆ. ಭೀಮಾ-ಕೋರೆಗಾಂವ್ ಯುದ್ದದಲ್ಲಿ 500 ಮಹಾರ್ ಸೈನಿಕರು ಸೇರಿದಂತೆ 834 ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಯೋಧರು ಪೇಶ್ವೆಯ 28,000 ಶಕ್ತಿಶಾಲಿ ಯೋಧರನ್ನು ಸೋಲಿಸಿದ್ದರು. ಈ ವಿಜಯದ ನೆನಪಿಗೆ ಬ್ರಿಟಿಷರು ವಿಜಯ ಸ್ತಂಭವನ್ನು ಸ್ಥಾಪಿಸಿದರು. ಅದು ಇಂದು ದಲಿತರ ಹೆಮ್ಮೆಯ ಸಂಕೇತವಾಗಿ ನಿಂತಿದೆ.

ವಂಚಿತ್ ಬಹುಜನ ಅಗಾಧಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್, ಸಚಿವರಾದ ದತ್ತಾತ್ರಯ ಭರ್ನೆ, ಆನಂದರಾಜ್ ಅಂಬೇಡ್ಕರ್, ರಾಜ್ಯ ಸಚಿವೆ ಮಾಧುರಿ ಮಿಸಾಲ್ ಮತ್ತು ಇತರ ಮುಖಂಡರು ಕೋರೆಗಾಂವ್ ಭೀಮಾದಲ್ಲಿ ಬುಧವಾರ (ಜ.1) ಉಪಸ್ಥಿತರಿದ್ದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂದೆ ಮತ್ತು ಅಜಿತ್ ಪವಾರ್ ವಿಜಯಸ್ತಂಭದ ಬಳಿಗೆ ಆಗಮಿಸಿದ್ದಕ್ಕೆ ಆನಂದರಾಜ್ ಅಂಬೇಡ್ಕರ್ ಬೇಸರ ವ್ಯಕ್ತಪಡಿಸಿದರು. “ಜನರು ಮತ ಹಾಕಿದ್ದರಿಂದ ಅವರು ಈಗ ಉನ್ನತ ಹುದ್ದೆಗೇರಿದ್ದಾರೆ. ಅವರಿಗೆ ಈ ದಿನ ಮತ್ತು ಜಾಗ ಮಹತ್ವದ್ದಾಗಿದ್ದರೆ ಇಲ್ಲಿಗೆ ಬರುತ್ತಿದ್ದರು. ಸಾಮಾನ್ಯ ಜನರು ಕರೆಯದೆ ಪ್ರತಿವರ್ಷ ಇಲ್ಲಿಗೆ ಆಗಮಿಸುತ್ತಿದ್ದಾರೆ” ಎಂದು ಹೇಳಿದರು.

ಡಾ. ಬಿ.ಆರ್ ಅಂಬೇಡ್ಕರ್ ಅವರ ಮೊಮ್ಮಗನಾಗಿರುವ ಆನಂದರಾಜ್ ಅಂಬೇಡ್ಕರ್ ಅವರು ಅಂಬೇಡ್ಕರ್‌ವಾದಿ ಸಂಘಟನೆ ರಿಪಬ್ಲಿಕನ್ ಸೇನೆಯ ಸ್ಥಾಪಕರಾಗಿದ್ದಾರೆ.

ಬಿಗಿ ಭದ್ರತೆ, ಅಗತ್ಯ ವ್ಯವಸ್ಥೆ 

ಪ್ರತಿ ವರ್ಷ ಜನವರಿ 1 ರಂದು ಕೋರೆಗಾಂವ್ ಭೀಮಾಗೆ ಕನಿಷ್ಠ ಎಂಟರಿಂದ 10 ಲಕ್ಷ ಜನರು ಆಗಮಿಸುತ್ತಾರೆ. ಬುಧವಾರ ವಿಶೇಷ ವ್ಯವಸ್ಥೆಗಳ ಭಾಗವಾಗಿ 5000 ಪೊಲೀಸ್ ಸಿಬ್ಬಂದಿ 2,000 ಗೃಹರಕ್ಷಕ ಸಿಬ್ಬಂದಿ, ರಾಜ್ಯ ಮೀಸಲು ಪೊಲೀಸ್ ಪಡೆ, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (BBDS)ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

ಇದರ ಜೊತೆಗೆ ಸಿಸಿಟಿವಿ ಕ್ಯಾಮರಾ ಮತ್ತು ಮುಖ ಗುರುತಿಸುವಿಕೆಯ ಕ್ಯಾಮಾರಗಳನ್ನು ಅಳವಡಿಸಲಾಗಿತ್ತು. ಡ್ರೋನ್ ಮೂಲಕ ಜನಸಂದಣಿ ಮೇಲೆ ಕಣ್ಣಿಡಲಾಗಿತ್ತು. ವಾಹನ ಪಾರ್ಕಿಗ್‌ಗೆ ಜಾಗದ ವ್ಯವಸ್ಥೆ ಮಾಡಲಾಗಿತ್ತು. ತುರ್ತು ಸಂದರ್ಭಗಳಿಗೆ ಆಂಬ್ಯುಲೆನ್ಸ್, ಅಗ್ನಿಶಾಮಕ ತಂಡ ಸ್ಥಳದಲ್ಲಿತ್ತು.

ಇದನ್ನೂ ಓದಿ : ಕೋರೆಗಾಂವ್‌‌ ಕದನ: ದಲಿತ ಅಸ್ಮಿತೆ, ಸ್ವಾಭಿಮಾನದ ಮಹಾಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...