Homeಮುಖಪುಟಅಣ್ಣಾ ವಿಶ್ವವಿದ್ಯಾಲಯದ ಅತ್ಯಾಚಾರ ಪ್ರಕರಣವನ್ನು ಯಾವುದೇ ಕಾಳಜಿಯಿಲ್ಲದೆ ರಾಜಕೀಯಗೊಳಿಸಲಾಗುತ್ತಿದೆ - ಮದ್ರಾಸ್ ಹೈಕೋರ್ಟ್

ಅಣ್ಣಾ ವಿಶ್ವವಿದ್ಯಾಲಯದ ಅತ್ಯಾಚಾರ ಪ್ರಕರಣವನ್ನು ಯಾವುದೇ ಕಾಳಜಿಯಿಲ್ಲದೆ ರಾಜಕೀಯಗೊಳಿಸಲಾಗುತ್ತಿದೆ – ಮದ್ರಾಸ್ ಹೈಕೋರ್ಟ್

- Advertisement -
- Advertisement -

ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಯಾವುದೆ ಕಾಳಜಿಯಿಲ್ಲದೆ ರಾಜಕೀಯಗೊಳಿಸಲಾಗುತ್ತಿದೆ ಎಂದು ಮದ್ರಾಸ್ ಹೈಕೋರ್ಟ್ ಗುರುವಾರ ಹೇಳಿದೆ. ಡಿಸೆಂಬರ್ 23ರಂದು ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ನಡೆದಿತ್ತು. ಈ ಬಗ್ಗೆ ಸಂತ್ರಸ್ತೆ ಬಗ್ಗೆ ದೂರು ನೀಡಿದ್ದು, ತನ್ನ ಮೇಲೆ ಮತ್ತು ತನ್ನ ಸ್ನೇಹಿತನ ಮೇಲೆ ದಾಳಿ ನಡೆಸಲಾಗಿದ್ದು, ಹತ್ತಿರದ ಪೊದೆಗೆ ಎಳೆದೊಯ್ದು ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿದ್ದರು. ಅಣ್ಣಾ ವಿಶ್ವವಿದ್ಯಾಲಯದ

ಪ್ರಕರಣದ ಬಗ್ಗೆ ತೀವ್ರ ಸಂಕಟವನ್ನು ವ್ಯಕ್ತಪಡಿಸಿರುವ ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಪಿ. ವೇಲ್‌ಮುರುಗನ್ ಅವರು, ಇಡೀ ಸಮಾಜವು ಮಹಿಳೆಯರನ್ನು ಅಧೀನಗೊಳಿಸುವುದನ್ನು ಮತ್ತು ಅವರ ವಿರುದ್ಧ ದೌರ್ಜನ್ಯವನ್ನು ಏಕೆ ಮುಂದುವರಿಸಿದೆ ಎಂಬುದನ್ನು ಆತ್ಮಾವಲೋಕನ ಮಾಡಲು ಎಚ್ಚರಿಕೆಯ ಕರೆಯಾಗಿ ಕಾರ್ಯನಿರ್ವಹಿಸುವ ಬದಲು, ಘಟನೆಯನ್ನು ಯಾವುದೆ ಕಾಳಜಿಯಿಲ್ಲದೆ ರಾಜಕೀಯಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪರ ವಕೀಲ ಕೆ.ಬಾಲು ಅವರು ಪಕ್ಷದ ಮಹಿಳಾ ಘಟಕದ ಪ್ರತಿಭಟನೆಗೆ ರಾಜ್ಯ ಪೊಲೀಸರು ಅನುಮತಿ ನಿರಾಕರಿಸಿದ ಬಗ್ಗೆ ಪ್ರಸ್ತಾಪಿಸಿದಾಗ ನ್ಯಾಯಮೂರ್ತಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ರಾಜಕೀಯ ಪಕ್ಷಗಳ ಪ್ರತಿಭಟನೆಗಳು ಕೇವಲ ಮಾಧ್ಯಮಗಳ ಗಮನ ಸೆಳೆಯುವ ಗುರಿಯನ್ನು ಹೊಂದಿವೆಯೇ ಹೊರತು ನಿಜವಾದ ಕಾಳಜಿಯಿಂದ ಮಾಡಲಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಈ ನಡುವೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ನಿವೃತ್ತ ಐಪಿಎಸ್ ಅಧಿಕಾರಿ ಪ್ರವೀಣ್ ದೀಕ್ಷಿತ್ ಸೇರಿದಂತೆ ಇಬ್ಬರು ಸದಸ್ಯರ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ. ಎರಡು ದಿನಗಳ ತನಿಖೆಯಲ್ಲಿ, ಸಮಿತಿಯು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ್ದು, ಸಂತ್ರಸ್ತೆಯ ಕುಟುಂಬಸ್ಥರನ್ನು, ಅಧಿಕಾರಿಗಳು ಮತ್ತು ಎನ್‌ಜಿಒಗಳನ್ನು ಭೇಟಿ ಮಾಡಿದ್ದು, ವಿಶ್ವವಿದ್ಯಾಲಯದ ಭದ್ರತೆ ಪರಿಶೀಲಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಎನ್‌ಸಿಡಬ್ಲ್ಯೂ, “ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ಎನ್‌ಸಿಡಬ್ಲ್ಯೂ ಭದ್ರತೆ ಪರಿಶೀಲಿಸಿದೆ. ಎಸ್‌ಐಟಿಯನ್ನು ಭೇಟಿ ಮಾಡಿದೆ. ಶಿಫಾರಸುಗಳೊಂದಿಗೆ ವರವಾದ ವರದಿಯನ್ನು ಸಿದ್ಧಪಡಿಸಲಾಗಿದೆ” ಎಂದು ಹೇಳಿದೆ. ಅಣ್ಣಾ ವಿಶ್ವವಿದ್ಯಾಲಯದ

ಅತ್ಯಾಚಾರ ಆರೋಪಿಯನ್ನು ಬೀದಿ ಬದಿ ವ್ಯಾಪಾರಸ್ಥ ಜ್ಞಾನಶೇಖರನ್ ಎಂದು ಗುರುತಿಸಲಾಗಿದೆ. ಆರೋಪಿ ಜ್ಞಾನಶೇಖರನ್‌ ಈ ಹಿಂದೆ ಕೂಡಾ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗವಹಿಸಿದ್ದ ಆರೋಪಗಳಿವೆ ಎಂದು ಹೇಳಿದ್ದಾರೆ. ತನಿಖೆಗಾಗಿ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶಿಸಿತ್ತು.

ಇದನ್ನೂ ಓದಿ: ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...