Homeಮುಖಪುಟಕಲ್ಲಿದ್ದಲು ಗಣಿಗಾರಿಕೆಗಾಗಿ 1 ಲಕ್ಷಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಕಂಪನಿ : ಸರ್ಕಾರಕ್ಕೆ ಎನ್‌ಜಿಟಿ...

ಕಲ್ಲಿದ್ದಲು ಗಣಿಗಾರಿಕೆಗಾಗಿ 1 ಲಕ್ಷಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಕಂಪನಿ : ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್

- Advertisement -
- Advertisement -

ಒಡಿಶಾದ ಅಂಗುಲ್ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗಾಗಿ 1,05,092 ಮರಗಳನ್ನು ಕಡಿಯಲು ಮುಂದಾಗಿರುವುದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಸಿಂಗರೇಣಿ ಕೋಲೀಯರೀಸ್ ಕಂಪನಿ ಲಿಮಿಟೆಡ್ (ಎಸ್‌ಸಿಸಿಎಲ್‌) ಗೆ ನೋಟಿಸ್ ಜಾರಿ ಮಾಡಿದೆ.

ಅರಣ್ಯ ಸಂರಕ್ಷಣಾ ಕಾಯ್ದೆ-1980ರ ನಿಯಮಗಳನ್ನು ಸರಿಯಾಗಿ ಅನುಸರಿಸದೆ ನೈನಿ ಓಪನ್‌ಕಾಸ್ಟ್ ಕಲ್ಲಿದ್ದಲು ಯೋಜನೆಗಾಗಿ ಎಸ್‌ಸಿಸಿಎಲ್ ಕಂಪನಿಗೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಚೆಂಡಿಪಾಡಾ ಮತ್ತು ಸಲೂಯಿಖಾಮನ್‌ನ ಒಂಬತ್ತು ಗ್ರಾಮಸ್ಥರು ಎನ್‌ಜಿಟಿಯ ಪೂರ್ವ ವಲಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.

ತೆಲಂಗಾಣ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜಂಟಿ ಒಡೆತನದ ಸಾರ್ವಜನಿಕ ವಲಯದ ಕಂಪನಿಯಾದ ಎಸ್‌ಸಿಸಿಎಲ್‌ ಅಂಗುಲ್‌ನ ಚೆಂಡಿಪಾಡಾ ತಾಲೂಕಿನಲ್ಲಿ ಗಣಿಗಾರಿಕೆ ಮಾಡಲು ತಯಾರಿ ನಡೆಸುತ್ತಿದೆ.

ಅರ್ಜಿದಾರರ ಪ್ರಕಾರ, ಎಸ್‌ಸಿಸಿಎಲ್ ಈಗಾಗಲೇ ಅರಣ್ಯದ ಕೆಲವು ಭಾಗಗಳಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಮರಗಳನ್ನು ಕಡಿಯಲು ಪ್ರಾರಂಭಿಸಿದೆ.

“ಚೆಂಡಿಪಾಡಾ ಮೀಸಲು ಅರಣ್ಯದ 643.095 ಹೆಕ್ಟೇರ್ ಪ್ರದೇಶವನ್ನು ಕಲ್ಲಿದ್ದಲು ಗಣಿಗಾರಿಕೆಗಾಗಿ ಹಸ್ತಾಂತರಿಸುವ ಸಂಬಂಧ ಅಂಗುಲ್‌ನ ವಿಭಾಗೀಯ ಅರಣ್ಯಾಧಿಕಾರಿಯವರು ಎಸ್‌ಸಿಸಿಎಲ್ ಕಂಪನಿಯ ಜನರಲ್ ಮ್ಯಾನೇಜರ್‌ಗೆ ಪತ್ರ ಬರೆದಿದ್ದಾರೆ. ಚೆಂಡಿಪಾಡಾ ಮೀಸಲು ಅರಣ್ಯ ಪ್ರದೇಶದ ಸುಮಾರು 1,05,092 ಮರಗಳನ್ನು ಕಡಿಯಲು ಮುಂದಾಗಿದ್ದಾರೆ. ಈ ಪೈಕಿ ಕಂದಾಯ ಅರಣ್ಯದ 1,087 ಮರಗಳು ಮತ್ತು ಅರಣ್ಯೇತರ ಪ್ರದೇಶದ 327 ಮರಗಳು ಒಳಗೊಂಡಿದೆ. ಇದು ಸಂಪೂರ್ಣ ಕಾನೂನು ಬಾಹಿರವಾಗಿದೆ” ಎಂದು ಗ್ರಾಮಸ್ಥರ ಪರ ವಕೀಲ ಶಂಕರ್ ಪಾಣಿ ಹೇಳಿದ್ದಾರೆ.

ವಿಭಾಗೀಯ ಅರಣ್ಯಾಧಿಕಾರಿಯು ತನ್ನ ಪತ್ರದಲ್ಲಿ ಅರಣ್ಯ ಭೂಮಿ ವರ್ಗಾವಣೆಗೆ ಅರಣ್ಯ ಸಂರಕ್ಷಣಾ ಕಾಯ್ದೆ-1980ರ ಸೆಕ್ಷನ್ (2) ಅಡಿಯಲ್ಲಿ ನೀಡಿರುವ ಅನುಮೋದನೆ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯದ ಅನುಮೋದನೆ ಆದೇಶದ ಷರತ್ತುಗಳ ಹಂತ-Iಮತ್ತು ಹಂತ-IIರ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಶಂಕರ್ ಪಾಣಿ ತಿಳಿಸಿದ್ದಾರೆ.

ಅನುಮೋದನೆ ಷರತ್ತಿನ ಹಂತ-I ಮತ್ತು ಹಂತ-IIನ್ನು ಇಲ್ಲಿ ಅನುಸರಿಸಿಲ್ಲ. ವಿಶೇಷವಾಗಿ ಹಂತ-IIರ ಕ್ಲಿಯರೆನ್ಸ್‌ನ ಷರತ್ತು ಸಂಖ್ಯೆ (ಬಿ) 13 ಅನ್ನು ಪೂರೈಸಿಲ್ಲ. ಈ ಷರತ್ತು, ಅರಣ್ಯ ಹಕ್ಕುಗಳ ಇತ್ಯರ್ಥ, ಗ್ರಾಮ ಸಭೆಯ ಲಿಖಿತ ಒಪ್ಪಿಗೆ ಪಡೆಯುವುದು ಮತ್ತು ಕಛೇರಿಯ ಜ್ಞಾಪಕ ಪತ್ರದ ಸಂಪೂರ್ಣ ಅನುಸರಣೆಯನ್ನು ಒಳಗೊಂಡಿರುತ್ತದೆ ಎಂದು ಶಂಕರ್ ಪಾಣಿ ವಿವರಿಸಿದ್ದಾರೆ.

ಆದಾಗ್ಯೂ, ಷರತ್ತು 13ರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಅರಣ್ಯೇತರ ಬಳಕೆಗಾಗಿ ಭೂಮಿಯನ್ನು ಅಕ್ರಮವಾಗಿ ಎಸ್‌ಸಿಸಿಎಲ್‌ ಕಂಪನಿಗೆ ವರ್ಗಾಯಿಸಲಾಗಿದೆ ಎಂದು ಪಾಣಿ ಆರೋಪಿಸಿದ್ದಾರೆ. ಅರಣ್ಯ ಪ್ರದೇಶದ ನಿವ್ವಳ ಪ್ರಸ್ತುತ ಮೌಲ್ಯವನ್ನು (ಎನ್‌ಪಿವಿ) ಪೂರ್ಣವಾಗಿ ಠೇವಣಿ ಮಾಡುವಂತೆ ಎಸ್‌ಸಿಸಿಎಲ್ ಕೇಳಲಾಗಿದೆ. ಆದರೆ, ಅದನ್ನೂ ಮಾಡಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.

ನ್ಯಾಯಾಂಗ ಸದಸ್ಯ ಅಮಿತ್ ಸ್ಥಾಲೇಕರ್ ಮತ್ತು ತಜ್ಞ ಸದಸ್ಯ ಅರುಣ್ ಕುಮಾರ್ ವರ್ಮಾ ಅವರನ್ನೊಳಗೊಂಡ ಎನ್‌ಜಿಟಿ ಪೀಠವು ನಾಲ್ಕು ವಾರಗಳಲ್ಲಿ ಅಫಿಡವಿಟ್‌ ಸಲ್ಲಿಸುವಂತೆ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ, ಬುಡಕಟ್ಟು ವ್ಯವಹಾರಗಳ ಸಚಿವಾಲಯ ಮತ್ತು ಎಸ್‌ಸಿಸಿಎಲ್‌ ಕಂಪನಿಗೆ ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 21ಕ್ಕೆ ನಿಗದಿಪಡಿಸಿದೆ.

ಇದನ್ನೂ ಓದಿ : ಲಂಚ ಪ್ರಕರಣ: ಉದ್ಯಮಿ ಅದಾನಿ ವಿರುದ್ಧ ಜಂಟಿ ವಿಚಾರಣೆಗೆ ಯುಎಸ್ ನ್ಯಾಯಾಲಯ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...