Homeಮುಖಪುಟಕಲ್ಲಿದ್ದಲು ಗಣಿಗಾರಿಕೆಗಾಗಿ 1 ಲಕ್ಷಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಕಂಪನಿ : ಸರ್ಕಾರಕ್ಕೆ ಎನ್‌ಜಿಟಿ...

ಕಲ್ಲಿದ್ದಲು ಗಣಿಗಾರಿಕೆಗಾಗಿ 1 ಲಕ್ಷಕ್ಕೂ ಅಧಿಕ ಮರಗಳನ್ನು ಕಡಿಯಲು ಮುಂದಾದ ಕಂಪನಿ : ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್

- Advertisement -
- Advertisement -

ಒಡಿಶಾದ ಅಂಗುಲ್ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗಾಗಿ 1,05,092 ಮರಗಳನ್ನು ಕಡಿಯಲು ಮುಂದಾಗಿರುವುದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಸಿಂಗರೇಣಿ ಕೋಲೀಯರೀಸ್ ಕಂಪನಿ ಲಿಮಿಟೆಡ್ (ಎಸ್‌ಸಿಸಿಎಲ್‌) ಗೆ ನೋಟಿಸ್ ಜಾರಿ ಮಾಡಿದೆ.

ಅರಣ್ಯ ಸಂರಕ್ಷಣಾ ಕಾಯ್ದೆ-1980ರ ನಿಯಮಗಳನ್ನು ಸರಿಯಾಗಿ ಅನುಸರಿಸದೆ ನೈನಿ ಓಪನ್‌ಕಾಸ್ಟ್ ಕಲ್ಲಿದ್ದಲು ಯೋಜನೆಗಾಗಿ ಎಸ್‌ಸಿಸಿಎಲ್ ಕಂಪನಿಗೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಚೆಂಡಿಪಾಡಾ ಮತ್ತು ಸಲೂಯಿಖಾಮನ್‌ನ ಒಂಬತ್ತು ಗ್ರಾಮಸ್ಥರು ಎನ್‌ಜಿಟಿಯ ಪೂರ್ವ ವಲಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.

ತೆಲಂಗಾಣ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜಂಟಿ ಒಡೆತನದ ಸಾರ್ವಜನಿಕ ವಲಯದ ಕಂಪನಿಯಾದ ಎಸ್‌ಸಿಸಿಎಲ್‌ ಅಂಗುಲ್‌ನ ಚೆಂಡಿಪಾಡಾ ತಾಲೂಕಿನಲ್ಲಿ ಗಣಿಗಾರಿಕೆ ಮಾಡಲು ತಯಾರಿ ನಡೆಸುತ್ತಿದೆ.

ಅರ್ಜಿದಾರರ ಪ್ರಕಾರ, ಎಸ್‌ಸಿಸಿಎಲ್ ಈಗಾಗಲೇ ಅರಣ್ಯದ ಕೆಲವು ಭಾಗಗಳಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಮರಗಳನ್ನು ಕಡಿಯಲು ಪ್ರಾರಂಭಿಸಿದೆ.

“ಚೆಂಡಿಪಾಡಾ ಮೀಸಲು ಅರಣ್ಯದ 643.095 ಹೆಕ್ಟೇರ್ ಪ್ರದೇಶವನ್ನು ಕಲ್ಲಿದ್ದಲು ಗಣಿಗಾರಿಕೆಗಾಗಿ ಹಸ್ತಾಂತರಿಸುವ ಸಂಬಂಧ ಅಂಗುಲ್‌ನ ವಿಭಾಗೀಯ ಅರಣ್ಯಾಧಿಕಾರಿಯವರು ಎಸ್‌ಸಿಸಿಎಲ್ ಕಂಪನಿಯ ಜನರಲ್ ಮ್ಯಾನೇಜರ್‌ಗೆ ಪತ್ರ ಬರೆದಿದ್ದಾರೆ. ಚೆಂಡಿಪಾಡಾ ಮೀಸಲು ಅರಣ್ಯ ಪ್ರದೇಶದ ಸುಮಾರು 1,05,092 ಮರಗಳನ್ನು ಕಡಿಯಲು ಮುಂದಾಗಿದ್ದಾರೆ. ಈ ಪೈಕಿ ಕಂದಾಯ ಅರಣ್ಯದ 1,087 ಮರಗಳು ಮತ್ತು ಅರಣ್ಯೇತರ ಪ್ರದೇಶದ 327 ಮರಗಳು ಒಳಗೊಂಡಿದೆ. ಇದು ಸಂಪೂರ್ಣ ಕಾನೂನು ಬಾಹಿರವಾಗಿದೆ” ಎಂದು ಗ್ರಾಮಸ್ಥರ ಪರ ವಕೀಲ ಶಂಕರ್ ಪಾಣಿ ಹೇಳಿದ್ದಾರೆ.

ವಿಭಾಗೀಯ ಅರಣ್ಯಾಧಿಕಾರಿಯು ತನ್ನ ಪತ್ರದಲ್ಲಿ ಅರಣ್ಯ ಭೂಮಿ ವರ್ಗಾವಣೆಗೆ ಅರಣ್ಯ ಸಂರಕ್ಷಣಾ ಕಾಯ್ದೆ-1980ರ ಸೆಕ್ಷನ್ (2) ಅಡಿಯಲ್ಲಿ ನೀಡಿರುವ ಅನುಮೋದನೆ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯದ ಅನುಮೋದನೆ ಆದೇಶದ ಷರತ್ತುಗಳ ಹಂತ-Iಮತ್ತು ಹಂತ-IIರ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಶಂಕರ್ ಪಾಣಿ ತಿಳಿಸಿದ್ದಾರೆ.

ಅನುಮೋದನೆ ಷರತ್ತಿನ ಹಂತ-I ಮತ್ತು ಹಂತ-IIನ್ನು ಇಲ್ಲಿ ಅನುಸರಿಸಿಲ್ಲ. ವಿಶೇಷವಾಗಿ ಹಂತ-IIರ ಕ್ಲಿಯರೆನ್ಸ್‌ನ ಷರತ್ತು ಸಂಖ್ಯೆ (ಬಿ) 13 ಅನ್ನು ಪೂರೈಸಿಲ್ಲ. ಈ ಷರತ್ತು, ಅರಣ್ಯ ಹಕ್ಕುಗಳ ಇತ್ಯರ್ಥ, ಗ್ರಾಮ ಸಭೆಯ ಲಿಖಿತ ಒಪ್ಪಿಗೆ ಪಡೆಯುವುದು ಮತ್ತು ಕಛೇರಿಯ ಜ್ಞಾಪಕ ಪತ್ರದ ಸಂಪೂರ್ಣ ಅನುಸರಣೆಯನ್ನು ಒಳಗೊಂಡಿರುತ್ತದೆ ಎಂದು ಶಂಕರ್ ಪಾಣಿ ವಿವರಿಸಿದ್ದಾರೆ.

ಆದಾಗ್ಯೂ, ಷರತ್ತು 13ರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಅರಣ್ಯೇತರ ಬಳಕೆಗಾಗಿ ಭೂಮಿಯನ್ನು ಅಕ್ರಮವಾಗಿ ಎಸ್‌ಸಿಸಿಎಲ್‌ ಕಂಪನಿಗೆ ವರ್ಗಾಯಿಸಲಾಗಿದೆ ಎಂದು ಪಾಣಿ ಆರೋಪಿಸಿದ್ದಾರೆ. ಅರಣ್ಯ ಪ್ರದೇಶದ ನಿವ್ವಳ ಪ್ರಸ್ತುತ ಮೌಲ್ಯವನ್ನು (ಎನ್‌ಪಿವಿ) ಪೂರ್ಣವಾಗಿ ಠೇವಣಿ ಮಾಡುವಂತೆ ಎಸ್‌ಸಿಸಿಎಲ್ ಕೇಳಲಾಗಿದೆ. ಆದರೆ, ಅದನ್ನೂ ಮಾಡಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.

ನ್ಯಾಯಾಂಗ ಸದಸ್ಯ ಅಮಿತ್ ಸ್ಥಾಲೇಕರ್ ಮತ್ತು ತಜ್ಞ ಸದಸ್ಯ ಅರುಣ್ ಕುಮಾರ್ ವರ್ಮಾ ಅವರನ್ನೊಳಗೊಂಡ ಎನ್‌ಜಿಟಿ ಪೀಠವು ನಾಲ್ಕು ವಾರಗಳಲ್ಲಿ ಅಫಿಡವಿಟ್‌ ಸಲ್ಲಿಸುವಂತೆ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ, ಬುಡಕಟ್ಟು ವ್ಯವಹಾರಗಳ ಸಚಿವಾಲಯ ಮತ್ತು ಎಸ್‌ಸಿಸಿಎಲ್‌ ಕಂಪನಿಗೆ ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 21ಕ್ಕೆ ನಿಗದಿಪಡಿಸಿದೆ.

ಇದನ್ನೂ ಓದಿ : ಲಂಚ ಪ್ರಕರಣ: ಉದ್ಯಮಿ ಅದಾನಿ ವಿರುದ್ಧ ಜಂಟಿ ವಿಚಾರಣೆಗೆ ಯುಎಸ್ ನ್ಯಾಯಾಲಯ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...