Homeಮುಖಪುಟಹೊಸ ವರ್ಷಕ್ಕೆ ಮೋದಿ ಭೇಟಿಯಾದ ಪಂಜಾಬಿ ಗಾಯಕ ದಿಲ್ಜಿತ್: ಪ್ರತಿಭಟನಾನಿರತ ರೈತ ಮುಖಂಡರ ಛೀಮಾರಿ

ಹೊಸ ವರ್ಷಕ್ಕೆ ಮೋದಿ ಭೇಟಿಯಾದ ಪಂಜಾಬಿ ಗಾಯಕ ದಿಲ್ಜಿತ್: ಪ್ರತಿಭಟನಾನಿರತ ರೈತ ಮುಖಂಡರ ಛೀಮಾರಿ

- Advertisement -
- Advertisement -

ಹೊಸದಿಲ್ಲಿ: ಪಂಜಾಬಿ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಅವರು ಹೊಸ ವರ್ಷದ ದಿನದಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಕ್ಕಾಗಿ ಪ್ರತಿಭಟನಾನಿರತ ರೈತ ಮುಖಂಡರಿಂದ ತೀವ್ರ ಟೀಕೆ ವ್ಯಕ್ತವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಈ ಹಿಂದೆ ರೈತರ ಆಂದೋಲನಕ್ಕೆ ಬೆಂಬಲ ನೀಡಿದ ದಿಲ್ಜಿತ್ ದೋಸಾಂಜ್ ಅವರ ಈ ಭೇಟಿಯ ಕುರಿತು ನಿರಾಶೆಯನ್ನು ವ್ಯಕ್ತಪಡಿಸಿದ ರೈತರು, ಈ ಕಾರಣಕ್ಕಾಗಿ ರೈತ ಹೋರಾಟದ ಕುರಿತು ಗಾಯಕನ ಬದ್ಧತೆಯನ್ನು ಪ್ರಶ್ನಿಸಿದ್ದಾರೆ. ದಿಲ್ಜಿತ್ ದೋಸಾಂಜ್ ಅವರು ಮೋದಿಯೊಂದಿಗಿನ ತನ್ನ ಭೇಟಿಯನ್ನು ಹೊಸ ವರ್ಷಕ್ಕೆ “ಅದ್ಭುತ ಆರಂಭ” ಎಂದು ಬಣ್ಣಿಸಿದ್ದಾರೆ.  ಅಂತರಾಷ್ಟ್ರೀಯ ತಾರಾಪಟ್ಟಿಗೆ  ವಿನಮ್ರ  ಆರಂಭ ಎಂದು  ಪ್ರಧಾನಿಯು ಗಾಯಕನ ಬೆಳವಣಿಗೆಯನ್ನು ಶ್ಲಾಘಿಸಿದ್ದಾರೆ.

“ದಿಲ್ಜಿತ್ ಅವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದ್ದಿದ್ದರೆ, ಅವರು ಸಂಭು ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಿರತ  ದಲ್ಲೆವಾಲ್ ಜಿ ಅವರೊಂದಿಗೆ ಜೊತೆಗೂಡಿ ನಮ್ಮೊಂದಿಗೆ ಸೇರುತ್ತಿದ್ದರು. ನಮ್ಮ ಸಮಸ್ಯೆಗಳನ್ನು ಆಲಿಸುತ್ತಿದ್ದರು ಮತ್ತು ತಮ್ಮ ಹಿಂದಿನ ರೈತಪರ ಹೇಳಿಕೆಗಳಿಗೆ ಬದ್ಧರಾಗಿರುತ್ತಿದ್ದರು. ಬದಲಾಗಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿರುವುದು ಅವರ ಮುಂದಿನ ಉದ್ದೇಶಗಳ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಗಡಿಯಲ್ಲಿನ ರೈತ ನಾಯಕರೊಬ್ಬರು ಪ್ರಶ್ನಿಸಿದ್ದಾರೆ.

2020ರಲ್ಲಿ ದಿಲ್ಜಿತ್ ದೋಸಾಂಜ್ ರೈತರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದರು. ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು.

ಅಂದು ದಿಲ್ಜಿತ್ ದೋಸಾಂಜ್ ಅವರು ರೈತರಿಗೆ ಬೆಂಬಲವಾಗಿ Instagram ನಲ್ಲಿ ಪೋಸ್ಟ್ ಮಾಡಿದ್ದು,  ನಾವೆಲ್ಲರೂ ರೈತ ಸಮುದಾಯದೊಂದಿಗೆ ನಿಲ್ಲುತ್ತೇವೆ. ಪಂಜಾಬ್‌ನ ಎಲ್ಲಾ ವಯೋಮಾನದ ಪ್ರತಿಯೊಬ್ಬ ವ್ಯಕ್ತಿಯೂ ರೈತರೊಂದಿಗೆ ನಿಂತಿದ್ದಾರೆ. ರೈತ ವಿರೋಧಿ ಮಸೂದೆಗಳನ್ನು ಸಮರ್ಥಿಸುವ ಪ್ರತಿಯೊಬ್ಬರೂ ಕನಿಷ್ಠ ರೈತರೊಂದಿಗೆ ಮಾತನಾಡಲು ಪ್ರಯತ್ನಿಸಿ. ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರಿ ಭಾಷೆಗಳಿಂದ ಪಂಜಾಬಿ ಭಾಷೆಯನ್ನು ನಿರ್ಮೂಲನೆ ಮಾಡಲಾಗಿದೆ. ಏನಾಗುತ್ತಿದೆ? ಎಂದಿದ್ದರು.

ಇಷ್ಟರ ಮಧ್ಯೆ ಈಗ ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಚಾಲಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಖಾನೂರಿ ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ರೈತರು ತಾವು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಿದ್ದಾರೆ.

ದಲ್ಲೇವಾಲ್ ಅವರನ್ನು ಬೆಂಬಲಿಸಲು ಸಾವಿರಾರು ರೈತರು, ಅನೇಕ ಟ್ರ್ಯಾಕ್ಟರ್-ಟ್ರಾಲಿಗಳೊಂದಿಗೆ ಖಾನೌರಿ ಸ್ಥಳದಲ್ಲಿ ಜಮಾಯಿಸಿದ್ದಾರೆ. ಪಂಜಾಬ್ ಸರ್ಕಾರವು ವೈದ್ಯಕೀಯ ಸಹಾಯವನ್ನು ನೀಡಲು ದಲ್ಲೆವಾಲ್ ಅವರನ್ನು ಮನವೊಲಿಸಲು ಪ್ರಯತ್ನಿಸಿದರೂ, ಅವರು ನಿರಾಕರಿಸಿದ್ದಾರೆ.

ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ, ದಲ್ಲೆವಾಲ್ ಅವರ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರ ಆಸ್ಪತ್ರೆಗೆ ಸಂಬಂಧಿಸಿದ ಆದೇಶಗಳನ್ನು ಅನುಸರಿಸಲು ಪಂಜಾಬ್ ಸರ್ಕಾರಕ್ಕೆ ಸೂಚನೆ ನೀಡಿದೆ.

ಬುಧವಾರ ನಡೆದ ಹೊಸ ವರ್ಷದ ಸಭೆಯಲ್ಲಿ ದಿಲ್ಜಿತ್ ಅವರ ಸಾಧನೆಗಳಿಗಾಗಿ ಪ್ರಧಾನಿ ಮೋದಿಯವರು ಶ್ಲಾಘಿಸಿದರು. “ಹಿಂದೂಸ್ತಾನದ ಒಂದು ಸಣ್ಣ ಹಳ್ಳಿಯ ಹುಡುಗ ಜಾಗತಿಕ ವೇದಿಕೆಯಲ್ಲಿ ಮಿಂಚುತ್ತಿರುವುದು ಅದ್ಭುತವಾಗಿದೆ. ನಿಮ್ಮ ಕುಟುಂಬವು ನಿಮಗೆ ದಿಲ್ಜಿತ್ ಎಂದು ಹೆಸರಿಸಿದೆ ಮತ್ತು ನಿಮ್ಮ ಹೆಸರೇ ಸೂಚಿಸುವಂತೆ ಜನರ ಹೃದಯವನ್ನು ಗೆಲ್ಲುವುದಕ್ಕೆ ಮುಂದುವರಿಯಿರಿ” ಎಂದು ಪ್ರಧಾನಿ ಹೇಳಿದ್ದರು.

“ನಾವು ‘ಮೇರಾ ಭಾರತ್ ಮಹಾನ್’ ಎಂದು ಶಾಲೆಗಳಲ್ಲಿ ಓದುತ್ತಿದ್ದೆವು. ಆದರೆ ನಾನು ಭಾರತದಾದ್ಯಂತ ಪ್ರಯಾಣಿಸಿದಾಗ, ಜನರು ಏಕೆ ಹೀಗೆ ಹೇಳುತ್ತಾರೆಂದು ನನಗೆ ಅರಿವಾಯಿತು” ಎಂದು ಈ ಭೇಟಿಯ ಸಮಯದಲ್ಲಿ ದಿಲ್ಜಿತ್ ಉತ್ತರಿಸಿದ್ದರು.

ಪ್ರಧಾನಿ ಮೋದಿಯವರ ವೈಯಕ್ತಿಕ ಪ್ರಯಾಣವನ್ನು ಮೆಚ್ಚಿದ ಗಾಯಕ, “ನಿಮ್ಮ ಸಂದರ್ಶನವನ್ನು ನಾನು ನೋಡಿದ್ದೇನೆ, ಪ್ರಧಾನಿ ಸ್ಥಾನ ಅದ್ಭುತವಾಗಿದೆ. ಈ ಸ್ಥಾನದ ಹಿಂದೆ ತಾಯಿ, ಮಗ ಮತ್ತು ಮನುಷ್ಯ ಇದ್ದಾರೆ. ಅನೇಕ ಬಾರಿ, ನೀವು ತಾಯಿ ಮತ್ತು ಪವಿತ್ರ ಗಂಗೆಯನ್ನು ನಿಮ್ಮೊಂದಿಗೆ ಹೊತ್ತುಕೊಂಡಾಗ ಈ ಅರ್ಧ ಸತ್ಯವು ತುಂಬಾ ವಿಶಾಲವಾಗಿದೆ. ಅದು ಹೃದಯ ಸ್ಪರ್ಶಿಯಾಗಿದೆ” ಎಂದು ಹೇಳಿದ್ದರು.

ಹಿಂಪಡೆದ ರೈತ ವಿರೋಧಿ ಕೃಷಿ ಕಾನೂನನ್ನು ‘ನೀತಿಗಳು’ ಎಂಬ ಹೆಸರಿನಲ್ಲಿ ಮತ್ತೆ ತರಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...