Homeಕರ್ನಾಟಕನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ 'ಶಾಂತಿಗಾಗಿ ನಾಗರಿಕರ ವೇದಿಕೆ' ಆಗ್ರಹ

ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌; ನ್ಯಾಯಾಂಗ ತನಿಖೆಗೆ ‘ಶಾಂತಿಗಾಗಿ ನಾಗರಿಕರ ವೇದಿಕೆ’ ಆಗ್ರಹ

- Advertisement -
- Advertisement -

ನಕ್ಸಲ್‌ ಚಳುವಳಿಗಾರರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೊಟ್ಟಿರುವ ಕರೆಯನ್ನು “ಶಾಂತಿಗಾಗಿ ನಾಗರಿಕರ ವೇದಿಕೆ” ಸ್ವಾಗತಿಸಿದ್ದು, “ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ವೇದಿಕೆ ಇದೇ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದೆ.

ಮುಖ್ಯವಾಗಿ, ಈಗಾಗಲೇ ಜಾರಿಯಲ್ಲಿರುವ ನಕ್ಸಲ್ ಶರಣಾಗತಿ ನೀತಿಯನ್ನು ಇನ್ನಷ್ಟು ಸರಳಗೊಳಿಸಿ, ಸಮರ್ಪಕವಾಗಿ ಜಾರಿ ಮಾಡಲಾಗುವುದು ಎಂಬ ಭರವಸೆಯನ್ನು ಕೂಡಾ ಸರ್ಕಾರ ನೀಡಿದೆ. ಇದು ಶಾಂತಿ ಸ್ಥಾಪನೆಗೆ ಅತ್ಯಂತ ಅಗತ್ಯವಾದ ಮುನ್ನಡೆ ಎಂದು ನಾವು ಭಾವಿಸುತ್ತೇವೆ. ಮುಖ್ಯಮಂತ್ರಿಗಳ ಈ ಕರೆಗೆ ನಕ್ಸಲ್ ಹೋರಾಟಗಾರರು ಇತ್ಯಾತ್ಮಕವಾಗಿ ಸ್ಪಂದಿಸುತ್ತಾರೆ ಎಂದು ನಾಗರಿಕ ಸಮಾಜ ಆಶಿಸುತ್ತದೆ. ಸಂವಿಧಾನಾತ್ಮಕ, ಪ್ರಜಾ ತಾಂತ್ರಿಕ ಹೋರಾಟಗಳು ಆರೋಗ್ಯಕರ ಸಮಾಜಕ್ಕೆ ಮುಖ್ಯ. ಆದರೆ, ಅದನ್ನು ಹಿಂಸಾತ್ಮಕ ಚಳುವಳಿಗಳ ಮೂಲಕವೇ ಮಾಡಬೇಕೆನ್ನುವುದು ಸರಿಯಾದ ಮಾರ್ಗವಲ್ಲ. ಈ ವಾಸ್ತವವನ್ನು ಮನಗಂಡ ಅನೇಕ ನಕ್ಸಲ್‌ ಹೋರಾಟಗಾರರು ಈಗ ಮುಖ್ಯವಾಹಿನಿಯ ಭಾಗವಾಗಿ ಪ್ರಜಾಸತ್ತಾತ್ಮಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿರುವ ಉದಾಹರಣೆಗಳು ನಮ್ಮ ಮುಂದಿವೆ. ಈ ವಾಸ್ತವವನ್ನು ಗ್ರಹಿಸಿ, ನಕ್ಸಲರು ತಮ್ಮ ಶಸ್ತ್ರಗಳನ್ನು ತ್ಯಜಿಸಿ ಹೊರಬಂದು, ತಮ್ಮ ಹೋರಾಟಗಳನ್ನು ಕಾನೂನಾತ್ಮಕವಾಗಿ ಮುಂದುವರೆಸಲು ಇದೊಂದು ಅವಕಾಶ ಎಂದು ಶಾಂತಿಗಾಗಿ ನಾಗರಿಕ ವೇದಿಕೆ ಹೇಳಿದೆ.

ವೇದಿಕೆಯ ಪರವಾಗಿ ಎನ್‌. ವೆಂಕಟೇಶ್‌, ಬಿ.ಟಿ ಲಲಿತಾ ನಾಯ್ಕ್, ಡಾ. ಕಲ್ಕುಳಿ ವಿಠ್ಠಲ್‌ ಹೆಗಡೆ, ಪ್ರೊ. ವಿ.ಎಸ್‌. ಶ್ರೀಧರ, ಪ್ರೊ. ನಗರಗೆರೆ ರಮೇಶ್ ಮತ್ತು ತಾರಾ ರಾವ್ ಈ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

“ಸರ್ಕಾರವೂ ಕೂಡ ತಾನು ಹೇಳಿರುವ ರೀತಿಯಲ್ಲಿ ಸರಳವಾಗಿ ಮತ್ತು ಶೀಘ್ರಗತಿಯಲ್ಲಿ ಇತ್ಯರ್ಥವಾಗುವ ʼಶರಣಾಗತಿ ಯೋಜನೆʼಯನ್ನು ಜಾರಿಗೆ ತರುತ್ತದೆ ಎಂದು ನಾವು ನಂಬುತ್ತೇವೆ. ಮುಖ್ಯವಾಹಿನಿ ಸಮಾಜ ಬಯಸಿ ಬರುವವರ ಜೀವನ ನಿರ್ವಹಣೆಗೆ ಬೇಕಾದ ಸೌಲಭ್ಯ ಮತ್ತು ಕಾನೂನು ನೆರವನ್ನು ನೀಡುವುದರ ಮೂಲಕ ಇವರನ್ನು ಘನತೆಯಿಂದ ನಡೆಸಿಕೊಳ್ಳುವುದು ಸರ್ಕಾರದ ಹೊಣೆ. ಇದರ ಮೊದಲ ಹೆಜ್ಜೆಯಾಗಿ, ಈಗಾಗಲೇ  ಹೊರಗೆ ಬಂದಿರುವ ನಕ್ಸಲರಿಗೆ ಬೇಕಾದ ಕಾನೂನಾತ್ಮಕ ನೆರವನ್ನು ಮತ್ತು ಬದುಕಿಗೆ ಆಧಾರವನ್ನು ಒದಗಿಸಬೇಕಾಗಿದೆ. ಆದರೆ, ಈಗ ಅವರ ಪರಿಸ್ಥಿತಿ ಅಯೋಮಯವಾಗಿದೆ. ಹಲವಾರು ಕೋರ್ಟುಗಳಲ್ಲಿ ಹರಡಿಹೋಗಿರುವ ಅಸಂಖ್ಯಾತ  ಕೇಸುಗಳು, ನಿಧಾನಗತಿಯ ವಿಚಾರಣೆ, ಕೊಟ್ಟ ಭರವಸೆಯಂತೆ ನೀಡಬೇಕಾದ ಭೂಮಿ ಹಂಚಿಕೆಯಲ್ಲಿನ ಆಡಳಿತ ನಿರ್ಲಕ್ಷ್ಯ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಂದಾಗಿ ಅವರ ಬದುಕು ಅತಂತ್ರವಾಗಿದೆ. ವಕೀಲರಿಗೆ ಕೊಡಬೇಕಾದ ಹಣ ಇರಲಿ, ದೈನಂದಿನ ಜೀವನ ನಿರ್ವಹಣೆಗೇ ತೊಳಲಾಟ ಉಂಟಾಗಿದೆ. ಸರ್ಕಾರವು ತಕ್ಷಣವೇ ಇವರ ಸಮಸ್ಯೆಗಳಿಗೆ ಪರಿಹಾರ ರೂಪಿಸಬೇಕು; ಅದರ ಮೂಲಕ ಹೊರ ಬರಲು ಇಚ್ಛಿಸುವವರಲ್ಲಿ ಭರವಸೆಯನ್ನು ಮೂಡಿಸಲು ಸಾಧ್ಯ ಎಂಬುದು ನಮ್ಮ ಗ್ರಹಿಕೆಯಾಗಿದೆ” ಎಂದು ವೇದಿಕೆ ಹೇಳಿದೆ.

“ಶಾಂತಿ ಬಯಸುವ ನಾಗರಿಕರಾಗಿ ನಕ್ಸಲ್‌ ಚಳುವಳಿಗಾರರನ್ನು ಮುಖ್ಯವಾಹಿಗೆ ಕರೆತಂದು ಸರ್ಕಾರಕ್ಕೆ ಒಪ್ಪಿಸುವುದಕ್ಕೆ, ಮೇಲೆ ಸೂಚಿಸುರುವ ಸರ್ಕಾರದ ಪರಿಹಾರ ನೆರವಾಗುತ್ತದೆ. ಈ ಭರವಸೆಯ ಮೂಲಕ ಮಾತ್ರ ಮುಖ್ಯವಾಹಿನಿಗೆ ಬರುವವರ ಜತೆ ಮಾತುಕತೆ ನಡೆಸಲು ಬೇಕಾದ ಸನ್ನಿವೇಶ ನಿರ್ಮಾಣವಾಗುತ್ತದೆ; ಶಾಂತಿಯುತ ಪರಿಹಾರಕ್ಕೆ ದಾರಿಮಾಡಿಕೊಡುತ್ತದೆ. ಹೀಗಾಗಿ, ಸರ್ಕಾರವು ಈಗಾಗಲೇ ಹೊರಬಂದಿರುವವರ ಮರುವಸತಿ ಮತ್ತು ಕಾನೂನು ನೆರವಿಗೆ ಅದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ನಾವು ಮನವಿ ಮಾಡುತ್ತೇವೆ” ಎಂದು ಹೇಳಿಯಲ್ಲಿ ಮನವಿ ಮಾಡಲಾಗಿದೆ.

“ಇದೇ ಸಂದರ್ಭದಲ್ಲಿ, ನವೆಂಬರ್‌ 18 ರಂದು ನಡೆದ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಬೇಕು ಎಂದು ಕೂಡ ಮಾನವ ಹಕ್ಕುಗಳ ಕಾರ್ಯಕರ್ತರಾಗಿ ನಾವು ಆಗ್ರಹಿಸುತ್ತೇವೆ. ನಾಗರಿಕ ಸಮಾಜ ಮುಂದಿಡುವ ಈ ನ್ಯಾಯೋಚಿತ ಬೇಡಿಕೆಗೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ವಂದಿಸುತ್ತಾರೆ” ಎಂದು ವೇದಿಕೆ ವಿಶ್ವಾಸ ವ್ಯಕ್ತಪಡಿಸಿದೆ.

ಇದನ್ನೂ ಓದಿ; ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...