Homeಕರ್ನಾಟಕರಾಜ್ಯದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳ : ಹೊಸ ದಾಖಲಾತಿ ಇಳಿಕೆ ; ವರದಿ

ರಾಜ್ಯದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳ : ಹೊಸ ದಾಖಲಾತಿ ಇಳಿಕೆ ; ವರದಿ

- Advertisement -
- Advertisement -

ಕಳೆದ 2022-23ನೇ ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಕರ್ನಾಟಕದಲ್ಲಿ ಶಾಲೆ ತೊರೆದ ಮಕ್ಕಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಇತ್ತೀಚೆಗೆ ಬಿಡುಗಡೆ ಮಾಡಿದ ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫಾರ್ಮೇಶನ್ ಸಿಸ್ಟಮ್ ಫಾರ್ ಎಜುಕೇಶನ್ ಪ್ಲಸ್ (ಯುಡಿಎಸ್ಇ+) ವರದಿ ಹೇಳಿದೆ.

ವರದಿಯ ಪ್ರಕಾರ, 2023-24ರಲ್ಲಿ ರಾಜ್ಯದಲ್ಲಿ ಶೇಖಡ 1.7 ಪ್ರಾಥಮಿಕ, ಶೇ. 2.7 ಹಿರಿಯ ಪ್ರಾಥಮಿಕ ಮತ್ತು ಶೇ. 22.09 ಪ್ರೌಢ ಶಾಲಾ ತರಗತಿಗಳ ಮಕ್ಕಳು ಶಾಲೆ ತೊರೆದಿದ್ದಾರೆ. (ಒಂದು ತರಗತಿಯಿಂದ ಇನ್ನೊಂದಕ್ಕೆ ವಿದ್ಯಾರ್ಥಿಗಳ ನೈಜ ಚಲನೆಯನ್ನು ಆಧರಿಸಿ ವೈಯಕ್ತಿಕ ವಿದ್ಯಾರ್ಥಿಯ ದತ್ತಾಂಶವನ್ನು ಬಳಸಿಕೊಂಡು ಲೆಕ್ಕ ಹಾಕಲಾಗಿದೆ) 2022-23 ರಲ್ಲಿ, ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ತರಗತಿಗಳ ಮಕ್ಕಳು ಶಾಲೆ ತೊರೆದ ಪ್ರಮಾಣ ಶೂನ್ಯ ಇತ್ತು. ಪ್ರೌಢ ತರಗತಿಗಳ ಶೇ.14.9 ಮಕ್ಕಳು ಶಾಲೆ ತೊರೆದಿದ್ದರು.

ವರದಿಯ ಪ್ರಕಾರ, ಶಾಲೆ ತೊರೆದ ಮಕ್ಕಳ ಸಂಖ್ಯೆಯು ಒಂದು ನಿರ್ದಿಷ್ಟ ಶೈಕ್ಷಣಿಕ ವರ್ಷದಲ್ಲಿ ನಿರ್ದಿಷ್ಟ ಮಟ್ಟದಲ್ಲಿ ದಾಖಲಾದ ವಿದ್ಯಾರ್ಥಿಗಳ ಅನುಪಾತವಾಗಿದೆ. ಅವರು ಮುಂದಿನ ಶಾಲಾ ವರ್ಷದಲ್ಲಿ ಯಾವುದೇ ತರಗತಿಗೆ ದಾಖಲಾಗಿರುವುದಿಲ್ಲ.

ರಾಜ್ಯದಲ್ಲಿ ಪೂರ್ವ ಪ್ರಾಥಮಿಕದಿಂದ 12 ನೇ ತರಗತಿಗೆ ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕೂಡ ಇಳಿಕೆಯಾಗಿದೆ.

2023-24ನೇ ವರ್ಷದಲ್ಲಿ ರಾಜ್ಯದ ಶಾಲೆಗಳಲ್ಲಿ (ಸರ್ಕಾರಿ, ಖಾಸಗಿ , ಅನುದಾನಿತ ಇತ್ಯಾದಿ) ದಾಖಲಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 1,19,26,303. 2023-23ರಲ್ಲಿ 1,23,98,654 ವಿದ್ಯಾರ್ಥಿಗಳು ದಾಖಲಾಗಿದ್ದರು. ಈ ಸಂಖ್ಯೆ 2021-22ರಲ್ಲಿ 1,20,92,381 ಮತ್ತು 2020-21ರಲ್ಲಿ 1,18,56,736 ಇತ್ತು.

ಸರ್ಕಾರಿ ಶಾಲೆಗಳು 2023-24ರಲ್ಲಿ ಒಟ್ಟು 49,85,661 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿವೆ. 2022-23ಕ್ಕೆ ಹೋಲಿಸಿದರೆ 2023-24ರಲ್ಲಿ 3,41,560 ಮಕ್ಕಳು ಕಡಿಮೆಯಾಗಿದ್ದಾರೆ. 2022-23ರಲ್ಲಿ ಸರ್ಕಾರಿ ಶಾಲೆಗಳು 53,27,221 ಮತ್ತು 2021-22ರಲ್ಲಿ 54,45,989 ವಿದ್ಯಾರ್ಥಿಗಳಿಗೆ ಹೊಸದಾಗಿ ಪ್ರವೇಶ ನೀಡಿತ್ತು.

ಗಮನಾರ್ಹ ವಿಷಯವೆಂದರೆ, ಖಾಸಗಿ ಅನುದಾನ ರಹಿತ ಶಾಲೆಗಳಲ್ಲೂ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗಿದೆ. 2022-23ರಲ್ಲಿ 55,59,281 ವಿದ್ಯಾರ್ಥಿಗಳು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದರು. 2023-24ರಲ್ಲಿ ಈ ಸಂಖ್ಯೆ 54,80,677ಕ್ಕೆ ಇಳಿಕೆಯಾಗಿದೆ. ಪ್ರವೇಶಕ್ಕೆ ಅರ್ಹರಾಗಿರುವ ಮಕ್ಕಳ ಸಂಖ್ಯೆಯಲ್ಲಿನ ಇಳಿಕೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳು ತಿಳಿಸಿವೆ.

ವರದಿಯು ಶೂನ್ಯ ದಾಖಲಾತಿ ಶಾಲೆಗಳು ಮತ್ತು ಶೂನ್ಯ ಶಿಕ್ಷಕರ ಶಾಲೆಗಳನ್ನು ಎತ್ತಿ ತೋರಿಸಿದೆ. ರಾಜ್ಯದಲ್ಲಿ ಶಿಕ್ಷಕರಿಲ್ಲದ 1,572 ಶಾಲೆಗಳಿವೆ ಮತ್ತು 7,821 ಏಕ ಶಿಕ್ಷಕರಿದ್ದಾರೆ. ಈ ಏಕ ಶಿಕ್ಷಕರ ಶಾಲೆಗಳಲ್ಲಿ 2,74,814 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಒಟ್ಟು 1,078 ಶಾಲೆಗಳು ಒಬ್ಬ ವಿದ್ಯಾರ್ಥಿಯನ್ನೂ ದಾಖಲಿಸಲು ವಿಫಲವಾಗಿವೆ.

ಆದರೆ, ವರದಿಯಲ್ಲಿ ಬಹಿರಂಗವಾಗಿರುವ ಸಕಾರಾತ್ಮಕ ಅಂಶವೆಂದರೆ, ಶಾಲಾಪೂರ್ವ ಅನುಭವದೊಂದಿಗೆ 1ನೇ ತರಗತಿಗೆ ಪ್ರವೇಶಿ ಪಡೆಯುವ ಮಕ್ಕಳ ಸಂಖ್ಯೆ, ವಿಶೇಷವಾಗಿ ಅಂಗನವಾಡಿ ಕೇಂದ್ರಗಳಿಂದ ಬರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. 2023-24ರಲ್ಲಿ 9,45,325 ಮಕ್ಕಳು 1ನೇ ತರಗತಿಗೆ ಸೇರಿದ್ದು, ಅದರಲ್ಲಿ 3,91,940 ಮಕ್ಕಳು ಅಂಗನವಾಡಿಗಳಿಂದ ಬಂದವರು. ಅವರಲ್ಲಿ ಹೆಚ್ಚಿನವರು, ಅಂದರೆ 59,748 ಮಕ್ಕಳು ಖಾಸಗಿ ಅನುದಾನರಹಿತ ಶಾಲೆಗಳಿಗೆ ಸೇರಿದ್ದಾರೆ.

ಇದನ್ನೂ ಓದಿ : ಸಚಿವ ಸಂಪುಟ ಸಭೆ | ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳ : ನಿಗಮಗಳು ₹2 ಸಾವಿರ ಕೋಟಿ ಸಾಲ ಪಡೆಯಲು ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....