Homeಮುಖಪುಟದ. ಕೊರಿಯಾ | ವಾಗ್ದಂಡನೆಗೆ ಗುರಿಯಾದ ಅಧ್ಯಕ್ಷ ಯೂನ್‌ ಸುಕ್ ಯೋಲ್ ಬಂಧನ ಪ್ರಯತ್ನ ವಿಫಲ

ದ. ಕೊರಿಯಾ | ವಾಗ್ದಂಡನೆಗೆ ಗುರಿಯಾದ ಅಧ್ಯಕ್ಷ ಯೂನ್‌ ಸುಕ್ ಯೋಲ್ ಬಂಧನ ಪ್ರಯತ್ನ ವಿಫಲ

- Advertisement -
- Advertisement -

ತುರ್ತು ಮಿಲಿಟರಿ ಆಡಳಿತ ಹೇರಿ, ಬಳಿಕ ಅದನ್ನು ವಾಪಸ್ ಪಡೆದು ವಾಗ್ದಂಡನೆಗೆ ಗುರಿಯಾಗಿರುವ ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರ ಬಂಧನ ಪ್ರಯತ್ನ ವಿಫಲವಾಗಿದೆ.

ಭ್ರಷ್ಟಾಚಾರ ತನಿಖಾ ಕಚೇರಿಯ (ಸಿಐಒ) ಉನ್ನತ ಅಧಿಕಾರಿಗಳು ಇಂದು (ಜ.3) ಯೂನ್ ಸುಕ್ ಯೋಲ್ ಅವರ ಬಂಧನಕ್ಕೆ ಅಧ್ಯಕ್ಷರ ನಿವಾಸಕ್ಕೆ ಆಗಮಿಸಿದ್ದರು. ಆದರೆ, ಅಲ್ಲಿ ಯೂನ್ ಬೆಂಬಲಿಗರು ಮತ್ತು ಅವರ ಭದ್ರತಾ ಸಿಬ್ಬಂದಿಯಿಂದ ಬಂಧನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಇಂದು ಬಂಧನಕ್ಕೊಳಗಾಗುವ ಮಾಹಿತಿ ದೊರೆತ ಹಿನ್ನೆಲೆ, ದೇಶದಾದ್ಯಂತ ಪ್ರತಿಭಟಿಸಲು ಯೂನ್ ಸುಕ್ ಯೋಲ್ ತನ್ನ ಬೆಂಬಲಿಗರಿಗೆ ನಿನ್ನೆಯೇ ಸೂಚನೆ ಕೊಟ್ಟಿದ್ದರು. ಯೂನ್ ಬೆಂಬಲಿಗರು ಇಂದು ಮುಂಜಾನೆಯೇ ಅವರ ನಿವಾಸದ ಬಳಿ ಜಮಾಯಿಸಲು ಶುರುಮಾಡಿದ್ದರು.

ಸೂರ್ಯೋದವಾಗುವ ಹೊತ್ತಿಗೆ ಅಧ್ಯಕ್ಷರ ಮನೆ ಬಳಿ ಜಮಾಯಿಸಿದ ಬೆಂಬಲಿಗರ ಸಂಖ್ಯೆ ಹೆಚ್ಚಾಗಿತ್ತು. ಯೂನ್ ಅವರ ಬಂಧನಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಬೆಂಬಲಿಗರು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದ್ದರು.

ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಯೂನ್ ಬಂಧನಕ್ಕೆ ಭ್ರಷ್ಟಾಚಾರ ತನಿಖಾ ಕಚೇರಿಯ(ಸಿಐಒ) ಉನ್ನತ ಅಧಿಕಾರಿಗಳು ಅಧ್ಯಕ್ಷರ ಮನೆ ಬಳಿಗೆ ಪೊಲೀಸರೊಂದಿಗೆ ಬಂದಿದ್ದರು. ಆದರೆ, ಅಲ್ಲಿ ಯೂನ್ ಅವರನ್ನು ಅವರ ಭದ್ರತಾ ಪಡೆ (Presidential Security Service-PSS) ಮತ್ತು ಸೇನಾ ಸಿಬ್ಬಂದಿ ಭದ್ರಕೋಟೆ ರಚಿಸಿ ರಕ್ಷಿಸಿದ್ದಾರೆ. ಇದರಿಂದ ಯೂನ್ ಬಂಧನ ಸಾಧ್ಯವಿಲ್ಲ ಎಂಬುವುದು ಸಿಐಒ ಅಧಿಕಾರಿಗಳಿಗೆ ಮನವರಿಕೆಯಾಗಿತ್ತು.

ಯೂನ್ ಅವರ ಬಂಧನ ಸಾಧ್ಯವಿಲ್ಲ ಎಂದರಿತ ಬಳಿಕ ಸಿಐಒ ಅಧಿಕಾರಿಗಳು ಬಂಧನ ಪ್ರಯತ್ನವನ್ನು ರದ್ದುಗೊಳಿಸಿದರು. ತಮ್ಮನ್ನು ತಡೆದ ಅಧ್ಯಕ್ಷರ ಭದ್ರತಾ ತಂಡ ಮತ್ತು ತನಿಖೆಗೆ ಸಹಕಾರ ನೀಡದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರ ವಿರುದ್ದ ಸಿಐಒ ಅಧಿಕಾರಿಗಳು ಕಿಡಿಕಾರಿದ್ದಾರೆ.

ಯೂನ್ ಸುಕ್ ಯೋಲ್ ಅವರ ಕಾನೂನು ತಂಡ ಬಂಧನ ವಾರೆಂಟ್ ಕಾನೂನು ಬಾಹಿರ ಎಂದಿದ್ದು, ತನಿಖಾಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ನ್ಯಾಯಾಲಯದ ಬಂಧನ ವಾರೆಂಟ್ ಜನವರಿ 6ರವರೆಗೆ ಮಾನ್ಯವಾಗಿರಲಿದೆ. ಅಷ್ಟರೊಳಗೆ ಯೋಲ್ ಅವರನ್ನು ಬಂಧಿಸಬೇಕಿದೆ. ಒಂದು ವೇಳೆ ಬಂಧಿಸಿದರೆ ಕೇವಲ 48 ಗಂಟೆಗಳ ಅವಧಿ ಮಾತ್ರ ಅದು ಮಾನ್ಯವಾಗಿರಲಿದೆ.

ಬಂಧನ ಪ್ರಯತ್ನ ವಿಫಲವಾದ ಬಳಿಕ ಮಾತನಾಡಿದ ಸಿಐಒ ಅಧಿಕಾರಿಗಳು ಮುಂದಿನ ಕ್ರಮದ ಬಗೆ ಯೋಚಿಸುತ್ತೇವೆ ಎಂದಿದ್ದಾರೆ. ಯೂನ್ ವಿರುದ್ದ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಹೇಳಿದ್ದಾರೆ.

ಯೂನ್ ಸುಕ್ ಯೋಲ್ ಅವರು ಡಿಸೆಂಬರ್ 3, 2024ರಂದು ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿದ್ದರು. ಸ್ವಪಕ್ಷದವರು ಸೇರಿದಂತೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಮರುದಿನ ಅದನ್ನು ವಾಪಸ್ ಪಡೆದಿದ್ದರು.

ಯೂನ್ ಸುಕ್ ಯೋಲ್ ಸ್ವಹಿತಾಸಕ್ತಿಗಾಗಿ ದೇಶದಲ್ಲಿ ಮಿಲಿಟರಿ ಆಡಳಿತ ಹೇರಿದ ಆರೋಪದ ಮೇಲೆ ಅವರನ್ನು ಸಂಸತ್‌ ವಾಗ್ದದಂಡನೆ ಮೂಲಕ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿದೆ. ಆದರೆ, ಅವರ ವಿರುದ್ದ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದೆ.

ತುರ್ತು ಮಿಲಿಟರಿ ಆಡಳಿತ ಹೇರಿದ ಸಂಬಂಧ ತನಿಖಾ ತಂಡ ಯೂನ್ ಸುಕ್ ಯೋಲ್ ಅವರನ್ನು ಮೂರು ಬಾರಿ ವಿಚಾರಣೆಗೆ ಕರೆದರೂ ಅವರು ಹಾಜರಾಗಲು ವಿಫಲರಾಗಿದ್ದಾರೆ. ಈ ಹಿನ್ನೆಲೆ ಅವರ ಬಂಧನಕ್ಕೆ ಡಿಸೆಂಬರ್ 31ರಂದು ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ.

ಇದನ್ನೂ ಓದಿ : ಬಿಡೆನ್ ಪತ್ನಿಗೆ ₹17 ಲಕ್ಷ ಮೌಲ್ಯದ ವಜ್ರದ ಉಡುಗೊರೆ ನೀಡಿದ ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...