Homeಕರ್ನಾಟಕಕೇಂದ್ರ, ರಾಜ್ಯ ಸರ್ಕಾರಗಳ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ - ಸಿಪಿಐ(ಎಂ)

ಕೇಂದ್ರ, ರಾಜ್ಯ ಸರ್ಕಾರಗಳ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ – ಸಿಪಿಐ(ಎಂ)

- Advertisement -
- Advertisement -

ರಾಜ್ಯದ ರೈತರು, ಕಾರ್ಮಿಕರು, ಕೂಲಿಕಾರರು, ದುರ್ಬಲ ವರ್ಗಗಳು, ಮಧ್ಯಮ ವರ್ಗಗಳು ಮತ್ತು ಇತರೆ ಜನ ವಿಭಾಗಗಳ ಮೇಲೆ ಸಂಕಟಗಳನ್ನು ಹೇರಿರುವ ಕೇಂದ್ರ-ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ಹೋರಾಟಗಳನ್ನು ತೀವ್ರಗೊಳಿಸಲು ಮತ್ತು ಕರ್ನಾಟಕದಲ್ಲಿ ಎಡ-ಪ್ರಜಾಸತ್ತಾತ್ಮಕ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಪಕ್ಷವು ತೀರ್ಮಾನಿಸಿದೆ ಎಂದು ಸಿಪಿಐ(ಎಂ)ನ ನೂತನ ರಾಜ್ಯ ಕಾರ್ಯದರ್ಶಿ ಡಾ. ಪ್ರಕಾಶ್ ಕೆ. ಶುಕ್ರವಾರ ತಿಳಿಸಿದ್ದಾರೆ. ಕೇಂದ್ರ ರಾಜ್ಯ ಸರ್ಕಾರಗಳ

ಪಕ್ಷದ ರಾಜ್ಯ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ”ಕೇಂದ್ರದ ಮೋದಿ ಸರ್ಕಾರವು ದೇಶದ ಬಹುಸಂಖ್ಯಾತ ಬಡವರನ್ನು ಬಲಿಕೊಟ್ಟು ಮತೀಯವಾದಿ ನೀತಿಗಳ ನೆರಳಲ್ಲಿ ಕಾರ್ಪೊರೇಟ್ ಬಂಡವಾಳದಾರರ ಹಿತಕ್ಕಾಗಿ ನವ-ಉದಾರವಾದಿ ನೀತಿಗಳನ್ನು ಆಕ್ರಮಣಕಾರಿಯಾಗಿ ಜಾರಿ ಮಾಡುತ್ತಿದೆ. ಇತ್ತ ರಾಜ್ಯದ ಕಾಂಗ್ರೆಸ್ ಸರ್ಕಾರವೂ ಮೋದಿ ಸರ್ಕಾರದ ರೀತಿಯ ನೀತಿಗಳನ್ನೇ ಅನುಸರಿಸುತ್ತಿದೆ ಎಂದು ಸಮ್ಮೇಳನದಲ್ಲಿ ಮಂಡಿಸಿದ ರಾಜಕೀಯ ವರದಿಯಲ್ಲಿ ವಿಶ್ಲೇಷಿಸಿದೆ” ಎಂದು ಅವರು ಹೇಳಿದ್ದಾರೆ.

“ಕೇಂದ್ರ ಮತ್ತು ರಾಜ್ಯದ ಸರ್ಕಾರದ ನೀತಿಯಿಂದಾಗಿ ಬಡವರು, ಕೂಲಿ ಕಾರ್ಮಿಕರು, ರೈತರು, ಕಾರ್ಮಿಕರು ಮತ್ತು ಇತರೆ ದುಡಿಯುವ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಉದ್ಯೋಗ ಅಭದ್ರತೆ, ರೈತರ ಬೆಳೆಗೆ ಸಿಗದ ಬೆಲೆ, ಬಲವಂತದ ಭೂಸ್ವಾಧೀನ, ಶಿಕ್ಷಣ, ಆರೋಗ್ಯ, ಮತ್ತು ಇತರೆ ನಾಗರೀಕ ಸೇವೆಗಳ ದುಬಾರಿ, ಇತ್ಯಾದಿ ಸಮಸ್ಯೆಗಳಿಂದಾಗಿ ಜರ್ಜರಿತಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಹೆಚ್ಚಿನ ಸಮಸ್ಯೆಗಳನ್ನು ಅನುಭವಿಸುತ್ತಿರುವ ಕುರಿತು ಸಮ್ಮೇಳನ ಆತಂಕ ವ್ಯಕ್ತಪಡಿಸಿದೆ” ಎಂದಿದ್ದಾರೆ. ಕೇಂದ್ರ ರಾಜ್ಯ ಸರ್ಕಾರಗಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆರೆಸ್ಸೆಸ್ ಮತ್ತು ಅದರ ಪರಿವಾರ ಸಂಘಟನೆಗಳು ಜನರ ಧಾರ್ಮಿಕ ನಂಬಿಕೆಗಳನ್ನು ದುರುಪಯೋಗಪಡಿಸಿಕೊಂಡು ಮತೀಯವಾದಿ ನೆಲೆಯಲ್ಲಿ ಜನರ ಐಕ್ಯತೆಯನ್ನು ಮುರಿಯಲು ನಡೆಸುತ್ತಿರುವ ಪ್ರಯತ್ನಗಳನ್ನು ಹತ್ತಿಕ್ಕುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿದೆ ಎಂದು ಪಕ್ಷದ ಸಮ್ಮೇಳನವು ಅಭಿಪ್ರಾಯಪಟ್ಟಿದೆ. ಕೋಮು ವಿಭಜನೆ ತಡೆಗಟ್ಟುವ ವಿಚಾರದಲ್ಲಿ ಹಾಗೂ ಜನತೆಯ ಐಕ್ಯತೆಯನ್ನು ಕಾಪಾಡಲು ಸಿಪಿಐ(ಎಂ)ನ ಕಾರ್ಯಕರ್ತರು ಮುಂಚೂಣಿಯಲ್ಲಿರುವಂತೆ ಪಕ್ಷದ ಕಾರ್ಯಕರ್ತರಿಗೆ ಸಮ್ಮೇಳನವು ಕರೆ ನೀಡಿದೆ” ಎಂದು ಡಾ.ಪ್ರಕಾಶ್ ಹೇಳಿದ್ದಾರೆ.

ಭೂರಹಿತ ಕುಟುಂಬಗಳಿಗೆ ಮನೆ ನಿವೇಶನ, ಅರಣ್ಯ ಸಾಗುವಳಿದಾರರಿಗೆ ರಕ್ಷಣೆ, ಬಲವಂತದ ಭೂಸ್ವಾಧೀನ ಕೈಬಿಡಲು, ಕರಾಳ ಕೃಷಿ ಕಾಯ್ದೆಗಳ ರದ್ದತಿಗಾಗಿ, ಸಾರ್ವಜನಿಕ ಆಸ್ತಿಗಳ ಖಾಸಗೀಕರಣದ ವಿರುದ್ಧ, ಫೆಬ್ರವರಿ 10 ರಂದು ತಿಂಗಳಲ್ಲಿ ನಡೆಯುವ ಪಾದಯಾತ್ರೆಗೆ ಪಕ್ಷವು ಬೆಂಬಲ ನೀಡುವುದಾಗಿ ಪ್ರಕಾಶ್ ಅವರು ಹೇಳಿದ್ದಾರೆ.

ಐಸಿಡಿಎಸ್ ಯೋಜನೆ ದುರ್ಬಲಗೊಳಿಸುವುದರ ವಿರುದ್ಧ, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಕಡಿವಾಣಕ್ಕೆ ಒತ್ತಾಯಿಸಿ, ಸಾರ್ವಜನಿಕ ಪಡಿತರ ವ್ಯವಸ್ಥೆ ಬಲಪಡಿಸಲು ಹಾಗೂ ಬಡವರ ಬಿಪಿಎಲ್ ಕಾರ್ಡ್ ರದ್ಧತಿ ವಿರೋಧಿಸಿ, ಸಾಗರ ಮಾಲ ಯೋಜನೆಯಿಂದ ಕರಾವಳಿ ಜನರ ಮೇಲಾಗುತ್ತಿರುವ ವ್ಯತಿರಿಕ್ತ ಪರಿಣಾಮಗಳ ನಿವಾರಣೆಗೆ ಒತ್ತಾಯಿಸಿ, ಕೃತಕ ಬುದ್ಧಿಮತ್ತೆಯಿಂದ ಹೆಚ್ಚುತ್ತಿರುವ ಉದ್ಯೋಗ ನಷ್ಟವನ್ನು ತಡೆಗಟ್ಟಲು, ಕೈಗಾರಿಕಾ ಉದ್ಯೋಗ (ಸ್ಥಾಯಿ ಆದೇಶ) ಕಾಯ್ದೆಯಿಂದ ಐಟಿ/ಐಟಿಇಎಸ್ ವಲಯಕ್ಕೆ ವಿನಾಯಿತಿ ನೀಡಿರುವುದನ್ನು ವಿರೋಧಿಸಿ, ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಶೀಘ್ರವೇ ನಡೆಸುವಂತೆ ಒತ್ತಾಯಿಸುವ ನಿರ್ಣಯಗಳು ಸೇರಿದಂತೆ 33 ನಿರ್ಣಯಗಳನ್ನು ಪಕ್ಷದ ರಾಜ್ಯ ಸಮ್ಮೇಳನವು ಅಂಗೀಕರಿಸಿದೆ ಎಂದು ಅವರು ಹೇಳಿದ್ದಾರೆ.

ಅಸಂಘಟಿತ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತೆ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು, ಅಂಗನವಾಡಿ, ಬಿಸಿಯೂಟ, ಪಂಚಾಯಿತಿ, ಹಮಾಲಿ, ಸಾರಿಗೆ ಇತ್ಯಾದಿ ಶ್ರಮಜೀವಿ ವರ್ಗಗಳ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸಮ್ಮೇಳನ ನಿರ್ಣಯ ಕೈಗೊಂಡಿದೆ ಮತ್ತು ಈ ನಿಟ್ಟಿನಲ್ಲಿ ನಡೆಯುವ ಹೋರಾಟಗಳನ್ನು ಬೆಂಬಲಿಸಲು ತೀರ್ಮಾನಿಸಿದೆ ಎಂದು ಅವರು ಹೇಳಿದ್ದಾರೆ.

ಆರ್ಥಿಕ ಮತ್ತು ಸಾಮಾಜಿಕ ನೀತಿಗಳಲ್ಲಿ ವ್ಯತ್ಯಾಸವಿಲ್ಲದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಕಾರ್ಯನಿರ್ವಹಿಸುತ್ತಿರುವುದನ್ನು ಪಕ್ಷದ ರಾಜ್ಯ ಸಮ್ಮೇಳನವು ಗುರುತಿಸಿದೆ. ಜನರ ಸಂಕಷ್ಟಗಳನ್ನು ದುರುಪಯೋಗ ಪಡಿಸಿಕೊಂಡು ಕೋಮುವಾದವನ್ನು ಬೆಳೆಸಲಾಗುತ್ತಿದೆ. ಜನತೆಗೆ ನೀತಿಗಳ ಪರ್ಯಾಯ ಮತ್ತು ರಾಜಕೀಯ ಪರ್ಯಾಯ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಜನತೆಗೆ ಅಗತ್ಯವಾದ ಒಂದು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಸಿಪಿಐ(ಎಂ) ರಾಜ್ಯ ಸಮ್ಮೇಳನವು ತೀರ್ಮಾನಿಸಿದ್ದು, ರಾಜ್ಯದ ಎಡ ಪಕ್ಷಗಳು ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು, ಸಂಘಟನೆಗಳು, ಶಕ್ತಿಗಳು ಮತ್ತು ವ್ಯಕ್ತಿಗಳನ್ನು ಒಗ್ಗೂಡಿಸಿ ಈ ರಂಗವನ್ನು ಕಟ್ಟಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೋರಾಟಗಳು ಮತ್ತು ಆಂದೋಲನಗಳಲ್ಲಿ ಸಿಪಿಐ(ಎಂ) ಮತ್ತು ಇತರೆ ಕಮ್ಯುನಿಸ್ಟ್ ಪಕ್ಷಗಳು ಮುಂಚೂಣಿಯಲ್ಲಿದ್ದರೂ ಚುನಾವಣೆಗಳಲ್ಲಿ ಕಮ್ಯುನಿಸ್ಟ್ ಪಕ್ಷಗಳ ಮತಗಳಿಕೆ ಪ್ರಮಾಣ ಕುಸಿಯುತ್ತಿರುವುದನ್ನು ಗಂಭೀರವಾಗಿ ಸಮ್ಮೇಳನವು ವಿಮರ್ಶಿಸಿದ್ದು, ಕೆಳಹಂತದ ಪಕ್ಷ ಸಂಘಟನೆಗೆ ಒತ್ತು ಮತ್ತು ಸಮೂಹಗಳ ರಾಜಕೀಯ ಪ್ರಜ್ಞೆಯನ್ನು ಎತ್ತರಿಸಬೇಕೆಂದು ಸಮ್ಮೇಳನವು ತೀರ್ಮಾನ ಮಾಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...