Homeಕರ್ನಾಟಕಕೇಂದ್ರ, ರಾಜ್ಯ ಸರ್ಕಾರಗಳ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ - ಸಿಪಿಐ(ಎಂ)

ಕೇಂದ್ರ, ರಾಜ್ಯ ಸರ್ಕಾರಗಳ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ – ಸಿಪಿಐ(ಎಂ)

- Advertisement -
- Advertisement -

ರಾಜ್ಯದ ರೈತರು, ಕಾರ್ಮಿಕರು, ಕೂಲಿಕಾರರು, ದುರ್ಬಲ ವರ್ಗಗಳು, ಮಧ್ಯಮ ವರ್ಗಗಳು ಮತ್ತು ಇತರೆ ಜನ ವಿಭಾಗಗಳ ಮೇಲೆ ಸಂಕಟಗಳನ್ನು ಹೇರಿರುವ ಕೇಂದ್ರ-ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ಹೋರಾಟಗಳನ್ನು ತೀವ್ರಗೊಳಿಸಲು ಮತ್ತು ಕರ್ನಾಟಕದಲ್ಲಿ ಎಡ-ಪ್ರಜಾಸತ್ತಾತ್ಮಕ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಪಕ್ಷವು ತೀರ್ಮಾನಿಸಿದೆ ಎಂದು ಸಿಪಿಐ(ಎಂ)ನ ನೂತನ ರಾಜ್ಯ ಕಾರ್ಯದರ್ಶಿ ಡಾ. ಪ್ರಕಾಶ್ ಕೆ. ಶುಕ್ರವಾರ ತಿಳಿಸಿದ್ದಾರೆ. ಕೇಂದ್ರ ರಾಜ್ಯ ಸರ್ಕಾರಗಳ

ಪಕ್ಷದ ರಾಜ್ಯ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ”ಕೇಂದ್ರದ ಮೋದಿ ಸರ್ಕಾರವು ದೇಶದ ಬಹುಸಂಖ್ಯಾತ ಬಡವರನ್ನು ಬಲಿಕೊಟ್ಟು ಮತೀಯವಾದಿ ನೀತಿಗಳ ನೆರಳಲ್ಲಿ ಕಾರ್ಪೊರೇಟ್ ಬಂಡವಾಳದಾರರ ಹಿತಕ್ಕಾಗಿ ನವ-ಉದಾರವಾದಿ ನೀತಿಗಳನ್ನು ಆಕ್ರಮಣಕಾರಿಯಾಗಿ ಜಾರಿ ಮಾಡುತ್ತಿದೆ. ಇತ್ತ ರಾಜ್ಯದ ಕಾಂಗ್ರೆಸ್ ಸರ್ಕಾರವೂ ಮೋದಿ ಸರ್ಕಾರದ ರೀತಿಯ ನೀತಿಗಳನ್ನೇ ಅನುಸರಿಸುತ್ತಿದೆ ಎಂದು ಸಮ್ಮೇಳನದಲ್ಲಿ ಮಂಡಿಸಿದ ರಾಜಕೀಯ ವರದಿಯಲ್ಲಿ ವಿಶ್ಲೇಷಿಸಿದೆ” ಎಂದು ಅವರು ಹೇಳಿದ್ದಾರೆ.

“ಕೇಂದ್ರ ಮತ್ತು ರಾಜ್ಯದ ಸರ್ಕಾರದ ನೀತಿಯಿಂದಾಗಿ ಬಡವರು, ಕೂಲಿ ಕಾರ್ಮಿಕರು, ರೈತರು, ಕಾರ್ಮಿಕರು ಮತ್ತು ಇತರೆ ದುಡಿಯುವ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಉದ್ಯೋಗ ಅಭದ್ರತೆ, ರೈತರ ಬೆಳೆಗೆ ಸಿಗದ ಬೆಲೆ, ಬಲವಂತದ ಭೂಸ್ವಾಧೀನ, ಶಿಕ್ಷಣ, ಆರೋಗ್ಯ, ಮತ್ತು ಇತರೆ ನಾಗರೀಕ ಸೇವೆಗಳ ದುಬಾರಿ, ಇತ್ಯಾದಿ ಸಮಸ್ಯೆಗಳಿಂದಾಗಿ ಜರ್ಜರಿತಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಹೆಚ್ಚಿನ ಸಮಸ್ಯೆಗಳನ್ನು ಅನುಭವಿಸುತ್ತಿರುವ ಕುರಿತು ಸಮ್ಮೇಳನ ಆತಂಕ ವ್ಯಕ್ತಪಡಿಸಿದೆ” ಎಂದಿದ್ದಾರೆ. ಕೇಂದ್ರ ರಾಜ್ಯ ಸರ್ಕಾರಗಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆರೆಸ್ಸೆಸ್ ಮತ್ತು ಅದರ ಪರಿವಾರ ಸಂಘಟನೆಗಳು ಜನರ ಧಾರ್ಮಿಕ ನಂಬಿಕೆಗಳನ್ನು ದುರುಪಯೋಗಪಡಿಸಿಕೊಂಡು ಮತೀಯವಾದಿ ನೆಲೆಯಲ್ಲಿ ಜನರ ಐಕ್ಯತೆಯನ್ನು ಮುರಿಯಲು ನಡೆಸುತ್ತಿರುವ ಪ್ರಯತ್ನಗಳನ್ನು ಹತ್ತಿಕ್ಕುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿದೆ ಎಂದು ಪಕ್ಷದ ಸಮ್ಮೇಳನವು ಅಭಿಪ್ರಾಯಪಟ್ಟಿದೆ. ಕೋಮು ವಿಭಜನೆ ತಡೆಗಟ್ಟುವ ವಿಚಾರದಲ್ಲಿ ಹಾಗೂ ಜನತೆಯ ಐಕ್ಯತೆಯನ್ನು ಕಾಪಾಡಲು ಸಿಪಿಐ(ಎಂ)ನ ಕಾರ್ಯಕರ್ತರು ಮುಂಚೂಣಿಯಲ್ಲಿರುವಂತೆ ಪಕ್ಷದ ಕಾರ್ಯಕರ್ತರಿಗೆ ಸಮ್ಮೇಳನವು ಕರೆ ನೀಡಿದೆ” ಎಂದು ಡಾ.ಪ್ರಕಾಶ್ ಹೇಳಿದ್ದಾರೆ.

ಭೂರಹಿತ ಕುಟುಂಬಗಳಿಗೆ ಮನೆ ನಿವೇಶನ, ಅರಣ್ಯ ಸಾಗುವಳಿದಾರರಿಗೆ ರಕ್ಷಣೆ, ಬಲವಂತದ ಭೂಸ್ವಾಧೀನ ಕೈಬಿಡಲು, ಕರಾಳ ಕೃಷಿ ಕಾಯ್ದೆಗಳ ರದ್ದತಿಗಾಗಿ, ಸಾರ್ವಜನಿಕ ಆಸ್ತಿಗಳ ಖಾಸಗೀಕರಣದ ವಿರುದ್ಧ, ಫೆಬ್ರವರಿ 10 ರಂದು ತಿಂಗಳಲ್ಲಿ ನಡೆಯುವ ಪಾದಯಾತ್ರೆಗೆ ಪಕ್ಷವು ಬೆಂಬಲ ನೀಡುವುದಾಗಿ ಪ್ರಕಾಶ್ ಅವರು ಹೇಳಿದ್ದಾರೆ.

ಐಸಿಡಿಎಸ್ ಯೋಜನೆ ದುರ್ಬಲಗೊಳಿಸುವುದರ ವಿರುದ್ಧ, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಕಡಿವಾಣಕ್ಕೆ ಒತ್ತಾಯಿಸಿ, ಸಾರ್ವಜನಿಕ ಪಡಿತರ ವ್ಯವಸ್ಥೆ ಬಲಪಡಿಸಲು ಹಾಗೂ ಬಡವರ ಬಿಪಿಎಲ್ ಕಾರ್ಡ್ ರದ್ಧತಿ ವಿರೋಧಿಸಿ, ಸಾಗರ ಮಾಲ ಯೋಜನೆಯಿಂದ ಕರಾವಳಿ ಜನರ ಮೇಲಾಗುತ್ತಿರುವ ವ್ಯತಿರಿಕ್ತ ಪರಿಣಾಮಗಳ ನಿವಾರಣೆಗೆ ಒತ್ತಾಯಿಸಿ, ಕೃತಕ ಬುದ್ಧಿಮತ್ತೆಯಿಂದ ಹೆಚ್ಚುತ್ತಿರುವ ಉದ್ಯೋಗ ನಷ್ಟವನ್ನು ತಡೆಗಟ್ಟಲು, ಕೈಗಾರಿಕಾ ಉದ್ಯೋಗ (ಸ್ಥಾಯಿ ಆದೇಶ) ಕಾಯ್ದೆಯಿಂದ ಐಟಿ/ಐಟಿಇಎಸ್ ವಲಯಕ್ಕೆ ವಿನಾಯಿತಿ ನೀಡಿರುವುದನ್ನು ವಿರೋಧಿಸಿ, ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಶೀಘ್ರವೇ ನಡೆಸುವಂತೆ ಒತ್ತಾಯಿಸುವ ನಿರ್ಣಯಗಳು ಸೇರಿದಂತೆ 33 ನಿರ್ಣಯಗಳನ್ನು ಪಕ್ಷದ ರಾಜ್ಯ ಸಮ್ಮೇಳನವು ಅಂಗೀಕರಿಸಿದೆ ಎಂದು ಅವರು ಹೇಳಿದ್ದಾರೆ.

ಅಸಂಘಟಿತ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತೆ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು, ಅಂಗನವಾಡಿ, ಬಿಸಿಯೂಟ, ಪಂಚಾಯಿತಿ, ಹಮಾಲಿ, ಸಾರಿಗೆ ಇತ್ಯಾದಿ ಶ್ರಮಜೀವಿ ವರ್ಗಗಳ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸಮ್ಮೇಳನ ನಿರ್ಣಯ ಕೈಗೊಂಡಿದೆ ಮತ್ತು ಈ ನಿಟ್ಟಿನಲ್ಲಿ ನಡೆಯುವ ಹೋರಾಟಗಳನ್ನು ಬೆಂಬಲಿಸಲು ತೀರ್ಮಾನಿಸಿದೆ ಎಂದು ಅವರು ಹೇಳಿದ್ದಾರೆ.

ಆರ್ಥಿಕ ಮತ್ತು ಸಾಮಾಜಿಕ ನೀತಿಗಳಲ್ಲಿ ವ್ಯತ್ಯಾಸವಿಲ್ಲದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಕಾರ್ಯನಿರ್ವಹಿಸುತ್ತಿರುವುದನ್ನು ಪಕ್ಷದ ರಾಜ್ಯ ಸಮ್ಮೇಳನವು ಗುರುತಿಸಿದೆ. ಜನರ ಸಂಕಷ್ಟಗಳನ್ನು ದುರುಪಯೋಗ ಪಡಿಸಿಕೊಂಡು ಕೋಮುವಾದವನ್ನು ಬೆಳೆಸಲಾಗುತ್ತಿದೆ. ಜನತೆಗೆ ನೀತಿಗಳ ಪರ್ಯಾಯ ಮತ್ತು ರಾಜಕೀಯ ಪರ್ಯಾಯ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಜನತೆಗೆ ಅಗತ್ಯವಾದ ಒಂದು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಸಿಪಿಐ(ಎಂ) ರಾಜ್ಯ ಸಮ್ಮೇಳನವು ತೀರ್ಮಾನಿಸಿದ್ದು, ರಾಜ್ಯದ ಎಡ ಪಕ್ಷಗಳು ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು, ಸಂಘಟನೆಗಳು, ಶಕ್ತಿಗಳು ಮತ್ತು ವ್ಯಕ್ತಿಗಳನ್ನು ಒಗ್ಗೂಡಿಸಿ ಈ ರಂಗವನ್ನು ಕಟ್ಟಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೋರಾಟಗಳು ಮತ್ತು ಆಂದೋಲನಗಳಲ್ಲಿ ಸಿಪಿಐ(ಎಂ) ಮತ್ತು ಇತರೆ ಕಮ್ಯುನಿಸ್ಟ್ ಪಕ್ಷಗಳು ಮುಂಚೂಣಿಯಲ್ಲಿದ್ದರೂ ಚುನಾವಣೆಗಳಲ್ಲಿ ಕಮ್ಯುನಿಸ್ಟ್ ಪಕ್ಷಗಳ ಮತಗಳಿಕೆ ಪ್ರಮಾಣ ಕುಸಿಯುತ್ತಿರುವುದನ್ನು ಗಂಭೀರವಾಗಿ ಸಮ್ಮೇಳನವು ವಿಮರ್ಶಿಸಿದ್ದು, ಕೆಳಹಂತದ ಪಕ್ಷ ಸಂಘಟನೆಗೆ ಒತ್ತು ಮತ್ತು ಸಮೂಹಗಳ ರಾಜಕೀಯ ಪ್ರಜ್ಞೆಯನ್ನು ಎತ್ತರಿಸಬೇಕೆಂದು ಸಮ್ಮೇಳನವು ತೀರ್ಮಾನ ಮಾಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...