Homeಮುಖಪುಟನಿರಂತರ 15 ಗಂಟೆಗಳ ವಿಚಾರಣೆ; ಇಡಿ ವಿರುದ್ಧ ಸುಪ್ರೀಂಕೋರ್ಟ್ ಕಿಡಿ

ನಿರಂತರ 15 ಗಂಟೆಗಳ ವಿಚಾರಣೆ; ಇಡಿ ವಿರುದ್ಧ ಸುಪ್ರೀಂಕೋರ್ಟ್ ಕಿಡಿ

- Advertisement -
- Advertisement -

ಮಧ್ಯರಾತ್ರಿ ಕಳೆದರೂ ಸುಮಾರು 15 ಗಂಟೆಗಳ ಕಾಲ ಕಾಂಗ್ರೆಸ್‌ ನಾಯಕರೊಬ್ಬರನ್ನು ನಿರಂತರ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ(ಇಡಿ)ದ ನಡೆಯನ್ನು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಅದರ ತನಿಖಾ ವಿಧಾನದ ಬಗ್ಗೆ ತೀವ್ರ ಕಳವಳಗಳನ್ನು ವ್ಯಕ್ತಪಡಿಸಿದೆ. ಹೇಳಿಕೆ ನೀಡುವಂತೆ ಇಡಿ ವ್ಯಕ್ತಿಯೊಬ್ಬರ ಮೇಲೆ ಅಕ್ಷರಶಃ ಒತ್ತಡವನ್ನು ಹೇರಿದ್ದು ಆಘಾತಕಾರಿಯಾಗಿದೆ ಎಂದು ದ್ವಿಸದಸ್ಯರ ಪೀಠವು ಗುರುವಾರ ಹೇಳಿದೆ. ನಿರಂತರ 15 ಗಂಟೆಗಳ

ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಎ.ಎಸ್.ಓಕಾ ಮತ್ತು ಎ.ಜಿ.ಮಸಿಹ್ ಅವರ ಪೀಠವು, ಕಾನೂನುಬಾಹಿರ ಗಣಿಗಾರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಹರಿಯಾಣದ ಮಾಜಿ ಕಾಂಗ್ರೆಸ್ ಶಾಸಕ ಸುರೇಂದ್ರ ಪನ್ವಾರ್ ಅವರ ಬಂಧನವನ್ನು ರದ್ದುಗೊಳಿಸಿದ್ದನ್ನು ಎತ್ತಿ ಹಿಡಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳೆದ ವರ್ಷ ಜುಲೈನಲ್ಲಿ ಸುಮಾರು 15 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದ ಇಡಿ ಬಳಿಕ ಮಧ್ಯರಾತ್ರಿ 1.40ಕ್ಕೆ ಪನ್ವಾರ್‌ ಅವರನ್ನು ಬಂಧಿಸಿತ್ತು. ಆದರೆ ಸೆಪ್ಟೆಂಬರ್‌ನಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಪನ್ವಾರ್ ಅವರ ಬಂಧನವನ್ನು ರದ್ದುಗೊಳಿಸಿತ್ತು. ಹೈಕೋರ್ಟ್‌ನ ಈ ತೀರ್ಪನ್ನು ವಿರೋಧಿಸಿ ಇಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ನಿರಂತರ 15 ಗಂಟೆಗಳ

ಇಡಿ ಪರ ವಕೀಲ ರೆಹೆಬ್ ಹುಸೇನ್ ಅವರು, ಹೈಕೋರ್ಟ್ ಪನ್ವಾರ್‌ರನ್ನು 14 ಗಂಟೆ 40 ನಿಮಿಷಗಳ ಕಾಲ ನಿರಂತರವಾಗಿ ಪ್ರಶ್ನಿಸಲಾಗಿತ್ತು ಎಂದು ತನ್ನ ಆದೇಶದಲ್ಲಿ ತಪ್ಪಾಗಿ ದಾಖಲಿಸಿದೆ. ವಿಚಾರಣೆ ಸಂದರ್ಭದಲ್ಲಿ ಅವರಿಗೆ ಭೋಜನ ವಿರಾಮವನ್ನು ನೀಡಲಾಗಿತ್ತು ಎಂದು ಹೇಳಿದ್ದಾರೆ. ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ಜನರನ್ನು ನಸುಕಿನ ವೇಳೆಯಲ್ಲಿ ವಿಚಾರಣೆಗೆ ಒಳಪಡಿಸದಿರಲು ಇಡಿ ಈಗಾಗಲೇ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅವರು ಸುಪ್ರಿಂ ಕೋರ್ಟ್‌ಗೆ ಮನವರಿಕೆ ಮಾಡಿದ್ದಾರೆ.

ಆದರೆ, ಇಡಿ ವಾದವನ್ನು ತಿರಸ್ಕರಿಸಿದ ಪೀಠವು, ವ್ಯಕ್ತಿಗೆ ವಿರಾಮವನ್ನು ನೀಡದೆ ಇಷ್ಟೊಂದು ದೀರ್ಘ ಅವಧಿಗೆ ವಿಚಾರಣೆ ನಡೆಸುವ ಮೂಲಕ ಚಿತ್ರಹಿಂಸೆ ನೀಡಲು ಹೇಗೆ ಸಾಧ್ಯ ಎಂದು ತನಿಖಾ ಸಂಸ್ಥೆಯನ್ನು ಪ್ರಶ್ನಿಸಿದೆ. ಆದಾಗ್ಯೂ ಹೈಕೋರ್ಟ್ ಆದೇಶವು ಜಾಮೀನು ಮಂಜೂರು ಮಾಡುವ ವಿಷಯಕ್ಕೆ ಮಾತ್ರ ಸಂಬಂಧಿಸಿವೆಯೇ ಹೊರತು ಪ್ರಕರಣದ ಅರ್ಹತೆಗಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಕಳೆದ ವರ್ಷ ಜುಲೈ 19ರಂದು ಬೆಳಿಗ್ಗೆ 11 ಗಂಟೆಗೆ ಇಡಿ ಕಚೇರಿಯಲ್ಲಿ ಹಾಜರಾಗಿದ್ದ ಪನ್ವಾರ್‌ ಅವರನ್ನು ಜುಲೈ 21ರ ಮಧ್ಯರಾತ್ರಿ 1.40 ಗಂಟೆಯವರಗೆ ನಿರಂತರವಾಗಿ ವಿಚಾರಣೆ ನಡೆಸಿದ್ದು ತನಿಖಾ ಸಂಸ್ಥೆಯ ಅಮಾನವೀಯ ನಡೆಯಾಗಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು. ಹಾಗೆಯೇ ಇಡಿ ತನ್ನ ತನಿಖಾ ವಿಧಾನವನ್ನು ಬದಲಿಸಿಕೊಳ್ಳುವ ಅಗತ್ಯವಿದೆ ಎಂದು ನಿರ್ದೇಶನ ನೀಡಿತ್ತು.

ಇದನ್ನೂಓದಿ: ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಗೆ ವಿರೋಧ; ಬೆಂಕಿ ಹಚ್ಚಿಕೊಂಡ ಪ್ರತಿಭಟನಾಕಾರರು

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಗೆ ವಿರೋಧ; ಬೆಂಕಿ ಹಚ್ಚಿಕೊಂಡ ಪ್ರತಿಭಟನಾಕಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...