Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ : ಸಿಎಂ ಅತಿಶಿ ವಿರುದ್ಧ ಅಲ್ಕಾ ಲಂಬಾರನ್ನು ಕಣಕ್ಕಿಳಿಸಿದ ಕಾಂಗ್ರೆಸ್‌

ದೆಹಲಿ ವಿಧಾನಸಭೆ ಚುನಾವಣೆ : ಸಿಎಂ ಅತಿಶಿ ವಿರುದ್ಧ ಅಲ್ಕಾ ಲಂಬಾರನ್ನು ಕಣಕ್ಕಿಳಿಸಿದ ಕಾಂಗ್ರೆಸ್‌

- Advertisement -
- Advertisement -

ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅತಿಶಿ ಮರ್ಲೆನಾ ಅವರ ವಿರುದ್ಧ ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಂಬಾ ಅವರನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಿದೆ.

ದಕ್ಷಿಣ ದೆಹಲಿಯ ಕಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ಅಲ್ಕಾ ಲಂಬಾ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಮುಖ್ಯಮಂತ್ರಿ ಅತಿಶಿ ಮರ್ಲೆನಾ ಅವರು ಪ್ರಸ್ತುತ ಈ ಕ್ಷೇತ್ರದ ಶಾಸಕರಾಗಿದ್ದಾರೆ. ಮುಂಬರುವ ಚುನಾವಣೆಯಲ್ಲೂ ಕಲ್ಕಾಜಿ ಕ್ಷೇತ್ರದಿಂದ ಅತಿಶಿ ಅವರೇ ಸ್ಪರ್ಧಿಸುವ ಸಾಧ್ಯತೆ ಇದೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್, “ಪಕ್ಷದ ಕೇಂದ್ರ ಚುನಾವಣಾ ಸಮಿತಿ ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ ಕಲ್ಕಾಜಿ ಕ್ಷೇತ್ರದ ಅಭ್ಯರ್ಥಿಯಾಗಿ ಅಲ್ಕಾ ಲಂಬಾ ಅವರನ್ನು ಆಯ್ಕೆ ಮಾಡಿದೆ” ಎಂದು ತಿಳಿಸಿದೆ.

“ನಾನು ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸುತ್ತಿದ್ದೇನೆ ಎಂದು ಭಾವಿಸುವುದಿಲ್ಲ. ಅರವಿಂದ್ ಕೇಜ್ರಿವಾಲ್ ಅವರೇ ಅತಿಶಿವರನ್ನು ತಾತ್ಕಾಲಿಕ ಸಿಎಂ ಎಂದು ಕರೆದಿದ್ದಾರೆ. ಆದ್ದರಿಂದ ಅವರು ಕೇವಲ ಇನ್ನು ಒಂದು ತಿಂಗಳು ಮಾತ್ರ ಸಿಎಂ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಕೇಜ್ರಿವಾಲ್ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವ ಮಹಿಳೆಗೆ ಅಗೌರವ ತೋರುತ್ತಿದ್ದಾರೆ. ಕೇಜ್ರಿವಾಲ್ ಅವರು ತಾತ್ಕಾಲಿಕ ಸಿಎಂ ಎಂದು ಕರೆದಿರುವ ಬಗ್ಗೆ ಅತಿಶಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು” ಎಂದು ಕಲ್ಕಾಜಿ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಅಲ್ಕಾ ಲಾಂಬಾ ಹೇಳಿದ್ದಾರೆ.

2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅತಿಶಿ ಮರ್ಲೆನಾ ಅವರು 55,000ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಧರಂಬೀರ್ ಅವರನ್ನು ಸೋಲಿಸಿದ್ದರು. ಆಗ ಅತಿಶಿಯವರ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಶಿವಾನಿ ಚೋಪ್ರಾ ಅವರು 5,000ಕ್ಕಿಂತ ಕಡಿಮೆ ಮತಗಳನ್ನು ಗಳಿಸಿದ್ದರು. ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದಿದ್ದರು.

ಅಲ್ಕಾ ಲಂಬಾ ಯಾರು?

ಪ್ರಸ್ತುತ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿರುವ ಅಲ್ಕಾ ಲಂಬಾ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಸುಮಾರು 20 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿ ಕಾರ್ಯನಿರ್ವಹಿಸಿದ ಬಳಿಕ ಪಕ್ಷವನ್ನು ತೊರೆದ ಅವರು, 26 ಡಿಸೆಂಬರ್ 2014ರಂದು ಆಮ್‌ ಆದ್ಮಿ ಪಕ್ಷ (ಎಎಪಿ) ಸೇರಿದರು. ಬಳಿಕ ಫೆಬ್ರವರಿ 2015ರಲ್ಲಿ ಚಾಂದ್‌ನಿ ಚೌಕ್‌ ಕ್ಷೇತ್ರದಿಂದ ದೆಹಲಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಬಳಿಕ, ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಸೆಪ್ಟೆಂಬರ್ 2019ರಲ್ಲಿ ಎಎಪಿ ತೊರೆದರು. ಸೆಪ್ಟಂಬರ್ 6 , 2019ರಂದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಹಿಂದಿರುಗಿದರು. ಈ ವೇಳೆ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ದೆಹಲಿ ಸ್ಪೀಕರ್ ಶಾಸಕಿ ಸ್ಥಾನದಿಂದ ಅಮಾನತುಗೊಳಿಸಿದ್ದರು.

ಕಾಲೇಜು ಹಂತದಲ್ಲಿ ಅಲ್ಕಾ ಲಂಬಾ ಅವರು ವಿದ್ಯಾರ್ಥಿ ನಾಯಕರಾಗಿದ್ದರು. ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರ ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐನ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್‌ ರಾಷ್ಟ್ರೀಯ ಸಮಿತಿಯ ಕಾರ್ಯದರ್ಶಿಯಾಗಿ ಅಲ್ಕಾ ಲಂಬಾ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಗೋ ಇಂಡಿಯಾ ಫೌಂಡೇಶನ್ ಎಂಬ ಎನ್‌ಜಿಒ ಅಧ್ಯಕ್ಷೆ ಹಾಗೂ ಮಹಿಳಾ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷೆಯಾಗಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶ| ಜನವರಿ 18 ರಿಂದ ಅಖಿಲ ಭಾರತ ಕಿಸಾನ್ ಕಾಂಗ್ರೆಸ್‌ನಿಂದ ‘ನ್ಯಾಯ ಯಾತ್ರೆ’ ರ‍್ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...